Homeಕರ್ನಾಟಕ‘ಸ್ವಾಭಿಮಾನಕ್ಕೆ ಕಾಂಗ್ರೆಸ್ ಪೆಟ್ಟು ನೀಡಿದೆ’: ಪಕ್ಷೇತರವಾಗಿ ಸ್ಪರ್ಧಿಸಲು ವೈಎಸ್‌ವಿ ದತ್ತ ನಿರ್ಧಾರ

‘ಸ್ವಾಭಿಮಾನಕ್ಕೆ ಕಾಂಗ್ರೆಸ್ ಪೆಟ್ಟು ನೀಡಿದೆ’: ಪಕ್ಷೇತರವಾಗಿ ಸ್ಪರ್ಧಿಸಲು ವೈಎಸ್‌ವಿ ದತ್ತ ನಿರ್ಧಾರ

- Advertisement -
- Advertisement -

ಇತ್ತೀಚೆಗೆ ಕಾಂಗ್ರೆಸ್ ಸೇರಿ, ಟಿಕೆಟ್‌ ಸಿಗದೆ ಬೇಸರಗೊಂಡಿರುವ ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

“ಕಾಂಗ್ರೆಸ್‌ ಟಿಕೆಟ್‌ ನೀಡದೆ ಸ್ವಾಭಿಮಾನಕ್ಕೆ ಪೆಟ್ಟು ನೀಡಿದೆ, ಈ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ. ಕಡೂರು ಕ್ಷೇತ್ರದ ಸ್ವಾಭಿಮಾನವನ್ನು ರಾಜ್ಯಕ್ಕೆ ತೋರಿಸುವ ಛಲ ತೊಟ್ಟಿದ್ದೇನೆ” ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ತಿಳಿಸಿದ್ದಾರೆ.

ಕಡೂರು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ಭಾನುವಾರ ನಡೆದ ಅಭಿಮಾನಿಗಳ ಸಭೆಯಲ್ಲಿ ಮಾತನಾಡಿದ ಅವರು, “ಈ ಬಾರಿ ಕ್ಷೇತ್ರದಲ್ಲಿ ವಿಶೇಷ ಪರಿಸ್ಥಿತಿ ತಲೆದೋರಿತ್ತು. ಐತಿಹಾಸಿಕ ಬದಲಾವಣೆಗೆ ಕ್ಷೇತ್ರ ಸನ್ನದ್ಧವಾಗಿದೆ ಎಂಬುದಕ್ಕೆ ಪೂರಕವಾಗಿ 50 ವರ್ಷಗಳ ಜೆಡಿಎಸ್‌ ನಂಟು ಬಿಟ್ಟು ಕಾಂಗ್ರೆಸ್‌ ಸೇರಿದೆ. ಟಿಕೆಟ್‌ ಸಿಗುತ್ತದೆ ಎಂಬ ವಿಶ್ವಾಸವನ್ನು ಪಕ್ಷ ಹುಸಿ ಮಾಡಿದೆ. ಅದನ್ನು, ನನ್ನ ಅಭಿಮಾನಿಗಳು ಮತ್ತು ಪ್ರೀತಿಸುವ ಸಮುದಾಯಗಳು ಸ್ವಾಭಿಮಾನಕ್ಕೆ ಬಿದ್ದ ಪೆಟ್ಟು ಎಂದೇ ಭಾವಿಸಿವೆ. ಆ ಸ್ವಾಭಿಮಾನ ಉಳಿಸಿಕೊಳ್ಳಲು ಪಕ್ಷೇತರವಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದಾರೆ..

“ಪ್ರೀತಿಯಿಂದಲೇ ಜನರ ಬಳಿ ತೆರಳಿ ಹಣ ಸಹಾಯದ ಜೊತೆ ಮತ ಭಿಕ್ಷೆ ಬೇಡುತ್ತೇನೆ‌. ಸ್ವಾಭಿಮಾನ ಎಂದರೆ ಏನು ಎಂಬುದನ್ನ ನನ್ನ ಅಭಿಮಾನಿಗಳು ಇಡೀ ರಾಜ್ಯಕ್ಕೆ ತೋರಿಸುತ್ತಾರೆ. ನಾಮಪತ್ರ ಸಲ್ಲಿಕೆ ಇತ್ಯಾದಿ ಕುರಿತು ಅಭಿಮಾನಿಗಳೊಂದಿಗೆ ಇದೇ 13ರಂದು ಚರ್ಚಿಸಿ ನಿರ್ಧರಿಸುತ್ತೇನೆ” ಎಂಬ ಮಾಹಿತಿ ನೀಡಿದ್ದಾರೆ.

