ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ರೆಡ್ಡಿ ಅವರು ತಮ್ಮ ಪಕ್ಷವಾದ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಪಕ್ಷದೊಟ್ಟಿಗೆ ಔಪಚಾರಿಕವಾಗಿ ವಿಲೀನಗೊಳಿಸುವುದಾಗಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಇಂದು ನವದೆಹಲಿಯಲ್ಲಿ ಘೋಷಿಸಿದರು.
ರಾಷ್ಟ್ರ ರಾಜಧಾನಿಯ ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಶರ್ಮಿಳಾ, ರಾಜಕೀಯ ಶಕ್ತಿಗಳ ಬಲವರ್ಧನೆಯ ಬಗ್ಗೆ ತಮ್ಮ ಸಂತೋಷ ವ್ಯಕ್ತಪಡಿಸಿದರು. ‘ಇಂದು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಪಕ್ಷಕ್ಕೆ ವಿಲೀನಗೊಳಿಸಲು ನನಗೆ ತುಂಬಾ ಸಂತೋಷವಾಗಿದೆ. ವೈಎಸ್ಆರ್ ತೆಲಂಗಾಣ ಪಕ್ಷವು ಇಂದಿನಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಭಾಗವಾಗುತ್ತಿರುವುದು ನನಗೆ ಅಪಾರ ಸಂತೋಷವನ್ನು ನೀಡುತ್ತದೆ’ ಎಂದು ಅವರು ಹೇಳಿದರು.
Senior leader from Andhra Pradesh YS Sharmila ji joins the INC in the presence of Congress President Shri @kharge, Shri @RahulGandhi and General Secy (Org.) Shri @kcvenugopalmp at the AICC HQ in New Delhi. pic.twitter.com/LqMvqqqwCm
— Congress (@INCIndia) January 4, 2024
ಈ ವಿಲೀನವು ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಮತ್ತು ಮುಂಬರುವ ರಾಜ್ಯ ಚುನಾವಣೆಗೆ ಮುನ್ನ ಒಗ್ಗಟ್ಟಿನ ಸಂದೇಶ ನೀಡುವ ಗುರಿಯನ್ನು ಹೊಂದಿರುವ ಕಾರ್ಯತಂತ್ರದ ಕ್ರಮವೆಂದು ಪರಿಗಣಿಸಲಾಗಿದೆ.
ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವೈಎಸ್ ಶರ್ಮಿಳಾ ಅವರು ನಿರಂತರವಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದರು. ತಮ್ಮ ಪಕ್ಷ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು.
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಅವಕಾಶ ಇರುವುದರಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದೇನೆ. ಕೆಸಿಆರ್ ಅವರು ತಮ್ಮ 9 ವರ್ಷಗಳ ಅಧಿಕಾರಾವಧಿಯಲ್ಲಿ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಮತ್ತು ಅದೊಂದೇ ಕಾರಣ. ಕೆಸಿಆರ್ ಅಧಿಕಾರಕ್ಕೆ ಬರುವುದು ನನಗೆ ಇಷ್ಟವಿಲ್ಲ ಎಂದು ಹೇಳಿದ್ದರು.
ಇದನ್ನೂ ಓದಿ; ಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!