Homeಮುಖಪುಟ'ಕಾಂಟ್ರ್ಯಾಕ್ಟ್ ಟು ಕಿಲ್': ನಿಜ್ಜರ್ ಹತ್ಯೆ ಕುರಿತ ಸಿಬಿಸಿ ಡಾಕ್ಯುಮೆಂಟರಿಗೆ ಭಾರತದಲ್ಲಿ ನಿಷೇಧ

‘ಕಾಂಟ್ರ್ಯಾಕ್ಟ್ ಟು ಕಿಲ್’: ನಿಜ್ಜರ್ ಹತ್ಯೆ ಕುರಿತ ಸಿಬಿಸಿ ಡಾಕ್ಯುಮೆಂಟರಿಗೆ ಭಾರತದಲ್ಲಿ ನಿಷೇಧ

- Advertisement -
- Advertisement -

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತ CBCಯ ಡಾಕ್ಯುಮೆಂಟರಿಯನ್ನು ಭಾರತದಲ್ಲಿ ಪ್ರಸಾರ ಮಾಡದಂತೆ YouTubeಗೆ ನಿರ್ಬಂಧಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯಿದೆಯಡಿಯಲ್ಲಿ ಕೇಂದ್ರ ಸರಕಾರ ನಿರ್ಬಂಧಿಸಿರುವ ಬಗ್ಗೆ ಯ್ಯೂಟ್ಯೂಬ್‌ ಮತ್ತು ಎಕ್ಸ್‌ ಮಾಹಿತಿ ನೀಡಿದೆ ಎಂದು ಸಿಬಿಸಿ ಹೇಳಿಕೊಂಡಿದೆ.

‘ಕಾಂಟ್ರ್ಯಾಕ್ಟ್ ಟು ಕಿಲ್’ ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರದಲ್ಲಿ ಜೂನ್ 18, 2023ರಂದು ನಿಜ್ಜರನ್ನು ಹತ್ಯೆ ಕುರಿತ ವೀಡಿಯೊವನ್ನು ಸಿಬಿಸಿ ವರದಿ ಮಾಡಿದೆ. ನಾವು ಈ ಕುರಿತು ಯ್ಯೂಟ್ಯೂಬ್‌ನಿಂದ ಇ-ಮೇಲ್‌ ಸ್ವೀಕರಿಸಿದ್ದೇವೆ, ಅದರಲ್ಲಿ ವೀಡಿಯೊಗೆ ನಿರ್ಬಂಧಿಸಲು ಭಾರತದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಆದೇಶ ನೀಡಿದೆ. ಯೂಟ್ಯೂಬ್‌ನಲ್ಲಿ ಭಾರತದಲ್ಲಿ ಈ ಸಾಕ್ಷ್ಯಚಿತ್ರವನ್ನು ಪ್ರಸಾರಕ್ಕೆ ನಿರ್ಬಂಧಿಸಲಾಗಿದೆ ಎಂದು ಯುಟ್ಯೂಬ್‌ ಹೇಳಿಕೊಂಡಿದೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ ಕೂಡ ಇದೇ ರೀತಿಯ ಮಾಹಿತಿಯನ್ನು ನೀಡಿದ್ದು, ಈ ವಿಡಿಯೋವನ್ನು ಎಕ್ಸ್‌  ಪ್ಲಾಟ್‌ಪಾರ್ಮ್‌ನಿಂದ ತೆಗೆದು ಹಾಕುವಂತೆ ಭಾರತ ಸರ್ಕಾರದಿಂದ ಸೂಚನೆ ಬಂದಿದೆ ಎಂದು ಸಿಬಿಸಿಗೆ ಮಾಹಿತಿ ನೀಡಿದೆ. ಭಾರತದಲ್ಲಿ ಈ ವಿಷಯಕ್ಕೆ ನಿರ್ಬಂಧಿಸುವಂತೆ ಸೂಚಿಸಲಾಗಿದೆ, ಆದರೆ ಈ ವಿಡಿಯೋ ಬೇರೆ ದೇಶಗಳಲ್ಲಿ ಲಭ್ಯವಿರುತ್ತದೆ ಎಂದು ಎಕ್ಸ್ ವರದಿಯು ಸಿಬಿಸಿಗೆ ತಿಳಿಸಿದೆ. ನಾವು ಈ ಕ್ರಮವನ್ನು ಒಪ್ಪುವುದಿಲ್ಲ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಈ ಪೋಸ್ಟ್‌ಗಳಿಗೆ ಕೂಡ ವಿಸ್ತರಿಸಬೇಕು ಎಂದು ನಾವು ಹೇಳುತ್ತೇವೆ. ಭಾರತೀಯ ಕಾನೂನು ಪ್ರಕ್ರಿಯೆಯನ್ನು ಅನುಸರಿಸಿ, ನಾವು ಭಾರತೀಯ ಅಧಿಕಾರಿಗಳೊಂದಿಗೆ ಈ ಬಗ್ಗೆ ಸಂವಹನದಲ್ಲಿದ್ದೇವೆ ಎಂದು ಹೇಳಿಕೊಂಡಿದೆ.

