Homeಮುಖಪುಟಆಂಧ್ರ ಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

ಆಂಧ್ರ ಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

- Advertisement -
- Advertisement -

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷ (ವೈಎಸ್‌ಆರ್‌ಟಿಪಿ) ವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವ ಮೂಲಕ ಜನವರಿ 4ರಂದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು.

ಆಂಧ್ರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಗಿಡುಗು ರುದ್ರರಾಜು ಅವರು ರಾಜೀನಾಮೆ ನೀಡಿದ ಒಂದು ದಿನದ ನಂತರ ಶರ್ಮಿಳಾ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ನಿರ್ಗಮಿತ ಅಧ್ಯಕ್ಷ ರುದ್ರರಾಜು ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ.

ತೆಲಂಗಾಣ ವಿಧಾನಸಭೆ ಚುನಾವಣೆಗೆ ಮುನ್ನ ಶರ್ಮಿಳಾ ಅವರು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರಿಗೆ ಲಾಭವಾಗಬಹುದಾದ ಮತಗಳ ವಿಭಜನೆಯನ್ನು ತಡೆಯಲು ಚುನಾವಣಾ ಕಣದಿಂದ ಹೊರಗುಳಿದಿದ್ದರು. ಈ ಮೂಲಕ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿದ್ದರು. ನವೆಂಬರ್ 30ರಂದು ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶರ್ಮಿಳಾ ಅವರ ವೈಎಸ್‌ಆರ್‌ಟಿಪಿ ಪಕ್ಷ ಬೇಷರತ್ ಬೆಂಬಲ ನೀಡಿತ್ತು.

ಶರ್ಮಿಳಾ ಅವರ ರಾಜಕೀಯ ಹಿನ್ನೆಲೆ :

ಶರ್ಮಿಳಾ ಅವರು ಸಹೋದರ ಜಗನ್‌ಮೋಹನ್‌ ರೆಡ್ಡಿ ಅವರ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯಕ್ಕೆ ಕಾಲಿಟ್ಟವರು. ಜೂನ್ 2012ರಿಂದ ಆಂಧ್ರ ಪ್ರದೇಶದಲ್ಲಿ ಜಗನ್‌ಮೋಹನ್ ರೆಡ್ಡಿ ಅನುಪಸ್ಥಿತಿಯಲ್ಲಿ ತಾಯಿ ವೈಎಸ್ ವಿಜಯಮ್ಮ ಅವರೊಂದಿಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡುವ ಮೂಲಕ ಅವರು ಸುದ್ದಿಯಾಗಿದ್ದರು.

ಶರ್ಮಿಳಾ ಅವರು 18 ಅಕ್ಟೋಬರ್ 2012 ರಂದು ಅಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಇಡುಪುಲಪಾಯದಿಂದ ಪಾದಯಾತ್ರೆ ಆರಂಭಿಸಿ 3 ಸಾವಿರ ಕಿ.ಮೀ ದೂರು ಕ್ರಮಿಸಿ, 4 ಆಗಸ್ಟ್ 2013 ರಂದು ಇಚ್ಚಾಪುರದಲ್ಲಿ ಕೊನೆಗೊಳಿಸಿದ್ದರು. ಪಾದಯಾತ್ರೆ ವೇಳೆ ಶರ್ಮಿಳಾ ಅವರು ಅಂಧ್ರ ಪ್ರದೇಶದ 14 ಜಿಲ್ಲೆಗಳಿಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಚಾಲಕಿಯಾಗಿದ್ದರು.

ಬಳಿಕ ನಡೆದ ಉಪ ಚುನಾವಣೆಯಲ್ಲಿ 18 ವಿಧಾನಸಭಾ ಸ್ಥಾನಗಳ ಪೈಕಿ 15 ಸ್ಥಾನಗಳನ್ನು ಮತ್ತು 1 ಸಂಸತ್ ಸ್ಥಾನವನ್ನು ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಗೆದ್ದುಕೊಂಡಿತ್ತು. ಇದರಲ್ಲಿ ಶರ್ಮಿಳಾ ಅವರ ಯಾತ್ರೆ ಪ್ರಮುಖ ಪಾತ್ರ ವಹಿಸಿತ್ತು.

