Homeಎಲೆಮರೆಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ

ಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ

ರೇವಣಸಿದ್ಧ ದ್ಯಾಮಗೋಳ ಒಂದು ಸಂಸ್ಥೆ, ವಿಶ್ವವಿದ್ಯಾಲಯ ಮಾಡಲಾರದಷ್ಟು ಕೆಲಸವನ್ನು ತಾವೊಬ್ಬರೆ ಮಾಡಿದ್ದಾರೆ. ಆಫ್‍ಲೈನಲ್ಲಿದ್ದ ನೂರಾರು ಅಜ್ಞಾತ ಜನಪದ ಕಲಾವಿದರನ್ನು ಆನ್‍ಲೈನ್ ಲೋಕಕ್ಕೆ ಪರಿಚಯಿಸಿದ್ದಾರೆ.

- Advertisement -
- Advertisement -

ಆ ಹುಡುಗ ಚಡಚಣದಲ್ಲಿ ಡಿಗ್ರಿ ಮುಗಿಸಿದ ನಂತರ ಬಿಜಾಪುರದ ಜಿಎಸ್‍ಎಸ್ ಕಾಲೇಜಿನಲ್ಲಿ ಬಿಎಡ್ ಪೂರೈಸಿ, ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ತನ್ನ ಊರಾದ ಮೈಲಾರ ಎಂಬ ಚಿಕ್ಕ ಹಳ್ಳಿಯಲ್ಲಿದ್ದ. ಮನೆಯಲ್ಲಿ ತಂದೆ ಕಾಕಾ ಹಾಡಿಕಿ ಸಂಘದಲ್ಲಿದ್ದರು. ಡೊಳ್ಳಿನ ಪದ ಹಾಡತಿದ್ದರು. ಯಾರೋ ಮೊಬೈಲದಾಗ ಡೊಳ್ಳಿನ ಹಾಡ ಹಚ್ಚಿಕೊಟ್ಟರು. ಅಪ್ಪ ಮಗನಿಗೆ ‘ರೇವಣಸಿದ್ಧ ಈ ಮೊಬೈಲದಾಗ ಹಾಡ ಹೆಂಗ್ ಬಿಡತಾರು ನೋಡಿಕೋ’ ಎಂದರು. ಮಗನ ಗ್ಯಾನ ಮೊಬೈಲಿನ ಮ್ಯಾಲೆ ಬಿತ್ತು. ಹೀಗೆ ನೋಡ್ತಾ ನೋಡ್ತಾ ಪದಾನ ಮೊಬೈಲದಾಗ ಹೆಂಗ್ ಬಿಡ್ತಾರ ಅಂತ ತಿಳಕಂಡು ಆಗಸ್ಟ್ 6, 2017 ರಲ್ಲಿ ಯೂಟೂಬ್ ಅಕೌಂಟ್ ಕ್ರಿಯೇಟ್ ಮಾಡಿ, ತಾನೂ ತನ್ನ ಅಪ್ಪ ಕಕ್ಕರು ಹಾಡೋ ಹಾಡ ಮೊಬೈಲಿನ್ಯಾಗ ಬಿಡಾಕತ್ತಿದ.

ಇದೀಗ ಈ ಹುಡುಗ ಹೀಗೆ ಯೂಟೂಬಿಗೆ 1260 ವೀಡಿಯೋಗಳನ್ನು ಅಪ್ಲೋಡ್ ಮಾಡಿದ್ದಾನೆ, 87 ಸಾವಿರದಷ್ಟು ಚಂದಾದಾರರಿದ್ದಾರೆ, ಮೂರು ಕೋಟಿ ನಲವತ್ನಾಲ್ಕು ಲಕ್ಷದಷ್ಟು ವೀಕ್ಷಣೆ ಇದೆ. ಇದೀಗ ಜನಪದ ಹಾಡಿಕೆ ಮದ್ಯೆ ಜಾಹೀರಾತುಗಳು ಕಾಣಿಸಿಕೊಳ್ಳುತ್ತವೆ. ಯೂಟೂಬಿನಿಂದ ಪ್ರತಿ ತಿಂಗಳು ಕನಿಷ್ಠ ಹತ್ತು ಸಾವಿರ ಈ ಹುಡುಗನ ಅಕೌಂಟಿಗೆ ಜಮೆ ಆಗುತ್ತದೆ. ಇಂದು ಉತ್ತರ ಕರ್ನಾಟಕ ಹೈದರಬಾದ ಕರ್ನಾಟಕದ ಮುನ್ನೂರಕ್ಕಿಂತ ಹೆಚ್ಚು ಜನಪದ ಕವಿಗಳ ಹಾಡಿಕೆಯ, ಡೊಳ್ಳಿನ ಹಾಡು, ಭಜನೆ, ಮೊಹರಂ ಪದ, ಗೀಗೀ, ಸೋಬಾನೆ, ಚೌಡಕಿ ಪದ ಹೀಗೆ ಹಲವು ಜನಪದ ಪ್ರಕಾರಗಳ ಹಾಡುಗಳನ್ನು `ರೇವಣಸಿದ್ಧ ದ್ಯಾಮಗೋಳ್’ ಎನ್ನುವ ಯೂಟೂಬ್ ಚಾನಲ್ಲಿನಲ್ಲಿ ನೀವು ಕೇಳಬಹುದು.

