Homeಅಂಕಣಗಳುಪುಟಕ್ಕಿಟ್ಟ ಪುಟಗಳುಚರಿತ್ರೆಯಿಂದ ವರ್ತಮಾನ ಕಲಿಯಬೇಕಾದ ಪಾಠ ಹೇಳುವ ಯುದ್ಧ ಮತ್ತು ಒಪ್ಪಂದ ಪುಸ್ತಕ

ಚರಿತ್ರೆಯಿಂದ ವರ್ತಮಾನ ಕಲಿಯಬೇಕಾದ ಪಾಠ ಹೇಳುವ ಯುದ್ಧ ಮತ್ತು ಒಪ್ಪಂದ ಪುಸ್ತಕ

ಯುದ್ಧ ಮತ್ತು ದೇಶಭಕ್ತಿಯ ರೋಚಕತೆಯನ್ನು ಸೃಷ್ಟಿಸುವಂತಹ ಸ್ವಾರ್ಥ ಪ್ರಭುತ್ವಗಳಿಗೆ ಇರುತ್ತದೆ. ಆದರೆ ಯುದ್ಧಗಳನ್ನು ವೈಭವೀಕರಿಸುವ ಹಾಗೂ ಅದಕ್ಕೆ ನಾನಾ ಕಾರಣಗಳನ್ನು ಹುಡುಕುವುದರಲ್ಲೇ ಮಗ್ನರಾಗಿರುವ ಚರಿತ್ರೆಕಾರರಿಗೆ ಯುದ್ಧದ ಸಾಮಾಜಿಕ ಹಾಗೂ ಆರ್ಥಿಕ ಆಯಾಮಗಳು ಆದ್ಯತೆಯ ವಿಚಾರವಾಗಿ ಕಂಡುಬರುವುದಿಲ್ಲ.

- Advertisement -
- Advertisement -

ಹದಿನೇಳು ಮತ್ತು ಹದಿನೆಂಟನೇ ಶತಮಾನದ ದಕ್ಷಿಣ ಭಾರತದ ರಾಜಕಾರಣ, ಆರ್ಥಿಕತೆ, ಸಾಮ್ರಾಜ್ಯ ವಿಸ್ತರಣೆಯ ದಾಹ, ವಾಣಿಜ್ಯ ನೀತಿ, ಸಂಘರ್ಷ, ಸಂಧಾನ, ಸಮಾಧಾನ, ದೇಶೀಯ ಮತ್ತು ವಿದೇಶೀಯರ ಉದ್ದೇಶ ಮತ್ತು ಧೋರಣೆಗಳು, ತಂತ್ರ ಮತ್ತು ಪ್ರತಿತಂತ್ರ ಎಲ್ಲವನ್ನೂ ಒಳಗೊಂಡಿರುವ ಕೃತಿಯಿದು. ಯುದ್ಧ ಮತ್ತು ಒಪ್ಪಂದಗಳು ಪ್ರದೇಶದ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಚಿತ್ರಣವನ್ನು ಬದಲು  ಮಾಡುವುದರಿಂದ ವ್ಯವಸ್ಥೆಯ ಬಲಿಪಶುಗಳಾಗುವರು ಜನರು. ಈ ಕೃತಿಯ ಅಧ್ಯಯನದ ಮಹತ್ವವೇ ಚರಿತ್ರೆಯಲ್ಲಿ ಮಾಡಿರುವ ತಪ್ಪುಗಳನ್ನು ವರ್ತಮಾನದಲ್ಲಿ ಮಾಡದಿರಲು ಎಚ್ಚೆತ್ತುಕೊಳ್ಳುವುದು. ಆದರೆ ಇದನ್ನು ತಿಳಿಯಬೇಕಾದವರು ಯಾರು? ಬಲಿಪಶುಗಳಾಗುವ ಸಾಮಾನ್ಯರು ಮಾತ್ರವಲ್ಲ, ಆಡಳಿತ ಚುಕ್ಕಾಣಿ ಹಿಡಿದಿರುವವರು. ಹಿಂದಿನದನ್ನು ಅವಲೋಕಿಸಿ ಮುಂದೆ ಎಚ್ಚರಿಕೆಯಿಂದ ಹೆಜ್ಜೆ ಇಡುವಂತಹ ದೂರದೃಷ್ಟಿಯನ್ನು ಹೊಂದಲು ಸಹಾಯವಾಗುವ ಒಳನೋಟಗಳನ್ನು ಕೊಡುವ ಡಾ. ಕೆ ಮೋಹನ್ ಕೃಷ್ಣ ರೈರವರ ಕೃತಿ ಇದಾಗಿದೆ.

