Homeಮುಖಪುಟ'ಕಾಂಟ್ರ್ಯಾಕ್ಟ್ ಟು ಕಿಲ್': ನಿಜ್ಜರ್ ಹತ್ಯೆ ಕುರಿತ ಸಿಬಿಸಿ ಡಾಕ್ಯುಮೆಂಟರಿಗೆ ಭಾರತದಲ್ಲಿ ನಿಷೇಧ

‘ಕಾಂಟ್ರ್ಯಾಕ್ಟ್ ಟು ಕಿಲ್’: ನಿಜ್ಜರ್ ಹತ್ಯೆ ಕುರಿತ ಸಿಬಿಸಿ ಡಾಕ್ಯುಮೆಂಟರಿಗೆ ಭಾರತದಲ್ಲಿ ನಿಷೇಧ

- Advertisement -
- Advertisement -

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತ CBCಯ ಡಾಕ್ಯುಮೆಂಟರಿಯನ್ನು ಭಾರತದಲ್ಲಿ ಪ್ರಸಾರ ಮಾಡದಂತೆ YouTubeಗೆ ನಿರ್ಬಂಧಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯಿದೆಯಡಿಯಲ್ಲಿ ಕೇಂದ್ರ ಸರಕಾರ ನಿರ್ಬಂಧಿಸಿರುವ ಬಗ್ಗೆ ಯ್ಯೂಟ್ಯೂಬ್‌ ಮತ್ತು ಎಕ್ಸ್‌ ಮಾಹಿತಿ ನೀಡಿದೆ ಎಂದು ಸಿಬಿಸಿ ಹೇಳಿಕೊಂಡಿದೆ.

‘ಕಾಂಟ್ರ್ಯಾಕ್ಟ್ ಟು ಕಿಲ್’ ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರದಲ್ಲಿ ಜೂನ್ 18, 2023ರಂದು ನಿಜ್ಜರನ್ನು ಹತ್ಯೆ ಕುರಿತ ವೀಡಿಯೊವನ್ನು ಸಿಬಿಸಿ ವರದಿ ಮಾಡಿದೆ. ನಾವು ಈ ಕುರಿತು ಯ್ಯೂಟ್ಯೂಬ್‌ನಿಂದ ಇ-ಮೇಲ್‌ ಸ್ವೀಕರಿಸಿದ್ದೇವೆ, ಅದರಲ್ಲಿ ವೀಡಿಯೊಗೆ ನಿರ್ಬಂಧಿಸಲು ಭಾರತದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಆದೇಶ ನೀಡಿದೆ. ಯೂಟ್ಯೂಬ್‌ನಲ್ಲಿ ಭಾರತದಲ್ಲಿ ಈ ಸಾಕ್ಷ್ಯಚಿತ್ರವನ್ನು ಪ್ರಸಾರಕ್ಕೆ ನಿರ್ಬಂಧಿಸಲಾಗಿದೆ ಎಂದು ಯುಟ್ಯೂಬ್‌ ಹೇಳಿಕೊಂಡಿದೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ ಕೂಡ ಇದೇ ರೀತಿಯ ಮಾಹಿತಿಯನ್ನು ನೀಡಿದ್ದು, ಈ ವಿಡಿಯೋವನ್ನು ಎಕ್ಸ್‌  ಪ್ಲಾಟ್‌ಪಾರ್ಮ್‌ನಿಂದ ತೆಗೆದು ಹಾಕುವಂತೆ ಭಾರತ ಸರ್ಕಾರದಿಂದ ಸೂಚನೆ ಬಂದಿದೆ ಎಂದು ಸಿಬಿಸಿಗೆ ಮಾಹಿತಿ ನೀಡಿದೆ. ಭಾರತದಲ್ಲಿ ಈ ವಿಷಯಕ್ಕೆ ನಿರ್ಬಂಧಿಸುವಂತೆ ಸೂಚಿಸಲಾಗಿದೆ, ಆದರೆ ಈ ವಿಡಿಯೋ ಬೇರೆ ದೇಶಗಳಲ್ಲಿ ಲಭ್ಯವಿರುತ್ತದೆ ಎಂದು ಎಕ್ಸ್ ವರದಿಯು ಸಿಬಿಸಿಗೆ ತಿಳಿಸಿದೆ. ನಾವು ಈ ಕ್ರಮವನ್ನು ಒಪ್ಪುವುದಿಲ್ಲ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಈ ಪೋಸ್ಟ್‌ಗಳಿಗೆ ಕೂಡ ವಿಸ್ತರಿಸಬೇಕು ಎಂದು ನಾವು ಹೇಳುತ್ತೇವೆ. ಭಾರತೀಯ ಕಾನೂನು ಪ್ರಕ್ರಿಯೆಯನ್ನು ಅನುಸರಿಸಿ, ನಾವು ಭಾರತೀಯ ಅಧಿಕಾರಿಗಳೊಂದಿಗೆ ಈ ಬಗ್ಗೆ ಸಂವಹನದಲ್ಲಿದ್ದೇವೆ ಎಂದು ಹೇಳಿಕೊಂಡಿದೆ.

