Homeಎಲೆಮರೆಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ

ಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ

ರೇವಣಸಿದ್ಧ ದ್ಯಾಮಗೋಳ ಒಂದು ಸಂಸ್ಥೆ, ವಿಶ್ವವಿದ್ಯಾಲಯ ಮಾಡಲಾರದಷ್ಟು ಕೆಲಸವನ್ನು ತಾವೊಬ್ಬರೆ ಮಾಡಿದ್ದಾರೆ. ಆಫ್‍ಲೈನಲ್ಲಿದ್ದ ನೂರಾರು ಅಜ್ಞಾತ ಜನಪದ ಕಲಾವಿದರನ್ನು ಆನ್‍ಲೈನ್ ಲೋಕಕ್ಕೆ ಪರಿಚಯಿಸಿದ್ದಾರೆ.

- Advertisement -
- Advertisement -

ಆ ಹುಡುಗ ಚಡಚಣದಲ್ಲಿ ಡಿಗ್ರಿ ಮುಗಿಸಿದ ನಂತರ ಬಿಜಾಪುರದ ಜಿಎಸ್‍ಎಸ್ ಕಾಲೇಜಿನಲ್ಲಿ ಬಿಎಡ್ ಪೂರೈಸಿ, ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ತನ್ನ ಊರಾದ ಮೈಲಾರ ಎಂಬ ಚಿಕ್ಕ ಹಳ್ಳಿಯಲ್ಲಿದ್ದ. ಮನೆಯಲ್ಲಿ ತಂದೆ ಕಾಕಾ ಹಾಡಿಕಿ ಸಂಘದಲ್ಲಿದ್ದರು. ಡೊಳ್ಳಿನ ಪದ ಹಾಡತಿದ್ದರು. ಯಾರೋ ಮೊಬೈಲದಾಗ ಡೊಳ್ಳಿನ ಹಾಡ ಹಚ್ಚಿಕೊಟ್ಟರು. ಅಪ್ಪ ಮಗನಿಗೆ ‘ರೇವಣಸಿದ್ಧ ಈ ಮೊಬೈಲದಾಗ ಹಾಡ ಹೆಂಗ್ ಬಿಡತಾರು ನೋಡಿಕೋ’ ಎಂದರು. ಮಗನ ಗ್ಯಾನ ಮೊಬೈಲಿನ ಮ್ಯಾಲೆ ಬಿತ್ತು. ಹೀಗೆ ನೋಡ್ತಾ ನೋಡ್ತಾ ಪದಾನ ಮೊಬೈಲದಾಗ ಹೆಂಗ್ ಬಿಡ್ತಾರ ಅಂತ ತಿಳಕಂಡು ಆಗಸ್ಟ್ 6, 2017 ರಲ್ಲಿ ಯೂಟೂಬ್ ಅಕೌಂಟ್ ಕ್ರಿಯೇಟ್ ಮಾಡಿ, ತಾನೂ ತನ್ನ ಅಪ್ಪ ಕಕ್ಕರು ಹಾಡೋ ಹಾಡ ಮೊಬೈಲಿನ್ಯಾಗ ಬಿಡಾಕತ್ತಿದ.

ಇದೀಗ ಈ ಹುಡುಗ ಹೀಗೆ ಯೂಟೂಬಿಗೆ 1260 ವೀಡಿಯೋಗಳನ್ನು ಅಪ್ಲೋಡ್ ಮಾಡಿದ್ದಾನೆ, 87 ಸಾವಿರದಷ್ಟು ಚಂದಾದಾರರಿದ್ದಾರೆ, ಮೂರು ಕೋಟಿ ನಲವತ್ನಾಲ್ಕು ಲಕ್ಷದಷ್ಟು ವೀಕ್ಷಣೆ ಇದೆ. ಇದೀಗ ಜನಪದ ಹಾಡಿಕೆ ಮದ್ಯೆ ಜಾಹೀರಾತುಗಳು ಕಾಣಿಸಿಕೊಳ್ಳುತ್ತವೆ. ಯೂಟೂಬಿನಿಂದ ಪ್ರತಿ ತಿಂಗಳು ಕನಿಷ್ಠ ಹತ್ತು ಸಾವಿರ ಈ ಹುಡುಗನ ಅಕೌಂಟಿಗೆ ಜಮೆ ಆಗುತ್ತದೆ. ಇಂದು ಉತ್ತರ ಕರ್ನಾಟಕ ಹೈದರಬಾದ ಕರ್ನಾಟಕದ ಮುನ್ನೂರಕ್ಕಿಂತ ಹೆಚ್ಚು ಜನಪದ ಕವಿಗಳ ಹಾಡಿಕೆಯ, ಡೊಳ್ಳಿನ ಹಾಡು, ಭಜನೆ, ಮೊಹರಂ ಪದ, ಗೀಗೀ, ಸೋಬಾನೆ, ಚೌಡಕಿ ಪದ ಹೀಗೆ ಹಲವು ಜನಪದ ಪ್ರಕಾರಗಳ ಹಾಡುಗಳನ್ನು `ರೇವಣಸಿದ್ಧ ದ್ಯಾಮಗೋಳ್’ ಎನ್ನುವ ಯೂಟೂಬ್ ಚಾನಲ್ಲಿನಲ್ಲಿ ನೀವು ಕೇಳಬಹುದು.