ರೇವಣಸಿದ್ಧ ದ್ಯಾಮಗೋಳಗೆ ಈಗ 28 ವರ್ಷದ ಹರೆಯ. ಪುಟಿಯುವ ಉತ್ಸಾಹ. ಇಂಥ ಕಡೆ ಜನಪದ ಹಾಡಿಕೆ ಇದೆ ಎಂದು ಗೊತ್ತಾದರೆ, ಬೈಕಿಗೆ ಪೆಟ್ರೋಲ್ ತುಂಬಿಸಿ, ಟ್ರೈಪ್ಯಾಡ್ ತಗೊಂಡು ಹೊರಡುತ್ತಾನೆ. ಹಾಡಿಕೆ ಇರೋ ಕಡೆ ಹೋಗಿ, ಹಾಡಿಕೆ ಮಾಡುವ ಕಲಾವಿದರಿಗೆ ಕಾಣಿಕೆ ಸಲ್ಲಿಸಿ ಆಶೀರ್ವಾದ ತಗೊಳ್ತಾನೆ. ನನ್ನ ಬಗ್ಗೆ ಏನೂ ಹೇಳಬ್ಯಾಡ್ರಿ ಅಂದ್ರೂನು, ಹಾಡಿಕೆ ಆರಂಭಿಸುವ ಮುನ್ನ ಕಲಾವಿದರು `ರೇವಣಸಿದ್ಧ ದ್ಯಾಮಗೋಳ ಅವರು ತಮ್ಮ ಚಾನಲದಿಂದ ನಮ್ಮನ್ನ ಬೆಳಸ್ಯಾರ, ಬಾಳ ಪ್ರಚಾರ ಮಾಡ್ಯಾರ, ನಮಿಗೆ ಅವರ ಕಡೆಲಿಂದ ಬಾಳ ದುಡಿಮಿ ಆಗ್ಯಾತಿ, ಹಂಗಾಗಿ ಅವ್ರು ಬ್ಯಾಡ ಅಂದ್ರೂ ನಾವು ಅವರನ್ನ ನೆನಿಯೋದು ನಮ್ಮ ಧರ್ಮ ಐತಿ. ರೇವಣಸಿದ್ಧಪ್ಪರೋನ್ನ ದೇವರು ಆಯುಶ್ಯಾರೋಗ್ಯ ಕೊಟ್ ಚೆನ್ನಾಗಿ ಇಟ್ಟಿರಲಿ’ ಅಂತ ಹಾರೈಸುತ್ತಾರೆ. ಈ ಹುಡುಗ ನಾಚಿಕೆಯ ಮುದ್ದೆಯಾಗಿ ತಾನು ರೆಕಾರ್ಡ್ ಮಾಡುವುದರಲ್ಲಿ ತಲ್ಲೀನನಾಗುತ್ತಾನೆ.

