Homeಮುಖಪುಟನಟ ಅಕ್ಷಯ್ ಕುಮಾರ್ ದಾಖಲಿಸಿದ್ದ ಮಾನಹಾನಿ ಕೇಸ್ ವಿರೋಧಿಸಿದ ಯೂಟ್ಯೂಬರ್‌!

ನಟ ಅಕ್ಷಯ್ ಕುಮಾರ್ ದಾಖಲಿಸಿದ್ದ ಮಾನಹಾನಿ ಕೇಸ್ ವಿರೋಧಿಸಿದ ಯೂಟ್ಯೂಬರ್‌!

ಸಿದ್ದಿಕಿ ವರದಿ ಮಾಡಿದ ಸುದ್ದಿ ಈಗಾಗಲೇ ಸಾರ್ವಜನಿಕ ವಲಯದಲ್ಲಿತ್ತು ಮತ್ತು ಸಿದ್ದಿಕಿ ಇತರ ಸುದ್ದಿ ವಾಹಿನಿಗಳನ್ನು ಸುದ್ದಿ ಮೂಲಗಳಾಗಿ ಅವಲಂಬಿಸಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಕ್ಷಯ್ ಕುಮಾರ್ ದಾಖಲಿಸಿರುವ ಮಾನಹಾನಿ ನೋಟಿಸ್ ಅನ್ನು ಯೂಟ್ಯೂಬರ್ ರಶೀದ್ ಸಿದ್ದಿಕಿ ವಿರೋಧಿಸಿದ್ದಾರೆ. ತಮ್ಮ ವೀಡಿಯೊಗಳಲ್ಲಿ ಮಾನಹಾನಿಕರ ವಿಷಯ ಯಾವುದು ಇಲ್ಲ ಎಂದು ಅವರು ಪುನರುಚ್ಚಿಸಿದ್ದಾರೆ.

ಯೂಟ್ಯೂಬರ್ ರಶೀದ್ ಸಿದ್ದಿಕಿ, ಅಕ್ಷಯ್ ಕುಮಾರ್ ಅವರಿಗೆ ನೋಟಿಸ್ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ನೋಟಿಸ್  ಹಿಂಪಡೆಯದಿದ್ದರೆ ರಶೀದ್ ಸಿದ್ದಿಕಿ ನಟನ ವಿರುದ್ಧ “ಸೂಕ್ತ ಕಾನೂನು ಕ್ರಮಗಳನ್ನು” ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ತನ್ನ ವಿರುದ್ಧ “ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು” ಮಾಡಿದ್ದಕ್ಕಾಗಿ ಅಕ್ಷಯ್ ಕುಮಾರ್ ನವೆಂಬರ್ 17 ರಂದು ರಶೀದ್ ಸಿದ್ದಿಕಿ ವಿರುದ್ಧ 500 ಕೋಟಿ ರೂಪಾಯಿ ನಷ್ಟವನ್ನು ಕೋರಿ ಮಾನಹಾನಿ ನೋಟಿಸ್ ನೀಡಿದ್ದರು.

ಅಕ್ಷಯ್ ಕುಮಾರ್, ಕಾನೂನು ಸಂಸ್ಥೆ ಐಸಿ ಲೀಗಲ್ ಮೂಲಕ ಕಳುಹಿಸಿದ ನೋಟಿಸ್‌ನಲ್ಲಿ, ರಶೀದ್ ಸಿದ್ದಿಕಿ ತಮ್ಮ ಯೂಟ್ಯೂಬ್ ಚಾನೆಲ್ ಎಫ್‌ಎಫ್ ನ್ಯೂಸ್‌ನಲ್ಲಿ ಹಲವಾರು “ಮಾನಹಾನಿಕರ, ಅಪಮಾನಕರ ಮತ್ತು ಅವಹೇಳನಕಾರಿ” ವೀಡಿಯೊಗಳನ್ನು ಪ್ರಕಟಿಸಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ರಶೀದ್ ಸಿದ್ದಿಕಿ ಅವರು ಶುಕ್ರವಾರ ತಮ್ಮ ವಕೀಲ ಜೆ.ಪಿ.ಜಯ್ಸ್ವಾಲ್ ಅವರ ಮೂಲಕ ಕಳುಹಿಸಿದ ಉತ್ತರದಲ್ಲಿ, ಅಕ್ಷಯ್ ಕುಮಾರ್ ಮಾಡಿದ ಆರೋಪಗಳು “ಸುಳ್ಳು, ದುಃಖಕರ ಮತ್ತು ದಬ್ಬಾಳಿಕೆಯಾಗಿದೆ ಮತ್ತು ನನಗೆ ಕಿರುಕುಳ ನೀಡುವ ಉದ್ದೇಶದಿಂದ ನೋಟಿಸ್ ನೀಡಲಾಗಿದೆ” ಎಂದು ಹೇಳಿದ್ದಾರೆ.

’ಪ್ರತಿಯೊಬ್ಬ ಭಾರತೀಯ ಪ್ರಜೆಗೆ ವಾಕ್ ಸ್ವಾತಂತ್ರ್ಯದ ಮೂಲಭೂತ ಹಕ್ಕಿದೆ. ರಶೀದ್ ಸಿದ್ದಿಕಿ ಅಪ್‌ಲೋಡ್ ಮಾಡಿದ ವಿಷಯವನ್ನು ಮಾನಹಾನಿಕರವೆಂದು ಪರಿಗಣಿಸಲಾಗುವುದಿಲ್ಲ ಮತ್ತು ಅವುಗಳನ್ನು ವಸ್ತುನಿಷ್ಠತೆಯ ದೃಷ್ಟಿಕೋನಗಳಾಗಿ ಪರಿಗಣಿಸಬೇಕು’ ಎಂದು ಹೇಳಿದೆ.

“ಸಿದ್ದಿಕಿ ವರದಿ ಮಾಡಿದ ಸುದ್ದಿ ಈಗಾಗಲೇ ಸಾರ್ವಜನಿಕ ವಲಯದಲ್ಲಿತ್ತು ಮತ್ತು ಅವರು (ಸಿದ್ದಿಕಿ) ಇತರ ಸುದ್ದಿ ವಾಹಿನಿಗಳನ್ನು ಸುದ್ದಿ ಮೂಲಗಳಾಗಿ ಅವಲಂಬಿಸಿದ್ದಾರೆ” ಎಂದು ಉತ್ತರದಲ್ಲಿ ತಿಳಿಸಲಾಗಿದೆ.

ಈ ಹಿಂದೆಯೂ ರಶೀದ್ ಸಿದ್ದಿಕಿ ಮೇಲೆ, ಮುಂಬೈ ಪೊಲೀಸರು, ಮಹಾರಾಷ್ಟ್ರ ಸರ್ಕಾರ ಮತ್ತು ಸಚಿವ ಆದಿತ್ಯ ಠಾಕ್ರೆ ವಿರುದ್ಧ ಮಾನಹಾನಿ, ಸಾರ್ವಜನಿಕ ಕಿಡಿಗೇಡಿತನ ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸಿದ ಆರೋಪದಲ್ಲಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಸಿಜೆಐ ಬೋಬ್ಡೆ ವಿರುದ್ಧ ಟ್ವೀಟ್: ಕುನಾಲ್ ಕಮ್ರ ವಿರುದ್ಧ ಮತ್ತೊಂದು ನ್ಯಾಯಾಂಗ ನಿಂದನೆ ಪ್ರಕರಣ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...