ರೇವಣಸಿದ್ಧ ದ್ಯಾಮಗೋಳಗೆ ಈಗ 28 ವರ್ಷದ ಹರೆಯ. ಪುಟಿಯುವ ಉತ್ಸಾಹ. ಇಂಥ ಕಡೆ ಜನಪದ ಹಾಡಿಕೆ ಇದೆ ಎಂದು ಗೊತ್ತಾದರೆ, ಬೈಕಿಗೆ ಪೆಟ್ರೋಲ್ ತುಂಬಿಸಿ, ಟ್ರೈಪ್ಯಾಡ್ ತಗೊಂಡು ಹೊರಡುತ್ತಾನೆ. ಹಾಡಿಕೆ ಇರೋ ಕಡೆ ಹೋಗಿ, ಹಾಡಿಕೆ ಮಾಡುವ ಕಲಾವಿದರಿಗೆ ಕಾಣಿಕೆ ಸಲ್ಲಿಸಿ ಆಶೀರ್ವಾದ ತಗೊಳ್ತಾನೆ. ನನ್ನ ಬಗ್ಗೆ ಏನೂ ಹೇಳಬ್ಯಾಡ್ರಿ ಅಂದ್ರೂನು, ಹಾಡಿಕೆ ಆರಂಭಿಸುವ ಮುನ್ನ ಕಲಾವಿದರು `ರೇವಣಸಿದ್ಧ ದ್ಯಾಮಗೋಳ ಅವರು ತಮ್ಮ ಚಾನಲದಿಂದ ನಮ್ಮನ್ನ ಬೆಳಸ್ಯಾರ, ಬಾಳ ಪ್ರಚಾರ ಮಾಡ್ಯಾರ, ನಮಿಗೆ ಅವರ ಕಡೆಲಿಂದ ಬಾಳ ದುಡಿಮಿ ಆಗ್ಯಾತಿ, ಹಂಗಾಗಿ ಅವ್ರು ಬ್ಯಾಡ ಅಂದ್ರೂ ನಾವು ಅವರನ್ನ ನೆನಿಯೋದು ನಮ್ಮ ಧರ್ಮ ಐತಿ. ರೇವಣಸಿದ್ಧಪ್ಪರೋನ್ನ ದೇವರು ಆಯುಶ್ಯಾರೋಗ್ಯ ಕೊಟ್ ಚೆನ್ನಾಗಿ ಇಟ್ಟಿರಲಿ’ ಅಂತ ಹಾರೈಸುತ್ತಾರೆ. ಈ ಹುಡುಗ ನಾಚಿಕೆಯ ಮುದ್ದೆಯಾಗಿ ತಾನು ರೆಕಾರ್ಡ್ ಮಾಡುವುದರಲ್ಲಿ ತಲ್ಲೀನನಾಗುತ್ತಾನೆ.