ನಮ್ಮ ಸಾಮಾನ್ಯ ಪ್ರಜೆಗಳಿಂದ ಹಿಡಿದು ವ್ಯವಸ್ಥೆಯನ್ನು ರೂಪಿಸುವವರ ತನಕ ಇರುವ ಬಹುದೊಡ್ಡ ಸಾಮಾನ್ಯ ಸಮಸ್ಯೆ ಎಂದರೆ ಯಾವುದಕ್ಕೆ ಆದ್ಯತೆಯನ್ನು ನೀಡುವುದು ಎಂದು ತಿಳಿಯದಿರುವುದು. ಈಗಲೂ ಮತ್ತು ಆಗಲೂ ಸ್ಥೂಲವಾಗಿ ರಾಜಕೀಯ ಸಂಘರ್ಷಗಳಾಗಿ ಕಾಣುವ ವಿದ್ಯಮಾನಗಳು ಸಾಮಾಜಿಕ ನಿಯಂತ್ರಣವನ್ನು ಹೊಂದುತ್ತಿರುತ್ತವೆ ಮತ್ತು ಆರ್ಥಿಕತೆಯು ಸ್ವಾರ್ಥದಿಂದ ತಮ್ಮ ವಲಯಕ್ಕೆ ಸೀಮಿತಗೊಳ್ಳುತ್ತಿರುತ್ತವೆ. ಆಗ ಈಸ್ಟ್ ಇಂಡಿಯಾ ಕಂಪನಿಗಳು ಸ್ಥಳೀಯ ಅರಸರನ್ನು ಎತ್ತಿಕಟ್ಟುತ್ತಾ, ಅವರ ನಡುವೆ ಯುದ್ಧಗಳನ್ನು ಹುಟ್ಟು ಹಾಕುತ್ತಿದ್ದವು. ಹಾಗೆ ಮಾಡುವಾಗ ಸ್ಥಳೀಯ ಅರಸರಿಗೆ ಅವರ ಮರ್ಕಂಟೈಲ್ ಮತ್ತು ಇಂಪೀರಿಯಲ್ ದೃಷ್ಟಿಯನ್ನು ಅರ್ಥೈಸಿಕೊಳ್ಳಲಾಗದೇ ಪ್ರಾದೇಶಿಕ ವಾಣಿಜ್ಯ ನೀತಿಗಳನ್ನು, ಆರ್ಥಿಕ ನಿಯಂತ್ರಣಗಳನ್ನು ಅವರ ಕೈವಶವಾಗಲು ಅನುವು ಮಾಡಿಕೊಟ್ಟು, ತಮ್ಮ ತಲೆದಂಡದಿಂದ ಅವರಿಗೆ ಲಾಭವನ್ನು ಮಾಡಿಕೊಡುತ್ತಿದ್ದರು. ಇದನ್ನು ಅರ್ಥಮಾಡಿಕೊಂಡ ಕೆಲವರಾದರೂ ಇದ್ದ ಪ್ರಾದೇಶಿಕ ಅರಸರಿಗೆ ಇತರರ ಒಣಪ್ರತಿಷ್ಟೆ ಮತ್ತು ಅಸೂಯೆಗಳು ಸಹಕರಿಸಲಿಲ್ಲ. ಅದೇ ಈಸ್ಟ್ ಇಂಡಿಯಾ ಕಂಪನಿಯ ಗೆಲುವಿಗೆ ಮುಖ್ಯ ಕಾರಣಗಳಲ್ಲಿ ಒಂದು ಎಂದು ಪುಸ್ತಕದ ಮೊದಮೊದಲ ಸಾಲುಗಳಲ್ಲೇ ಇದೆ. ಈಗ ಅಂತಹುದೇ ಪರಿಸ್ಥಿತಿ ವರ್ತಮಾನದಲ್ಲಿಯೂ ಇದೆ. ಈಗ ಈಸ್ಟ್ ಇಂಡಿಯಾ ಕಂಪನಿಯ ಕೆಲಸ ಮಾಡುತ್ತಿರುವುದು ಇಂಗ್ಲಿಷರಲ್ಲ. ಜನರಿಂದ ಚುನಾಯಿತರಾಗಿರುವ ಭಾರತೀಯ ಸರ್ಕಾರವೇ. ಆಗ ಪ್ರಾದೇಶಿಕ ರಾಜರುಗಳಲ್ಲಿ ಇದ್ದ ಅಸಹನೆ, ಹುಸಿಪ್ರತಿಷ್ಠೆ ವಿವೇಚನಾಶೂನ್ಯ ಸಂಘರ್ಷಗಳನ್ನು ವಿವಿಧ ರಾಜಕೀಯ ಪಕ್ಷಗಳಲ್ಲಿ ಕಾಣುತ್ತಿದ್ದೇವೆ. ಚರಿತ್ರೆ ಮರುಕಳಿಸುತ್ತಿದೆ.

