Homeಕರ್ನಾಟಕ‘ಸ್ವಾಭಿಮಾನಕ್ಕೆ ಕಾಂಗ್ರೆಸ್ ಪೆಟ್ಟು ನೀಡಿದೆ’: ಪಕ್ಷೇತರವಾಗಿ ಸ್ಪರ್ಧಿಸಲು ವೈಎಸ್‌ವಿ ದತ್ತ ನಿರ್ಧಾರ

‘ಸ್ವಾಭಿಮಾನಕ್ಕೆ ಕಾಂಗ್ರೆಸ್ ಪೆಟ್ಟು ನೀಡಿದೆ’: ಪಕ್ಷೇತರವಾಗಿ ಸ್ಪರ್ಧಿಸಲು ವೈಎಸ್‌ವಿ ದತ್ತ ನಿರ್ಧಾರ

- Advertisement -
- Advertisement -

ಇತ್ತೀಚೆಗೆ ಕಾಂಗ್ರೆಸ್ ಸೇರಿ, ಟಿಕೆಟ್‌ ಸಿಗದೆ ಬೇಸರಗೊಂಡಿರುವ ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

“ಕಾಂಗ್ರೆಸ್‌ ಟಿಕೆಟ್‌ ನೀಡದೆ ಸ್ವಾಭಿಮಾನಕ್ಕೆ ಪೆಟ್ಟು ನೀಡಿದೆ, ಈ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ. ಕಡೂರು ಕ್ಷೇತ್ರದ ಸ್ವಾಭಿಮಾನವನ್ನು ರಾಜ್ಯಕ್ಕೆ ತೋರಿಸುವ ಛಲ ತೊಟ್ಟಿದ್ದೇನೆ” ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ತಿಳಿಸಿದ್ದಾರೆ.

ಕಡೂರು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ಭಾನುವಾರ ನಡೆದ ಅಭಿಮಾನಿಗಳ ಸಭೆಯಲ್ಲಿ ಮಾತನಾಡಿದ ಅವರು, “ಈ ಬಾರಿ ಕ್ಷೇತ್ರದಲ್ಲಿ ವಿಶೇಷ ಪರಿಸ್ಥಿತಿ ತಲೆದೋರಿತ್ತು. ಐತಿಹಾಸಿಕ ಬದಲಾವಣೆಗೆ ಕ್ಷೇತ್ರ ಸನ್ನದ್ಧವಾಗಿದೆ ಎಂಬುದಕ್ಕೆ ಪೂರಕವಾಗಿ 50 ವರ್ಷಗಳ ಜೆಡಿಎಸ್‌ ನಂಟು ಬಿಟ್ಟು ಕಾಂಗ್ರೆಸ್‌ ಸೇರಿದೆ. ಟಿಕೆಟ್‌ ಸಿಗುತ್ತದೆ ಎಂಬ ವಿಶ್ವಾಸವನ್ನು ಪಕ್ಷ ಹುಸಿ ಮಾಡಿದೆ. ಅದನ್ನು, ನನ್ನ ಅಭಿಮಾನಿಗಳು ಮತ್ತು ಪ್ರೀತಿಸುವ ಸಮುದಾಯಗಳು ಸ್ವಾಭಿಮಾನಕ್ಕೆ ಬಿದ್ದ ಪೆಟ್ಟು ಎಂದೇ ಭಾವಿಸಿವೆ. ಆ ಸ್ವಾಭಿಮಾನ ಉಳಿಸಿಕೊಳ್ಳಲು ಪಕ್ಷೇತರವಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದಾರೆ..

“ಪ್ರೀತಿಯಿಂದಲೇ ಜನರ ಬಳಿ ತೆರಳಿ ಹಣ ಸಹಾಯದ ಜೊತೆ ಮತ ಭಿಕ್ಷೆ ಬೇಡುತ್ತೇನೆ‌. ಸ್ವಾಭಿಮಾನ ಎಂದರೆ ಏನು ಎಂಬುದನ್ನ ನನ್ನ ಅಭಿಮಾನಿಗಳು ಇಡೀ ರಾಜ್ಯಕ್ಕೆ ತೋರಿಸುತ್ತಾರೆ. ನಾಮಪತ್ರ ಸಲ್ಲಿಕೆ ಇತ್ಯಾದಿ ಕುರಿತು ಅಭಿಮಾನಿಗಳೊಂದಿಗೆ ಇದೇ 13ರಂದು ಚರ್ಚಿಸಿ ನಿರ್ಧರಿಸುತ್ತೇನೆ” ಎಂಬ ಮಾಹಿತಿ ನೀಡಿದ್ದಾರೆ.

