Homeಮುಖಪುಟಯೂಟ್ಯೂಬರ್ ಫೆಲಿಕ್ಸ್ ಚಾನೆಲ್ ಮುಚ್ಚುವಂತೆ ಕೇಳಿದ್ದ ಮದ್ರಾಸ್ ಹೈಕೋರ್ಟ್ ಆದೇಶ ರದ್ದು!

ಯೂಟ್ಯೂಬರ್ ಫೆಲಿಕ್ಸ್ ಚಾನೆಲ್ ಮುಚ್ಚುವಂತೆ ಕೇಳಿದ್ದ ಮದ್ರಾಸ್ ಹೈಕೋರ್ಟ್ ಆದೇಶ ರದ್ದು!

- Advertisement -
- Advertisement -

ಜಾಮೀನಿಗೆ ಪೂರ್ವ ಷರತ್ತಾಗಿ ಯೂಟ್ಯೂಬರ್ ಫೆಲಿಕ್ಸ್ ಜೆರಾಲ್ಡ್ ಅವರ ಯೂಟ್ಯೂಬ್ ಚಾನೆಲ್ ಅನ್ನು ಮುಚ್ಚುವಂತೆ ಮದ್ರಾಸ್ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಅವರ ನೇತೃತ್ವದ ತ್ರಿಸದಸ್ಯ ಪೀಠವು ಫೆಲಿಕ್ಸ್‌ ಅವರ ಯೂಟ್ಯೂಬ್ ಚಾನೆಲ್ ‘ರೆಡ್‌ಪಿಕ್ಸ್ 24 × 7’ ಅನ್ನು ತೆಗೆದುಹಾಕುವಂತೆ ಕೇಳಿಕೊಂಡು ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸೆಪ್ಟೆಂಬರ್ 6 ತಡೆಹಿಡಿಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುಪ್ರೀಂ ಕೋರ್ಟ್ ಪೀಠವು ಸೆಪ್ಟೆಂಬರ್ 6 ರಂದು ನೀಡಿದ್ದ ತನ್ನ ಆದೇಶವನ್ನು ಶುಕ್ರವಾರ ದೃಢಪಡಿಸಿದ್ದು, “ಅಂತಹ ಷರತ್ತನ್ನು ಹೇರುವುದು ಅನಗತ್ಯ ಮತ್ತು ಜಾಮೀನು ಅರ್ಜಿಯ ನಿರ್ಧಾರಕ್ಕಿಂತ ಹೊರಗಿನದ್ದಾಗಿದೆ” ಎಂದು ಹೇಳಿದೆ.

ಇದನ್ನೂಓದಿ: ಸಿಬಿಐಗೆ ನೀಡಿದ್ದ ‘ಸಾಮಾನ್ಯ ಒಪ್ಪಿಗೆ’ ಹಿಂಪಡೆದ ಕರ್ನಾಟಕ : ಇದೇ ರೀತಿಯ ನಿರ್ಧಾರ ಕೈಗೊಂಡ ಇತರ ರಾಜ್ಯಗಳು ಯಾವುವು?

“ತಮಿಳುನಾಡು ಮಹಿಳೆಯರ ಕಿರುಕುಳ ನಿಷೇಧ ಕಾಯಿದೆ-2002 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ-2000 ರ ಶಿಕ್ಷಾರ್ಹ ಅಪರಾಧಗಳ ಅಡಿಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಅರ್ಜಿದಾರರು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದಾಗ್ಯೂ, YouTube ಚಾನಲ್ ಅನ್ನು ಮುಚ್ಚಿ ಎಂದು ಅವರಿಗೆ ಜಾಮೀನು ನೀಡುವಾಗ ಹೈಕೋರ್ಟ್ ನಿರ್ದೇಶಿಸಿದೆ. ಇಂತಹ ಷರತ್ತನ್ನು ಹೇರುವುದು ಅನಗತ್ಯ ಮತ್ತು ಜಾಮೀನು ಅರ್ಜಿಯ ನಿರ್ಧಾರಕ್ಕೆ ಹೊರಗಿನದ್ದಾಗಿದೆ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ” ಎಂದು ಪೀಠವು ಹೇಳಿದೆ.

“ಹೈಕೋರ್ಟ್ ವಿಧಿಸಿರುವ ಷರತ್ತಿನಿಂದ ಸ್ವತಂತ್ರವಾಗಿ ಅರ್ಜಿದಾರರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನಾವು ಭಾವಿಸುತ್ತೇವೆ. ಪ್ರತಿವಾದಿಯು ತನ್ನ ಯೂಟ್ಯೂಬ್ ಚಾನೆಲ್ ಅನ್ನು ಮುಚ್ಚಬೇಕು ಎಂಬ ಹೈಕೋರ್ಟಿನ ಷರತ್ತುಗಳನ್ನು ನಾವು ತಳ್ಳಿ ಹಾಕಿದ್ದೇವೆ. ಈ ನ್ಯಾಯಾಲಯವು ನೀಡಿದ ಸೆಪ್ಟೆಂಬರ್ 6, 2024 ರ ಆದೇಶವು ಮೇಲಿನ ಸ್ಪಷ್ಟೀಕರಣದೊಂದಿಗೆ ದೃಢೀಕರಿಸಲ್ಪಡುತ್ತದೆ” ಎಂದು ಸುಪ್ರೀಂಕೋರ್ಟ್ ಪೀಠವು ಆದೇಶಿಸಿದೆ.

ಯೂಟ್ಯೂಬರ್ ಫೆಲಿಕ್ಸ್ ಅವರು ಹೋರಾಟಗಾರ ಸವುಕ್ಕು ಶಂಕರ್ ಅವರೊಂದಿಗೆ ಚಾನೆಲ್‌ನಲ್ಲಿ “ಆಕ್ಷೇಪಾರ್ಹ” ಸಂದರ್ಶನವನ್ನು ಆಯೋಜಿಸಿದ್ದಕ್ಕಾಗಿ ಅವರನ್ನು ಬಂಧಿಸಲಾಗಿತ್ತು. ಈ ಸಂದರ್ಶನದಲ್ಲಿ ಶಂಕರ್ ಅವರು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರು ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಯ ವಿರುದ್ಧ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಜುಲೈ 31 ರಂದು ಫೆಲಿಕ್ಸ್‌ಗೆ ಜಾಮೀನು ನೀಡಿದ್ದ ಹೈಕೋರ್ಟ್, ಆದಾಗ್ಯೂ ಅವರ ಚಾನೆಲ್ ಅನ್ನು ಮುಚ್ಚುವಂತೆ ಸೂಚಿಸಿತ್ತು.

ವಿಡಿಯೊ ನೋಡಿ: ಅಟ್ರಾಸಿಟಿ’ ಕಾದಂಬರಿ; ಮನುಷ್ಯ ಲೋಕದ ರೂಪಾಂತರವನ್ನ ಕಟ್ಟುತಿದೆಯಾ? ಡಾ. ಗೀತಾ ವಸಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...