Homeಮುಖಪುಟಆಂಧ್ರ ಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

ಆಂಧ್ರ ಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

- Advertisement -
- Advertisement -

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷ (ವೈಎಸ್‌ಆರ್‌ಟಿಪಿ) ವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವ ಮೂಲಕ ಜನವರಿ 4ರಂದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು.

ಆಂಧ್ರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಗಿಡುಗು ರುದ್ರರಾಜು ಅವರು ರಾಜೀನಾಮೆ ನೀಡಿದ ಒಂದು ದಿನದ ನಂತರ ಶರ್ಮಿಳಾ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ನಿರ್ಗಮಿತ ಅಧ್ಯಕ್ಷ ರುದ್ರರಾಜು ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ.

ತೆಲಂಗಾಣ ವಿಧಾನಸಭೆ ಚುನಾವಣೆಗೆ ಮುನ್ನ ಶರ್ಮಿಳಾ ಅವರು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರಿಗೆ ಲಾಭವಾಗಬಹುದಾದ ಮತಗಳ ವಿಭಜನೆಯನ್ನು ತಡೆಯಲು ಚುನಾವಣಾ ಕಣದಿಂದ ಹೊರಗುಳಿದಿದ್ದರು. ಈ ಮೂಲಕ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿದ್ದರು. ನವೆಂಬರ್ 30ರಂದು ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶರ್ಮಿಳಾ ಅವರ ವೈಎಸ್‌ಆರ್‌ಟಿಪಿ ಪಕ್ಷ ಬೇಷರತ್ ಬೆಂಬಲ ನೀಡಿತ್ತು.

ಶರ್ಮಿಳಾ ಅವರ ರಾಜಕೀಯ ಹಿನ್ನೆಲೆ :

ಶರ್ಮಿಳಾ ಅವರು ಸಹೋದರ ಜಗನ್‌ಮೋಹನ್‌ ರೆಡ್ಡಿ ಅವರ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯಕ್ಕೆ ಕಾಲಿಟ್ಟವರು. ಜೂನ್ 2012ರಿಂದ ಆಂಧ್ರ ಪ್ರದೇಶದಲ್ಲಿ ಜಗನ್‌ಮೋಹನ್ ರೆಡ್ಡಿ ಅನುಪಸ್ಥಿತಿಯಲ್ಲಿ ತಾಯಿ ವೈಎಸ್ ವಿಜಯಮ್ಮ ಅವರೊಂದಿಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡುವ ಮೂಲಕ ಅವರು ಸುದ್ದಿಯಾಗಿದ್ದರು.

ಶರ್ಮಿಳಾ ಅವರು 18 ಅಕ್ಟೋಬರ್ 2012 ರಂದು ಅಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಇಡುಪುಲಪಾಯದಿಂದ ಪಾದಯಾತ್ರೆ ಆರಂಭಿಸಿ 3 ಸಾವಿರ ಕಿ.ಮೀ ದೂರು ಕ್ರಮಿಸಿ, 4 ಆಗಸ್ಟ್ 2013 ರಂದು ಇಚ್ಚಾಪುರದಲ್ಲಿ ಕೊನೆಗೊಳಿಸಿದ್ದರು. ಪಾದಯಾತ್ರೆ ವೇಳೆ ಶರ್ಮಿಳಾ ಅವರು ಅಂಧ್ರ ಪ್ರದೇಶದ 14 ಜಿಲ್ಲೆಗಳಿಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಚಾಲಕಿಯಾಗಿದ್ದರು.

ಬಳಿಕ ನಡೆದ ಉಪ ಚುನಾವಣೆಯಲ್ಲಿ 18 ವಿಧಾನಸಭಾ ಸ್ಥಾನಗಳ ಪೈಕಿ 15 ಸ್ಥಾನಗಳನ್ನು ಮತ್ತು 1 ಸಂಸತ್ ಸ್ಥಾನವನ್ನು ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಗೆದ್ದುಕೊಂಡಿತ್ತು. ಇದರಲ್ಲಿ ಶರ್ಮಿಳಾ ಅವರ ಯಾತ್ರೆ ಪ್ರಮುಖ ಪಾತ್ರ ವಹಿಸಿತ್ತು.

