Homeಅಂಕಣಗಳುಎಲೆಮರೆವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ!

ವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ!

ಭೀಮವ್ವ ಈಗಲೂ ಇನ್ನೂರು ವರ್ಷದ ಹಳೆಯ ತೊಗಲುಗೊಂಬೆಗಳನ್ನು ಸಂರಕ್ಷಿಸಿದ್ದಾರೆ. ರಾಮಾಯಣ, ಮಹಾಭಾರತ ಕುರಿತ ಪ್ರಸಂಗಗಳನ್ನು ಭೀಮವ್ವ ನೆನಪಿನಿಂದ ಈಗಲೂ ಹಾಡುತ್ತಾರೆ. ಗೊಂಬೆಗಳ ಲಯಕ್ಕೆ ತಕ್ಕ ಹಾಗೆ ಹಾಡಿಕೆಯನ್ನು ಹೊಂದಿಸಬೇಕು. ಇದೊಂದು ಸೂಕ್ಷ್ಮವಾಗ ಕಲೆ. ಇಂತಹ ಕಲೆಯ ಎಲ್ಲಾ ವಿಭಾಗಗಳಲ್ಲೂ ಭೀಮವ್ವನಿಗೆ ಪ್ರಾವಿಣ್ಯತೆಯಿದೆ.

- Advertisement -
- Advertisement -

ಎಲೆಮರೆ-42

  • ಅರುಣ್‌ ಜೋಳದ ಕೂಡ್ಲಿಗಿ

ಕೊಪ್ಪಳದ ಮಿತ್ರ ಮಂಜುನಾಥ ಗೊಂಡಬಾಳ ತಮ್ಮ ‘ಬದಲಾವಣೆ’ ಪತ್ರಿಕೆಯಲ್ಲಿ ‘ದೇಶ ವಿದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶಿಸಿದ ಮಹಾನ್ ಕಲಾವಿದೆ’ ಎನ್ನುವ ಶೀರ್ಷಿಕೆಯಲ್ಲಿ 103 ವರ್ಷದ ಹಿರಿಯಜ್ಜಿ ಭೀಮವ್ವನ ಬಗ್ಗೆ ಪರಿಚಯಿಸಿದ್ದರು. ಕುತೂಹಲದಿಂದ ಅಜ್ಜಿಯ ಬಗ್ಗೆ ಮತ್ತಷ್ಟು ತಿಳಿದುಕೊಂಡೆ. ಈಚೆಗೆ ಜಾನಪದ ಅಕಾಡೆಮಿ ಅಧ್ಯಕ್ಷೆಯಾದ ಮಂಜಮ್ಮ ಜೋಗತಿಯವರು 2020 ರ ‘ಜಾನಪದ ಶ್ರೀ’ ಪ್ರಶಸ್ತಿಗೆ ಭೀಮವ್ವನನ್ನು ಆಯ್ಕೆ ಮಾಡಿದ್ದು ಖುಷಿಕೊಟ್ಟಿತು. ಗಂಡುಪಾರಮ್ಯದ ಕಲೆಗಳಲ್ಲಿ ಹೆಣ್ಣುಮಕ್ಕಳು ತಮ್ಮದೇ ಛಾಪು ಮೂಡಿಸುವುದು ಜನಪದ ಕಲೆಗಳಲ್ಲಿ ವಿರಳ. ತೆರೆ ಮರೆಯಲ್ಲಿರುವುದೇ ಹೆಚ್ಚು. ಕಿಳ್ಳೇಕ್ಯಾತ ಸಮುದಾಯದ ತೊಗಲುಗೊಂಬೆ ಕಲೆ ಏಕವ್ಯಕ್ತಿ ಪ್ರದರ್ಶಿಸುವ ಕಲೆಯಲ್ಲ. ಈ ಕಲೆಗೆ ಇಡೀ ಕುಟುಂಬವೇ ಪಾಲ್ಗೊಳ್ಳಬೇಕು. ಹಾಗಾಗಿ ಮಹಿಳೆಯರು ಚಿಕ್ಕ ಮಕ್ಕಳು ಕೂಡ ತೊಗಲುಗೊಂಬೆಯಾಟದಲ್ಲಿ ಪಾಲ್ಗೊಳ್ಳುತ್ತಾರೆ. ಈ ಕಾರಣದಿಂದಾಗಿ ವಿಶೇಷವಾಗಿ ಈ ಕಲೆಯಲ್ಲಿ ಮಹಿಳೆಯರು ಕಾಣಸಿಗುತ್ತಾರೆ.

