Homeಕರ್ನಾಟಕವೈಎಸ್‌ವಿ ದತ್ತಾ, ನಾಗೇಶ್ 'ಕೈ' ಸೇರ್ಪಡೆ; ಇದು ಕಾಂಗ್ರೆಸ್ ಪರ್ವ ಎಂದ ಡಿಕೆಶಿ

ವೈಎಸ್‌ವಿ ದತ್ತಾ, ನಾಗೇಶ್ ‘ಕೈ’ ಸೇರ್ಪಡೆ; ಇದು ಕಾಂಗ್ರೆಸ್ ಪರ್ವ ಎಂದ ಡಿಕೆಶಿ

- Advertisement -
- Advertisement -

“ಬಿಜೆಪಿ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಆಡಳಿತ ಪಕ್ಷದ ಮೇಲೆ ಜನರ ವಿಶ್ವಾಸ ಕಡಿಮೆ ಆಗುತ್ತಿದೆ. ಹಾಗಾಗಿ ಬೇರೆ ಪಕ್ಷಗಳ ಅನೇಕ ನಾಯಕರು ಕಾಂಗ್ರೆಸ್ ಸೇರಲು ಮುಂದೆ ಬಂದಿದ್ದಾರೆ” ಎಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾಗೇಶ್, ವೈಎಸ್ವಿ ದತ್ತಾ ಅವರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಸಂಕ್ರಮಣ, ರೈತರ ಬದುಕು ಶುಭಾರಂಭವಾಗುವ ಪವಿತ್ರ ದಿನ ನಾವೆಲ್ಲ ಇಂದು ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಸೇರಿದ್ದೇವೆ.

ಬಿಜೆಪಿಗೆ ಸರ್ಕಾರ ನಡೆಸಲು, ಜನರಿಗೆ ಉತ್ತಮ ಆಡಳಿತ ನೀಡಲು ಆಗುತ್ತಿಲ್ಲ. ಜನ ನಿತ್ಯ ನೋವು ಅನುಭವಿಸುತ್ತಿದ್ದಾರೆ ಎಂದು ಇಂದು ಅನೇಕ ನಾಯಕರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಬಿಜೆಪಿ ಸೇರಿದವರು, ಬಿಜೆಪಿಯಲ್ಲಿ ಇರುವ ಬಹಳ ನಾಯಕರು ಒಳಗೊಳಗೇ ಅನೇಕ ಚರ್ಚೆ ಮಾಡುತ್ತಿದ್ದು, ಆ ಬಗ್ಗೆ ನಾನು ಈಗ ಮಾತನಾಡುವುದಿಲ್ಲ ಎಂದರು.

ಇಂದು ಮೂವರು ಪ್ರಮುಖ ನಾಯಕರು ಕಾಂಗ್ರೆಸ್ ಸೇರಲು ಬಂದಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ನಾಯಕರಾಗಿದ್ದ ವೈಎಸ್ ವಿ ದತ್ತಾ ಅವರು, ಬಿಜೆಪಿ ಸಹ ಸದಸ್ಯರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದ ಹಾಲಿ ಶಾಸಕ ನಾಗೇಶ್ ಕಾಂಗ್ರೆಸ್ ಪಕ್ಷದ ಸಹ ಸದಸ್ಯರಾಗಿ ವಿಧಾನಸಭೆಯಲ್ಲಿ ಸ್ಥಾನ ಪಡೆಯಲಿದ್ದಾರೆ. ಇವರಿಗೆ ಕಾಂಗ್ರೆಸ್ ಪಕ್ಷದ ಸಹ ಸದಸ್ಯತ್ವ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ದತ್ತಾ ಅವರನ್ನು ಕಳೆದ 48 ವರ್ಷಗಳಿಂದ ನಾನು ಬಲ್ಲೆ. ಅವರು ಪಾಠ ಮಾಡುವಾಗ ನಾನು ನ್ಯಾಷನಲ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದೆ. ಬಾಲ್ಯದಿಂದ ನಾವು ಆತ್ಮೀಯರು. ಅನೇಕ ಸಂಘಟನೆಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರು ಕಡೂರು ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್ ಪಕ್ಷದ ವಿವಿಧ ಹುದ್ದೆಗಳ ನಿರ್ವಹಣೆ ಮಾಡಿದ್ದಾರೆ. ಅವರು ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಜನತಾದಳದಲ್ಲಿ ಭವಿಷ್ಯ ಇಲ್ಲ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ರಾಹುಲ್ ಗಾಂಧಿ ಅವರ ಶ್ರಮ, ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ ಗಮನದಲ್ಲಿ ಇಟ್ಟುಕೊಂಡು ನಮ್ಮ ಪಕ್ಷಕ್ಕೆ ಸೇರುತ್ತಿದ್ದು, ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದರು.