2019ರ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಮೊದಲು ಶರ್ಮಿಳಾ ಅವರು ಸಹೋದರನ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಪರವಾಗಿ ರಾಜ್ಯಾದ್ಯಂತ “ಬೈಬೈ ಬಾಬು- ಪ್ರಜಾ ತೀರ್ಪು” ಎಂಬ 11 ದಿನಗಳ ಬಸ್ ಯಾತ್ರೆ ಕೈಗೊಂಡಿದ್ದರು. ಈ ಯಾತ್ರೆಯಲ್ಲಿ ಶರ್ಮಿಳಾ ಅವರು ರಾಜ್ಯಾದ್ಯಂತ 1,553 ಕಿ.ಮೀ ದೂರ ಸಂಚರಿಸಿ 39 ಸಾರ್ವಜನಿಕ ಸಭೆಗಳನ್ನು ಹಮ್ಮಿಕೊಂಡಿದ್ದರು. ಈ ವೇಳೆ ತಮ್ಮ ಹಸ್ತಾಕ್ಷರದ 20 ಸಾವಿರ ಕ್ಯಾಪ್‌ಗಳನ್ನು ಸಾರ್ವಜನಿಕರಿಗೆ ಹಂಚಿದ್ದರು.

ವೈಎಸ್‌ಆರ್‌ ತೆಲಂಗಾಣದ ಪಕ್ಷದ ಸ್ಥಾಪನೆ : 

ಫೆಬ್ರವರಿ 2021ರಲ್ಲಿ, ಶರ್ಮಿಳಾ ಅವರು ಸಹೋದರ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯದ ಕಾರಣ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದದಿಂದ ಹೊರ ಬಂದಿದ್ದರು. ಈ ವೇಳೆ ತೆಲಂಗಾಣದಲ್ಲಿ ವೈಎಸ್‌ಆರ್‌ಪಿ ಪಕ್ಷಕ್ಕೆ ಯಾವುದೇ ಅಸ್ತಿತ್ವವಿಲ್ಲ ಎಂದು ಅವರು ಹೇಳಿದ್ದರು.

9 ಏಪ್ರಿಲ್ 2021 ರಂದು  ಸುದ್ದಿಗೋಷ್ಠಿ ನಡೆಸಿದ್ದ ಶರ್ಮಿಳಾ ಅವರು, ತೆಲಂಗಾಣದಲ್ಲಿ 8 ಜುಲೈ 2021 ರಂದು ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ತಮ್ಮ ತಂದೆ ಆಂಧ್ರದ ಮಾಜಿ ಸಿಎಂ ರಾಜಶೇಖರ ರೆಡ್ಡಿ ಅವರ ಜನ್ಮದಿನವಾದ ಕಾರಣ ಅವರು ಆ ದಿನಾಂಕವನ್ನು ಆಯ್ಕೆ ಮಾಡಿದ್ದರು. ಪಕ್ಷವನ್ನು ಪ್ರಾರಂಭಿಸುವ ಮೊದಲು, ಅವರು ಕೆಸಿಆರ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಸರ್ಕಾರದ ವಿರುದ್ಧ ಪ್ರಚಾರ ಪ್ರಾರಂಭಿಸಿದ್ದರು. ಬಳಿಕ 8 ಜುಲೈ 2021 ರಂದು ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಘೋಷಿಸಿದ್ದರು.

ಪಕ್ಷ ಘೋಷಣೆ ಮಾಡಿದ ಬೆನ್ನಲ್ಲೇ 2023ರ ತೆಲಂಗಾಣದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ತಿಳಿಸಿದ್ದರು. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ ಹೇಳಿದ್ದರು. ಅದರಂತೆ ಅವರು ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು.

ಇದನ್ನೂ ಓದಿ : ಸ್ಪೀಕರ್‌ ನಿಲುವಿಗೆ ಶಿವಸೇನೆಯ ಎರಡು ಬಣಗಳಿಂದ ಆಕ್ಷೇಪ: ಸುಪ್ರೀಂ ಕದ ತಟ್ಟಿದ ಉದ್ಧವ್‌, ಹೈಕೋರ್ಟ್‌ ಮೆಟ್ಟಿಲೇರಿದ ಶಿಂಧೆ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...