Homeಕರ್ನಾಟಕವೈಎಸ್‌ವಿ ದತ್ತಾ, ನಾಗೇಶ್ 'ಕೈ' ಸೇರ್ಪಡೆ; ಇದು ಕಾಂಗ್ರೆಸ್ ಪರ್ವ ಎಂದ ಡಿಕೆಶಿ

ವೈಎಸ್‌ವಿ ದತ್ತಾ, ನಾಗೇಶ್ ‘ಕೈ’ ಸೇರ್ಪಡೆ; ಇದು ಕಾಂಗ್ರೆಸ್ ಪರ್ವ ಎಂದ ಡಿಕೆಶಿ

- Advertisement -
- Advertisement -

“ಬಿಜೆಪಿ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಆಡಳಿತ ಪಕ್ಷದ ಮೇಲೆ ಜನರ ವಿಶ್ವಾಸ ಕಡಿಮೆ ಆಗುತ್ತಿದೆ. ಹಾಗಾಗಿ ಬೇರೆ ಪಕ್ಷಗಳ ಅನೇಕ ನಾಯಕರು ಕಾಂಗ್ರೆಸ್ ಸೇರಲು ಮುಂದೆ ಬಂದಿದ್ದಾರೆ” ಎಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾಗೇಶ್, ವೈಎಸ್ವಿ ದತ್ತಾ ಅವರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಸಂಕ್ರಮಣ, ರೈತರ ಬದುಕು ಶುಭಾರಂಭವಾಗುವ ಪವಿತ್ರ ದಿನ ನಾವೆಲ್ಲ ಇಂದು ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಸೇರಿದ್ದೇವೆ.

ಬಿಜೆಪಿಗೆ ಸರ್ಕಾರ ನಡೆಸಲು, ಜನರಿಗೆ ಉತ್ತಮ ಆಡಳಿತ ನೀಡಲು ಆಗುತ್ತಿಲ್ಲ. ಜನ ನಿತ್ಯ ನೋವು ಅನುಭವಿಸುತ್ತಿದ್ದಾರೆ ಎಂದು ಇಂದು ಅನೇಕ ನಾಯಕರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಬಿಜೆಪಿ ಸೇರಿದವರು, ಬಿಜೆಪಿಯಲ್ಲಿ ಇರುವ ಬಹಳ ನಾಯಕರು ಒಳಗೊಳಗೇ ಅನೇಕ ಚರ್ಚೆ ಮಾಡುತ್ತಿದ್ದು, ಆ ಬಗ್ಗೆ ನಾನು ಈಗ ಮಾತನಾಡುವುದಿಲ್ಲ ಎಂದರು.

ಇಂದು ಮೂವರು ಪ್ರಮುಖ ನಾಯಕರು ಕಾಂಗ್ರೆಸ್ ಸೇರಲು ಬಂದಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ನಾಯಕರಾಗಿದ್ದ ವೈಎಸ್ ವಿ ದತ್ತಾ ಅವರು, ಬಿಜೆಪಿ ಸಹ ಸದಸ್ಯರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದ ಹಾಲಿ ಶಾಸಕ ನಾಗೇಶ್ ಕಾಂಗ್ರೆಸ್ ಪಕ್ಷದ ಸಹ ಸದಸ್ಯರಾಗಿ ವಿಧಾನಸಭೆಯಲ್ಲಿ ಸ್ಥಾನ ಪಡೆಯಲಿದ್ದಾರೆ. ಇವರಿಗೆ ಕಾಂಗ್ರೆಸ್ ಪಕ್ಷದ ಸಹ ಸದಸ್ಯತ್ವ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ದತ್ತಾ ಅವರನ್ನು ಕಳೆದ 48 ವರ್ಷಗಳಿಂದ ನಾನು ಬಲ್ಲೆ. ಅವರು ಪಾಠ ಮಾಡುವಾಗ ನಾನು ನ್ಯಾಷನಲ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದೆ. ಬಾಲ್ಯದಿಂದ ನಾವು ಆತ್ಮೀಯರು. ಅನೇಕ ಸಂಘಟನೆಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರು ಕಡೂರು ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್ ಪಕ್ಷದ ವಿವಿಧ ಹುದ್ದೆಗಳ ನಿರ್ವಹಣೆ ಮಾಡಿದ್ದಾರೆ. ಅವರು ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಜನತಾದಳದಲ್ಲಿ ಭವಿಷ್ಯ ಇಲ್ಲ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ರಾಹುಲ್ ಗಾಂಧಿ ಅವರ ಶ್ರಮ, ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ ಗಮನದಲ್ಲಿ ಇಟ್ಟುಕೊಂಡು ನಮ್ಮ ಪಕ್ಷಕ್ಕೆ ಸೇರುತ್ತಿದ್ದು, ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದರು.