ಡಾ. ರೈ ಹೇಳುವಂತೆ, ‘ಪೋರ್ಚುಗೀಸರ ಆಗಮನವಾದ ಬಳಿಕ ಯುರೋಪಿನ ವ್ಯಾಪಾರಿ ಕಂಪನಿಗಳು ಭಾರತದಲ್ಲಿ ಯುದ್ಧಗಳ ಯುಗವನ್ನೇ ಹುಟ್ಟುಹಾಕಿದವು. 17 ಮತ್ತು 18ನೆಯ ಶತಮಾನಗಳ ದಕ್ಷಿಣ ಭಾರತದ ರಾಜಕಾರಣದಲ್ಲಿ ಪೋರ್ಚುಗೀಸರು, ಬ್ರಿಟಿಷರು, ಡಚ್ಚರು ಮತ್ತು ಫ್ರೆಂಚರು ವಿದೇಶಿ ವ್ಯಾಪಾರಿಶಕ್ತಿಗಳಾಗಿ ಒಂದು ಕಡೆಗಾದರೆ, ಮೊಗಲರು, ಮರಾಠರು, ಹೈದರಾಬಾದಿನ ನಿಜಾಮರು, ಆರ್ಕಾಟಿನ ನವಾಬರು, ಮೈಸೂರಿನ ಹೈದರ್ ಅಲಿ ಮತ್ತು ಟಿಪ್ಪು, ತಿರುವಾಂಕೂರಿನ ಅರಸರು, ಮಲಬಾರಿನ ನಾಯಕರು ಮುಂತಾದ ಸ್ಥಳೀಯ ರಾಜಕೀಯ ಶಕ್ತಿಗಳು ಯುದ್ಧ ಹಾಗೂ ಒಪ್ಪಂದದಲ್ಲಿ ನಿರತವಾಗಿದ್ದವು. ಇದರ ಪರಿಣಾಮವೇ ಕರ್ನಾಟಿಕ್ ಯುದ್ಧಗಳು, ಆಂಗ್ಲೋ-ಮೈಸೂರು ಯುದ್ಧಗಳು, ಆಂಗ್ಲೋ-ಮರಾಠರ ಯುದ್ಧಗಳು, ಮೈಸೂರು-ಮರಾಠರ ಯುದ್ಧಗಳು. ಈ ಎಲ್ಲ ಯುದ್ಧಗಳ ಸಂದರ್ಭದಲ್ಲಿ ಯೂರೋಪಿನ ವ್ಯಾಪಾರಿಶಕ್ತಿಗಳು ತಮ್ಮ ಪಾಲ್ಗೊಳ್ಳುವಿಕೆಯನ್ನು ಅನಿವಾರ್ಯವನ್ನಾಗಿಸಿದವು.’

ಸ್ಥಳೀಯ ಅರಸುಮನೆತನಗಳು ವಿದೇಶಿಯರನ್ನು ಓಲೈಸಬೇಕಾದ ಒತ್ತಡ ಹೇಗೆ ಸೃಷ್ಟಿಗೊಂಡಿತು? ಪ್ರಾದೇಶಿಕತೆಯಲ್ಲಿ ಬಿಕ್ಕಟ್ಟುಗಳು ಮೂಡಿದ ಬಗೆ ಹೇಗೆ? ಶತ್ರುವಿನ ಶತ್ರು ಮಿತ್ರನಾಗುವುದು ಹೇಗೆ? ಒಪ್ಪಂದಗಳ ಭೌತಿಕ ಮತು ತಾತ್ವಿಕ ಸ್ವರೂಪಗಳೇನು? ಇವೆಲ್ಲವನ್ನೂ ವಿವರಿಸುವ ಜೊತೆಗೆ ಪ್ರಸ್ತುತ ರಾಜಕೀಯ ಮತ್ತು ಆರ್ಥಿಕತೆ ಪರಿಸ್ಥಿತಿಗಳನ್ನು ಈ ಹಿನ್ನೆಲೆಯಲ್ಲಿ ಅವಲೋಕಿಸುವ ಎಚ್ಚರಿಕೆಯ ಕರೆಗಂಟೆ ಈ ಕೃತಿಯಾಗುತ್ತದೆ.

