Homeಮುಖಪುಟಆಂಧ್ರ ಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

ಆಂಧ್ರ ಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

- Advertisement -
- Advertisement -

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷ (ವೈಎಸ್‌ಆರ್‌ಟಿಪಿ) ವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವ ಮೂಲಕ ಜನವರಿ 4ರಂದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು.

ಆಂಧ್ರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಗಿಡುಗು ರುದ್ರರಾಜು ಅವರು ರಾಜೀನಾಮೆ ನೀಡಿದ ಒಂದು ದಿನದ ನಂತರ ಶರ್ಮಿಳಾ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ನಿರ್ಗಮಿತ ಅಧ್ಯಕ್ಷ ರುದ್ರರಾಜು ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ.

ತೆಲಂಗಾಣ ವಿಧಾನಸಭೆ ಚುನಾವಣೆಗೆ ಮುನ್ನ ಶರ್ಮಿಳಾ ಅವರು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರಿಗೆ ಲಾಭವಾಗಬಹುದಾದ ಮತಗಳ ವಿಭಜನೆಯನ್ನು ತಡೆಯಲು ಚುನಾವಣಾ ಕಣದಿಂದ ಹೊರಗುಳಿದಿದ್ದರು. ಈ ಮೂಲಕ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿದ್ದರು. ನವೆಂಬರ್ 30ರಂದು ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶರ್ಮಿಳಾ ಅವರ ವೈಎಸ್‌ಆರ್‌ಟಿಪಿ ಪಕ್ಷ ಬೇಷರತ್ ಬೆಂಬಲ ನೀಡಿತ್ತು.

ಶರ್ಮಿಳಾ ಅವರ ರಾಜಕೀಯ ಹಿನ್ನೆಲೆ :

ಶರ್ಮಿಳಾ ಅವರು ಸಹೋದರ ಜಗನ್‌ಮೋಹನ್‌ ರೆಡ್ಡಿ ಅವರ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯಕ್ಕೆ ಕಾಲಿಟ್ಟವರು. ಜೂನ್ 2012ರಿಂದ ಆಂಧ್ರ ಪ್ರದೇಶದಲ್ಲಿ ಜಗನ್‌ಮೋಹನ್ ರೆಡ್ಡಿ ಅನುಪಸ್ಥಿತಿಯಲ್ಲಿ ತಾಯಿ ವೈಎಸ್ ವಿಜಯಮ್ಮ ಅವರೊಂದಿಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡುವ ಮೂಲಕ ಅವರು ಸುದ್ದಿಯಾಗಿದ್ದರು.

ಶರ್ಮಿಳಾ ಅವರು 18 ಅಕ್ಟೋಬರ್ 2012 ರಂದು ಅಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಇಡುಪುಲಪಾಯದಿಂದ ಪಾದಯಾತ್ರೆ ಆರಂಭಿಸಿ 3 ಸಾವಿರ ಕಿ.ಮೀ ದೂರು ಕ್ರಮಿಸಿ, 4 ಆಗಸ್ಟ್ 2013 ರಂದು ಇಚ್ಚಾಪುರದಲ್ಲಿ ಕೊನೆಗೊಳಿಸಿದ್ದರು. ಪಾದಯಾತ್ರೆ ವೇಳೆ ಶರ್ಮಿಳಾ ಅವರು ಅಂಧ್ರ ಪ್ರದೇಶದ 14 ಜಿಲ್ಲೆಗಳಿಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಚಾಲಕಿಯಾಗಿದ್ದರು.

ಬಳಿಕ ನಡೆದ ಉಪ ಚುನಾವಣೆಯಲ್ಲಿ 18 ವಿಧಾನಸಭಾ ಸ್ಥಾನಗಳ ಪೈಕಿ 15 ಸ್ಥಾನಗಳನ್ನು ಮತ್ತು 1 ಸಂಸತ್ ಸ್ಥಾನವನ್ನು ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಗೆದ್ದುಕೊಂಡಿತ್ತು. ಇದರಲ್ಲಿ ಶರ್ಮಿಳಾ ಅವರ ಯಾತ್ರೆ ಪ್ರಮುಖ ಪಾತ್ರ ವಹಿಸಿತ್ತು.

