Homeಕರ್ನಾಟಕಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು; ಬಂಧನದಿಂದ ಪಾರು

ಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು; ಬಂಧನದಿಂದ ಪಾರು

- Advertisement -
- Advertisement -

ಧರ್ಮಸ್ಥಳ ಸುತ್ತಮುತ್ತ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ‘ದೂತ’ ಎಂಬ ಯೂಟ್ಯೂಬ್‌ ಚಾನೆಲ್‌ ನಲ್ಲಿ ಎಐ ಆಧಾರಿತ ವಿಡಿಯೊ ಪ್ರಸಾರ ಮಾಡಿದ್ದ ಯೂಟ್ಯೂಬರ್‌ ಸಮೀರ್‌ ಅವರಿಗೆ ಮಂಗಳೂರು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ದೊರೆತಿದೆ.

ಪೊಲೀಸರು ಬಂಧಿಸಬಹುದು ಎಂಬ ಮುನ್ಸೂಚನೆ ಸಿಕ್ಕ ಕೂಡಲೇ ಸಮೀರ್‌ ತನ್ನ ವಕೀಲರ ಮೂಲಕ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಉಜಿರೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸುತ್ತಿದ್ದಂತೆ ಸಮೀರ್‌ಗೆ ಬಂಧನದ ಭೀತಿ ಎದುರಾಗಿತ್ತು. ಇಂದು ಬೆಳಗಿನಿಂದಲೇ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಸಮೀರ್ ಮನೆಯನ್ನು ಪೊಲೀಸರು ಸುತ್ತುವರಿದಿದ್ದರು. ಅವರನ್ನು ಬಂಧಿಸಲು ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆನಂದ್ ಎನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.

ಧರ್ಮಸ್ಥಳ ಕ್ಷೇತ್ರದ ಕುರಿತು ಅವಹೇಳನಕಾರಿ ವಿಡಿಯೊ ಮಾಡಿರುತ್ತಾರೆ, ಕೋಮು ವೈಷಮ್ಯ ಮೂಡಿಸಲು ಪ್ರಯತ್ನಿಸಿದ್ದಾರೆ ಎಂದು ಸಮೀರ್‌ ವಿರುದ್ಧ ಹಲವಾರು ಪ್ರಕಣಗಳನ್ನು ದಾಖಲಿಸಲಾಗಿತ್ತು.

ಮೂಲತಃ ಬಳ್ಳಾರಿಯವರಾದ ಸಮೀರ್ ಎಂ.ಡಿ, ಎಂಜಿನಿಯರಿಂಗ್ ಪದವೀಧರರಾಗಿದ್ದಾರೆ. ʼದೂತʼ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ಮೂಲಕ ಹಲವು ವಿಷಯಗಳ ಕುರಿತು ವಿಡಿಯೋ ನಿರೂಪಿಸಿದ್ದಾರೆ. ಸೌಜನ್ಯಾ  ಅತ್ಯಚಾರ ಮತ್ತು ಕೊಲೆ ಪ್ರಕರಣ ಕುರಿತು ಇವರು ಮಾಡಿದ್ದ ಎಐ ವಿಡಿಯೊವನ್ನು ಕೋಟಿಗೂ ಹೆಚ್ಚು ಜನ ವೀಕ್ಷಿಸಿದ್ದರು. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಕೌಲ್‌ ಬಜಾರ್‌ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

ಇಂದು ಬೆಳಗಿನಿಂದಲೇ ‘ಮುಖ್ಯವಾಹಿನಿ’ ಮಾಧ್ಯಮಗಳಲ್ಲಿ ಸಮೀರ್ ಪರಾರಿಯಾಗಿದ್ದಾರೆ ಎಂಬ ಸುದ್ದಿಗಳು ಪ್ರಕಟವಾಗುತ್ತಿದ್ದವು. ಸಮೀರ್‌ ಆಪ್ತರು ಸ್ಪಷ್ಟನೆ ನೀಡಿ ವಿಚಾರಣೆಗೆ ಹಾಜರಾಗಲು ಪೊಲೀಸರಿಗೆ ಲಿಖಿತವಾಗಿ ಸಮಾಯಾವಕಾಶವನ್ನು ಕೇಳಿದ್ದರು. 15 ದಿನಗಳ ಕಾಲಾವಕಾಶವನ್ನು ಪೊಲೀಸರು ನೀಡಿದ್ದರು. ಆದರೆ ಇಂದು ಮಧ್ಯಾಹ್ನ ಪೊಲೀಸರು ಏಕಾಏಕಿ ಸಮೀರ್ ಮನೆಗೆ ಸರ್ಚ್ ವಾರೆಂಟ್ ಇಲ್ಲದೆ ತಪಾಸಣೆಗೆ ಆಗಮಿಸಿದ್ದರು. ಸತ್ಯವನ್ನು ಜನರಿಗೆ ಹೇಳಿದವರನ್ನು ಪೊಲೀಸರು ಬೇಟೆಯಾಡುತ್ತಿದ್ದಾರೆ. ಸಮೀರ್ ತಮ್ಮ ವಕೀಲರ ಜೊತೆ ನ್ಯಾಯಾಲಯದಲ್ಲಿದ್ದಾರೆ, ಎಲ್ಲಿಗೂ ಓಡಿ ಹೋಗಿಲ್ಲ ಎಂದು ತಿಳಿಸಿದ್ದರು.

‘ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಲಿ..’; ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....