HomeಮುಖಪುಟNDA ಒಕ್ಕೂಟಕ್ಕೆ ಬೆಂಬಲ ಘೋಷಿಸಿದ ವೈಎಸ್ಆರ್ ಕಾಂಗ್ರೆಸ್ ಮುಖಂಡ ಜಗನ್‌ಮೋಹನ್ ರೆಡ್ಡಿ

NDA ಒಕ್ಕೂಟಕ್ಕೆ ಬೆಂಬಲ ಘೋಷಿಸಿದ ವೈಎಸ್ಆರ್ ಕಾಂಗ್ರೆಸ್ ಮುಖಂಡ ಜಗನ್‌ಮೋಹನ್ ರೆಡ್ಡಿ

- Advertisement -
- Advertisement -

ವೈಎಸ್ಆರ್ ಕಾಂಗ್ರೆಸ್ ಮುಖಂಡ ಮತ್ತು ಆಂಧ್ರ ಪ್ರದೇಶದ ಸಿಎಂ ಜಗನ್‌ಮೋಹನ್ ರೆಡ್ಡಿಯವರು ತಮ್ಮ ಪಕ್ಷ NDA ಒಕ್ಕೂಟಕ್ಕೆ ಬೆಂಬಲ ನೀಡುತ್ತದೆ ಎಂದು ಘೋಷಿಸಿದ್ದಾರೆ.

ದೆಹಲಿಯಲ್ಲಿನ ಸೇವೆ ಮತ್ತು ವರ್ಗಾವಣೆಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಂಡಿಸಲು ಹೊರಟಿರುವ ವಿವಾದಾತ್ಮಕ ಮಸೂದೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದರು ಬೆಂಬಲ ಸೂಚಿಸಿದ್ದಾರೆ. ಅಲ್ಲದೇ ಮಣಿಪುರದ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಪೂರ್ಣ ವಿವರ ನೀಡಬೇಕೆದು ಪಟ್ಟು ಹಿಡಿದು ಅವಿಶ್ವಾಸ ನಿರ್ಣಯ ಘೋಷಿಸಿರುವ ಹಿನ್ನೆಲೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಮೋದಿ ಸರ್ಕಾರದ ಪರ ಮತ ಹಾಕಲು ನಿರ್ಧರಿಸಿದೆ.

ದೆಹಲಿ ಸುಗ್ರೀವಾಜ್ಞೆಗೆ ರಾಜ್ಯಸಭೆಯಲ್ಲಿ ಬಹುಮತ ದೊರೆಯದಂತೆ ನೋಡಿಕೊಳ್ಳಲು ಆಪ್ ತೀವ್ರ ಪ್ರಯತ್ನ ನಡೆಸಿತ್ತು. ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದಲ್ಲದೇ INDIA ಒಕ್ಕೂಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿತ್ತು. ಈ ಬೆನ್ನಲ್ಲೆ NDA ಒಕ್ಕೂಟವು ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಗಾಳ ಹಾಕಿ ಯಶಸ್ವಿಯಾಗಿದೆ. ರಾಜ್ಯಸಭೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಒಂಬತ್ತು ಸದಸ್ಯರಿದ್ದು, ಅವರ ಬೆಂಬಲವು ಮಸೂದೆ ಅಂಗೀಕಾರಕ್ಕೆ ನಿರ್ಣಾಯಕವಾಗಿತ್ತು. ಅದೀಗ ಮೋದಿ ಸರ್ಕಾರದ ಪರ ವಹಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವಿ ವಿಜಯಸಾಯಿ ರೆಡ್ಡಿ, “ನಾವು ಎರಡೂ ವಿಷಯಗಳಲ್ಲಿ ಅಂದರೆ ದೆಹಲಿ ಸಮಸ್ಯೆ ಮಾತ್ರವಲ್ಲದೆ ಮಣಿಪುರ ವಿಷಯದಲ್ಲೂ ಕೇಂದ್ರ ಸರ್ಕಾರದ ಪರವಾಗಿ ಮತ ಚಲಾಯಿಸುತ್ತೇವೆ” ಎಂದು ತಮ್ಮ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.

ರಾಜ್ಯಸಭೆಯಲ್ಲಿ ಎನ್‌ಡಿಎ ಪರವಾಗಿ 123 ಸದಸ್ಯರಿದ್ದರೆ ಇಂಡಿಯಾ ಒಕ್ಕೂಟದ ಪರವಾಗಿ 109 ಸದಸ್ಯರಿದ್ದಾರೆ ಎನ್ನಲಾಗಿದೆ. 09 ಸದಸ್ಯರನ್ನು ಒಳಗೊಂಡಿರುವ ಬಿಜು ಜನತಾದಳ ಪಕ್ಷವು ಇನ್ನೂ ತನ್ನ ನಿಲುವನ್ನು ವ್ಯಕ್ತಪಡಿಸಿಲ್ಲ.

ಆಶ್ಚರ್ಯಕರವಾಗಿ ಆಂಧ್ರಪ್ರದೇಶದಲ್ಲಿ ಚಾಲ್ತಿಯಲ್ಲಿರುವ ಮೂರು ಪ್ರಾದೇಶಿಕ ಪಕ್ಷಗಳು ಸಹ ಎನ್‌ಡಿಎ ಒಕ್ಕೂಟಕ್ಕೆ ಸೇರಲು ಪೈಪೋಟಿಯಲ್ಲಿ ನಿರತವಾಗಿವೆ. ಆಡಳಿತರೂಢ ವೈಎಸ್ಆರ್ ಕಾಂಗ್ರೆಸ್, ಪ್ರತಿಪಕ್ಷ ಚಂದ್ರಬಾಬು ನಾಯ್ಡುರವರ ಟಿಡಿಪಿ ಮತ್ತು ಪವನ್ ಕಲ್ಯಾಣ್‌ರವರ ಜನಸೇನಾ ಸೇನಾ ಎನ್‌ಡಿಎ ಪರ ಒಲವು ಹೊಂದಿವೆ.

ಇದನ್ನೂ ಓದಿ; ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಮೈಕ್ರೋಫೋನ್‌ ಸ್ವಿಚ್ಡ್ ಆಫ್: ವಿಪಕ್ಷಗಳ ಸಭಾತ್ಯಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...