ಈ ನಾಯಕರ ಜೊತೆಗೆ  ಹಲವು ಪ್ರಮುಖ ನಾಯಕರು ಪಕ್ಷ ಸೇರುತ್ತಿದ್ದಾರೆ. ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮುನ್ನ ಪಕ್ಷದ ಸ್ಥಳೀಯ ಮುಖಂಡರ ಜತೆ ಚರ್ಚೆ ಮಾಡಿದ್ದೇವೆ. ಪಕ್ಷ ತನ್ನ ನಾಯಕರು ಹಾಗೂ ಕಾರ್ಯಕರ್ತರನ್ನು ವಿಸ್ತರಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಮೈಸೂರಿನ ಮೂಡಾ ಅಧ್ಯಕ್ಷರಾಗಿ ಕೆಲಸ ಮಾಡಿರುವ ಮೋಹನ್ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿಯಾಗಿದ್ದರು. ಅವರು ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಕೋಲಾರ ಯುವ ಜನತಾದಳದ ಅಧ್ಯಕ್ಷರಾಗಿ ಕೆಲಸ ಮಾಡಿದ ದಯಾನಂದ್ ಅವರು ಪಕ್ಷಕ್ಕೆ ಆಗಮಿಸುತ್ತಿದ್ದಾರೆ. ಅವರನ್ನು ನಾನು ಸ್ವಾಗತಿಸುತ್ತೇನೆ ಎಂದರು.

ಇದು ಆರಂಭ. ಇನ್ನು ಮುಂದೆ ಪ್ರತಿವಾರ ಅಥವಾ ಮೂರು ದಿನಕ್ಕೆ ಒಂದೊಂದು ದಿನ ಪಕ್ಷ ಸೇರ್ಪಡೆ ಕಾರ್ಯಕ್ರಮ ಇಟ್ಟುಕೊಳ್ಳಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ಪರ್ವ ಆರಂಭವಾಗಿದ್ದು, ರಾಜ್ಯದ ಜನ ಈಗಾಗಲೇ ತಮ್ಮ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ನಿರೀಕ್ಷೆಗೂ ಮೀರಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದು ಸ್ವಂತ ಬಲದಿಂದ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಗೇಶ್ ಅವರು ಹಾಲಿ ಶಾಸಕರು. ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಪಕ್ಷದ ಕಡೆ ನೋಡಿದ್ದಾರೆ ಎಂದರೆ ಅವರ ಅನುಭವ, ಲೆಕ್ಕಾಚಾರ ಕೆಲಸ ಮಾಡಿದೆ. ಇನ್ನು ದತ್ತಾ ಅವರಿಗೆ ಜನರ ನಾಡಿ ಮಿಡಿತ ಗೊತ್ತಿದೆ. ಅವರಿಗೆ ತಮ್ಮದೇ ಆದ ಅನುಭವವಿದೆ. ದಳದ ಪರಿಸ್ಥಿತಿ ಗೊತ್ತಿದೆ. ಈ ಎಲ್ಲ ನಾಯಕರು ಯಾವುದೇ ಷರತ್ತು ಇಲ್ಲದೇ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಬೇರೆ ನಾಯಕರ ಷರತ್ತು ಒಪ್ಪಿ ಯಾರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಯಾರು ಬೇಷರತ್ತಾಗಿ ಕಾಂಗ್ರೆಸ್ ಕಾರ್ಯಕರ್ತರಾಗಿ ಕೆಲಸ ಮಾಡಲು ಬಯಸುತ್ತಾರೆ ಅಂತಹವರನ್ನು ಮಾತ್ರ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಪಕ್ಷ ಅವರ ಅರ್ಹತೆಗೆ ತಕ್ಕಂತೆ ಪಕ್ಷ ಅವರಿಗೆ ಸ್ಥಾನಮಾನ ನೀಡಲಿದೆ. ವ್ಯಕ್ತಿಗಿಂತ ನಮಗೆ ಪಕ್ಷ ಮುಖ್ಯ. ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲಾ ರೀತಿಯ ಲೆಕ್ಕಾಚಾರ ಮಾಡಿ ನಾವು ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...