ಕೊಪ್ಪಳದ ಇರಕಲ್ಲಗಡಾದ ಹನುಮಟ್ಟಿಯ ಸಂಜೀವಪ್ಪ ಹೊಳೆಯಮ್ಮರ ಮಗಳಾದ ಭೀಮವ್ವ, ಕೊಪ್ಪಳದಿಂದ 22 ಕಿ.ಮೀ ದೂರದ ಮೊರನಾಳದ ತೊಗಲುಗೊಂಬೆಯಾಟದಲ್ಲಿ ಆಗಲೆ ಪ್ರಸಿದ್ಧಿ ಪಡೆದಿದ್ದ ದೊಡ್ಡಬಾಳಪ್ಪ ಅವರನ್ನು ಮದುವೆಯಾಗುತ್ತಾರೆ. ತವರು ಮನೆಯಲ್ಲಿಯೂ ಭೀಮವ್ವ ತೊಗಲುಗೊಂಬೆ ಕಲೆಯನ್ನು ಬಾಲ್ಯದಿಂದಲೇ ಕಲಿತಿದ್ದರಿಂದ ಬಾಳಪ್ಪನ ಜತೆಗಿನ ಬಾಳುವೆಯಲ್ಲಿ ತೊಗಲುಗೊಂಬೆ ಕಲೆಯನ್ನು ಭೀಮವ್ವ ಮತ್ತಷ್ಟು ತನ್ಮಯತೆಯಿಂದ ಕಲಿಯುತ್ತಾಳೆ. ಇದರಿಂದ ಬಾಳಪ್ಪನ ತೊಗಲುಗೊಂಬೆಯಾಟದಲ್ಲಿ ಭೀಮವ್ವ ತನ್ನದೇ ಪಾತ್ರ ವಹಿಸುತ್ತಾಳೆ. ಹೀಗೆ ನಡೆದ ಜೀವನದಲ್ಲಿ ವಿರೂಪಾಕ್ಷಪ್ಪ, ಯಂಕಪ್ಪ, ಹಾಗೂ ಕೇಶಪ್ಪ ಮೂವರು ಮಕ್ಕಳಾಗುತ್ತಾರೆ. ಈ ಮೂವರೂ ತೊಗಲುಗೊಂಬೆಯಾಟ ಕಲಿಯುತ್ತಾರೆ. ಸೊಸೆಯಂದಿರೂ ತೊಗಲುಗೊಂಬೆಯಾಟದಲ್ಲಿ ತೊಡಗಿಕೊಳ್ಳುತ್ತಾರೆ. ಇದೀಗ ಅಜ್ಜಿಯ ಮೊಮ್ಮಕ್ಕಳಾದ ಶಿವಪ್ಪ, ಶಿವರಾಜ, ವಸಂತಕುಮಾರ್, ಪಾಂಡುರಂಗ, ರಮೇಶ್ ಹಾಗೂ ಪರುಶುರಾಮ ಎಲ್ಲರೂ ಗೊಂಬೆಯಾಟದಲ್ಲಿ ಪ್ರಾವಿಣ್ಯತೆ ಪಡೆದಿದ್ದಾರೆ. ಇದೀಗ ಮರಿ ಮೊಮ್ಮಕ್ಕಳನ್ನು ಪಡೆದ ಭೀಮಜ್ಜಿಯ ಮನೆಯಲ್ಲಿ ನಾಲ್ಕು ತಲೆಮಾರಿನ ಕಲಾವಿದರಿದ್ದಾರೆ.