18ನೆಯ ಶತಮಾನದ ದ್ವಿತೀಯಾರ್ಧ ಬ್ರಿಟಿಷರ ಪಾಲಿಗೆ ಮುಳ್ಳಿನಹಾದಿಯನ್ನಾಗಿ ಮಾಡಿದ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನನ ಪ್ರತಿರೋಧಗಳನ್ನು ಮತ್ತು ನಡೆಗಳನ್ನು ಕೃತಿ ತೆರೆದಿಡುತ್ತದೆ. ಮೈಸೂರು ಬೆಂಗಳೂರು ಒಳಗೊಂಡಂತೆ ಈ ಎಲ್ಲಾ ಭಾಗಗಳಿಗೆ ಹೈದರ್ ಅಲಿ ಇಲ್ಲದೇಹೋಗಿದ್ದರೆ ಏನಾಗುತ್ತಿತ್ತೆಂದು ಕಲ್ಪಿಸಿಕೊಳ್ಳಲು ಯತ್ನಿಸುತ್ತೇನೆ. ಆಗ ಹೈದರ್ ಅಲಿಯ ದೃಢತೆ ಮತ್ತು ಎದೆಗಾರಿಕೆಯೇ ಮಗ್ಗುಲು ಮುಳ್ಳಾಗಿದ್ದ ಮರಾಠರನ್ನೂ ಮತ್ತು ಬ್ರಿಟಿಷರನ್ನೂ ಎದುರಿಸಲು ಸಮರ್ಥವಾಗಿದ್ದದ್ದು. ಪರದೇಶೀಯರಾಗಿದ್ದು, ಸಂಸ್ಕೃತಿ ಮತ್ತು ಉದ್ದೇಶಗಳಿಂದ ಪರಕೀಯರೇ ಆಗಿದ್ದ ಬ್ರಿಟಿಷರನ್ನು ಬಿಡಿ, ನಮ್ಮದೇ ನೆಲದ ಭಾಗವೆನ್ನುವ ಮರಾಠರ ಮತ್ತು ನಿಜಾಮರ ರಾಜಕಾರಣದ ಸ್ವರೂಪ ಆಗಿನ ಬಿಕ್ಕಟ್ಟಿನ ಕರಾಳ ಸ್ವರೂಪವನ್ನು ಅನಾವರಣ ಮಾಡುತ್ತದೆ.

ಅಸ್ತಿತ್ವವನ್ನು ಕಂಡುಕೊಳ್ಳುವುದಕ್ಕೆ ಹಾಗೂ ತಮ್ಮತನದ ಛಾಪನ್ನು ಮೂಡಿಸುವುದಕ್ಕೆ ಯುದ್ಧ ಘಟಿಸುವುದು ಒಂದು ವಿಧಾನವಾದರೆ, ಆಕ್ರಮಣಕಾರಿ ಪ್ರವೃತ್ತಿಗೆ ಹಾಗೂ ಸಮಾಜದ ನಾಶಕ್ಕೆ ಯುದ್ಧ ಘಟಿಸುವುದು ಇನ್ನೊಂದು ವಿಧಾನ ಎನ್ನುವ ಡಾ ರೈ ಅವರ ಮಾತನ್ನು ಗಮನಿಸಿದರೆ, ಸ್ಥಳೀಯ ಅರಸುಮನೆತನದವರ ನಡೆಗಳಲ್ಲಿ ಈ ಎರಡೂ ಬೆರೆತಂತಾಗಿರುತಿತ್ತು, ಕೆಲವೊಮ್ಮೆ ಎರಡನ್ನೂ ಮೀರಿದಂತಾಗಿರುತ್ತಿತ್ತು. ಒಟ್ಟಾರೆ ಅವರವರ ಪ್ರತಿಷ್ಠೆ ಮತ್ತು ಹಠಗಳಿಗೆ ಸಾಮಾಜಿಕ ವ್ಯವಸ್ಥೆಯನ್ನು ಹದಗೆಡಿಸುತ್ತಿದ್ದದ್ದು, ಜನತೆಯ ಬದುಕನ್ನು ಹಾಳುಗೆಡುವುತ್ತಿದ್ದದ್ದಂತೂ ಸ್ಪಷ್ಟ. ಸಿಂಹಾಸನಕ್ಕಾಗಿ ನಡೆಯುವ ಯುದ್ಧಗಳು ಯಾವತ್ತೂ ರಕ್ತಸಂಬಂಧಕ್ಕೇ ಬೆಲೆ ಕೊಡದಿರುವಾಗ ಯಾರದೋ ಪ್ರಜೆಗಳ ಬದುಕನ್ನು ಹೇಗೆ ಪರಿಗಣಿಸಿಯಾರು!

