Homeಅಂಕಣಗಳುಎಲೆಮರೆವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ!

ವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ!

ಭೀಮವ್ವ ಈಗಲೂ ಇನ್ನೂರು ವರ್ಷದ ಹಳೆಯ ತೊಗಲುಗೊಂಬೆಗಳನ್ನು ಸಂರಕ್ಷಿಸಿದ್ದಾರೆ. ರಾಮಾಯಣ, ಮಹಾಭಾರತ ಕುರಿತ ಪ್ರಸಂಗಗಳನ್ನು ಭೀಮವ್ವ ನೆನಪಿನಿಂದ ಈಗಲೂ ಹಾಡುತ್ತಾರೆ. ಗೊಂಬೆಗಳ ಲಯಕ್ಕೆ ತಕ್ಕ ಹಾಗೆ ಹಾಡಿಕೆಯನ್ನು ಹೊಂದಿಸಬೇಕು. ಇದೊಂದು ಸೂಕ್ಷ್ಮವಾಗ ಕಲೆ. ಇಂತಹ ಕಲೆಯ ಎಲ್ಲಾ ವಿಭಾಗಗಳಲ್ಲೂ ಭೀಮವ್ವನಿಗೆ ಪ್ರಾವಿಣ್ಯತೆಯಿದೆ.

- Advertisement -
- Advertisement -

ಎಲೆಮರೆ-42

  • ಅರುಣ್‌ ಜೋಳದ ಕೂಡ್ಲಿಗಿ

ಕೊಪ್ಪಳದ ಮಿತ್ರ ಮಂಜುನಾಥ ಗೊಂಡಬಾಳ ತಮ್ಮ ‘ಬದಲಾವಣೆ’ ಪತ್ರಿಕೆಯಲ್ಲಿ ‘ದೇಶ ವಿದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶಿಸಿದ ಮಹಾನ್ ಕಲಾವಿದೆ’ ಎನ್ನುವ ಶೀರ್ಷಿಕೆಯಲ್ಲಿ 103 ವರ್ಷದ ಹಿರಿಯಜ್ಜಿ ಭೀಮವ್ವನ ಬಗ್ಗೆ ಪರಿಚಯಿಸಿದ್ದರು. ಕುತೂಹಲದಿಂದ ಅಜ್ಜಿಯ ಬಗ್ಗೆ ಮತ್ತಷ್ಟು ತಿಳಿದುಕೊಂಡೆ. ಈಚೆಗೆ ಜಾನಪದ ಅಕಾಡೆಮಿ ಅಧ್ಯಕ್ಷೆಯಾದ ಮಂಜಮ್ಮ ಜೋಗತಿಯವರು 2020 ರ ‘ಜಾನಪದ ಶ್ರೀ’ ಪ್ರಶಸ್ತಿಗೆ ಭೀಮವ್ವನನ್ನು ಆಯ್ಕೆ ಮಾಡಿದ್ದು ಖುಷಿಕೊಟ್ಟಿತು. ಗಂಡುಪಾರಮ್ಯದ ಕಲೆಗಳಲ್ಲಿ ಹೆಣ್ಣುಮಕ್ಕಳು ತಮ್ಮದೇ ಛಾಪು ಮೂಡಿಸುವುದು ಜನಪದ ಕಲೆಗಳಲ್ಲಿ ವಿರಳ. ತೆರೆ ಮರೆಯಲ್ಲಿರುವುದೇ ಹೆಚ್ಚು. ಕಿಳ್ಳೇಕ್ಯಾತ ಸಮುದಾಯದ ತೊಗಲುಗೊಂಬೆ ಕಲೆ ಏಕವ್ಯಕ್ತಿ ಪ್ರದರ್ಶಿಸುವ ಕಲೆಯಲ್ಲ. ಈ ಕಲೆಗೆ ಇಡೀ ಕುಟುಂಬವೇ ಪಾಲ್ಗೊಳ್ಳಬೇಕು. ಹಾಗಾಗಿ ಮಹಿಳೆಯರು ಚಿಕ್ಕ ಮಕ್ಕಳು ಕೂಡ ತೊಗಲುಗೊಂಬೆಯಾಟದಲ್ಲಿ ಪಾಲ್ಗೊಳ್ಳುತ್ತಾರೆ. ಈ ಕಾರಣದಿಂದಾಗಿ ವಿಶೇಷವಾಗಿ ಈ ಕಲೆಯಲ್ಲಿ ಮಹಿಳೆಯರು ಕಾಣಸಿಗುತ್ತಾರೆ.

