Homeಮುಖಪುಟಚುನಾವಣೆ ಸೋಲು: ಸಂಘಟಿತ ದಾಳಿಯಿಂದ ಬೆಂಬಲಿಗರ ರಕ್ಷಣೆ ಕೋರಿ ವೈಎಸ್‌ಆರ್‌ಸಿಪಿ ರಾಷ್ಟ್ರಪತಿ ಮೊರೆ

ಚುನಾವಣೆ ಸೋಲು: ಸಂಘಟಿತ ದಾಳಿಯಿಂದ ಬೆಂಬಲಿಗರ ರಕ್ಷಣೆ ಕೋರಿ ವೈಎಸ್‌ಆರ್‌ಸಿಪಿ ರಾಷ್ಟ್ರಪತಿ ಮೊರೆ

- Advertisement -
- Advertisement -

ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಬರೆದಿದ್ದು, ಆಂಧ್ರಪ್ರದೇಶದಲ್ಲಿ ಕಾನೂನು, ಸುವ್ಯವಸ್ಥೆ ರಕ್ಷಣೆಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಚುನಾವಣೆಯಲ್ಲಿ ನಮ್ಮ ಪಕ್ಷದ ಸೋಲಿನ ನಂತರ ತಮ್ಮ ಬೆಂಬಲಿಗರ ಮೇಲೆ ಸಂಘಟಿತ ಹಿಂಸಾಚಾರ, ಹಲ್ಲೆ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿಲಾಗಿದೆ.

ರಾಷ್ಟ್ರಪತಿಗೆ ಮಾತ್ರವಲ್ಲದೆ ಆಂಧ್ರಪ್ರದೇಶದ ರಾಜ್ಯಪಾಲ ಎಸ್ ಅಬ್ದುಲ್ ನಝೀರ್ ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಹರೀಶ್ ಕುಮಾರ್ ಗುಪ್ತಾ ಅವರಿಗೆ ಪಕ್ಷವು ಮಧ್ಯಪ್ರವೇಶಿಸುವಂತೆ ಪತ್ರಗಳನ್ನು ಕಳುಹಿಸಿದೆ.

ತೆಲುಗು ದೇಶಂ ಪಕ್ಷ (ಟಿಡಿಪಿ), ಜನಸೇನಾ ಪಕ್ಷ (ಜೆಎಸ್‌ಪಿ), ಮತ್ತು ಬಿಜೆಪಿ ಮೈತ್ರಿಯು ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿಯನ್ನು ಹೀನಾಯವಾಗಿ ಸೋಲಿಸಿದೆ. ವೈಎಸ್‌ಆರ್‌ಸಿಪಿ ಕೇವಲ 11 ಸ್ಥಾನಗಳನ್ನು ಗಳಿಸಿದೆ. 175 ವಿಧಾನಸಭಾ ಸ್ಥಾನಗಳ ಪೈಕಿ 164 ಸ್ಥಾನಗಳೊಂದಿಗೆ ಮೈತ್ರಿಕೂಟವು ಭಾರಿ ಬಹುಮತದೊಂದಿಗೆ ಚುನಾವಣೆಯನ್ನು ಗೆದ್ದು ಸರ್ಕಾರ ರಚಿಸಲು ಸಜ್ಜಾಗಿದೆ.

ಜೂನ್ 4 ರಂದು ಫಲಿತಾಂಶಗಳು ಪ್ರಕಟವಾದ ನಂತರ ತನ್ನ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಹಲವಾರು ಹಿಂಸಾತ್ಮಕ ಕೃತ್ಯಗಳು ನಡೆದಿದೆ. ದಾಳಿಯ ಹಿಂದೆ ಭಾಗಿಯಾಗಿರುವ ಪಕ್ಷವನ್ನು ಪತ್ರದಲ್ಲಿ ಉಲ್ಲೇಖಿಸದಿದ್ದರೂ, ಪಕ್ಷದ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳು TDP ಮತ್ತು JSP ಬಗ್ಗೆ ಆರೋಪವನ್ನು ಮಾಡಿದೆ.  ಪಕ್ಷದ ಸ್ಥಳೀಯ ಕಾರ್ಯಕರ್ತರ ನಿವಾಸಗಳ ಮೇಲೆ ದಾಳಿ ನಡೆಸಿ ಅವರ ಆಸ್ತಿಪಾಸ್ತಿಗಳನ್ನು ನಾಶಪಡಿಸಿರುವ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊವೊಂದರಲ್ಲಿ, ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ವೈಎಸ್‌ಆರ್‌ಸಿಪಿ ಮಾಜಿ ಶಾಸಕಿ ಮತ್ತು ಸಚಿವೆ ರೋಜಾ ಅವರ ಪೋಟೋಗಳನ್ನು ಹೊಂದಿರುವ ನಗರಿ ಕ್ಷೇತ್ರದಲ್ಲಿ ಕಲ್ಲಿನ ಫಲಕವನ್ನು ನಾಶಪಡಿಸಲಾಗಿದೆ. ಶುಕ್ರವಾರ ಕೃಷ್ಣಾ ಜಿಲ್ಲೆಯ ಗುಡಿವಾಡದಲ್ಲಿರುವ ಮಾಜಿ ಶಾಸಕ ಕೊಡಲಿ ನಾನಿ ಅವರ ನಿವಾಸದ ಮೇಲೆ ಟಿಡಿಪಿ ಬೆಂಬಲಿಗರು ಮೊಟ್ಟೆ ದಾಳಿ ನಡೆಸಿದ್ದಾರೆ. ದಾಳಿಗಳ ಪ್ರಮಾಣ ಕಳೆದ 24 ಗಂಟೆಗಳಲ್ಲಿ ಹೆಚ್ಚಾಗಿದೆ. ವೈಎಸ್‌ಆರ್‌ಸಿಪಿ ಬೆಂಬಲಿಗರನ್ನು ವಿಶೇಷವಾಗಿ ಎಸ್ಸಿ, ಎಸ್ಟಿ, ಒಬಿಸಿ ಅಲ್ಪಸಂಖ್ಯಾತ ಸಮುದಾಯಗಳು, ಮಹಿಳೆಯರು ಮತ್ತು ಮಕ್ಕಳು ಸೇರಿ ದುರ್ಬಲ ಗುಂಪುಗಳ ಜನರನ್ನು ಬೆದರಿಸುವ ಸಂಘಟಿತ ಪ್ರಯತ್ನದ ಭಾಗವಾಗಿದೆ. ಈ ಬಗ್ಗೆ ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳು ಕ್ರಮ ಕೈಗೊಳ್ಳಲು ವಿಫಲವಾಗಿದೆ. ಆದ್ದರಿಂದ ಅಧಿಕಾರಿಗಳು ಈ ಸಮಸ್ಯೆಯ ಬಗ್ಗೆ ತಕ್ಷಣ ಮತ್ತು ಗಂಭೀರವಾಗಿ ಗಮನಹರಿಸಬೇಕು ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ನಿರಂಜನ್‌ ರೆಡ್ಡಿ ಒತ್ತಾಯಿಸಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್ ವಿವಿಪ್ಯಾಟ್‌ ಸುಧಾರಣೆ ನಿಲುವು ಹೊಂದಿದೆ ಹೊರತು ಇವಿಎಂಗಳನ್ನು ತಿರಸ್ಕರಿಸಿಲ್ಲ: ಪಿ ಚಿದಂಬರಂ ಸ್ಪಷ್ಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...