ನಾನು ಗಮನಿಸಿದಂತೆ ಆಡಿಯೋ-ವೀಡಿಯೋ ಸಂಸ್ಥೆಗಳನ್ನು ಹೊರತುಪಡಿಸಿ ಹೀಗೆ ವೈಯಕ್ತಿಕ ನೆಲೆಯಲ್ಲಿ ಚಾನಲ್ ರೂಪಿಸಿ ಜನಪದ ಹಾಡಿಕೆ ವೀಡಿಯೋಗಳನ್ನು ಕೆಲವರು ಅಪ್ಲೋಡ್ ಮಾಡಿದ್ದಾರೆ. ಆದರೆ ಆ ಎಲ್ಲಾ ಚಾನಲ್ಲುಗಳಲ್ಲಿಯೇ ಅತಿಹೆಚ್ಚು ಚಂದಾದಾರಿಕೆ ಮತ್ತು ವೀಕ್ಷೆಣೆಯನ್ನು ದ್ಯಾಮಗೋಳ್ ಚಾನಲ್ ಹೊಂದಿದೆ. ಹಿಂದೆ ಆಡಿಯೋ ರೆಕಾರ್ಡ್ ಆಗಿದ್ದ ಕ್ಯಾಸೆಟ್‍ಗಳನ್ನು ತೆಗೆದುಕೊಂಡು, ಆ ಕ್ಯಾಸೆಟ್‍ನಲ್ಲಿ ಹಾಡಿದ ಕವಿಗಳ ಒಪ್ಪಿಗೆ ಪಡೆದು, ಕ್ಯಾಸೆಟ್ ಹಾಡಿಕೆಯನ್ನು ಎಂಪಿ-3 ಆಡಿಯೋ ಫೈಲನ್ನಾಗಿ ವರ್ಗಾಯಿಸಿಕೊಂಡು ಆ ನಂತರ, ಎಂಪಿ-3 ಪೈಲನ್ನು ವೀಡಿಯೋವಾಗಿ ರೂಪಾಂತರಿಸಲಾಗುತ್ತದೆ. ಇಂತಹ ಸಂದರ್ಭದಲ್ಲಿ ಕೆಸೆಟ್ಟಿನ ಪೋಸ್ಟರ್ ಅನ್ನು ವೀಡಿಯೋದ ಕವರ್ ಫೋಟೋವಾಗಿ ಬಳಸಲಾಗುತ್ತದೆ. ಆಗ ಕ್ಯಾಸೆಟ್ ಮೇಲಿನ ಮುಖ ಹೊದಿಕೆ, ಅದೇ ಹಾಡುಗಳ ವೀಡಿಯೋ ಮುಖಹೊದಿಕೆಯಾಗಿ ಬದಲಾಗುತ್ತದೆ.

ಹೀಗೆ ರೂಪಾಂತರಿಸುವಾಗ ಹಾಡಿಕೆ ಮಾಡಿದ ಕವಿಯ ಫೋಟೋ ಮತ್ತು ವೀಡಿಯೋದಲ್ಲಿಯೇ ಕವಿಯ ಮೊಬೈಲ್ ನಂಬರನ್ನು ಕೊಡಲಾಗುತ್ತದೆ. ಯೂಟೂಬಲ್ಲಿ ಈ ಹಾಡು ಕೇಳಿದವರು ಇಷ್ಟವಾದರೆ ಹಾಡಿಕೆ ತಂಡಕ್ಕೆ ಪೋನಚ್ಚಿ ಮಾತಾಡಿಸಿ ತಮ್ಮ ಊರಿನ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಾರೆ. `ಮೊದಲಾದರೆ ಹೀಗೆ ರೆಕಾರ್ಡ್ ಮಾಡಬೇಕಾದರೆ ಜನಪದ ಕಲಾವಿದರನ್ನೇ ರೆಕಾರ್ಡಿಂಗ್ ಸ್ಟುಡಿಯೋಕ್ಕೆ ಕರೆಯಿಸಬೇಕಿತ್ತು. ಹೀಗೆ ರೆಕಾರ್ಡ್ ಮಾಡಲು ಸ್ವತಃ ಜನಪದ ಕಲಾವಿದರೆ ರೆಕಾರ್ಡಿಂಗ್ ಕಂಪನಿಗಳಿಗೆ ಹಣ ಕೊಟ್ಟದ್ದೂ ಇದೆ. ಈಗ ಹಾಗಿಲ್ಲ. ನಾವೇ ಹಾಡುವಲ್ಲಿಗೆ ಹೋಗಿ ರೆಕಾರ್ಡ್ ಮಾಡಿಕೊಂಡು ಬಂದು ಯೂಟೂಬಿಗೆ ಹಾಕುತ್ತೇವೆ. ನಾನು ಅಪ್ಲೋಡ್ ಮಾಡಿದ್ದಕ್ಕಿಂತ ಒಳ್ಳೆಯ ಹಾಡುಗಳು ಇದಾವ್ ಸರ್, ಅಂತವುಗಳನ್ನೆಲ್ಲಾ ಸಂಗ್ರಹಿಸಬೇಕು ಅಂತ ಆಸೆ ಇದೆ’ ಎಂದು ರೇವಣಸಿದ್ಧ ಹೇಳುತ್ತಾರೆ.