ಕೃತಿಯಲ್ಲಿ ವೀರಮರಣ ಎನ್ನುವ ಸ್ವಾಮಿನಿಷ್ಠೆಯ ಅಲೌಕಿಕ ಪ್ರಪಂಚವನ್ನು ಸೃಷ್ಟಿಸಿ ಒಡೆಯನಿಗೆ ತಾವೂ ಸಾಯುವಂತಹ ಮನಸ್ಥಿತಿಯ ಬಗ್ಗೆಯೂ ಉಲ್ಲೇಖಿಸುತ್ತಾ, ‘ಪ್ರಭುತ್ವ ತನ್ನ ಅಸ್ತಿತ್ವಕ್ಕೆ ಧಕ್ಕೆ ಬರುವ ಸಂದರ್ಭದಲ್ಲಿ ಮಾತ್ರ ಪ್ರಜೆಗಳೊಂದಿಗೆ ಉದಾರವಾಗಿ ನಡೆದುಕೊಳ್ಳುವ’ ಪರಿಯನ್ನು ವಿಶ್ಲೇಷಿಸುತ್ತದೆ. ಎಲೈಟ್ ಶಕ್ತಿಗಳ ಧೋರಣೆಗಳು ಮತ್ತು ಅಜೆಂಡಾಗಳು ಒಂದೇ ಸ್ವರೂಪದಾಗಿದ್ದು, ದುಷ್ಟರೆಂದು ಬೆರಳು ಮಾಡುವವರನ್ನು ಮತ್ತು ಶಾಂತಿ ರಕ್ಷಣೆ ಮಾಡುತ್ತೇವೆ ಎನ್ನುವವರನ್ನು ಕೂಡಾ ಅನಾವರಣಗೊಳಿಸುತ್ತದೆ.

ಯುದ್ಧ ಮತ್ತು ದೇಶಭಕ್ತಿಯ ರೋಚಕತೆಯನ್ನು ಸೃಷ್ಟಿಸುವಂತಹ ಸ್ವಾರ್ಥ ಪ್ರಭುತ್ವಗಳಿಗೆ ಇರುತ್ತದೆ. ಆದರೆ ಯುದ್ಧಗಳನ್ನು ವೈಭವೀಕರಿಸುವ ಹಾಗೂ ಅದಕ್ಕೆ ನಾನಾ ಕಾರಣಗಳನ್ನು ಹುಡುಕುವುದರಲ್ಲೇ ಮಗ್ನರಾಗಿರುವ ಚರಿತ್ರೆಕಾರರಿಗೆ ಯುದ್ಧದ ಸಾಮಾಜಿಕ ಹಾಗೂ ಆರ್ಥಿಕ ಆಯಾಮಗಳು ಆದ್ಯತೆಯ ವಿಚಾರವಾಗಿ ಕಂಡುಬರುವುದಿಲ್ಲ. ಹಾಗಾಗಿ ಚರಿತ್ರೆಗಳು ಜನರ ಬದುಕನ್ನು, ವ್ಯಥೆ, ಕಥೆಗಳನ್ನು ಮರೆಮಾಚಿ ಥ್ರಿಲ್ಲರ್ ಆಗಿ ಉಳಿದುಬಿಡುತ್ತವೆ. ಸಮಾಜದ ವ್ಯಾಪಕ ಬದುಕಿನ ಸ್ಥಿತಿಯನ್ನು ಬೆಳಕಿಗೆ ತರುವುದೇ ಇಲ್ಲ.