ಈ ಅಜ್ಜಿಗೆ ಈಗ ನೂರಮೂರು ವರ್ಷ. ಶತಕ ಪೂರೈಸಿದ ಅಜ್ಜಿ ಈಗಲೂ ಖಡಕ್ ಆಗಿ ಮಾತನಾಡುತ್ತಾರೆ. ತಾನು ಬಾಳಪ್ಪನ ತಂಡದ ಭಾಗವಾಗಿ ವಿದೇಶದಲ್ಲಿ ತೊಗಲುಗೊಂಬೆಯಾಟ ಆಡಿಸಿದ್ದನ್ನು ಬೆರಗಿನಿಂದ ಕಣ್ಮುಂದೆ ಕಟ್ಟುವಂತೆ ವಿವರಿಸುತ್ತಾರೆ. 1992 ರಲ್ಲಿ ದೆಹಲಿಯಲ್ಲಿ ಸಂಗೀತ ಮತ್ತು ನಾಟಕ ಅಕಾಡೆಮಿಯವರಿಂದ ಅಂತರಾಷ್ಟ್ರೀಯ ಪೊಪೆಟ್ರಿ ಫೆಸ್ಟಿವೆಲ್ ನಡೆಯುತ್ತದೆ. ಈ ಸಂದರ್ಭದಲ್ಲಿ ಅತ್ಯುತ್ತಮ ಮತ್ತು ಪ್ರಾಚೀನ ಬೊಂಬೆಗಳಿರುವ ತಂಡಗಳನ್ನು ಕಳಿಸಲು ಜಾನಪದ ಮತ್ತು ಯಕ್ಷಗಾನ ಅಕಾಡೆಮಿಗೆ ಪತ್ರ ಬರುತ್ತದೆ. ಆಗ ರಿಜಿಸ್ಟ್ರಾರ್ ಆಗಿದ್ದ ಹಿ.ಚಿ.ಬೋರಲಿಂಗಯ್ಯ ಅವರು ಮೊರನಾಳದ ದೊಡ್ಡ ಬಾಳಪ್ಪ ಅವರ ತಂಡವನ್ನು ಆಯ್ಕೆ ಮಾಡಿ, ದೆಹಲಿಗೆ ಕರೆದುಕೊಂಡು ಹೋಗುತ್ತಾರೆ. ಈ ಫೆಸ್ಟಿವೆಲ್‍ಗೆ ಬಂದ ಯುರೋಪಿನ ಪ್ರಾನ್ಸ್ ದೇಶದ ಕಲ್ಚರ್ ಡುಮ್ಯಾಂಡೆ ಎನ್ನುವ ಸಂಸ್ಥೆಯವರು ದೊಡ್ಡ ಬಾಳಪ್ಪ ಅವರ ತಂಡವನ್ನು ಆಯ್ಕೆ ಮಾಡುತ್ತಾರೆ. ಆಗ ಪ್ರೊ.ಹಿ.ಚಿ.ಬೋರಲಿಂಗಯ್ಯ ಮತ್ತು ಮಂಗಳೂರಿನ ಉಪಧ್ಯಾಯ ಅವರು ದೊಡ್ಡಬಾಳಪ್ಪ ಅವರ ತಂಡವನ್ನು ಕರೆದುಕೊಂಡು ಹೋಗುತ್ತಾರೆ. ಯುರೋಪಿನ ಇಟಲಿ, ಪ್ರಾನ್ಸ್, ನೆದರ್ ಲ್ಯಾಂಡ್ಸ್ ಮೂರು ದೇಶಗಳಲ್ಲಿ ಬಾಳಪ್ಪನ ತಂಡ ಪ್ರದರ್ಶನ ಕೊಡುತ್ತದೆ.