2019ರ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಮೊದಲು ಶರ್ಮಿಳಾ ಅವರು ಸಹೋದರನ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಪರವಾಗಿ ರಾಜ್ಯಾದ್ಯಂತ “ಬೈಬೈ ಬಾಬು- ಪ್ರಜಾ ತೀರ್ಪು” ಎಂಬ 11 ದಿನಗಳ ಬಸ್ ಯಾತ್ರೆ ಕೈಗೊಂಡಿದ್ದರು. ಈ ಯಾತ್ರೆಯಲ್ಲಿ ಶರ್ಮಿಳಾ ಅವರು ರಾಜ್ಯಾದ್ಯಂತ 1,553 ಕಿ.ಮೀ ದೂರ ಸಂಚರಿಸಿ 39 ಸಾರ್ವಜನಿಕ ಸಭೆಗಳನ್ನು ಹಮ್ಮಿಕೊಂಡಿದ್ದರು. ಈ ವೇಳೆ ತಮ್ಮ ಹಸ್ತಾಕ್ಷರದ 20 ಸಾವಿರ ಕ್ಯಾಪ್‌ಗಳನ್ನು ಸಾರ್ವಜನಿಕರಿಗೆ ಹಂಚಿದ್ದರು.

ವೈಎಸ್‌ಆರ್‌ ತೆಲಂಗಾಣದ ಪಕ್ಷದ ಸ್ಥಾಪನೆ : 

ಫೆಬ್ರವರಿ 2021ರಲ್ಲಿ, ಶರ್ಮಿಳಾ ಅವರು ಸಹೋದರ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯದ ಕಾರಣ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದದಿಂದ ಹೊರ ಬಂದಿದ್ದರು. ಈ ವೇಳೆ ತೆಲಂಗಾಣದಲ್ಲಿ ವೈಎಸ್‌ಆರ್‌ಪಿ ಪಕ್ಷಕ್ಕೆ ಯಾವುದೇ ಅಸ್ತಿತ್ವವಿಲ್ಲ ಎಂದು ಅವರು ಹೇಳಿದ್ದರು.

9 ಏಪ್ರಿಲ್ 2021 ರಂದು  ಸುದ್ದಿಗೋಷ್ಠಿ ನಡೆಸಿದ್ದ ಶರ್ಮಿಳಾ ಅವರು, ತೆಲಂಗಾಣದಲ್ಲಿ 8 ಜುಲೈ 2021 ರಂದು ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ತಮ್ಮ ತಂದೆ ಆಂಧ್ರದ ಮಾಜಿ ಸಿಎಂ ರಾಜಶೇಖರ ರೆಡ್ಡಿ ಅವರ ಜನ್ಮದಿನವಾದ ಕಾರಣ ಅವರು ಆ ದಿನಾಂಕವನ್ನು ಆಯ್ಕೆ ಮಾಡಿದ್ದರು. ಪಕ್ಷವನ್ನು ಪ್ರಾರಂಭಿಸುವ ಮೊದಲು, ಅವರು ಕೆಸಿಆರ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಸರ್ಕಾರದ ವಿರುದ್ಧ ಪ್ರಚಾರ ಪ್ರಾರಂಭಿಸಿದ್ದರು. ಬಳಿಕ 8 ಜುಲೈ 2021 ರಂದು ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಘೋಷಿಸಿದ್ದರು.

ಪಕ್ಷ ಘೋಷಣೆ ಮಾಡಿದ ಬೆನ್ನಲ್ಲೇ 2023ರ ತೆಲಂಗಾಣದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ತಿಳಿಸಿದ್ದರು. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ ಹೇಳಿದ್ದರು. ಅದರಂತೆ ಅವರು ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು.

ಇದನ್ನೂ ಓದಿ : ಸ್ಪೀಕರ್‌ ನಿಲುವಿಗೆ ಶಿವಸೇನೆಯ ಎರಡು ಬಣಗಳಿಂದ ಆಕ್ಷೇಪ: ಸುಪ್ರೀಂ ಕದ ತಟ್ಟಿದ ಉದ್ಧವ್‌, ಹೈಕೋರ್ಟ್‌ ಮೆಟ್ಟಿಲೇರಿದ ಶಿಂಧೆ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...