‘ಸೋತವರು ಭವಿಷ್ಯದಲ್ಲಿ ಎಂದಿಗೂ ಜಯಿಸಿದವರನ್ನು ಎದುರಿಸುವ ಸಾಮರ್ಥ್ಯವನ್ನು ಪಡೆದುಕೊಳ್ಳಬಾರದು’ ಎಂಬ ಧೋರಣೆಯ ಒಪ್ಪಂದಗಳಲ್ಲಿ ಮತ್ತದೇ ಬಲಿಪಶುಗಳು ಸಾಮಾನ್ಯ ಜನರು. ಹೈದರನ ಮಟ್ಟ ಹಾಕಲು ಮೈಸೂರನ್ನು ಮುತ್ತುವ ಮರಾಠರು ಕ್ರೂರಿ ಪಿಂಡಾರಿಗಳ ಪಡೆಗಳನ್ನು ಸಾಮಾನ್ಯ ಪ್ರಜೆಗಳ ನಡುವೆ ನುಗ್ಗಿಸಿ ಕೊಲೆ, ಲೂಟಿ, ದಾಂಧಲೆಗಳನ್ನು ಮಾಡಿ ಗೊಂದಲಗಳನ್ನೆಬ್ಬಿಸಿ ಇತ್ತ ಯುದ್ಧಗಳನ್ನು ಮಾಡಿದ್ದೇನೂ ಮಹಾಭಾರತ ಅಥವಾ ರಾಮಾಯಣಗಳಲ್ಲಿ ಹೇಳುವಂತಹ ಕ್ಷತ್ರಿಯ ಧರ್ಮವೇನಲ್ಲ, ಶಾಸ್ತ್ರಗಳಲ್ಲಿ ಹೇಳುವ ಯುದ್ಧನೀತಿಯೂ ಅಲ್ಲ. ಅವರದ್ಯಾರದ್ದೂ ಜನತೆ, ಧರ್ಮ, ನೆಲ ಮತ್ತು ಸಂಸ್ಕೃತಿಗಳ ರಕ್ಷಣೆಯಲ್ಲ. ಬರೀ ಸ್ವಾರ್ಥ ಮತ್ತು ಅಧಿಕಾರ ದಾಹ.

ಬ್ರಿಟೀಷರೊಂದಿಗೆ ಕೈ ಜೋಡಿಸಿದ ಯಾರನ್ನೇ ಆಗಲಿ ಕಠಿಣವಾಗಿ ದಮನ ಮಾಡಿದ ಟಿಪ್ಪುವಿನ ಧೋರಣೆಯನ್ನು ಇಂದು ಮತಾಂಧ ಎಂದು ದೂರುವ ಧರ್ಮನಿಷ್ಟರಿಗಾಗಲಿ, ಸಾರ್ವಜನಿಕ ವಲಯಗಳನ್ನು ಖಾಸಗೀಕರಣ ಮಾಡುತ್ತಿರುವ ಆಡಳಿತದ ಚುಕ್ಕಾಣಿ ಹಿಡಿದಿರುವ ಚಾಣಾಕ್ಷರಾಗಲಿ, ವಾಟ್ಸಪ್ ಯೂನಿವರ್ಸಿಟಿಗಳಲ್ಲಿ ಕಲಿತು ಪ್ರಖಾಂಡ ಪಂಡಿತರಾಗಿರುವ ವಾದಿಗಳಾಗಲಿ ಈ ಕೃತಿಯಿಂದ ಚರಿತ್ರೆಯನ್ನು ವಿವೇಚಿಸುವುದು ಹೇಗೆ ಎಂದು ಕಲಿಯಬೇಕಿದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಿಂದ ಪ್ರಕಟಗೊಂಡಿರುವ ಈ ಕೃತಿ ಭೂತ ಮತ್ತು ವರ್ತಮಾನದ ಚರಿತ್ರೆಯನ್ನು ಅವಲೋಕಿಸುವವರಿಗೆ ಒಂದು ಕೈದೊಂದಿ.


ಇದನ್ನೂ ಓದಿ: ಆರ್ಥಿಕ ಕುಸಿತದ ದುರಂತ : ಜನರ ಬದುಕು ಅತಂತ್ರ – ಡಾ. ಟಿ. ಆರ್. ಚಂದ್ರಶೇಖರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...