ಮುಂದುವರಿದು `ನಮ್ಮ ಚಾನಲ್ ಫೇಮಸ್ ಆಗಿರೋದ್ರಿಂದ, ನಮ್ಮ ಚಾನಲದಾಗ ಹಾಡು ಹಾಕಿದ್ರೆ ಹೆಚ್ಚು ಪ್ರಚಾರ ಆಗಿ ಹಾಡಿಕಿ ಆರ್ಡರ್ ಸಿಗುತ್ತೆ ಅಂತೇಳಿ ಕೆಲವೊಮ್ಮೆ ಜನಪದ ಕಲಾವಿದರೆ ನಮ್ಮ ಹಾಡ ಯೂಟೂಬದಾಗ ಬಿಡರಿ ಅಂತೇಳಿ ಹಣ ಕೊಡೋಕೆ ಬರ್ತಾರೆ. ಆದರೆ ನಾನು ಯಾವ ಕಲಾವಿದರಿಂದಲೂ ಹಣ ಪಡೆಯೋಲ್ಲ. ಯೂಟೂಬಿಂದ ನನ್ನ ಕೆಲಸಕ್ಕೆ ಒಂದಷ್ಟು ಹಣ ಕೊಡ್ತಾರೆ. ಹಾಗಾಗಿ ನಿಮ್ಮಿಂದ ಹಣ ನಾನು ತಗೊಳ್ಳಲ್ಲ ಎಂದು ಹೇಳುತ್ತೇನೆ’ ಎಂದು ತನ್ನ ವೃತ್ತಿನಿಷ್ಠೆಯನ್ನು ವಿವರಿಸುತ್ತಾರೆ.

ಅವರು ಅಪ್‌ಲೋಡ್ ಮಾಡಿರುವ ಒಂದು ಹಾಡು ಕೇಳಿ

ಕಲ್ಬುರ್ಗಿ, ಅಫಜಲಫುರ, ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಮಹರಾಷ್ಟ್ರದ ಸಾಂಗಲಿ, ಜತ್ತ ಮೊದಲಾದ ಕಡೆಗಳ ಸುಮಾರು ಇನ್ನೂರಕ್ಕಿಂತ ಹೆಚ್ಚು ಜನಪದ ಹಾಡಿಕೆ ತಂಡಗಳು ರೇವಣಸಿದ್ಧ ಅವರಿಗೆ ಸಂಪರ್ಕವಿದೆ. ಶಿವರಾಯ ಮಾಸ್ತರ್, ಕಲ್ಮೇಶ, ಕೇದಾರ ಮಾಸ್ತರ್, ಗುರುಲಿಂಗ ಮಾಸ್ತರ ಸಂಕನಾಳ, ನಾಗೂರು ಲಕ್ಷ್ಮಣ, ಸುಮಿತ್ರಾ ಮುಗಳಿಹಾಳ, ಸಾವಿತ್ರಿ ಕಿರಣಗಿ, ಆಕಾಶ ಮನಗುಳಿ ಮುಂತಾದ ಜನಪ್ರಿಯ ಜನಪದ ಕವಿಗಳು ಪದಕಟ್ಟುವ ಬಗ್ಗೆ, ಹಾಡಿಕೆ ಬಗ್ಗೆ ರೇವಣಸಿದ್ಧ ಅಭಿಮಾನ ಇಟ್ಟುಕೊಂಡಿದ್ದಾರೆ. ರೇವಣಸಿದ್ಧ ಸದ್ಯಕ್ಕೆ ತಂದೆ ರಾಮಚಂದ್ರ, ತಾಯಿ ಕಮಲಾಬಾಯಿ, ಕಾಕಾ ಲಕ್ಷ್ಮಣ, ಅಣ್ಣಂದಿರಾದ ಶಿವಣ್ಣ ಮತ್ತು ಸಂತೋಷ್, ಒಂದು ವರ್ಷದ ಹಿಂದೆ ಮದುವೆಯಾದ ಪತ್ನಿ ಮೋನಿಕಾರೊಂದಿಗೆ ನೆಲೆಸಿ, ಹೈಸ್ಕೂಲ್ ಮೇಷ್ಟ್ರಾಗುವ ಕನಸೊತ್ತು ಸಿಇಟಿಗೆ ಅಗತ್ಯವಾದ ಓದು ಓದಿಕೊಂಡಿದ್ದಾರೆ.

