Homeಮುಖಪುಟವೈಎಸ್ ಶರ್ಮಿಳಾ ಹೆಗಲಿಗೆ ಆಂಧ್ರ ಕಾಂಗ್ರೆಸ್ ಸಾರಥ್ಯ?

ವೈಎಸ್ ಶರ್ಮಿಳಾ ಹೆಗಲಿಗೆ ಆಂಧ್ರ ಕಾಂಗ್ರೆಸ್ ಸಾರಥ್ಯ?

- Advertisement -
- Advertisement -

ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ಇಂದು ರಾಜೀನಾಮೆ ನೀಡಿದ್ದು, ವೈಎಸ್ ಶರ್ಮಿಳಾ ಅವರನ್ನು ರಾಜ್ಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರನ್ನಾಗಿ ನೇಮಿಸುವುದು ಬಹುತೇಕ ಖಚಿತವಾಗಿದೆ.

ಆಂಧ್ರದಲ್ಲಿ ವೈಎಸ್‌ ರಾಜಶೇಖರ್‌ ರೆಡ್ಡಿ ಪುತ್ರ, ಸಿಎಂ ಜಗನ್ ಮೋಹನ್ ರೆಡ್ಡಿಗೆ ಸೆಡ್ಡು ಹೊಡೆಯಲು ಪುತ್ರಿ ಶಾರ್ಮಿಳಾ ಅವರನ್ನು ಕಾಂಗ್ರೆಸ್‌ ಮುನ್ನೆಲೆಗೆ ತರಲು ತಂತ್ರ ರೂಪಿಸಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಅವರನ್ನು ಶೀಘ್ರದಲ್ಲೇ ಎಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲಾಗುವುದು ಎಂದು ಪಕ್ಷದ ಉನ್ನತ ಮೂಲವೊಂದು ತಿಳಿಸಿರುವ ಬಗ್ಗೆ ‘ದಿ ನ್ಯೂಸ್‌ ಮಿನಿಟ್‌’ ವರದಿ ಮಾಡಿದೆ.

ಅನೇಕ ಆಂಧ್ರ ಕಾಂಗ್ರೆಸ್ ನಾಯಕರು ಶರ್ಮಿಳಾ ‘ಆಂಧ್ರ ಕಾಂಗ್ರೆಸ್‌ ಸಾರಥ್ಯ’ ವಹಿಸಬೇಕೆಂದು ಬಯಸಿದ್ದರು. ಆದರೆ ಅವರು ಅದನ್ನು ಸ್ವೀಕರಿಸಲು ಮತ್ತು ಲೋಕಸಭೆ ಚುನಾವಣೆಯಲ್ಲಿ ಆಂಧ್ರದಿಂದ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸಿರಲಿಲ್ಲ. ಬದಲಿಗೆ ರಾಜ್ಯಸಭಾ ನಾಮನಿರ್ದೇಶನಕ್ಕೆ ಬೇಡಿಕೆಯನ್ನಿಟ್ಟಿದ್ದರು ಎಂದು ಹೇಳಲಾಗಿದೆ. ಆದರೆ ಇದೀಗ ಶರ್ಮಿಳಾ ಅವರನ್ನು ಎಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಪ್ಪಿಸುವಲ್ಲಿ ಪಕ್ಷ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.

ಈ ಬೆಳವಣಿಗೆ ವೈಎಸ್‌ಆರ್‌ ಕುಟುಂಬದಲ್ಲಿ ಬಿರುಕು ಮೂಡಬಹುದು ಎಂದು ಕುಟುಂಬದ ಮೂಲವೊಂದು ಆತಂಕ ವ್ಯಕ್ತಪಡಿಸಿದೆ. ಶರ್ಮಿಳಾ ಅವರು ತಮ್ಮ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿ ಜನವರಿ 4ರಂದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಈ ಬೆಳವಣಿಗೆಗೆ ಒಂದು ದಿನ ಮೊದಲು ಸಿಎಂ ಜಗನ್ ಅವರು ಚುನಾವಣೆಗೆ ಮುಂಚಿತವಾಗಿ ಕೆಲವು ವಿರೋಧ ಪಕ್ಷದ ಮೈತ್ರಿಗಳು ಕುಟುಂಬಗಳನ್ನು ಒಡೆಯಲು ಪ್ರಯತ್ನಿಸುತ್ತಿವೆ ಎಂದು ಸಾರ್ವಜನಿಕ ಸಭೆಯಲ್ಲಿ ಹೇಳಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಶರ್ಮಿಳಾ, ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ನೋಡುವುದು ನನ್ನ ತಂದೆಯ ಕನಸಾಗಿತ್ತು ಮತ್ತು ನಾನು ಅದರ ಭಾಗವಾಗಲಿದ್ದೇನೆ ಎನ್ನುವುದು ನನಗೆ ಸಂತೋಷವಾಗಿದೆ. ತನಗೆ ನೀಡಿದ ಯಾವುದೇ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧ. ಆಂಧ್ರಪ್ರದೇಶದಲ್ಲಿ ಮಾತ್ರವಲ್ಲ ಅಂಡಮಾನ್‌ನಲ್ಲಿದ್ದರೂ ನನಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಲು ನಾನು ಸಿದ್ಧ ಎಂದು ಅವರು ಹೇಳಿದ್ದಾರೆ.

2012ರಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಗನ್‌ ಮೋಹನ್‌ ರೆಡ್ಡಿ ಜೈಲು ಪಾಲಾದಾಗ ಹಾಗೂ 2014, 2019ರ ಚುನಾವಣೆಗಳಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪರವಾಗಿ ಶರ್ಮಿಳಾ ಪ್ರಚಾರವನ್ನು ನಡೆಸಿದ್ದರು. ಆ ಬಳಿಕ  ಒಡಹುಟ್ಟಿದವರ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿತ್ತು.  ಶರ್ಮಿಳಾ ಅವರು 2021ರಲ್ಲಿ ನೆರೆಯ ರಾಜ್ಯವಾದ ತೆಲಂಗಾಣದಲ್ಲಿ YSRTP ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಹೋಗುವ ಮತಗಳನ್ನು ವಿಭಜಿಸಲು ಬಯಸದ ಕಾರಣ ತಾನು ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದ್ದರು.

ರುದ್ರರಾಜು ಅವರು 2022ರಲ್ಲಿ ಆಂಧ್ರಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಅವರು 2005ರಿಂದ 2007ರವರೆಗೆ ಆಂಧ್ರ ಪ್ರದೇಶ ವೈದ್ಯಕೀಯ ಮೂಲಸೌಕರ್ಯ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಇದನ್ನು ಓದಿ: ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಿಯಾಂಕ ಗಾಂಧಿ

ಗಾಜಾದಲ್ಲಿ ಇಸ್ರೇಲ್‌ನ ‘ಜನಾಂಗೀಯ ಕೃತ್ಯಗಳು’ ನಿಲ್ಲಬೇಕು: ಪ್ರಿಯಾಂಕಾ ಗಾಂಧಿ

0
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ಸ್ವೀಕಾರಾರ್ಹವಲ್ಲ ಮತ್ತು ಹತ್ಯಾಕಾಂಡ ಎಂದು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದನ್ನು ಜಗತ್ತಿನ ಪ್ರತಿಯೊಂದು ಸರ್ಕಾರ ಖಂಡಿಸಬೇಕು ಎಂದು ಶುಕ್ರವಾರ ಕರೆ...