ಈ ಯುರೋಪ್‍ನ ಪ್ರವಾಸದ ನಂತರ ಕೇಂದ್ರ ಸಂಸ್ಕೃತಿ ಇಲಾಖೆಯವರು ಇರಾನಿನ ತೆಹ್ರಾನ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಪೊಪೆಟ್ ಥಿಯೇಟರ್ ಫೆಸ್ಟಿವೆಲ್‍ಗೆ ದೊಡ್ಡ ಬಾಳಪ್ಪನವರ ತಂಡವನ್ನೆ ಆಯ್ಕೆ ಮಾಡುತ್ತಾರೆ. ಈ ಎಲ್ಲಾ ಪ್ರವಾಸದಲ್ಲಿ ಭೀಮವ್ವ ಹಾಡುಗಾರ್ತಿಯಾಗಿ ದೊಡ್ಡಬಾಳಪ್ಪನ ಜೊತೆ ಇರುತ್ತಾರೆ. ಪ್ರೊ.ಹಿ.ಚಿ. ಬೋರಲಿಂಗಯ್ಯ ಅವರು `ದೊಡ್ಡಬಾಳಪ್ಪ ಬಹಳ ಪ್ರತಿಭಾವಂತ ಕಲಾವಿದ. ತುಂಬಾ ಪ್ರಾಚೀನವಾದ ತೊಗಲು ಗೊಂಬೆಗಳನ್ನು ಸಂರಕ್ಷಿಸಿದ್ದರು. ಬಾಳಪ್ಪನ ಹೆಂಡತಿ ಭೀಮವ್ವನಿಗೆ ಒಳ್ಳೆಯ ಕಂಠವಿತ್ತು, ಅದ್ಭುತವಾಗಿ ಹಾಡುತ್ತಿದ್ದರು, ಇವರ ತಂಡವನ್ನು ಯೂರೋಪ್ ಮತ್ತು ಇರಾನ್‍ಗೆ ಕರೆದುಕೊಂಡು ಹೋಗಿ ಬಂದದ್ದಕ್ಕೆ ಖುಷಿ ಇದೆ’ ಎನ್ನುತ್ತಾರೆ. ಹೀಗೆ ಕೊಪ್ಪಳ ಸಮೀಪದ ಹಳ್ಳಿಯೊಂದರ ಭೀಮವ್ವ ವಿದೇಶಗಳಲ್ಲಿ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸಿ ಸೈ ಎನಿಸಿಕೊಂಡಿದ್ದಾರೆ.

ಭೀಮವ್ವ ಈಗಲೂ ಇನ್ನೂರು ವರ್ಷದ ಹಳೆಯ ತೊಗಲುಗೊಂಬೆಗಳನ್ನು ಸಂರಕ್ಷಿಸಿದ್ದಾರೆ. ರಾಮಾಯಣ, ಮಹಾಭಾರತ ಕುರಿತ ಪ್ರಸಂಗಗಳನ್ನು ಭೀಮವ್ವ ನೆನಪಿನಿಂದ ಈಗಲೂ ಹಾಡುತ್ತಾರೆ. ಗೊಂಬೆಗಳ ಲಯಕ್ಕೆ ತಕ್ಕ ಹಾಗೆ ಹಾಡಿಕೆಯನ್ನು ಹೊಂದಿಸಬೇಕು. ಇದೊಂದು ಸೂಕ್ಷ್ಮವಾಗ ಕಲೆ. ಇಂತಹ ಕಲೆಯ ಎಲ್ಲಾ ವಿಭಾಗಗಳಲ್ಲೂ ಭೀಮವ್ವನಿಗೆ ಪ್ರಾವಿಣ್ಯತೆಯಿದೆ. ತೊಗಲುಗೊಂಬೆ ತಯಾರಿಕೆ, ಅದಕ್ಕೆ ಬೇಕಾದ ಸ್ಥಳೀಯ ಪರಿಕರಗಳನ್ನು ಬಳಸಿ ಬಣ್ಣಗಾರಿಕೆ ಮಾಡುವುದು, ತೊಗಲುಗೊಂಬೆ ಮಾಡಲು ಜಿಂಕೆ ಚರ್ಮವನ್ನು ಹದ ಮಾಡುವುದು, ಹೀಗೆ ತೊಗಲು ಗೊಂಬೆ ತಯಾರಿಕೆಗೆ ಬೇಕಾದ ದೇಸಿ ತಿಳಿವು ಅಜ್ಜಿಗಿದೆ. ಅದನ್ನು ಮಕ್ಕಳು ಮೊಮ್ಮಕ್ಕಳಿಗೂ ಕಲಿಸಿಕೊಟ್ಟಿದ್ದಾರೆ. ಇದೀಗ ಜಿಂಕೆಯ ಚರ್ಮದ ಕೊರತೆಯಿಂದಲೋ, ಅತಿಯಾದ ಶ್ರಮ ಮತ್ತು ಕೌಶಲ್ಯ ಬೇಡುವುದರಿಂದಲೋ ಅಜ್ಜಿಯ ಮೊಮ್ಮಕ್ಕಳು ಹೊಸ ತೊಗಲುಗೊಂಬೆಗಳನ್ನು ಮಾಡುವಲ್ಲಿ ಹಿಂದೆ ಸರಿದಿದ್ದಾರೆ. ತಮಗೆ ಹೊಸ ಗೊಂಬೆಗಳು ಬೇಕಾದರೆ ಆಂದ್ರದ ಅನಂತಪುರ, ಧರ್ಮಾವರಂ, ಹಿಂದೂಪುರ ಮೊದಲಾದ ಕಡೆಗಳಿಗೆ ಹೋಗಿ ದುಬಾರಿ ಬೆಲೆಕೊಟ್ಟು ತರುತ್ತಾರೆ. ಹೀಗಾಗಿ ಈ ಕುಟುಂಬ ತೊಗಲುಗೊಂಬೆಯ ತಯಾರಿಕೆಯ ಸ್ವಾಯತ್ತತೆಯಿಂದ ಇದೀಗ ಪರಾವಲಂಬಿಯಾಗಿದೆ.