2019ರ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಮೊದಲು ಶರ್ಮಿಳಾ ಅವರು ಸಹೋದರನ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಪರವಾಗಿ ರಾಜ್ಯಾದ್ಯಂತ “ಬೈಬೈ ಬಾಬು- ಪ್ರಜಾ ತೀರ್ಪು” ಎಂಬ 11 ದಿನಗಳ ಬಸ್ ಯಾತ್ರೆ ಕೈಗೊಂಡಿದ್ದರು. ಈ ಯಾತ್ರೆಯಲ್ಲಿ ಶರ್ಮಿಳಾ ಅವರು ರಾಜ್ಯಾದ್ಯಂತ 1,553 ಕಿ.ಮೀ ದೂರ ಸಂಚರಿಸಿ 39 ಸಾರ್ವಜನಿಕ ಸಭೆಗಳನ್ನು ಹಮ್ಮಿಕೊಂಡಿದ್ದರು. ಈ ವೇಳೆ ತಮ್ಮ ಹಸ್ತಾಕ್ಷರದ 20 ಸಾವಿರ ಕ್ಯಾಪ್‌ಗಳನ್ನು ಸಾರ್ವಜನಿಕರಿಗೆ ಹಂಚಿದ್ದರು.

ವೈಎಸ್‌ಆರ್‌ ತೆಲಂಗಾಣದ ಪಕ್ಷದ ಸ್ಥಾಪನೆ : 

ಫೆಬ್ರವರಿ 2021ರಲ್ಲಿ, ಶರ್ಮಿಳಾ ಅವರು ಸಹೋದರ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯದ ಕಾರಣ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದದಿಂದ ಹೊರ ಬಂದಿದ್ದರು. ಈ ವೇಳೆ ತೆಲಂಗಾಣದಲ್ಲಿ ವೈಎಸ್‌ಆರ್‌ಪಿ ಪಕ್ಷಕ್ಕೆ ಯಾವುದೇ ಅಸ್ತಿತ್ವವಿಲ್ಲ ಎಂದು ಅವರು ಹೇಳಿದ್ದರು.

9 ಏಪ್ರಿಲ್ 2021 ರಂದು  ಸುದ್ದಿಗೋಷ್ಠಿ ನಡೆಸಿದ್ದ ಶರ್ಮಿಳಾ ಅವರು, ತೆಲಂಗಾಣದಲ್ಲಿ 8 ಜುಲೈ 2021 ರಂದು ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ತಮ್ಮ ತಂದೆ ಆಂಧ್ರದ ಮಾಜಿ ಸಿಎಂ ರಾಜಶೇಖರ ರೆಡ್ಡಿ ಅವರ ಜನ್ಮದಿನವಾದ ಕಾರಣ ಅವರು ಆ ದಿನಾಂಕವನ್ನು ಆಯ್ಕೆ ಮಾಡಿದ್ದರು. ಪಕ್ಷವನ್ನು ಪ್ರಾರಂಭಿಸುವ ಮೊದಲು, ಅವರು ಕೆಸಿಆರ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಸರ್ಕಾರದ ವಿರುದ್ಧ ಪ್ರಚಾರ ಪ್ರಾರಂಭಿಸಿದ್ದರು. ಬಳಿಕ 8 ಜುಲೈ 2021 ರಂದು ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಘೋಷಿಸಿದ್ದರು.

ಪಕ್ಷ ಘೋಷಣೆ ಮಾಡಿದ ಬೆನ್ನಲ್ಲೇ 2023ರ ತೆಲಂಗಾಣದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ತಿಳಿಸಿದ್ದರು. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ ಹೇಳಿದ್ದರು. ಅದರಂತೆ ಅವರು ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು.

ಇದನ್ನೂ ಓದಿ : ಸ್ಪೀಕರ್‌ ನಿಲುವಿಗೆ ಶಿವಸೇನೆಯ ಎರಡು ಬಣಗಳಿಂದ ಆಕ್ಷೇಪ: ಸುಪ್ರೀಂ ಕದ ತಟ್ಟಿದ ಉದ್ಧವ್‌, ಹೈಕೋರ್ಟ್‌ ಮೆಟ್ಟಿಲೇರಿದ ಶಿಂಧೆ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...