ರೇವಣಸಿದ್ಧ ದ್ಯಾಮಗೋಳ ಒಂದು ಸಂಸ್ಥೆ, ವಿಶ್ವವಿದ್ಯಾಲಯ ಮಾಡಲಾರದಷ್ಟು ಕೆಲಸವನ್ನು ತಾವೊಬ್ಬರೆ ಮಾಡಿದ್ದಾರೆ. ಆಫ್‍ಲೈನಲ್ಲಿದ್ದ ನೂರಾರು ಅಜ್ಞಾತ ಜನಪದ ಕಲಾವಿದರನ್ನು ಆನ್‍ಲೈನ್ ಲೋಕಕ್ಕೆ ಪರಿಚಯಿಸಿದ್ದಾರೆ. ಎಷ್ಟೋ ಜನಪದ ಕಲಾ ತಂಡಗಳಿಗೆ ತಮ್ಮ ಚಾನಲ್ ಮೂಲಕ ಹಾಡಿಕೆಯ ಅವಕಾಶಗಳನ್ನು ಕಲ್ಪಿಸಿಕೊಟ್ಟು ನೆರವಾಗಿದ್ದಾರೆ. ಜಾನಪದ ಸಂಶೋಧಕರಿಗೆ/ಅಧ್ಯಯನಕಾರರಿಗೆ ಆಕರ ಒದಗಿಸಿದ್ದಾರೆ. ನನ್ನ ಪೋಸ್ಟ್ ಡಾಕ್ಟರಲ್ ಸಂಶೋಧನೆಯ ಭಾಗವಾಗಿ ಜನಪದ ಹಾಡಿಕೆ ಕೇಳುವಾಗಲೆ ನನಗೂ ರೇವಣಸಿದ್ಧ ಅವರು ಪರಿಚಯವಾದದ್ದು. ರೇವಣಸಿದ್ಧ ಅವರ ನಿರಂತರ ಶ್ರಮದ ಫಲವಾಗಿ ಯೂಟೂಬಿನಿಂದ ಒಂದಷ್ಟು ಹಣ ಸಂದಾಯವಾದರೂ, ಅದು ಅವರ ಶ್ರಮಕ್ಕೆ ಕಡಿಮೆಯೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯವಾಗಲಿ, ಕರ್ನಾಟಕದ ಜಾನಪದ ಪರಿಷತ್ತಾಗಲಿ, ಜಾನಪದ ಅಕಾಡೆಮಿಯಾಗಲಿ ಇಂಥವರನ್ನು ಗುರುತಿಸಬೇಕಿದೆ.

ಫೇಸ್ ಬುಕ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ

ರೇವಣಸಿದ್ಧ ದ್ಯಾಮಗೊಳ ಅವರ ಯೂಟೂಬ್ ಚಾನಲ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ

  • ಅರುಣ್ ಜೋಳದ ಕೂಡ್ಲಿಗಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅರುಣ್ ಸರ್,
    ನೀವೂ ಕೂಡ ಇಂಥ ಎಲೆಮರೆಯ ಪ್ರತಿಭೆಯನ್ನು ನಮಗೆ ಪರಿಚಯಿಸುವ ಮುಖಾಂತರ ಬೇರೆಯವರಿಗೂ ಸ್ಪೂರ್ತಿಯಾಗುವಂತ ರೇವಣಸಿದ್ಧರನ್ನು ಹುಡುಕಿ ಕೊಟ್ಟಿದ್ದೀರಿ.
    ಕಂಡಿತವಾಗಿಯೂ ಇಂಥ ಪ್ರತಿಭೆಗಳನ್ನು ಗುರುತಿಸಿ ಕರೆತಂದು ಇಡೀ ಲೋಕಕ್ಕೆ ಪರಿಚಯಿಸುಂಥ ಕೆಲಸ ವಿಶ್ವವಿದ್ಯಾಲಯ, ಅಕಾಡೆಮಿಗಳು ಮಾಡಲೆಎಬೇಕಾದ ಅನಿವಾರ್ಯತೆಯಿದೆ. ಇದು ಅವುಗಳ ಕರ್ತವ್ಯವೂ ಕೂಡ ಎಂದರೆ ತಪ್ಪಾಗದು.
    -ರಾಜಶೇಖರ ಚಂ.ಡೊಂಬರಮತ್ತೂರ
    ಹಾವೇರಿ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...