“ಈಗ ಅಭ್ಯರ್ಥಿ ಆಯ್ಕೆ ನಿಟ್ಟಿನಲ್ಲಿ ಮಾನದಂಡದ ಅವಲೋಕನ ಶುರುವಾಗುವುದೇ ಮೊದಲು ಜಾತಿ, ನಂತರ ಹಣಬಲದಿಂದ. ಆದರೆ, ನನಗೆ ಜಾತಿ, ಹಣ ಬಲ ಎರಡೂ ಇಲ್ಲ. ಇರುವುದು ಜನರ ಪ್ರೀತಿ ಮಾತ್ರ. ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ, ಅದನ್ನು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದು ಪ್ರಸ್ತುತ ರಾಜಕಾರಣದ ರೀತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಕೈತಪ್ಪಿದ ಬಳಿಕ ಅಭಿಮಾನಿಗಳಿಗೆ ಪತ್ರ ಬರೆದಿದ್ದ ದತ್ತ ಅವರು, “ನೀವು ನನಗೆ ಪ್ರೀತಿಯನ್ನು ಧಾರೆ ಎರೆದಿದ್ದೀರಿ, ಹಣವಿಲ್ಲದ, ಜಾತಿ ಇಲ್ಲದ ನನ್ನನ್ನು ‘ದತ್ತಣ್ಣ ನಮ್ಮ ದತ್ತಣ್ಣ’ ಎಮದು ಅಭಿಮಾನದಿಂದ ತಬ್ಬಿಕೊಂಡು ಬೆಳೆಸಿದ್ದೀರಿ. ಈಗ ಬಂದಿರುವ ವಿಶೇಷ ರಾಜಕೀಯ ಪರಿಸ್ಥಿತಿಯಲ್ಲಿ ‘ನಿಮ್ಮ ಜೊತೆಗೇ ನಾನಿರಬೇಕು, ನನ್ನ ಜೊತೆಗೇ ನೀವಿರಬೇಕು’ ಎಂಬುದು ಅನಿವಾರ್ಯವಾಗಿದೆ” ಎಂದು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದರು.

“ಈ ಕಾರಣದಿಂದ ಇದು ನನ್ನ ಮತ್ತು ನಿಮ್ಮೆಲ್ಲರ ಆತ್ಮಗೌರವಕ್ಕೆ, ಸ್ವಾಭಿಮಾನಕ್ಕೆ ಆದ ಅವಮಾನವಾಗಿದೆ. ಈ ಕ್ಷೇತ್ರದ ಮತದಾರರ ಸ್ವಾಭಿಮಾನಕ್ಕಾಗಿ, ನಾನು ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಕಡೂರು ಪಟ್ಟಣದಲ್ಲಿ 9ರಂದು ಬೆಳಿಗ್ಗೆ 11ಕ್ಕೆ ನನ್ನ ಅಭಿಮಾನಿಗಳ ಸಭೆ ಕರೆದಿದ್ದೇನೆ. ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹರಸಿ ಆಶೀರ್ವದಿಸಬೇಕು” ಎಂದು ಪತ್ರದಲ್ಲಿ ತಿಳಿಸಿದ್ದರು.

ಇದನ್ನೂ ಓದಿರಿ: ನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

ಹೆಚ್ಚಿನ ಸಂಖ್ಯೆಯಲ್ಲಿ ವೈಎಸ್‌ವಿ ದತ್ತ ಅವರ ಅಭಿಮಾನಿಗಳು ಸಭೆಯಲ್ಲಿ ಹಾಜರಿದ್ದರು. ಅದಕ್ಕೂ ಮುಂಚಿತವಾಗಿ ದತ್ತ ಅವರಿಗೆ ಬೆಂಬಲ ಸೂಚಿಸಿ, ಮೆರವಣಿಗೆ ನಡೆಸಿದ್ದರು.

ಜೆಡಿಎಸ್ ತೊರೆದ ವೈಎಸ್‌ವಿ ದತ್ತಾಗೆ ಮರಳಿ ಜೆಡಿಎಸ್ ಕಡೆ ಸೆಳೆದುಕೊಳ್ಳಲು ಮಾಜಿ‌ ಸಚಿವ ಎಚ್‌ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರು ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಟಿಕೆಟ್ ಭರವಸೆ ನೀಡಿಯೇ ದತ್ತಾ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಆದರೆ, ಕೊನೆಯ ಗಳಿಗೆಯಲ್ಲಿ ಟಿಕೆಟ್ ತಪ್ಪಿಸಲಾಗಿದೆ. ಟಿಕೆಟ್ ‌ನೀಡದೆ ಇರಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆಗಿನ ಮುನಿಸು ಕಾರಣ ಎಂಬ ಮಾತೂ ಕೇಳಿಬರುತ್ತಿದೆ.

ದತ್ತಾ ಅವರಿಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಸಿದ್ದರಾಮಯ್ಯ ಸಲಹೆಯಂತೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಬಂದಿದ್ದರು. ಕಡೂರು ಕ್ಷೇತ್ರಕ್ಕೆ ಸಹಜವಾಗಿ ಅವರು ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಆನಂದ್ ಕೆ.ಎಸ್ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...