Homeಮುಖಪುಟವೈಎಸ್ ಶರ್ಮಿಳಾ ಹೆಗಲಿಗೆ ಆಂಧ್ರ ಕಾಂಗ್ರೆಸ್ ಸಾರಥ್ಯ?

ವೈಎಸ್ ಶರ್ಮಿಳಾ ಹೆಗಲಿಗೆ ಆಂಧ್ರ ಕಾಂಗ್ರೆಸ್ ಸಾರಥ್ಯ?

- Advertisement -
- Advertisement -

ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ಇಂದು ರಾಜೀನಾಮೆ ನೀಡಿದ್ದು, ವೈಎಸ್ ಶರ್ಮಿಳಾ ಅವರನ್ನು ರಾಜ್ಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರನ್ನಾಗಿ ನೇಮಿಸುವುದು ಬಹುತೇಕ ಖಚಿತವಾಗಿದೆ.

ಆಂಧ್ರದಲ್ಲಿ ವೈಎಸ್‌ ರಾಜಶೇಖರ್‌ ರೆಡ್ಡಿ ಪುತ್ರ, ಸಿಎಂ ಜಗನ್ ಮೋಹನ್ ರೆಡ್ಡಿಗೆ ಸೆಡ್ಡು ಹೊಡೆಯಲು ಪುತ್ರಿ ಶಾರ್ಮಿಳಾ ಅವರನ್ನು ಕಾಂಗ್ರೆಸ್‌ ಮುನ್ನೆಲೆಗೆ ತರಲು ತಂತ್ರ ರೂಪಿಸಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಅವರನ್ನು ಶೀಘ್ರದಲ್ಲೇ ಎಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲಾಗುವುದು ಎಂದು ಪಕ್ಷದ ಉನ್ನತ ಮೂಲವೊಂದು ತಿಳಿಸಿರುವ ಬಗ್ಗೆ ‘ದಿ ನ್ಯೂಸ್‌ ಮಿನಿಟ್‌’ ವರದಿ ಮಾಡಿದೆ.

ಅನೇಕ ಆಂಧ್ರ ಕಾಂಗ್ರೆಸ್ ನಾಯಕರು ಶರ್ಮಿಳಾ ‘ಆಂಧ್ರ ಕಾಂಗ್ರೆಸ್‌ ಸಾರಥ್ಯ’ ವಹಿಸಬೇಕೆಂದು ಬಯಸಿದ್ದರು. ಆದರೆ ಅವರು ಅದನ್ನು ಸ್ವೀಕರಿಸಲು ಮತ್ತು ಲೋಕಸಭೆ ಚುನಾವಣೆಯಲ್ಲಿ ಆಂಧ್ರದಿಂದ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸಿರಲಿಲ್ಲ. ಬದಲಿಗೆ ರಾಜ್ಯಸಭಾ ನಾಮನಿರ್ದೇಶನಕ್ಕೆ ಬೇಡಿಕೆಯನ್ನಿಟ್ಟಿದ್ದರು ಎಂದು ಹೇಳಲಾಗಿದೆ. ಆದರೆ ಇದೀಗ ಶರ್ಮಿಳಾ ಅವರನ್ನು ಎಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಪ್ಪಿಸುವಲ್ಲಿ ಪಕ್ಷ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.

ಈ ಬೆಳವಣಿಗೆ ವೈಎಸ್‌ಆರ್‌ ಕುಟುಂಬದಲ್ಲಿ ಬಿರುಕು ಮೂಡಬಹುದು ಎಂದು ಕುಟುಂಬದ ಮೂಲವೊಂದು ಆತಂಕ ವ್ಯಕ್ತಪಡಿಸಿದೆ. ಶರ್ಮಿಳಾ ಅವರು ತಮ್ಮ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿ ಜನವರಿ 4ರಂದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಈ ಬೆಳವಣಿಗೆಗೆ ಒಂದು ದಿನ ಮೊದಲು ಸಿಎಂ ಜಗನ್ ಅವರು ಚುನಾವಣೆಗೆ ಮುಂಚಿತವಾಗಿ ಕೆಲವು ವಿರೋಧ ಪಕ್ಷದ ಮೈತ್ರಿಗಳು ಕುಟುಂಬಗಳನ್ನು ಒಡೆಯಲು ಪ್ರಯತ್ನಿಸುತ್ತಿವೆ ಎಂದು ಸಾರ್ವಜನಿಕ ಸಭೆಯಲ್ಲಿ ಹೇಳಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಶರ್ಮಿಳಾ, ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ನೋಡುವುದು ನನ್ನ ತಂದೆಯ ಕನಸಾಗಿತ್ತು ಮತ್ತು ನಾನು ಅದರ ಭಾಗವಾಗಲಿದ್ದೇನೆ ಎನ್ನುವುದು ನನಗೆ ಸಂತೋಷವಾಗಿದೆ. ತನಗೆ ನೀಡಿದ ಯಾವುದೇ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧ. ಆಂಧ್ರಪ್ರದೇಶದಲ್ಲಿ ಮಾತ್ರವಲ್ಲ ಅಂಡಮಾನ್‌ನಲ್ಲಿದ್ದರೂ ನನಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಲು ನಾನು ಸಿದ್ಧ ಎಂದು ಅವರು ಹೇಳಿದ್ದಾರೆ.

2012ರಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಗನ್‌ ಮೋಹನ್‌ ರೆಡ್ಡಿ ಜೈಲು ಪಾಲಾದಾಗ ಹಾಗೂ 2014, 2019ರ ಚುನಾವಣೆಗಳಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪರವಾಗಿ ಶರ್ಮಿಳಾ ಪ್ರಚಾರವನ್ನು ನಡೆಸಿದ್ದರು. ಆ ಬಳಿಕ  ಒಡಹುಟ್ಟಿದವರ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿತ್ತು.  ಶರ್ಮಿಳಾ ಅವರು 2021ರಲ್ಲಿ ನೆರೆಯ ರಾಜ್ಯವಾದ ತೆಲಂಗಾಣದಲ್ಲಿ YSRTP ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಹೋಗುವ ಮತಗಳನ್ನು ವಿಭಜಿಸಲು ಬಯಸದ ಕಾರಣ ತಾನು ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದ್ದರು.

ರುದ್ರರಾಜು ಅವರು 2022ರಲ್ಲಿ ಆಂಧ್ರಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಅವರು 2005ರಿಂದ 2007ರವರೆಗೆ ಆಂಧ್ರ ಪ್ರದೇಶ ವೈದ್ಯಕೀಯ ಮೂಲಸೌಕರ್ಯ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಇದನ್ನು ಓದಿ: ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...