Homeಮುಖಪುಟಚುನಾವಣೆ ಸೋಲು: ಸಂಘಟಿತ ದಾಳಿಯಿಂದ ಬೆಂಬಲಿಗರ ರಕ್ಷಣೆ ಕೋರಿ ವೈಎಸ್‌ಆರ್‌ಸಿಪಿ ರಾಷ್ಟ್ರಪತಿ ಮೊರೆ

ಚುನಾವಣೆ ಸೋಲು: ಸಂಘಟಿತ ದಾಳಿಯಿಂದ ಬೆಂಬಲಿಗರ ರಕ್ಷಣೆ ಕೋರಿ ವೈಎಸ್‌ಆರ್‌ಸಿಪಿ ರಾಷ್ಟ್ರಪತಿ ಮೊರೆ

- Advertisement -
- Advertisement -

ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಬರೆದಿದ್ದು, ಆಂಧ್ರಪ್ರದೇಶದಲ್ಲಿ ಕಾನೂನು, ಸುವ್ಯವಸ್ಥೆ ರಕ್ಷಣೆಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಚುನಾವಣೆಯಲ್ಲಿ ನಮ್ಮ ಪಕ್ಷದ ಸೋಲಿನ ನಂತರ ತಮ್ಮ ಬೆಂಬಲಿಗರ ಮೇಲೆ ಸಂಘಟಿತ ಹಿಂಸಾಚಾರ, ಹಲ್ಲೆ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿಲಾಗಿದೆ.

ರಾಷ್ಟ್ರಪತಿಗೆ ಮಾತ್ರವಲ್ಲದೆ ಆಂಧ್ರಪ್ರದೇಶದ ರಾಜ್ಯಪಾಲ ಎಸ್ ಅಬ್ದುಲ್ ನಝೀರ್ ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಹರೀಶ್ ಕುಮಾರ್ ಗುಪ್ತಾ ಅವರಿಗೆ ಪಕ್ಷವು ಮಧ್ಯಪ್ರವೇಶಿಸುವಂತೆ ಪತ್ರಗಳನ್ನು ಕಳುಹಿಸಿದೆ.

ತೆಲುಗು ದೇಶಂ ಪಕ್ಷ (ಟಿಡಿಪಿ), ಜನಸೇನಾ ಪಕ್ಷ (ಜೆಎಸ್‌ಪಿ), ಮತ್ತು ಬಿಜೆಪಿ ಮೈತ್ರಿಯು ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿಯನ್ನು ಹೀನಾಯವಾಗಿ ಸೋಲಿಸಿದೆ. ವೈಎಸ್‌ಆರ್‌ಸಿಪಿ ಕೇವಲ 11 ಸ್ಥಾನಗಳನ್ನು ಗಳಿಸಿದೆ. 175 ವಿಧಾನಸಭಾ ಸ್ಥಾನಗಳ ಪೈಕಿ 164 ಸ್ಥಾನಗಳೊಂದಿಗೆ ಮೈತ್ರಿಕೂಟವು ಭಾರಿ ಬಹುಮತದೊಂದಿಗೆ ಚುನಾವಣೆಯನ್ನು ಗೆದ್ದು ಸರ್ಕಾರ ರಚಿಸಲು ಸಜ್ಜಾಗಿದೆ.

ಜೂನ್ 4 ರಂದು ಫಲಿತಾಂಶಗಳು ಪ್ರಕಟವಾದ ನಂತರ ತನ್ನ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಹಲವಾರು ಹಿಂಸಾತ್ಮಕ ಕೃತ್ಯಗಳು ನಡೆದಿದೆ. ದಾಳಿಯ ಹಿಂದೆ ಭಾಗಿಯಾಗಿರುವ ಪಕ್ಷವನ್ನು ಪತ್ರದಲ್ಲಿ ಉಲ್ಲೇಖಿಸದಿದ್ದರೂ, ಪಕ್ಷದ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳು TDP ಮತ್ತು JSP ಬಗ್ಗೆ ಆರೋಪವನ್ನು ಮಾಡಿದೆ.  ಪಕ್ಷದ ಸ್ಥಳೀಯ ಕಾರ್ಯಕರ್ತರ ನಿವಾಸಗಳ ಮೇಲೆ ದಾಳಿ ನಡೆಸಿ ಅವರ ಆಸ್ತಿಪಾಸ್ತಿಗಳನ್ನು ನಾಶಪಡಿಸಿರುವ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊವೊಂದರಲ್ಲಿ, ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ವೈಎಸ್‌ಆರ್‌ಸಿಪಿ ಮಾಜಿ ಶಾಸಕಿ ಮತ್ತು ಸಚಿವೆ ರೋಜಾ ಅವರ ಪೋಟೋಗಳನ್ನು ಹೊಂದಿರುವ ನಗರಿ ಕ್ಷೇತ್ರದಲ್ಲಿ ಕಲ್ಲಿನ ಫಲಕವನ್ನು ನಾಶಪಡಿಸಲಾಗಿದೆ. ಶುಕ್ರವಾರ ಕೃಷ್ಣಾ ಜಿಲ್ಲೆಯ ಗುಡಿವಾಡದಲ್ಲಿರುವ ಮಾಜಿ ಶಾಸಕ ಕೊಡಲಿ ನಾನಿ ಅವರ ನಿವಾಸದ ಮೇಲೆ ಟಿಡಿಪಿ ಬೆಂಬಲಿಗರು ಮೊಟ್ಟೆ ದಾಳಿ ನಡೆಸಿದ್ದಾರೆ. ದಾಳಿಗಳ ಪ್ರಮಾಣ ಕಳೆದ 24 ಗಂಟೆಗಳಲ್ಲಿ ಹೆಚ್ಚಾಗಿದೆ. ವೈಎಸ್‌ಆರ್‌ಸಿಪಿ ಬೆಂಬಲಿಗರನ್ನು ವಿಶೇಷವಾಗಿ ಎಸ್ಸಿ, ಎಸ್ಟಿ, ಒಬಿಸಿ ಅಲ್ಪಸಂಖ್ಯಾತ ಸಮುದಾಯಗಳು, ಮಹಿಳೆಯರು ಮತ್ತು ಮಕ್ಕಳು ಸೇರಿ ದುರ್ಬಲ ಗುಂಪುಗಳ ಜನರನ್ನು ಬೆದರಿಸುವ ಸಂಘಟಿತ ಪ್ರಯತ್ನದ ಭಾಗವಾಗಿದೆ. ಈ ಬಗ್ಗೆ ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳು ಕ್ರಮ ಕೈಗೊಳ್ಳಲು ವಿಫಲವಾಗಿದೆ. ಆದ್ದರಿಂದ ಅಧಿಕಾರಿಗಳು ಈ ಸಮಸ್ಯೆಯ ಬಗ್ಗೆ ತಕ್ಷಣ ಮತ್ತು ಗಂಭೀರವಾಗಿ ಗಮನಹರಿಸಬೇಕು ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ನಿರಂಜನ್‌ ರೆಡ್ಡಿ ಒತ್ತಾಯಿಸಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್ ವಿವಿಪ್ಯಾಟ್‌ ಸುಧಾರಣೆ ನಿಲುವು ಹೊಂದಿದೆ ಹೊರತು ಇವಿಎಂಗಳನ್ನು ತಿರಸ್ಕರಿಸಿಲ್ಲ: ಪಿ ಚಿದಂಬರಂ ಸ್ಪಷ್ಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...