ನಾನು ಗಮನಿಸಿದಂತೆ ಆಡಿಯೋ-ವೀಡಿಯೋ ಸಂಸ್ಥೆಗಳನ್ನು ಹೊರತುಪಡಿಸಿ ಹೀಗೆ ವೈಯಕ್ತಿಕ ನೆಲೆಯಲ್ಲಿ ಚಾನಲ್ ರೂಪಿಸಿ ಜನಪದ ಹಾಡಿಕೆ ವೀಡಿಯೋಗಳನ್ನು ಕೆಲವರು ಅಪ್ಲೋಡ್ ಮಾಡಿದ್ದಾರೆ. ಆದರೆ ಆ ಎಲ್ಲಾ ಚಾನಲ್ಲುಗಳಲ್ಲಿಯೇ ಅತಿಹೆಚ್ಚು ಚಂದಾದಾರಿಕೆ ಮತ್ತು ವೀಕ್ಷೆಣೆಯನ್ನು ದ್ಯಾಮಗೋಳ್ ಚಾನಲ್ ಹೊಂದಿದೆ. ಹಿಂದೆ ಆಡಿಯೋ ರೆಕಾರ್ಡ್ ಆಗಿದ್ದ ಕ್ಯಾಸೆಟ್‍ಗಳನ್ನು ತೆಗೆದುಕೊಂಡು, ಆ ಕ್ಯಾಸೆಟ್‍ನಲ್ಲಿ ಹಾಡಿದ ಕವಿಗಳ ಒಪ್ಪಿಗೆ ಪಡೆದು, ಕ್ಯಾಸೆಟ್ ಹಾಡಿಕೆಯನ್ನು ಎಂಪಿ-3 ಆಡಿಯೋ ಫೈಲನ್ನಾಗಿ ವರ್ಗಾಯಿಸಿಕೊಂಡು ಆ ನಂತರ, ಎಂಪಿ-3 ಪೈಲನ್ನು ವೀಡಿಯೋವಾಗಿ ರೂಪಾಂತರಿಸಲಾಗುತ್ತದೆ. ಇಂತಹ ಸಂದರ್ಭದಲ್ಲಿ ಕೆಸೆಟ್ಟಿನ ಪೋಸ್ಟರ್ ಅನ್ನು ವೀಡಿಯೋದ ಕವರ್ ಫೋಟೋವಾಗಿ ಬಳಸಲಾಗುತ್ತದೆ. ಆಗ ಕ್ಯಾಸೆಟ್ ಮೇಲಿನ ಮುಖ ಹೊದಿಕೆ, ಅದೇ ಹಾಡುಗಳ ವೀಡಿಯೋ ಮುಖಹೊದಿಕೆಯಾಗಿ ಬದಲಾಗುತ್ತದೆ.

ಹೀಗೆ ರೂಪಾಂತರಿಸುವಾಗ ಹಾಡಿಕೆ ಮಾಡಿದ ಕವಿಯ ಫೋಟೋ ಮತ್ತು ವೀಡಿಯೋದಲ್ಲಿಯೇ ಕವಿಯ ಮೊಬೈಲ್ ನಂಬರನ್ನು ಕೊಡಲಾಗುತ್ತದೆ. ಯೂಟೂಬಲ್ಲಿ ಈ ಹಾಡು ಕೇಳಿದವರು ಇಷ್ಟವಾದರೆ ಹಾಡಿಕೆ ತಂಡಕ್ಕೆ ಪೋನಚ್ಚಿ ಮಾತಾಡಿಸಿ ತಮ್ಮ ಊರಿನ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಾರೆ. `ಮೊದಲಾದರೆ ಹೀಗೆ ರೆಕಾರ್ಡ್ ಮಾಡಬೇಕಾದರೆ ಜನಪದ ಕಲಾವಿದರನ್ನೇ ರೆಕಾರ್ಡಿಂಗ್ ಸ್ಟುಡಿಯೋಕ್ಕೆ ಕರೆಯಿಸಬೇಕಿತ್ತು. ಹೀಗೆ ರೆಕಾರ್ಡ್ ಮಾಡಲು ಸ್ವತಃ ಜನಪದ ಕಲಾವಿದರೆ ರೆಕಾರ್ಡಿಂಗ್ ಕಂಪನಿಗಳಿಗೆ ಹಣ ಕೊಟ್ಟದ್ದೂ ಇದೆ. ಈಗ ಹಾಗಿಲ್ಲ. ನಾವೇ ಹಾಡುವಲ್ಲಿಗೆ ಹೋಗಿ ರೆಕಾರ್ಡ್ ಮಾಡಿಕೊಂಡು ಬಂದು ಯೂಟೂಬಿಗೆ ಹಾಕುತ್ತೇವೆ. ನಾನು ಅಪ್ಲೋಡ್ ಮಾಡಿದ್ದಕ್ಕಿಂತ ಒಳ್ಳೆಯ ಹಾಡುಗಳು ಇದಾವ್ ಸರ್, ಅಂತವುಗಳನ್ನೆಲ್ಲಾ ಸಂಗ್ರಹಿಸಬೇಕು ಅಂತ ಆಸೆ ಇದೆ’ ಎಂದು ರೇವಣಸಿದ್ಧ ಹೇಳುತ್ತಾರೆ.

