Homeಮುಖಪುಟಲಂಚ ಪಡೆದು ಸ್ಟಿಂಗ್ ಆಪರೇಷನ್‌ನಲ್ಲಿ ಸಿಕ್ಕಿಬಿದ್ದವರು ಬಿಜೆಪಿ ಸೇರ್ಪಡೆ: ಧೃವ್ ರಾಠೀ ಟ್ವೀಟ್ ವೈರಲ್

ಲಂಚ ಪಡೆದು ಸ್ಟಿಂಗ್ ಆಪರೇಷನ್‌ನಲ್ಲಿ ಸಿಕ್ಕಿಬಿದ್ದವರು ಬಿಜೆಪಿ ಸೇರ್ಪಡೆ: ಧೃವ್ ರಾಠೀ ಟ್ವೀಟ್ ವೈರಲ್

ಟಿಎಂಸಿಯಲ್ಲಿದ್ದ ಮುಕುಲ್ ರಾಯ್ 2017 ರ ನವೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರೆ, ಸುವೇಂದು ಅಧಿಕಾರಿ ಇತ್ತಿಚೆಗೆ ಬಿಜೆಪಿ ಪಾಳಯಕ್ಕೆ ಸೇರಿದ್ದಾರೆ.

- Advertisement -
- Advertisement -

ಬಿಜೆಪಿ ಮುಖಂಡರಾದ ಸುವೇಂದು ಅಧಿಕಾರಿ ಮತ್ತು ಮುಕುಲ್ ರಾಯ್ ಲಂಚ ಪಡೆಯುವುದರ ಸ್ಟಿಂಗ್ ಆಪರೇಷನ್‌ ವಿಡಿಯೋಗಳ ಸ್ಕ್ರೀನ್‌ಶಾಟ್‌ಗಳನ್ನು ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರಿಬ್ಬರೂ ಬಿಜೆಪಿ ಸೇರಿರುವುದರಿಂದ ಆ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ನಾಲ್ಕು ವರ್ಷಗಳ ಹಿಂದೆ 2016 ರಲ್ಲಿ ನಾರದ ನ್ಯೂಸ್‌ನ ಸಿಇಒ, ಪತ್ರಕರ್ತ ಮ್ಯಾಥ್ಯೂ ಸ್ಯಾಮುಯೆಲ್ಸ್ ನಡೆಸಿದ ಸ್ಟಿಂಗ್ ಕಾರ್ಯಾಚರಣೆಯ ವಿಡಿಯೋವನ್ನು ಬಿಜೆಪಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿತ್ತು. ಇದರಲ್ಲಿ, ಪತ್ರಕರ್ತ ಸ್ಯಾಮ್ಯುಯೆಲ್ಸ್‌ ತನ್ನನ್ನು ಉದ್ಯಮಿ ಎಂದು ಬಿಂಬಿಸಿಕೊಂಡು, 11 ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರಿಗೆ ಹಣವನ್ನು ನೀಡುವುದನ್ನು ಸೆರೆ ಹಿಡಿಯಲಾಗಿತ್ತು.

ಆ 11 ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರಲ್ಲಿ ಅಂದಿನ ಟಿಎಂಸಿ ನಾಯಕರಾದ ಮುಕುಲ್ ರಾಯ್ ಮತ್ತು ಸುವೇಂದು ಅಧಿಕಾರಿ ಕೂಡ ಪ್ರಮುಖರಾಗಿದ್ದರು. ಈ ವಿಡಿಯೋದ ಸ್ಕ್ರೀನ್ ಶಾಟ್‌ಗಳನ್ನು ಯೂಟ್ಯೂಬರ್‌ ಧೃವ್ ರಾಠೀ ಹಂಚಿಕೊಂಡಿದ್ದರು.

ಇದನ್ನೂ ಓದಿ: ಬಂಗಾಳ ಗಲಭೆ: ಬಿಜೆಪಿ ನಾಯಕರ ವಿರುದ್ಧ ಯಾವುದೇ ಬಂಧನ ಬೇಡ ಎಂದ ಸುಪ್ರೀಂ

“4 ವರ್ಷಗಳ ಹಿಂದೆ ಲಂಚ ತೆಗೆದುಕೊಳ್ಳುತ್ತಾ ಸಿಕ್ಕಿಬಿದ್ದ ಈ ಇಬ್ಬರು ರಾಜಕಾರಣಿಗಳ ಕುಟುಕು ಕಾರ್ಯಾಚರಣೆಯನ್ನು ಬಿಜೆಪಿ ಪೋಸ್ಟ್ ಮಾಡಿತ್ತು. ಈಗ ಮುಕುಲ್ ರಾಯ್ ಮತ್ತು ಸುವೇಂದು ಅಧಿಕಾರಿ ಇಬ್ಬರೂ ಸಂತೋಷದಿಂದ ಬಿಜೆಪಿಗೆ ಸೇರಿದ್ದಾರೆ” ಎಂದು ಧೃವ್ ರಾಠೀ ಟ್ವೀಟ್ ಮಾಡಿದ್ದಾರೆ.

ಟಿಎಂಸಿಯ ಪ್ರಬಲ ನಾಯಕ ಎಂದು ಹೆಸರಾಗಿದ್ದ ಸುವೇಂದು ಅಧಿಕಾರಿ, ಬಿಜೆಪಿಗೆ ಸೇರಿದ ಕೆಲ ದಿನಗಳಲ್ಲೇ ಯೂಟ್ಯೂಬರ್ ಧೃವ್ ರಾಠೀ‌  ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ಟ್ವೀಟ್, 7,800 ಕ್ಕೂ ಹೆಚ್ಚು ರಿಟ್ವೀಟ್‌ಗಳು ಮತ್ತು 35,000ಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿದೆ.

ಇದನ್ನೂ ಓದಿ: ಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಆ ಸಮಯದಲ್ಲಿ ಸಂಸದರಾಗಿದ್ದ ಮುಕುಲ್ ರಾಯ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪಶ್ಚಿಮ ಬಂಗಾಳದಾದ್ಯಂತ ಬೃಹತ್ ಪ್ರತಿಭಟನೆ ನಡೆಸಿತ್ತು.

ಸದ್ಯ ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ನಡೆಸುತ್ತಿರುವ ಬಿಜೆಪಿಯು ಟಿಎಂಸಿ ನಾಯಕರುಗಳ ಮೇಲೆ ಕಣ್ಣು ಹಾಕಿದೆ. ಈಗಾಗಲೇ ಟಿಎಂಸಿ ಸೇರಿದಂತೆ ಅನೇಕ ಪಕ್ಷಗಳ 9 ಮಂದಿ ಪ್ರಮುಖ ನಾಯಕರು ಬಿಜೆಪಿ  ಸೇರಿದ್ದಾರೆ. ಅವರಲ್ಲಿ ಟಿಎಂಸಿಯ ಸುವೇಂದು ಅಧಿಕಾರಿಯು ಒಬ್ಬರು. ಟಿಎಂಸಿಯಲ್ಲಿದ್ದ ಮುಕುಲ್ ರಾಯ್ 2017 ರ ನವೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಸದ್ಯ ಬಿಜೆಪಿ ಯೂಟ್ಯೂಬ್ ಚಾನೆಲ್‌ನಿಂದ  ಆ ಸ್ಟಿಂಗ್‌ ವಿಡಿಯೋವನ್ನು ತೆಗೆದುಹಾಕಲಾಗಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರದ ಬಿರುಗಾಳಿ: ಬಿಜೆಪಿ ಸೇರಿದ 9 ಶಾಸಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...