Homeಮುಖಪುಟಲಂಚ ಪಡೆದು ಸ್ಟಿಂಗ್ ಆಪರೇಷನ್‌ನಲ್ಲಿ ಸಿಕ್ಕಿಬಿದ್ದವರು ಬಿಜೆಪಿ ಸೇರ್ಪಡೆ: ಧೃವ್ ರಾಠೀ ಟ್ವೀಟ್ ವೈರಲ್

ಲಂಚ ಪಡೆದು ಸ್ಟಿಂಗ್ ಆಪರೇಷನ್‌ನಲ್ಲಿ ಸಿಕ್ಕಿಬಿದ್ದವರು ಬಿಜೆಪಿ ಸೇರ್ಪಡೆ: ಧೃವ್ ರಾಠೀ ಟ್ವೀಟ್ ವೈರಲ್

ಟಿಎಂಸಿಯಲ್ಲಿದ್ದ ಮುಕುಲ್ ರಾಯ್ 2017 ರ ನವೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರೆ, ಸುವೇಂದು ಅಧಿಕಾರಿ ಇತ್ತಿಚೆಗೆ ಬಿಜೆಪಿ ಪಾಳಯಕ್ಕೆ ಸೇರಿದ್ದಾರೆ.

- Advertisement -
- Advertisement -

ಬಿಜೆಪಿ ಮುಖಂಡರಾದ ಸುವೇಂದು ಅಧಿಕಾರಿ ಮತ್ತು ಮುಕುಲ್ ರಾಯ್ ಲಂಚ ಪಡೆಯುವುದರ ಸ್ಟಿಂಗ್ ಆಪರೇಷನ್‌ ವಿಡಿಯೋಗಳ ಸ್ಕ್ರೀನ್‌ಶಾಟ್‌ಗಳನ್ನು ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರಿಬ್ಬರೂ ಬಿಜೆಪಿ ಸೇರಿರುವುದರಿಂದ ಆ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ನಾಲ್ಕು ವರ್ಷಗಳ ಹಿಂದೆ 2016 ರಲ್ಲಿ ನಾರದ ನ್ಯೂಸ್‌ನ ಸಿಇಒ, ಪತ್ರಕರ್ತ ಮ್ಯಾಥ್ಯೂ ಸ್ಯಾಮುಯೆಲ್ಸ್ ನಡೆಸಿದ ಸ್ಟಿಂಗ್ ಕಾರ್ಯಾಚರಣೆಯ ವಿಡಿಯೋವನ್ನು ಬಿಜೆಪಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿತ್ತು. ಇದರಲ್ಲಿ, ಪತ್ರಕರ್ತ ಸ್ಯಾಮ್ಯುಯೆಲ್ಸ್‌ ತನ್ನನ್ನು ಉದ್ಯಮಿ ಎಂದು ಬಿಂಬಿಸಿಕೊಂಡು, 11 ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರಿಗೆ ಹಣವನ್ನು ನೀಡುವುದನ್ನು ಸೆರೆ ಹಿಡಿಯಲಾಗಿತ್ತು.

ಆ 11 ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರಲ್ಲಿ ಅಂದಿನ ಟಿಎಂಸಿ ನಾಯಕರಾದ ಮುಕುಲ್ ರಾಯ್ ಮತ್ತು ಸುವೇಂದು ಅಧಿಕಾರಿ ಕೂಡ ಪ್ರಮುಖರಾಗಿದ್ದರು. ಈ ವಿಡಿಯೋದ ಸ್ಕ್ರೀನ್ ಶಾಟ್‌ಗಳನ್ನು ಯೂಟ್ಯೂಬರ್‌ ಧೃವ್ ರಾಠೀ ಹಂಚಿಕೊಂಡಿದ್ದರು.

ಇದನ್ನೂ ಓದಿ: ಬಂಗಾಳ ಗಲಭೆ: ಬಿಜೆಪಿ ನಾಯಕರ ವಿರುದ್ಧ ಯಾವುದೇ ಬಂಧನ ಬೇಡ ಎಂದ ಸುಪ್ರೀಂ

“4 ವರ್ಷಗಳ ಹಿಂದೆ ಲಂಚ ತೆಗೆದುಕೊಳ್ಳುತ್ತಾ ಸಿಕ್ಕಿಬಿದ್ದ ಈ ಇಬ್ಬರು ರಾಜಕಾರಣಿಗಳ ಕುಟುಕು ಕಾರ್ಯಾಚರಣೆಯನ್ನು ಬಿಜೆಪಿ ಪೋಸ್ಟ್ ಮಾಡಿತ್ತು. ಈಗ ಮುಕುಲ್ ರಾಯ್ ಮತ್ತು ಸುವೇಂದು ಅಧಿಕಾರಿ ಇಬ್ಬರೂ ಸಂತೋಷದಿಂದ ಬಿಜೆಪಿಗೆ ಸೇರಿದ್ದಾರೆ” ಎಂದು ಧೃವ್ ರಾಠೀ ಟ್ವೀಟ್ ಮಾಡಿದ್ದಾರೆ.

ಟಿಎಂಸಿಯ ಪ್ರಬಲ ನಾಯಕ ಎಂದು ಹೆಸರಾಗಿದ್ದ ಸುವೇಂದು ಅಧಿಕಾರಿ, ಬಿಜೆಪಿಗೆ ಸೇರಿದ ಕೆಲ ದಿನಗಳಲ್ಲೇ ಯೂಟ್ಯೂಬರ್ ಧೃವ್ ರಾಠೀ‌  ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ಟ್ವೀಟ್, 7,800 ಕ್ಕೂ ಹೆಚ್ಚು ರಿಟ್ವೀಟ್‌ಗಳು ಮತ್ತು 35,000ಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿದೆ.

ಇದನ್ನೂ ಓದಿ: ಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಆ ಸಮಯದಲ್ಲಿ ಸಂಸದರಾಗಿದ್ದ ಮುಕುಲ್ ರಾಯ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪಶ್ಚಿಮ ಬಂಗಾಳದಾದ್ಯಂತ ಬೃಹತ್ ಪ್ರತಿಭಟನೆ ನಡೆಸಿತ್ತು.

ಸದ್ಯ ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ನಡೆಸುತ್ತಿರುವ ಬಿಜೆಪಿಯು ಟಿಎಂಸಿ ನಾಯಕರುಗಳ ಮೇಲೆ ಕಣ್ಣು ಹಾಕಿದೆ. ಈಗಾಗಲೇ ಟಿಎಂಸಿ ಸೇರಿದಂತೆ ಅನೇಕ ಪಕ್ಷಗಳ 9 ಮಂದಿ ಪ್ರಮುಖ ನಾಯಕರು ಬಿಜೆಪಿ  ಸೇರಿದ್ದಾರೆ. ಅವರಲ್ಲಿ ಟಿಎಂಸಿಯ ಸುವೇಂದು ಅಧಿಕಾರಿಯು ಒಬ್ಬರು. ಟಿಎಂಸಿಯಲ್ಲಿದ್ದ ಮುಕುಲ್ ರಾಯ್ 2017 ರ ನವೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಸದ್ಯ ಬಿಜೆಪಿ ಯೂಟ್ಯೂಬ್ ಚಾನೆಲ್‌ನಿಂದ  ಆ ಸ್ಟಿಂಗ್‌ ವಿಡಿಯೋವನ್ನು ತೆಗೆದುಹಾಕಲಾಗಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರದ ಬಿರುಗಾಳಿ: ಬಿಜೆಪಿ ಸೇರಿದ 9 ಶಾಸಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...