ಮುಂದುವರಿದು `ನಮ್ಮ ಚಾನಲ್ ಫೇಮಸ್ ಆಗಿರೋದ್ರಿಂದ, ನಮ್ಮ ಚಾನಲದಾಗ ಹಾಡು ಹಾಕಿದ್ರೆ ಹೆಚ್ಚು ಪ್ರಚಾರ ಆಗಿ ಹಾಡಿಕಿ ಆರ್ಡರ್ ಸಿಗುತ್ತೆ ಅಂತೇಳಿ ಕೆಲವೊಮ್ಮೆ ಜನಪದ ಕಲಾವಿದರೆ ನಮ್ಮ ಹಾಡ ಯೂಟೂಬದಾಗ ಬಿಡರಿ ಅಂತೇಳಿ ಹಣ ಕೊಡೋಕೆ ಬರ್ತಾರೆ. ಆದರೆ ನಾನು ಯಾವ ಕಲಾವಿದರಿಂದಲೂ ಹಣ ಪಡೆಯೋಲ್ಲ. ಯೂಟೂಬಿಂದ ನನ್ನ ಕೆಲಸಕ್ಕೆ ಒಂದಷ್ಟು ಹಣ ಕೊಡ್ತಾರೆ. ಹಾಗಾಗಿ ನಿಮ್ಮಿಂದ ಹಣ ನಾನು ತಗೊಳ್ಳಲ್ಲ ಎಂದು ಹೇಳುತ್ತೇನೆ’ ಎಂದು ತನ್ನ ವೃತ್ತಿನಿಷ್ಠೆಯನ್ನು ವಿವರಿಸುತ್ತಾರೆ.

ಅವರು ಅಪ್‌ಲೋಡ್ ಮಾಡಿರುವ ಒಂದು ಹಾಡು ಕೇಳಿ

ಕಲ್ಬುರ್ಗಿ, ಅಫಜಲಫುರ, ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಮಹರಾಷ್ಟ್ರದ ಸಾಂಗಲಿ, ಜತ್ತ ಮೊದಲಾದ ಕಡೆಗಳ ಸುಮಾರು ಇನ್ನೂರಕ್ಕಿಂತ ಹೆಚ್ಚು ಜನಪದ ಹಾಡಿಕೆ ತಂಡಗಳು ರೇವಣಸಿದ್ಧ ಅವರಿಗೆ ಸಂಪರ್ಕವಿದೆ. ಶಿವರಾಯ ಮಾಸ್ತರ್, ಕಲ್ಮೇಶ, ಕೇದಾರ ಮಾಸ್ತರ್, ಗುರುಲಿಂಗ ಮಾಸ್ತರ ಸಂಕನಾಳ, ನಾಗೂರು ಲಕ್ಷ್ಮಣ, ಸುಮಿತ್ರಾ ಮುಗಳಿಹಾಳ, ಸಾವಿತ್ರಿ ಕಿರಣಗಿ, ಆಕಾಶ ಮನಗುಳಿ ಮುಂತಾದ ಜನಪ್ರಿಯ ಜನಪದ ಕವಿಗಳು ಪದಕಟ್ಟುವ ಬಗ್ಗೆ, ಹಾಡಿಕೆ ಬಗ್ಗೆ ರೇವಣಸಿದ್ಧ ಅಭಿಮಾನ ಇಟ್ಟುಕೊಂಡಿದ್ದಾರೆ. ರೇವಣಸಿದ್ಧ ಸದ್ಯಕ್ಕೆ ತಂದೆ ರಾಮಚಂದ್ರ, ತಾಯಿ ಕಮಲಾಬಾಯಿ, ಕಾಕಾ ಲಕ್ಷ್ಮಣ, ಅಣ್ಣಂದಿರಾದ ಶಿವಣ್ಣ ಮತ್ತು ಸಂತೋಷ್, ಒಂದು ವರ್ಷದ ಹಿಂದೆ ಮದುವೆಯಾದ ಪತ್ನಿ ಮೋನಿಕಾರೊಂದಿಗೆ ನೆಲೆಸಿ, ಹೈಸ್ಕೂಲ್ ಮೇಷ್ಟ್ರಾಗುವ ಕನಸೊತ್ತು ಸಿಇಟಿಗೆ ಅಗತ್ಯವಾದ ಓದು ಓದಿಕೊಂಡಿದ್ದಾರೆ.

