Homeಅಂಕಣಗಳುಎಲೆಮರೆವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ!

ವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ!

ಭೀಮವ್ವ ಈಗಲೂ ಇನ್ನೂರು ವರ್ಷದ ಹಳೆಯ ತೊಗಲುಗೊಂಬೆಗಳನ್ನು ಸಂರಕ್ಷಿಸಿದ್ದಾರೆ. ರಾಮಾಯಣ, ಮಹಾಭಾರತ ಕುರಿತ ಪ್ರಸಂಗಗಳನ್ನು ಭೀಮವ್ವ ನೆನಪಿನಿಂದ ಈಗಲೂ ಹಾಡುತ್ತಾರೆ. ಗೊಂಬೆಗಳ ಲಯಕ್ಕೆ ತಕ್ಕ ಹಾಗೆ ಹಾಡಿಕೆಯನ್ನು ಹೊಂದಿಸಬೇಕು. ಇದೊಂದು ಸೂಕ್ಷ್ಮವಾಗ ಕಲೆ. ಇಂತಹ ಕಲೆಯ ಎಲ್ಲಾ ವಿಭಾಗಗಳಲ್ಲೂ ಭೀಮವ್ವನಿಗೆ ಪ್ರಾವಿಣ್ಯತೆಯಿದೆ.

- Advertisement -
- Advertisement -

ಎಲೆಮರೆ-42

  • ಅರುಣ್‌ ಜೋಳದ ಕೂಡ್ಲಿಗಿ

ಕೊಪ್ಪಳದ ಮಿತ್ರ ಮಂಜುನಾಥ ಗೊಂಡಬಾಳ ತಮ್ಮ ‘ಬದಲಾವಣೆ’ ಪತ್ರಿಕೆಯಲ್ಲಿ ‘ದೇಶ ವಿದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶಿಸಿದ ಮಹಾನ್ ಕಲಾವಿದೆ’ ಎನ್ನುವ ಶೀರ್ಷಿಕೆಯಲ್ಲಿ 103 ವರ್ಷದ ಹಿರಿಯಜ್ಜಿ ಭೀಮವ್ವನ ಬಗ್ಗೆ ಪರಿಚಯಿಸಿದ್ದರು. ಕುತೂಹಲದಿಂದ ಅಜ್ಜಿಯ ಬಗ್ಗೆ ಮತ್ತಷ್ಟು ತಿಳಿದುಕೊಂಡೆ. ಈಚೆಗೆ ಜಾನಪದ ಅಕಾಡೆಮಿ ಅಧ್ಯಕ್ಷೆಯಾದ ಮಂಜಮ್ಮ ಜೋಗತಿಯವರು 2020 ರ ‘ಜಾನಪದ ಶ್ರೀ’ ಪ್ರಶಸ್ತಿಗೆ ಭೀಮವ್ವನನ್ನು ಆಯ್ಕೆ ಮಾಡಿದ್ದು ಖುಷಿಕೊಟ್ಟಿತು. ಗಂಡುಪಾರಮ್ಯದ ಕಲೆಗಳಲ್ಲಿ ಹೆಣ್ಣುಮಕ್ಕಳು ತಮ್ಮದೇ ಛಾಪು ಮೂಡಿಸುವುದು ಜನಪದ ಕಲೆಗಳಲ್ಲಿ ವಿರಳ. ತೆರೆ ಮರೆಯಲ್ಲಿರುವುದೇ ಹೆಚ್ಚು. ಕಿಳ್ಳೇಕ್ಯಾತ ಸಮುದಾಯದ ತೊಗಲುಗೊಂಬೆ ಕಲೆ ಏಕವ್ಯಕ್ತಿ ಪ್ರದರ್ಶಿಸುವ ಕಲೆಯಲ್ಲ. ಈ ಕಲೆಗೆ ಇಡೀ ಕುಟುಂಬವೇ ಪಾಲ್ಗೊಳ್ಳಬೇಕು. ಹಾಗಾಗಿ ಮಹಿಳೆಯರು ಚಿಕ್ಕ ಮಕ್ಕಳು ಕೂಡ ತೊಗಲುಗೊಂಬೆಯಾಟದಲ್ಲಿ ಪಾಲ್ಗೊಳ್ಳುತ್ತಾರೆ. ಈ ಕಾರಣದಿಂದಾಗಿ ವಿಶೇಷವಾಗಿ ಈ ಕಲೆಯಲ್ಲಿ ಮಹಿಳೆಯರು ಕಾಣಸಿಗುತ್ತಾರೆ.

