Homeಕರ್ನಾಟಕ‘ಸ್ವಾಭಿಮಾನಕ್ಕೆ ಕಾಂಗ್ರೆಸ್ ಪೆಟ್ಟು ನೀಡಿದೆ’: ಪಕ್ಷೇತರವಾಗಿ ಸ್ಪರ್ಧಿಸಲು ವೈಎಸ್‌ವಿ ದತ್ತ ನಿರ್ಧಾರ

‘ಸ್ವಾಭಿಮಾನಕ್ಕೆ ಕಾಂಗ್ರೆಸ್ ಪೆಟ್ಟು ನೀಡಿದೆ’: ಪಕ್ಷೇತರವಾಗಿ ಸ್ಪರ್ಧಿಸಲು ವೈಎಸ್‌ವಿ ದತ್ತ ನಿರ್ಧಾರ

- Advertisement -
- Advertisement -

ಇತ್ತೀಚೆಗೆ ಕಾಂಗ್ರೆಸ್ ಸೇರಿ, ಟಿಕೆಟ್‌ ಸಿಗದೆ ಬೇಸರಗೊಂಡಿರುವ ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

“ಕಾಂಗ್ರೆಸ್‌ ಟಿಕೆಟ್‌ ನೀಡದೆ ಸ್ವಾಭಿಮಾನಕ್ಕೆ ಪೆಟ್ಟು ನೀಡಿದೆ, ಈ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ. ಕಡೂರು ಕ್ಷೇತ್ರದ ಸ್ವಾಭಿಮಾನವನ್ನು ರಾಜ್ಯಕ್ಕೆ ತೋರಿಸುವ ಛಲ ತೊಟ್ಟಿದ್ದೇನೆ” ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ತಿಳಿಸಿದ್ದಾರೆ.

ಕಡೂರು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ಭಾನುವಾರ ನಡೆದ ಅಭಿಮಾನಿಗಳ ಸಭೆಯಲ್ಲಿ ಮಾತನಾಡಿದ ಅವರು, “ಈ ಬಾರಿ ಕ್ಷೇತ್ರದಲ್ಲಿ ವಿಶೇಷ ಪರಿಸ್ಥಿತಿ ತಲೆದೋರಿತ್ತು. ಐತಿಹಾಸಿಕ ಬದಲಾವಣೆಗೆ ಕ್ಷೇತ್ರ ಸನ್ನದ್ಧವಾಗಿದೆ ಎಂಬುದಕ್ಕೆ ಪೂರಕವಾಗಿ 50 ವರ್ಷಗಳ ಜೆಡಿಎಸ್‌ ನಂಟು ಬಿಟ್ಟು ಕಾಂಗ್ರೆಸ್‌ ಸೇರಿದೆ. ಟಿಕೆಟ್‌ ಸಿಗುತ್ತದೆ ಎಂಬ ವಿಶ್ವಾಸವನ್ನು ಪಕ್ಷ ಹುಸಿ ಮಾಡಿದೆ. ಅದನ್ನು, ನನ್ನ ಅಭಿಮಾನಿಗಳು ಮತ್ತು ಪ್ರೀತಿಸುವ ಸಮುದಾಯಗಳು ಸ್ವಾಭಿಮಾನಕ್ಕೆ ಬಿದ್ದ ಪೆಟ್ಟು ಎಂದೇ ಭಾವಿಸಿವೆ. ಆ ಸ್ವಾಭಿಮಾನ ಉಳಿಸಿಕೊಳ್ಳಲು ಪಕ್ಷೇತರವಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದಾರೆ..

“ಪ್ರೀತಿಯಿಂದಲೇ ಜನರ ಬಳಿ ತೆರಳಿ ಹಣ ಸಹಾಯದ ಜೊತೆ ಮತ ಭಿಕ್ಷೆ ಬೇಡುತ್ತೇನೆ‌. ಸ್ವಾಭಿಮಾನ ಎಂದರೆ ಏನು ಎಂಬುದನ್ನ ನನ್ನ ಅಭಿಮಾನಿಗಳು ಇಡೀ ರಾಜ್ಯಕ್ಕೆ ತೋರಿಸುತ್ತಾರೆ. ನಾಮಪತ್ರ ಸಲ್ಲಿಕೆ ಇತ್ಯಾದಿ ಕುರಿತು ಅಭಿಮಾನಿಗಳೊಂದಿಗೆ ಇದೇ 13ರಂದು ಚರ್ಚಿಸಿ ನಿರ್ಧರಿಸುತ್ತೇನೆ” ಎಂಬ ಮಾಹಿತಿ ನೀಡಿದ್ದಾರೆ.