“ಈಗ ಅಭ್ಯರ್ಥಿ ಆಯ್ಕೆ ನಿಟ್ಟಿನಲ್ಲಿ ಮಾನದಂಡದ ಅವಲೋಕನ ಶುರುವಾಗುವುದೇ ಮೊದಲು ಜಾತಿ, ನಂತರ ಹಣಬಲದಿಂದ. ಆದರೆ, ನನಗೆ ಜಾತಿ, ಹಣ ಬಲ ಎರಡೂ ಇಲ್ಲ. ಇರುವುದು ಜನರ ಪ್ರೀತಿ ಮಾತ್ರ. ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ, ಅದನ್ನು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದು ಪ್ರಸ್ತುತ ರಾಜಕಾರಣದ ರೀತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಕೈತಪ್ಪಿದ ಬಳಿಕ ಅಭಿಮಾನಿಗಳಿಗೆ ಪತ್ರ ಬರೆದಿದ್ದ ದತ್ತ ಅವರು, “ನೀವು ನನಗೆ ಪ್ರೀತಿಯನ್ನು ಧಾರೆ ಎರೆದಿದ್ದೀರಿ, ಹಣವಿಲ್ಲದ, ಜಾತಿ ಇಲ್ಲದ ನನ್ನನ್ನು ‘ದತ್ತಣ್ಣ ನಮ್ಮ ದತ್ತಣ್ಣ’ ಎಮದು ಅಭಿಮಾನದಿಂದ ತಬ್ಬಿಕೊಂಡು ಬೆಳೆಸಿದ್ದೀರಿ. ಈಗ ಬಂದಿರುವ ವಿಶೇಷ ರಾಜಕೀಯ ಪರಿಸ್ಥಿತಿಯಲ್ಲಿ ‘ನಿಮ್ಮ ಜೊತೆಗೇ ನಾನಿರಬೇಕು, ನನ್ನ ಜೊತೆಗೇ ನೀವಿರಬೇಕು’ ಎಂಬುದು ಅನಿವಾರ್ಯವಾಗಿದೆ” ಎಂದು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದರು.

“ಈ ಕಾರಣದಿಂದ ಇದು ನನ್ನ ಮತ್ತು ನಿಮ್ಮೆಲ್ಲರ ಆತ್ಮಗೌರವಕ್ಕೆ, ಸ್ವಾಭಿಮಾನಕ್ಕೆ ಆದ ಅವಮಾನವಾಗಿದೆ. ಈ ಕ್ಷೇತ್ರದ ಮತದಾರರ ಸ್ವಾಭಿಮಾನಕ್ಕಾಗಿ, ನಾನು ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಕಡೂರು ಪಟ್ಟಣದಲ್ಲಿ 9ರಂದು ಬೆಳಿಗ್ಗೆ 11ಕ್ಕೆ ನನ್ನ ಅಭಿಮಾನಿಗಳ ಸಭೆ ಕರೆದಿದ್ದೇನೆ. ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹರಸಿ ಆಶೀರ್ವದಿಸಬೇಕು” ಎಂದು ಪತ್ರದಲ್ಲಿ ತಿಳಿಸಿದ್ದರು.

ಇದನ್ನೂ ಓದಿರಿ: ನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

ಹೆಚ್ಚಿನ ಸಂಖ್ಯೆಯಲ್ಲಿ ವೈಎಸ್‌ವಿ ದತ್ತ ಅವರ ಅಭಿಮಾನಿಗಳು ಸಭೆಯಲ್ಲಿ ಹಾಜರಿದ್ದರು. ಅದಕ್ಕೂ ಮುಂಚಿತವಾಗಿ ದತ್ತ ಅವರಿಗೆ ಬೆಂಬಲ ಸೂಚಿಸಿ, ಮೆರವಣಿಗೆ ನಡೆಸಿದ್ದರು.

ಜೆಡಿಎಸ್ ತೊರೆದ ವೈಎಸ್‌ವಿ ದತ್ತಾಗೆ ಮರಳಿ ಜೆಡಿಎಸ್ ಕಡೆ ಸೆಳೆದುಕೊಳ್ಳಲು ಮಾಜಿ‌ ಸಚಿವ ಎಚ್‌ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರು ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಟಿಕೆಟ್ ಭರವಸೆ ನೀಡಿಯೇ ದತ್ತಾ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಆದರೆ, ಕೊನೆಯ ಗಳಿಗೆಯಲ್ಲಿ ಟಿಕೆಟ್ ತಪ್ಪಿಸಲಾಗಿದೆ. ಟಿಕೆಟ್ ‌ನೀಡದೆ ಇರಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆಗಿನ ಮುನಿಸು ಕಾರಣ ಎಂಬ ಮಾತೂ ಕೇಳಿಬರುತ್ತಿದೆ.

ದತ್ತಾ ಅವರಿಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಸಿದ್ದರಾಮಯ್ಯ ಸಲಹೆಯಂತೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಬಂದಿದ್ದರು. ಕಡೂರು ಕ್ಷೇತ್ರಕ್ಕೆ ಸಹಜವಾಗಿ ಅವರು ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಆನಂದ್ ಕೆ.ಎಸ್ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...