Homeಮುಖಪುಟಚುನಾವಣೆ ಸೋಲು: ಸಂಘಟಿತ ದಾಳಿಯಿಂದ ಬೆಂಬಲಿಗರ ರಕ್ಷಣೆ ಕೋರಿ ವೈಎಸ್‌ಆರ್‌ಸಿಪಿ ರಾಷ್ಟ್ರಪತಿ ಮೊರೆ

ಚುನಾವಣೆ ಸೋಲು: ಸಂಘಟಿತ ದಾಳಿಯಿಂದ ಬೆಂಬಲಿಗರ ರಕ್ಷಣೆ ಕೋರಿ ವೈಎಸ್‌ಆರ್‌ಸಿಪಿ ರಾಷ್ಟ್ರಪತಿ ಮೊರೆ

- Advertisement -
- Advertisement -

ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಬರೆದಿದ್ದು, ಆಂಧ್ರಪ್ರದೇಶದಲ್ಲಿ ಕಾನೂನು, ಸುವ್ಯವಸ್ಥೆ ರಕ್ಷಣೆಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಚುನಾವಣೆಯಲ್ಲಿ ನಮ್ಮ ಪಕ್ಷದ ಸೋಲಿನ ನಂತರ ತಮ್ಮ ಬೆಂಬಲಿಗರ ಮೇಲೆ ಸಂಘಟಿತ ಹಿಂಸಾಚಾರ, ಹಲ್ಲೆ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿಲಾಗಿದೆ.

ರಾಷ್ಟ್ರಪತಿಗೆ ಮಾತ್ರವಲ್ಲದೆ ಆಂಧ್ರಪ್ರದೇಶದ ರಾಜ್ಯಪಾಲ ಎಸ್ ಅಬ್ದುಲ್ ನಝೀರ್ ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಹರೀಶ್ ಕುಮಾರ್ ಗುಪ್ತಾ ಅವರಿಗೆ ಪಕ್ಷವು ಮಧ್ಯಪ್ರವೇಶಿಸುವಂತೆ ಪತ್ರಗಳನ್ನು ಕಳುಹಿಸಿದೆ.

ತೆಲುಗು ದೇಶಂ ಪಕ್ಷ (ಟಿಡಿಪಿ), ಜನಸೇನಾ ಪಕ್ಷ (ಜೆಎಸ್‌ಪಿ), ಮತ್ತು ಬಿಜೆಪಿ ಮೈತ್ರಿಯು ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿಯನ್ನು ಹೀನಾಯವಾಗಿ ಸೋಲಿಸಿದೆ. ವೈಎಸ್‌ಆರ್‌ಸಿಪಿ ಕೇವಲ 11 ಸ್ಥಾನಗಳನ್ನು ಗಳಿಸಿದೆ. 175 ವಿಧಾನಸಭಾ ಸ್ಥಾನಗಳ ಪೈಕಿ 164 ಸ್ಥಾನಗಳೊಂದಿಗೆ ಮೈತ್ರಿಕೂಟವು ಭಾರಿ ಬಹುಮತದೊಂದಿಗೆ ಚುನಾವಣೆಯನ್ನು ಗೆದ್ದು ಸರ್ಕಾರ ರಚಿಸಲು ಸಜ್ಜಾಗಿದೆ.

ಜೂನ್ 4 ರಂದು ಫಲಿತಾಂಶಗಳು ಪ್ರಕಟವಾದ ನಂತರ ತನ್ನ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಹಲವಾರು ಹಿಂಸಾತ್ಮಕ ಕೃತ್ಯಗಳು ನಡೆದಿದೆ. ದಾಳಿಯ ಹಿಂದೆ ಭಾಗಿಯಾಗಿರುವ ಪಕ್ಷವನ್ನು ಪತ್ರದಲ್ಲಿ ಉಲ್ಲೇಖಿಸದಿದ್ದರೂ, ಪಕ್ಷದ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳು TDP ಮತ್ತು JSP ಬಗ್ಗೆ ಆರೋಪವನ್ನು ಮಾಡಿದೆ.  ಪಕ್ಷದ ಸ್ಥಳೀಯ ಕಾರ್ಯಕರ್ತರ ನಿವಾಸಗಳ ಮೇಲೆ ದಾಳಿ ನಡೆಸಿ ಅವರ ಆಸ್ತಿಪಾಸ್ತಿಗಳನ್ನು ನಾಶಪಡಿಸಿರುವ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊವೊಂದರಲ್ಲಿ, ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ವೈಎಸ್‌ಆರ್‌ಸಿಪಿ ಮಾಜಿ ಶಾಸಕಿ ಮತ್ತು ಸಚಿವೆ ರೋಜಾ ಅವರ ಪೋಟೋಗಳನ್ನು ಹೊಂದಿರುವ ನಗರಿ ಕ್ಷೇತ್ರದಲ್ಲಿ ಕಲ್ಲಿನ ಫಲಕವನ್ನು ನಾಶಪಡಿಸಲಾಗಿದೆ. ಶುಕ್ರವಾರ ಕೃಷ್ಣಾ ಜಿಲ್ಲೆಯ ಗುಡಿವಾಡದಲ್ಲಿರುವ ಮಾಜಿ ಶಾಸಕ ಕೊಡಲಿ ನಾನಿ ಅವರ ನಿವಾಸದ ಮೇಲೆ ಟಿಡಿಪಿ ಬೆಂಬಲಿಗರು ಮೊಟ್ಟೆ ದಾಳಿ ನಡೆಸಿದ್ದಾರೆ. ದಾಳಿಗಳ ಪ್ರಮಾಣ ಕಳೆದ 24 ಗಂಟೆಗಳಲ್ಲಿ ಹೆಚ್ಚಾಗಿದೆ. ವೈಎಸ್‌ಆರ್‌ಸಿಪಿ ಬೆಂಬಲಿಗರನ್ನು ವಿಶೇಷವಾಗಿ ಎಸ್ಸಿ, ಎಸ್ಟಿ, ಒಬಿಸಿ ಅಲ್ಪಸಂಖ್ಯಾತ ಸಮುದಾಯಗಳು, ಮಹಿಳೆಯರು ಮತ್ತು ಮಕ್ಕಳು ಸೇರಿ ದುರ್ಬಲ ಗುಂಪುಗಳ ಜನರನ್ನು ಬೆದರಿಸುವ ಸಂಘಟಿತ ಪ್ರಯತ್ನದ ಭಾಗವಾಗಿದೆ. ಈ ಬಗ್ಗೆ ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳು ಕ್ರಮ ಕೈಗೊಳ್ಳಲು ವಿಫಲವಾಗಿದೆ. ಆದ್ದರಿಂದ ಅಧಿಕಾರಿಗಳು ಈ ಸಮಸ್ಯೆಯ ಬಗ್ಗೆ ತಕ್ಷಣ ಮತ್ತು ಗಂಭೀರವಾಗಿ ಗಮನಹರಿಸಬೇಕು ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ನಿರಂಜನ್‌ ರೆಡ್ಡಿ ಒತ್ತಾಯಿಸಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್ ವಿವಿಪ್ಯಾಟ್‌ ಸುಧಾರಣೆ ನಿಲುವು ಹೊಂದಿದೆ ಹೊರತು ಇವಿಎಂಗಳನ್ನು ತಿರಸ್ಕರಿಸಿಲ್ಲ: ಪಿ ಚಿದಂಬರಂ ಸ್ಪಷ್ಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...