ಕೊಪ್ಪಳದ ಇರಕಲ್ಲಗಡಾದ ಹನುಮಟ್ಟಿಯ ಸಂಜೀವಪ್ಪ ಹೊಳೆಯಮ್ಮರ ಮಗಳಾದ ಭೀಮವ್ವ, ಕೊಪ್ಪಳದಿಂದ 22 ಕಿ.ಮೀ ದೂರದ ಮೊರನಾಳದ ತೊಗಲುಗೊಂಬೆಯಾಟದಲ್ಲಿ ಆಗಲೆ ಪ್ರಸಿದ್ಧಿ ಪಡೆದಿದ್ದ ದೊಡ್ಡಬಾಳಪ್ಪ ಅವರನ್ನು ಮದುವೆಯಾಗುತ್ತಾರೆ. ತವರು ಮನೆಯಲ್ಲಿಯೂ ಭೀಮವ್ವ ತೊಗಲುಗೊಂಬೆ ಕಲೆಯನ್ನು ಬಾಲ್ಯದಿಂದಲೇ ಕಲಿತಿದ್ದರಿಂದ ಬಾಳಪ್ಪನ ಜತೆಗಿನ ಬಾಳುವೆಯಲ್ಲಿ ತೊಗಲುಗೊಂಬೆ ಕಲೆಯನ್ನು ಭೀಮವ್ವ ಮತ್ತಷ್ಟು ತನ್ಮಯತೆಯಿಂದ ಕಲಿಯುತ್ತಾಳೆ. ಇದರಿಂದ ಬಾಳಪ್ಪನ ತೊಗಲುಗೊಂಬೆಯಾಟದಲ್ಲಿ ಭೀಮವ್ವ ತನ್ನದೇ ಪಾತ್ರ ವಹಿಸುತ್ತಾಳೆ. ಹೀಗೆ ನಡೆದ ಜೀವನದಲ್ಲಿ ವಿರೂಪಾಕ್ಷಪ್ಪ, ಯಂಕಪ್ಪ, ಹಾಗೂ ಕೇಶಪ್ಪ ಮೂವರು ಮಕ್ಕಳಾಗುತ್ತಾರೆ. ಈ ಮೂವರೂ ತೊಗಲುಗೊಂಬೆಯಾಟ ಕಲಿಯುತ್ತಾರೆ. ಸೊಸೆಯಂದಿರೂ ತೊಗಲುಗೊಂಬೆಯಾಟದಲ್ಲಿ ತೊಡಗಿಕೊಳ್ಳುತ್ತಾರೆ. ಇದೀಗ ಅಜ್ಜಿಯ ಮೊಮ್ಮಕ್ಕಳಾದ ಶಿವಪ್ಪ, ಶಿವರಾಜ, ವಸಂತಕುಮಾರ್, ಪಾಂಡುರಂಗ, ರಮೇಶ್ ಹಾಗೂ ಪರುಶುರಾಮ ಎಲ್ಲರೂ ಗೊಂಬೆಯಾಟದಲ್ಲಿ ಪ್ರಾವಿಣ್ಯತೆ ಪಡೆದಿದ್ದಾರೆ. ಇದೀಗ ಮರಿ ಮೊಮ್ಮಕ್ಕಳನ್ನು ಪಡೆದ ಭೀಮಜ್ಜಿಯ ಮನೆಯಲ್ಲಿ ನಾಲ್ಕು ತಲೆಮಾರಿನ ಕಲಾವಿದರಿದ್ದಾರೆ.