ಈ ನಾಯಕರ ಜೊತೆಗೆ  ಹಲವು ಪ್ರಮುಖ ನಾಯಕರು ಪಕ್ಷ ಸೇರುತ್ತಿದ್ದಾರೆ. ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮುನ್ನ ಪಕ್ಷದ ಸ್ಥಳೀಯ ಮುಖಂಡರ ಜತೆ ಚರ್ಚೆ ಮಾಡಿದ್ದೇವೆ. ಪಕ್ಷ ತನ್ನ ನಾಯಕರು ಹಾಗೂ ಕಾರ್ಯಕರ್ತರನ್ನು ವಿಸ್ತರಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಮೈಸೂರಿನ ಮೂಡಾ ಅಧ್ಯಕ್ಷರಾಗಿ ಕೆಲಸ ಮಾಡಿರುವ ಮೋಹನ್ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿಯಾಗಿದ್ದರು. ಅವರು ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಕೋಲಾರ ಯುವ ಜನತಾದಳದ ಅಧ್ಯಕ್ಷರಾಗಿ ಕೆಲಸ ಮಾಡಿದ ದಯಾನಂದ್ ಅವರು ಪಕ್ಷಕ್ಕೆ ಆಗಮಿಸುತ್ತಿದ್ದಾರೆ. ಅವರನ್ನು ನಾನು ಸ್ವಾಗತಿಸುತ್ತೇನೆ ಎಂದರು.

ಇದು ಆರಂಭ. ಇನ್ನು ಮುಂದೆ ಪ್ರತಿವಾರ ಅಥವಾ ಮೂರು ದಿನಕ್ಕೆ ಒಂದೊಂದು ದಿನ ಪಕ್ಷ ಸೇರ್ಪಡೆ ಕಾರ್ಯಕ್ರಮ ಇಟ್ಟುಕೊಳ್ಳಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ಪರ್ವ ಆರಂಭವಾಗಿದ್ದು, ರಾಜ್ಯದ ಜನ ಈಗಾಗಲೇ ತಮ್ಮ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ನಿರೀಕ್ಷೆಗೂ ಮೀರಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದು ಸ್ವಂತ ಬಲದಿಂದ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಗೇಶ್ ಅವರು ಹಾಲಿ ಶಾಸಕರು. ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಪಕ್ಷದ ಕಡೆ ನೋಡಿದ್ದಾರೆ ಎಂದರೆ ಅವರ ಅನುಭವ, ಲೆಕ್ಕಾಚಾರ ಕೆಲಸ ಮಾಡಿದೆ. ಇನ್ನು ದತ್ತಾ ಅವರಿಗೆ ಜನರ ನಾಡಿ ಮಿಡಿತ ಗೊತ್ತಿದೆ. ಅವರಿಗೆ ತಮ್ಮದೇ ಆದ ಅನುಭವವಿದೆ. ದಳದ ಪರಿಸ್ಥಿತಿ ಗೊತ್ತಿದೆ. ಈ ಎಲ್ಲ ನಾಯಕರು ಯಾವುದೇ ಷರತ್ತು ಇಲ್ಲದೇ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಬೇರೆ ನಾಯಕರ ಷರತ್ತು ಒಪ್ಪಿ ಯಾರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಯಾರು ಬೇಷರತ್ತಾಗಿ ಕಾಂಗ್ರೆಸ್ ಕಾರ್ಯಕರ್ತರಾಗಿ ಕೆಲಸ ಮಾಡಲು ಬಯಸುತ್ತಾರೆ ಅಂತಹವರನ್ನು ಮಾತ್ರ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಪಕ್ಷ ಅವರ ಅರ್ಹತೆಗೆ ತಕ್ಕಂತೆ ಪಕ್ಷ ಅವರಿಗೆ ಸ್ಥಾನಮಾನ ನೀಡಲಿದೆ. ವ್ಯಕ್ತಿಗಿಂತ ನಮಗೆ ಪಕ್ಷ ಮುಖ್ಯ. ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲಾ ರೀತಿಯ ಲೆಕ್ಕಾಚಾರ ಮಾಡಿ ನಾವು ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...