ಸುದ್ದಿ ಸಂಸ್ಥೆಯ ಪ್ರಕಾರ, ಜೂನ್ 18, 2023ರ ಸಂಜೆ ಸರ್ರೆಯಲ್ಲಿನ ಪೂಜಾ ಸ್ಥಳದ ಪಾರ್ಕಿಂಗ್ ಸ್ಥಳದಲ್ಲಿ ನಿಜ್ಜರ್‌ ಹತ್ಯೆಗೀಡಾಗಿದ್ದರು. ಈ ಕುರಿತ ವಿಡಿಯೋವನ್ನು ಪ್ರಸಾರ ಮಾಡಲಾಗಿದೆ, ವಿಡಿಯೋದಲ್ಲಿ ಗುರುದ್ವಾರದ ಪಾರ್ಕಿಂಗ್ ಸ್ಥಳದಿಂದ ನಿಜ್ಜರ್ ಹೊರಡುವುದನ್ನು ವೀಡಿಯೊ ತೋರಿಸುತ್ತದೆ. ಅವರ ವಾಹನವನ್ನು ತಡೆದು ಇಬ್ಬರು ವ್ಯಕ್ತಿಗಳು ನಿಜ್ಜರ್‌ಗೆ ಗುಂಡು ಹಾರಿಸಿ ಟೊಯೊಟಾ ಕ್ಯಾಮ್ರಿಯಲ್ಲಿ ತಪ್ಪಿಸಿಕೊಳ್ಳುತ್ತಾರೆ ಎಂದು ಸಿಬಿಸಿ ನ್ಯೂಸ್ ವರದಿ ಮಾಡಿದೆ. ಘಟನೆ ನಡೆದಾಗ ಸಮೀಪದ ಮೈದಾನದಲ್ಲಿ ಆಡುತ್ತಿದ್ದ ಇಬ್ಬರು ಪ್ರತ್ಯಕ್ಷದರ್ಶಿಗಳು ಗುಂಡಿನ ಸದ್ದು ಕೇಳಿ ಸ್ಥಳಕ್ಕೆ ಓಡಿ ದಾಳಿಕೋರರನ್ನು ಹಿಂಬಾಲಿಸಲು ಪ್ರಯತ್ನಿಸಿರುವುದು ವಿಡಿಯೋದಲ್ಲಿ ಕಂಡು ಬಂದಿತ್ತು.

ನಿಜ್ಜರ್‌ನ ಹತ್ಯೆಯು ಕೆನಡಾ ಮತ್ತು ಭಾರತದ ನಡುವಿನ ಸಂಬಂಧಗಳಲ್ಲಿ ಬಿರುಕು ಉಂಟು ಮಾಡಿತ್ತು.  ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಹತ್ಯೆಯಲ್ಲಿ ಭಾರತ ಸರ್ಕಾರವು ಭಾಗಿಯಾಗಿದೆ ಎಂದು ಆರೋಪಿಸಿದ್ದರು. ಜೂ.18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ನಡೆದಿತ್ತು. ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಇದನ್ನು ಓದಿ: ಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌, ಸುಖಬೀರ್‌ ಸಂಧು ಆಯ್ಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...