ಈ ಅಜ್ಜಿಗೆ ಈಗ ನೂರಮೂರು ವರ್ಷ. ಶತಕ ಪೂರೈಸಿದ ಅಜ್ಜಿ ಈಗಲೂ ಖಡಕ್ ಆಗಿ ಮಾತನಾಡುತ್ತಾರೆ. ತಾನು ಬಾಳಪ್ಪನ ತಂಡದ ಭಾಗವಾಗಿ ವಿದೇಶದಲ್ಲಿ ತೊಗಲುಗೊಂಬೆಯಾಟ ಆಡಿಸಿದ್ದನ್ನು ಬೆರಗಿನಿಂದ ಕಣ್ಮುಂದೆ ಕಟ್ಟುವಂತೆ ವಿವರಿಸುತ್ತಾರೆ. 1992 ರಲ್ಲಿ ದೆಹಲಿಯಲ್ಲಿ ಸಂಗೀತ ಮತ್ತು ನಾಟಕ ಅಕಾಡೆಮಿಯವರಿಂದ ಅಂತರಾಷ್ಟ್ರೀಯ ಪೊಪೆಟ್ರಿ ಫೆಸ್ಟಿವೆಲ್ ನಡೆಯುತ್ತದೆ. ಈ ಸಂದರ್ಭದಲ್ಲಿ ಅತ್ಯುತ್ತಮ ಮತ್ತು ಪ್ರಾಚೀನ ಬೊಂಬೆಗಳಿರುವ ತಂಡಗಳನ್ನು ಕಳಿಸಲು ಜಾನಪದ ಮತ್ತು ಯಕ್ಷಗಾನ ಅಕಾಡೆಮಿಗೆ ಪತ್ರ ಬರುತ್ತದೆ. ಆಗ ರಿಜಿಸ್ಟ್ರಾರ್ ಆಗಿದ್ದ ಹಿ.ಚಿ.ಬೋರಲಿಂಗಯ್ಯ ಅವರು ಮೊರನಾಳದ ದೊಡ್ಡ ಬಾಳಪ್ಪ ಅವರ ತಂಡವನ್ನು ಆಯ್ಕೆ ಮಾಡಿ, ದೆಹಲಿಗೆ ಕರೆದುಕೊಂಡು ಹೋಗುತ್ತಾರೆ. ಈ ಫೆಸ್ಟಿವೆಲ್‍ಗೆ ಬಂದ ಯುರೋಪಿನ ಪ್ರಾನ್ಸ್ ದೇಶದ ಕಲ್ಚರ್ ಡುಮ್ಯಾಂಡೆ ಎನ್ನುವ ಸಂಸ್ಥೆಯವರು ದೊಡ್ಡ ಬಾಳಪ್ಪ ಅವರ ತಂಡವನ್ನು ಆಯ್ಕೆ ಮಾಡುತ್ತಾರೆ. ಆಗ ಪ್ರೊ.ಹಿ.ಚಿ.ಬೋರಲಿಂಗಯ್ಯ ಮತ್ತು ಮಂಗಳೂರಿನ ಉಪಧ್ಯಾಯ ಅವರು ದೊಡ್ಡಬಾಳಪ್ಪ ಅವರ ತಂಡವನ್ನು ಕರೆದುಕೊಂಡು ಹೋಗುತ್ತಾರೆ. ಯುರೋಪಿನ ಇಟಲಿ, ಪ್ರಾನ್ಸ್, ನೆದರ್ ಲ್ಯಾಂಡ್ಸ್ ಮೂರು ದೇಶಗಳಲ್ಲಿ ಬಾಳಪ್ಪನ ತಂಡ ಪ್ರದರ್ಶನ ಕೊಡುತ್ತದೆ.