ದೇಶದ ಹಲವೆಡೆ, ರಾಜ್ಯದ ವಿವಿದ ಜಿಲ್ಲೆಗಳಲ್ಲಿ ಭೀಮವ್ವ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸಿದ್ದಾರೆ. ಇದೀಗ ಮನೆಯಲ್ಲಿ ಮಕ್ಕಳು, ಮೊಮ್ಮಕ್ಕಳು ಕಲಾತಂಡಗಳಾಗಿ ದೇಶ, ರಾಜ್ಯದ ವಿವಿಧ ಭಾಗಗಳಲ್ಲಿ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸುವ ಮೂಲಕ ಕಲೆಯನ್ನು ಜೀವಂತಗೊಳಿಸಿದ್ದಾರೆ. 2004 ರಲ್ಲಿ ಜಾನಪದ ಯಕ್ಷಗಾನ ಅಕಾಡೆಮಿಯು ಭೀಮವ್ವನಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. 2014 ರಲ್ಲಿ ಭೀಮವ್ವನ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿದೆ. 2010 ರಲ್ಲಿ ಡಿಸೆಂಬರ್ 1 ರಿಂದ 5 ರ ತನಕ ರಾಷ್ಟ್ರೀಯ ಸಂಗೀತ ನಾಟಕ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿದ `ತೊಗಲುಗೊಂಬೆ ಪರಂಪರೆ’ ಕಾರ್ಯಕ್ರಮದಲ್ಲಿ ಈ ಕುಟುಂಬದ ನಾಲ್ಕೈದು ಜನ ಪ್ರತ್ಯೇಕ ತೊಗಲುಗೊಂಬೆ ಪ್ರಸಂಗಗಳನ್ನು ಪ್ರದರ್ಶನ ಮಾಡಿ ಗಮನ ಸೆಳೆದಿದ್ದರು. ಭೀಮವ್ವನ ದೇಶಿ ತಿಳಿವನ್ನು ಸಂಗ್ರಹಿಸುವ ಅಗತ್ಯವಿದೆ. ನೂರಾ ಮೂರು ವರ್ಷದ ಅಜ್ಜಿಯ ಆರೋಗ್ಯ ಚೆನ್ನಾಗಿರಲಿ, ಮತ್ತಷ್ಟು ಪ್ರದರ್ಶನ ನೀಡುವ ಚೈತನ್ಯ ಹೆಚ್ಚಲಿ ಎಂದು ಪತ್ರಿಕೆ ಆಶಿಸುತ್ತದೆ.


ಇದನ್ನು ಓದಿ: ಜೇನುಕುರುಬರ ಒಳಿತಾಗಿ ದುಡಿವ ಗಟ್ಟಿಗಿತ್ತಿ ಜಾನಕಮ್ಮ.. ಎಲೆಮರೆ-4

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...