“ಈಗ ಅಭ್ಯರ್ಥಿ ಆಯ್ಕೆ ನಿಟ್ಟಿನಲ್ಲಿ ಮಾನದಂಡದ ಅವಲೋಕನ ಶುರುವಾಗುವುದೇ ಮೊದಲು ಜಾತಿ, ನಂತರ ಹಣಬಲದಿಂದ. ಆದರೆ, ನನಗೆ ಜಾತಿ, ಹಣ ಬಲ ಎರಡೂ ಇಲ್ಲ. ಇರುವುದು ಜನರ ಪ್ರೀತಿ ಮಾತ್ರ. ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ, ಅದನ್ನು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದು ಪ್ರಸ್ತುತ ರಾಜಕಾರಣದ ರೀತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಕೈತಪ್ಪಿದ ಬಳಿಕ ಅಭಿಮಾನಿಗಳಿಗೆ ಪತ್ರ ಬರೆದಿದ್ದ ದತ್ತ ಅವರು, “ನೀವು ನನಗೆ ಪ್ರೀತಿಯನ್ನು ಧಾರೆ ಎರೆದಿದ್ದೀರಿ, ಹಣವಿಲ್ಲದ, ಜಾತಿ ಇಲ್ಲದ ನನ್ನನ್ನು ‘ದತ್ತಣ್ಣ ನಮ್ಮ ದತ್ತಣ್ಣ’ ಎಮದು ಅಭಿಮಾನದಿಂದ ತಬ್ಬಿಕೊಂಡು ಬೆಳೆಸಿದ್ದೀರಿ. ಈಗ ಬಂದಿರುವ ವಿಶೇಷ ರಾಜಕೀಯ ಪರಿಸ್ಥಿತಿಯಲ್ಲಿ ‘ನಿಮ್ಮ ಜೊತೆಗೇ ನಾನಿರಬೇಕು, ನನ್ನ ಜೊತೆಗೇ ನೀವಿರಬೇಕು’ ಎಂಬುದು ಅನಿವಾರ್ಯವಾಗಿದೆ” ಎಂದು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದರು.

“ಈ ಕಾರಣದಿಂದ ಇದು ನನ್ನ ಮತ್ತು ನಿಮ್ಮೆಲ್ಲರ ಆತ್ಮಗೌರವಕ್ಕೆ, ಸ್ವಾಭಿಮಾನಕ್ಕೆ ಆದ ಅವಮಾನವಾಗಿದೆ. ಈ ಕ್ಷೇತ್ರದ ಮತದಾರರ ಸ್ವಾಭಿಮಾನಕ್ಕಾಗಿ, ನಾನು ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಕಡೂರು ಪಟ್ಟಣದಲ್ಲಿ 9ರಂದು ಬೆಳಿಗ್ಗೆ 11ಕ್ಕೆ ನನ್ನ ಅಭಿಮಾನಿಗಳ ಸಭೆ ಕರೆದಿದ್ದೇನೆ. ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹರಸಿ ಆಶೀರ್ವದಿಸಬೇಕು” ಎಂದು ಪತ್ರದಲ್ಲಿ ತಿಳಿಸಿದ್ದರು.

ಇದನ್ನೂ ಓದಿರಿ: ನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

ಹೆಚ್ಚಿನ ಸಂಖ್ಯೆಯಲ್ಲಿ ವೈಎಸ್‌ವಿ ದತ್ತ ಅವರ ಅಭಿಮಾನಿಗಳು ಸಭೆಯಲ್ಲಿ ಹಾಜರಿದ್ದರು. ಅದಕ್ಕೂ ಮುಂಚಿತವಾಗಿ ದತ್ತ ಅವರಿಗೆ ಬೆಂಬಲ ಸೂಚಿಸಿ, ಮೆರವಣಿಗೆ ನಡೆಸಿದ್ದರು.

ಜೆಡಿಎಸ್ ತೊರೆದ ವೈಎಸ್‌ವಿ ದತ್ತಾಗೆ ಮರಳಿ ಜೆಡಿಎಸ್ ಕಡೆ ಸೆಳೆದುಕೊಳ್ಳಲು ಮಾಜಿ‌ ಸಚಿವ ಎಚ್‌ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರು ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಟಿಕೆಟ್ ಭರವಸೆ ನೀಡಿಯೇ ದತ್ತಾ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಆದರೆ, ಕೊನೆಯ ಗಳಿಗೆಯಲ್ಲಿ ಟಿಕೆಟ್ ತಪ್ಪಿಸಲಾಗಿದೆ. ಟಿಕೆಟ್ ‌ನೀಡದೆ ಇರಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆಗಿನ ಮುನಿಸು ಕಾರಣ ಎಂಬ ಮಾತೂ ಕೇಳಿಬರುತ್ತಿದೆ.

ದತ್ತಾ ಅವರಿಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಸಿದ್ದರಾಮಯ್ಯ ಸಲಹೆಯಂತೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಬಂದಿದ್ದರು. ಕಡೂರು ಕ್ಷೇತ್ರಕ್ಕೆ ಸಹಜವಾಗಿ ಅವರು ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಆನಂದ್ ಕೆ.ಎಸ್ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...