ಈ ಯುರೋಪ್‍ನ ಪ್ರವಾಸದ ನಂತರ ಕೇಂದ್ರ ಸಂಸ್ಕೃತಿ ಇಲಾಖೆಯವರು ಇರಾನಿನ ತೆಹ್ರಾನ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಪೊಪೆಟ್ ಥಿಯೇಟರ್ ಫೆಸ್ಟಿವೆಲ್‍ಗೆ ದೊಡ್ಡ ಬಾಳಪ್ಪನವರ ತಂಡವನ್ನೆ ಆಯ್ಕೆ ಮಾಡುತ್ತಾರೆ. ಈ ಎಲ್ಲಾ ಪ್ರವಾಸದಲ್ಲಿ ಭೀಮವ್ವ ಹಾಡುಗಾರ್ತಿಯಾಗಿ ದೊಡ್ಡಬಾಳಪ್ಪನ ಜೊತೆ ಇರುತ್ತಾರೆ. ಪ್ರೊ.ಹಿ.ಚಿ. ಬೋರಲಿಂಗಯ್ಯ ಅವರು `ದೊಡ್ಡಬಾಳಪ್ಪ ಬಹಳ ಪ್ರತಿಭಾವಂತ ಕಲಾವಿದ. ತುಂಬಾ ಪ್ರಾಚೀನವಾದ ತೊಗಲು ಗೊಂಬೆಗಳನ್ನು ಸಂರಕ್ಷಿಸಿದ್ದರು. ಬಾಳಪ್ಪನ ಹೆಂಡತಿ ಭೀಮವ್ವನಿಗೆ ಒಳ್ಳೆಯ ಕಂಠವಿತ್ತು, ಅದ್ಭುತವಾಗಿ ಹಾಡುತ್ತಿದ್ದರು, ಇವರ ತಂಡವನ್ನು ಯೂರೋಪ್ ಮತ್ತು ಇರಾನ್‍ಗೆ ಕರೆದುಕೊಂಡು ಹೋಗಿ ಬಂದದ್ದಕ್ಕೆ ಖುಷಿ ಇದೆ’ ಎನ್ನುತ್ತಾರೆ. ಹೀಗೆ ಕೊಪ್ಪಳ ಸಮೀಪದ ಹಳ್ಳಿಯೊಂದರ ಭೀಮವ್ವ ವಿದೇಶಗಳಲ್ಲಿ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸಿ ಸೈ ಎನಿಸಿಕೊಂಡಿದ್ದಾರೆ.

ಭೀಮವ್ವ ಈಗಲೂ ಇನ್ನೂರು ವರ್ಷದ ಹಳೆಯ ತೊಗಲುಗೊಂಬೆಗಳನ್ನು ಸಂರಕ್ಷಿಸಿದ್ದಾರೆ. ರಾಮಾಯಣ, ಮಹಾಭಾರತ ಕುರಿತ ಪ್ರಸಂಗಗಳನ್ನು ಭೀಮವ್ವ ನೆನಪಿನಿಂದ ಈಗಲೂ ಹಾಡುತ್ತಾರೆ. ಗೊಂಬೆಗಳ ಲಯಕ್ಕೆ ತಕ್ಕ ಹಾಗೆ ಹಾಡಿಕೆಯನ್ನು ಹೊಂದಿಸಬೇಕು. ಇದೊಂದು ಸೂಕ್ಷ್ಮವಾಗ ಕಲೆ. ಇಂತಹ ಕಲೆಯ ಎಲ್ಲಾ ವಿಭಾಗಗಳಲ್ಲೂ ಭೀಮವ್ವನಿಗೆ ಪ್ರಾವಿಣ್ಯತೆಯಿದೆ. ತೊಗಲುಗೊಂಬೆ ತಯಾರಿಕೆ, ಅದಕ್ಕೆ ಬೇಕಾದ ಸ್ಥಳೀಯ ಪರಿಕರಗಳನ್ನು ಬಳಸಿ ಬಣ್ಣಗಾರಿಕೆ ಮಾಡುವುದು, ತೊಗಲುಗೊಂಬೆ ಮಾಡಲು ಜಿಂಕೆ ಚರ್ಮವನ್ನು ಹದ ಮಾಡುವುದು, ಹೀಗೆ ತೊಗಲು ಗೊಂಬೆ ತಯಾರಿಕೆಗೆ ಬೇಕಾದ ದೇಸಿ ತಿಳಿವು ಅಜ್ಜಿಗಿದೆ. ಅದನ್ನು ಮಕ್ಕಳು ಮೊಮ್ಮಕ್ಕಳಿಗೂ ಕಲಿಸಿಕೊಟ್ಟಿದ್ದಾರೆ. ಇದೀಗ ಜಿಂಕೆಯ ಚರ್ಮದ ಕೊರತೆಯಿಂದಲೋ, ಅತಿಯಾದ ಶ್ರಮ ಮತ್ತು ಕೌಶಲ್ಯ ಬೇಡುವುದರಿಂದಲೋ ಅಜ್ಜಿಯ ಮೊಮ್ಮಕ್ಕಳು ಹೊಸ ತೊಗಲುಗೊಂಬೆಗಳನ್ನು ಮಾಡುವಲ್ಲಿ ಹಿಂದೆ ಸರಿದಿದ್ದಾರೆ. ತಮಗೆ ಹೊಸ ಗೊಂಬೆಗಳು ಬೇಕಾದರೆ ಆಂದ್ರದ ಅನಂತಪುರ, ಧರ್ಮಾವರಂ, ಹಿಂದೂಪುರ ಮೊದಲಾದ ಕಡೆಗಳಿಗೆ ಹೋಗಿ ದುಬಾರಿ ಬೆಲೆಕೊಟ್ಟು ತರುತ್ತಾರೆ. ಹೀಗಾಗಿ ಈ ಕುಟುಂಬ ತೊಗಲುಗೊಂಬೆಯ ತಯಾರಿಕೆಯ ಸ್ವಾಯತ್ತತೆಯಿಂದ ಇದೀಗ ಪರಾವಲಂಬಿಯಾಗಿದೆ.