ಸುದ್ದಿ ಸಂಸ್ಥೆಯ ಪ್ರಕಾರ, ಜೂನ್ 18, 2023ರ ಸಂಜೆ ಸರ್ರೆಯಲ್ಲಿನ ಪೂಜಾ ಸ್ಥಳದ ಪಾರ್ಕಿಂಗ್ ಸ್ಥಳದಲ್ಲಿ ನಿಜ್ಜರ್‌ ಹತ್ಯೆಗೀಡಾಗಿದ್ದರು. ಈ ಕುರಿತ ವಿಡಿಯೋವನ್ನು ಪ್ರಸಾರ ಮಾಡಲಾಗಿದೆ, ವಿಡಿಯೋದಲ್ಲಿ ಗುರುದ್ವಾರದ ಪಾರ್ಕಿಂಗ್ ಸ್ಥಳದಿಂದ ನಿಜ್ಜರ್ ಹೊರಡುವುದನ್ನು ವೀಡಿಯೊ ತೋರಿಸುತ್ತದೆ. ಅವರ ವಾಹನವನ್ನು ತಡೆದು ಇಬ್ಬರು ವ್ಯಕ್ತಿಗಳು ನಿಜ್ಜರ್‌ಗೆ ಗುಂಡು ಹಾರಿಸಿ ಟೊಯೊಟಾ ಕ್ಯಾಮ್ರಿಯಲ್ಲಿ ತಪ್ಪಿಸಿಕೊಳ್ಳುತ್ತಾರೆ ಎಂದು ಸಿಬಿಸಿ ನ್ಯೂಸ್ ವರದಿ ಮಾಡಿದೆ. ಘಟನೆ ನಡೆದಾಗ ಸಮೀಪದ ಮೈದಾನದಲ್ಲಿ ಆಡುತ್ತಿದ್ದ ಇಬ್ಬರು ಪ್ರತ್ಯಕ್ಷದರ್ಶಿಗಳು ಗುಂಡಿನ ಸದ್ದು ಕೇಳಿ ಸ್ಥಳಕ್ಕೆ ಓಡಿ ದಾಳಿಕೋರರನ್ನು ಹಿಂಬಾಲಿಸಲು ಪ್ರಯತ್ನಿಸಿರುವುದು ವಿಡಿಯೋದಲ್ಲಿ ಕಂಡು ಬಂದಿತ್ತು.

ನಿಜ್ಜರ್‌ನ ಹತ್ಯೆಯು ಕೆನಡಾ ಮತ್ತು ಭಾರತದ ನಡುವಿನ ಸಂಬಂಧಗಳಲ್ಲಿ ಬಿರುಕು ಉಂಟು ಮಾಡಿತ್ತು.  ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಹತ್ಯೆಯಲ್ಲಿ ಭಾರತ ಸರ್ಕಾರವು ಭಾಗಿಯಾಗಿದೆ ಎಂದು ಆರೋಪಿಸಿದ್ದರು. ಜೂ.18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ನಡೆದಿತ್ತು. ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಇದನ್ನು ಓದಿ: ಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌, ಸುಖಬೀರ್‌ ಸಂಧು ಆಯ್ಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...