ರೇವಣಸಿದ್ಧ ದ್ಯಾಮಗೋಳ ಒಂದು ಸಂಸ್ಥೆ, ವಿಶ್ವವಿದ್ಯಾಲಯ ಮಾಡಲಾರದಷ್ಟು ಕೆಲಸವನ್ನು ತಾವೊಬ್ಬರೆ ಮಾಡಿದ್ದಾರೆ. ಆಫ್‍ಲೈನಲ್ಲಿದ್ದ ನೂರಾರು ಅಜ್ಞಾತ ಜನಪದ ಕಲಾವಿದರನ್ನು ಆನ್‍ಲೈನ್ ಲೋಕಕ್ಕೆ ಪರಿಚಯಿಸಿದ್ದಾರೆ. ಎಷ್ಟೋ ಜನಪದ ಕಲಾ ತಂಡಗಳಿಗೆ ತಮ್ಮ ಚಾನಲ್ ಮೂಲಕ ಹಾಡಿಕೆಯ ಅವಕಾಶಗಳನ್ನು ಕಲ್ಪಿಸಿಕೊಟ್ಟು ನೆರವಾಗಿದ್ದಾರೆ. ಜಾನಪದ ಸಂಶೋಧಕರಿಗೆ/ಅಧ್ಯಯನಕಾರರಿಗೆ ಆಕರ ಒದಗಿಸಿದ್ದಾರೆ. ನನ್ನ ಪೋಸ್ಟ್ ಡಾಕ್ಟರಲ್ ಸಂಶೋಧನೆಯ ಭಾಗವಾಗಿ ಜನಪದ ಹಾಡಿಕೆ ಕೇಳುವಾಗಲೆ ನನಗೂ ರೇವಣಸಿದ್ಧ ಅವರು ಪರಿಚಯವಾದದ್ದು. ರೇವಣಸಿದ್ಧ ಅವರ ನಿರಂತರ ಶ್ರಮದ ಫಲವಾಗಿ ಯೂಟೂಬಿನಿಂದ ಒಂದಷ್ಟು ಹಣ ಸಂದಾಯವಾದರೂ, ಅದು ಅವರ ಶ್ರಮಕ್ಕೆ ಕಡಿಮೆಯೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯವಾಗಲಿ, ಕರ್ನಾಟಕದ ಜಾನಪದ ಪರಿಷತ್ತಾಗಲಿ, ಜಾನಪದ ಅಕಾಡೆಮಿಯಾಗಲಿ ಇಂಥವರನ್ನು ಗುರುತಿಸಬೇಕಿದೆ.

ಫೇಸ್ ಬುಕ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ

ರೇವಣಸಿದ್ಧ ದ್ಯಾಮಗೊಳ ಅವರ ಯೂಟೂಬ್ ಚಾನಲ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ

  • ಅರುಣ್ ಜೋಳದ ಕೂಡ್ಲಿಗಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅರುಣ್ ಸರ್,
    ನೀವೂ ಕೂಡ ಇಂಥ ಎಲೆಮರೆಯ ಪ್ರತಿಭೆಯನ್ನು ನಮಗೆ ಪರಿಚಯಿಸುವ ಮುಖಾಂತರ ಬೇರೆಯವರಿಗೂ ಸ್ಪೂರ್ತಿಯಾಗುವಂತ ರೇವಣಸಿದ್ಧರನ್ನು ಹುಡುಕಿ ಕೊಟ್ಟಿದ್ದೀರಿ.
    ಕಂಡಿತವಾಗಿಯೂ ಇಂಥ ಪ್ರತಿಭೆಗಳನ್ನು ಗುರುತಿಸಿ ಕರೆತಂದು ಇಡೀ ಲೋಕಕ್ಕೆ ಪರಿಚಯಿಸುಂಥ ಕೆಲಸ ವಿಶ್ವವಿದ್ಯಾಲಯ, ಅಕಾಡೆಮಿಗಳು ಮಾಡಲೆಎಬೇಕಾದ ಅನಿವಾರ್ಯತೆಯಿದೆ. ಇದು ಅವುಗಳ ಕರ್ತವ್ಯವೂ ಕೂಡ ಎಂದರೆ ತಪ್ಪಾಗದು.
    -ರಾಜಶೇಖರ ಚಂ.ಡೊಂಬರಮತ್ತೂರ
    ಹಾವೇರಿ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....