ದೇಶದ ಹಲವೆಡೆ, ರಾಜ್ಯದ ವಿವಿದ ಜಿಲ್ಲೆಗಳಲ್ಲಿ ಭೀಮವ್ವ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸಿದ್ದಾರೆ. ಇದೀಗ ಮನೆಯಲ್ಲಿ ಮಕ್ಕಳು, ಮೊಮ್ಮಕ್ಕಳು ಕಲಾತಂಡಗಳಾಗಿ ದೇಶ, ರಾಜ್ಯದ ವಿವಿಧ ಭಾಗಗಳಲ್ಲಿ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸುವ ಮೂಲಕ ಕಲೆಯನ್ನು ಜೀವಂತಗೊಳಿಸಿದ್ದಾರೆ. 2004 ರಲ್ಲಿ ಜಾನಪದ ಯಕ್ಷಗಾನ ಅಕಾಡೆಮಿಯು ಭೀಮವ್ವನಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. 2014 ರಲ್ಲಿ ಭೀಮವ್ವನ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿದೆ. 2010 ರಲ್ಲಿ ಡಿಸೆಂಬರ್ 1 ರಿಂದ 5 ರ ತನಕ ರಾಷ್ಟ್ರೀಯ ಸಂಗೀತ ನಾಟಕ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿದ `ತೊಗಲುಗೊಂಬೆ ಪರಂಪರೆ’ ಕಾರ್ಯಕ್ರಮದಲ್ಲಿ ಈ ಕುಟುಂಬದ ನಾಲ್ಕೈದು ಜನ ಪ್ರತ್ಯೇಕ ತೊಗಲುಗೊಂಬೆ ಪ್ರಸಂಗಗಳನ್ನು ಪ್ರದರ್ಶನ ಮಾಡಿ ಗಮನ ಸೆಳೆದಿದ್ದರು. ಭೀಮವ್ವನ ದೇಶಿ ತಿಳಿವನ್ನು ಸಂಗ್ರಹಿಸುವ ಅಗತ್ಯವಿದೆ. ನೂರಾ ಮೂರು ವರ್ಷದ ಅಜ್ಜಿಯ ಆರೋಗ್ಯ ಚೆನ್ನಾಗಿರಲಿ, ಮತ್ತಷ್ಟು ಪ್ರದರ್ಶನ ನೀಡುವ ಚೈತನ್ಯ ಹೆಚ್ಚಲಿ ಎಂದು ಪತ್ರಿಕೆ ಆಶಿಸುತ್ತದೆ.


ಇದನ್ನು ಓದಿ: ಜೇನುಕುರುಬರ ಒಳಿತಾಗಿ ದುಡಿವ ಗಟ್ಟಿಗಿತ್ತಿ ಜಾನಕಮ್ಮ.. ಎಲೆಮರೆ-4

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...