Homeಮುಖಪುಟನಟ ಅಕ್ಷಯ್ ಕುಮಾರ್ ದಾಖಲಿಸಿದ್ದ ಮಾನಹಾನಿ ಕೇಸ್ ವಿರೋಧಿಸಿದ ಯೂಟ್ಯೂಬರ್‌!

ನಟ ಅಕ್ಷಯ್ ಕುಮಾರ್ ದಾಖಲಿಸಿದ್ದ ಮಾನಹಾನಿ ಕೇಸ್ ವಿರೋಧಿಸಿದ ಯೂಟ್ಯೂಬರ್‌!

ಸಿದ್ದಿಕಿ ವರದಿ ಮಾಡಿದ ಸುದ್ದಿ ಈಗಾಗಲೇ ಸಾರ್ವಜನಿಕ ವಲಯದಲ್ಲಿತ್ತು ಮತ್ತು ಸಿದ್ದಿಕಿ ಇತರ ಸುದ್ದಿ ವಾಹಿನಿಗಳನ್ನು ಸುದ್ದಿ ಮೂಲಗಳಾಗಿ ಅವಲಂಬಿಸಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಕ್ಷಯ್ ಕುಮಾರ್ ದಾಖಲಿಸಿರುವ ಮಾನಹಾನಿ ನೋಟಿಸ್ ಅನ್ನು ಯೂಟ್ಯೂಬರ್ ರಶೀದ್ ಸಿದ್ದಿಕಿ ವಿರೋಧಿಸಿದ್ದಾರೆ. ತಮ್ಮ ವೀಡಿಯೊಗಳಲ್ಲಿ ಮಾನಹಾನಿಕರ ವಿಷಯ ಯಾವುದು ಇಲ್ಲ ಎಂದು ಅವರು ಪುನರುಚ್ಚಿಸಿದ್ದಾರೆ.

ಯೂಟ್ಯೂಬರ್ ರಶೀದ್ ಸಿದ್ದಿಕಿ, ಅಕ್ಷಯ್ ಕುಮಾರ್ ಅವರಿಗೆ ನೋಟಿಸ್ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ನೋಟಿಸ್  ಹಿಂಪಡೆಯದಿದ್ದರೆ ರಶೀದ್ ಸಿದ್ದಿಕಿ ನಟನ ವಿರುದ್ಧ “ಸೂಕ್ತ ಕಾನೂನು ಕ್ರಮಗಳನ್ನು” ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ತನ್ನ ವಿರುದ್ಧ “ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು” ಮಾಡಿದ್ದಕ್ಕಾಗಿ ಅಕ್ಷಯ್ ಕುಮಾರ್ ನವೆಂಬರ್ 17 ರಂದು ರಶೀದ್ ಸಿದ್ದಿಕಿ ವಿರುದ್ಧ 500 ಕೋಟಿ ರೂಪಾಯಿ ನಷ್ಟವನ್ನು ಕೋರಿ ಮಾನಹಾನಿ ನೋಟಿಸ್ ನೀಡಿದ್ದರು.

ಅಕ್ಷಯ್ ಕುಮಾರ್, ಕಾನೂನು ಸಂಸ್ಥೆ ಐಸಿ ಲೀಗಲ್ ಮೂಲಕ ಕಳುಹಿಸಿದ ನೋಟಿಸ್‌ನಲ್ಲಿ, ರಶೀದ್ ಸಿದ್ದಿಕಿ ತಮ್ಮ ಯೂಟ್ಯೂಬ್ ಚಾನೆಲ್ ಎಫ್‌ಎಫ್ ನ್ಯೂಸ್‌ನಲ್ಲಿ ಹಲವಾರು “ಮಾನಹಾನಿಕರ, ಅಪಮಾನಕರ ಮತ್ತು ಅವಹೇಳನಕಾರಿ” ವೀಡಿಯೊಗಳನ್ನು ಪ್ರಕಟಿಸಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ರಶೀದ್ ಸಿದ್ದಿಕಿ ಅವರು ಶುಕ್ರವಾರ ತಮ್ಮ ವಕೀಲ ಜೆ.ಪಿ.ಜಯ್ಸ್ವಾಲ್ ಅವರ ಮೂಲಕ ಕಳುಹಿಸಿದ ಉತ್ತರದಲ್ಲಿ, ಅಕ್ಷಯ್ ಕುಮಾರ್ ಮಾಡಿದ ಆರೋಪಗಳು “ಸುಳ್ಳು, ದುಃಖಕರ ಮತ್ತು ದಬ್ಬಾಳಿಕೆಯಾಗಿದೆ ಮತ್ತು ನನಗೆ ಕಿರುಕುಳ ನೀಡುವ ಉದ್ದೇಶದಿಂದ ನೋಟಿಸ್ ನೀಡಲಾಗಿದೆ” ಎಂದು ಹೇಳಿದ್ದಾರೆ.

’ಪ್ರತಿಯೊಬ್ಬ ಭಾರತೀಯ ಪ್ರಜೆಗೆ ವಾಕ್ ಸ್ವಾತಂತ್ರ್ಯದ ಮೂಲಭೂತ ಹಕ್ಕಿದೆ. ರಶೀದ್ ಸಿದ್ದಿಕಿ ಅಪ್‌ಲೋಡ್ ಮಾಡಿದ ವಿಷಯವನ್ನು ಮಾನಹಾನಿಕರವೆಂದು ಪರಿಗಣಿಸಲಾಗುವುದಿಲ್ಲ ಮತ್ತು ಅವುಗಳನ್ನು ವಸ್ತುನಿಷ್ಠತೆಯ ದೃಷ್ಟಿಕೋನಗಳಾಗಿ ಪರಿಗಣಿಸಬೇಕು’ ಎಂದು ಹೇಳಿದೆ.

“ಸಿದ್ದಿಕಿ ವರದಿ ಮಾಡಿದ ಸುದ್ದಿ ಈಗಾಗಲೇ ಸಾರ್ವಜನಿಕ ವಲಯದಲ್ಲಿತ್ತು ಮತ್ತು ಅವರು (ಸಿದ್ದಿಕಿ) ಇತರ ಸುದ್ದಿ ವಾಹಿನಿಗಳನ್ನು ಸುದ್ದಿ ಮೂಲಗಳಾಗಿ ಅವಲಂಬಿಸಿದ್ದಾರೆ” ಎಂದು ಉತ್ತರದಲ್ಲಿ ತಿಳಿಸಲಾಗಿದೆ.

ಈ ಹಿಂದೆಯೂ ರಶೀದ್ ಸಿದ್ದಿಕಿ ಮೇಲೆ, ಮುಂಬೈ ಪೊಲೀಸರು, ಮಹಾರಾಷ್ಟ್ರ ಸರ್ಕಾರ ಮತ್ತು ಸಚಿವ ಆದಿತ್ಯ ಠಾಕ್ರೆ ವಿರುದ್ಧ ಮಾನಹಾನಿ, ಸಾರ್ವಜನಿಕ ಕಿಡಿಗೇಡಿತನ ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸಿದ ಆರೋಪದಲ್ಲಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಸಿಜೆಐ ಬೋಬ್ಡೆ ವಿರುದ್ಧ ಟ್ವೀಟ್: ಕುನಾಲ್ ಕಮ್ರ ವಿರುದ್ಧ ಮತ್ತೊಂದು ನ್ಯಾಯಾಂಗ ನಿಂದನೆ ಪ್ರಕರಣ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...