ಕೊಪ್ಪಳದ ಇರಕಲ್ಲಗಡಾದ ಹನುಮಟ್ಟಿಯ ಸಂಜೀವಪ್ಪ ಹೊಳೆಯಮ್ಮರ ಮಗಳಾದ ಭೀಮವ್ವ, ಕೊಪ್ಪಳದಿಂದ 22 ಕಿ.ಮೀ ದೂರದ ಮೊರನಾಳದ ತೊಗಲುಗೊಂಬೆಯಾಟದಲ್ಲಿ ಆಗಲೆ ಪ್ರಸಿದ್ಧಿ ಪಡೆದಿದ್ದ ದೊಡ್ಡಬಾಳಪ್ಪ ಅವರನ್ನು ಮದುವೆಯಾಗುತ್ತಾರೆ. ತವರು ಮನೆಯಲ್ಲಿಯೂ ಭೀಮವ್ವ ತೊಗಲುಗೊಂಬೆ ಕಲೆಯನ್ನು ಬಾಲ್ಯದಿಂದಲೇ ಕಲಿತಿದ್ದರಿಂದ ಬಾಳಪ್ಪನ ಜತೆಗಿನ ಬಾಳುವೆಯಲ್ಲಿ ತೊಗಲುಗೊಂಬೆ ಕಲೆಯನ್ನು ಭೀಮವ್ವ ಮತ್ತಷ್ಟು ತನ್ಮಯತೆಯಿಂದ ಕಲಿಯುತ್ತಾಳೆ. ಇದರಿಂದ ಬಾಳಪ್ಪನ ತೊಗಲುಗೊಂಬೆಯಾಟದಲ್ಲಿ ಭೀಮವ್ವ ತನ್ನದೇ ಪಾತ್ರ ವಹಿಸುತ್ತಾಳೆ. ಹೀಗೆ ನಡೆದ ಜೀವನದಲ್ಲಿ ವಿರೂಪಾಕ್ಷಪ್ಪ, ಯಂಕಪ್ಪ, ಹಾಗೂ ಕೇಶಪ್ಪ ಮೂವರು ಮಕ್ಕಳಾಗುತ್ತಾರೆ. ಈ ಮೂವರೂ ತೊಗಲುಗೊಂಬೆಯಾಟ ಕಲಿಯುತ್ತಾರೆ. ಸೊಸೆಯಂದಿರೂ ತೊಗಲುಗೊಂಬೆಯಾಟದಲ್ಲಿ ತೊಡಗಿಕೊಳ್ಳುತ್ತಾರೆ. ಇದೀಗ ಅಜ್ಜಿಯ ಮೊಮ್ಮಕ್ಕಳಾದ ಶಿವಪ್ಪ, ಶಿವರಾಜ, ವಸಂತಕುಮಾರ್, ಪಾಂಡುರಂಗ, ರಮೇಶ್ ಹಾಗೂ ಪರುಶುರಾಮ ಎಲ್ಲರೂ ಗೊಂಬೆಯಾಟದಲ್ಲಿ ಪ್ರಾವಿಣ್ಯತೆ ಪಡೆದಿದ್ದಾರೆ. ಇದೀಗ ಮರಿ ಮೊಮ್ಮಕ್ಕಳನ್ನು ಪಡೆದ ಭೀಮಜ್ಜಿಯ ಮನೆಯಲ್ಲಿ ನಾಲ್ಕು ತಲೆಮಾರಿನ ಕಲಾವಿದರಿದ್ದಾರೆ.

ಈ ಅಜ್ಜಿಗೆ ಈಗ ನೂರಮೂರು ವರ್ಷ. ಶತಕ ಪೂರೈಸಿದ ಅಜ್ಜಿ ಈಗಲೂ ಖಡಕ್ ಆಗಿ ಮಾತನಾಡುತ್ತಾರೆ. ತಾನು ಬಾಳಪ್ಪನ ತಂಡದ ಭಾಗವಾಗಿ ವಿದೇಶದಲ್ಲಿ ತೊಗಲುಗೊಂಬೆಯಾಟ ಆಡಿಸಿದ್ದನ್ನು ಬೆರಗಿನಿಂದ ಕಣ್ಮುಂದೆ ಕಟ್ಟುವಂತೆ ವಿವರಿಸುತ್ತಾರೆ. 1992 ರಲ್ಲಿ ದೆಹಲಿಯಲ್ಲಿ ಸಂಗೀತ ಮತ್ತು ನಾಟಕ ಅಕಾಡೆಮಿಯವರಿಂದ ಅಂತರಾಷ್ಟ್ರೀಯ ಪೊಪೆಟ್ರಿ ಫೆಸ್ಟಿವೆಲ್ ನಡೆಯುತ್ತದೆ. ಈ ಸಂದರ್ಭದಲ್ಲಿ ಅತ್ಯುತ್ತಮ ಮತ್ತು ಪ್ರಾಚೀನ ಬೊಂಬೆಗಳಿರುವ ತಂಡಗಳನ್ನು ಕಳಿಸಲು ಜಾನಪದ ಮತ್ತು ಯಕ್ಷಗಾನ ಅಕಾಡೆಮಿಗೆ ಪತ್ರ ಬರುತ್ತದೆ. ಆಗ ರಿಜಿಸ್ಟ್ರಾರ್ ಆಗಿದ್ದ ಹಿ.ಚಿ.ಬೋರಲಿಂಗಯ್ಯ ಅವರು ಮೊರನಾಳದ ದೊಡ್ಡ ಬಾಳಪ್ಪ ಅವರ ತಂಡವನ್ನು ಆಯ್ಕೆ ಮಾಡಿ, ದೆಹಲಿಗೆ ಕರೆದುಕೊಂಡು ಹೋಗುತ್ತಾರೆ. ಈ ಫೆಸ್ಟಿವೆಲ್‍ಗೆ ಬಂದ ಯುರೋಪಿನ ಪ್ರಾನ್ಸ್ ದೇಶದ ಕಲ್ಚರ್ ಡುಮ್ಯಾಂಡೆ ಎನ್ನುವ ಸಂಸ್ಥೆಯವರು ದೊಡ್ಡ ಬಾಳಪ್ಪ ಅವರ ತಂಡವನ್ನು ಆಯ್ಕೆ ಮಾಡುತ್ತಾರೆ. ಆಗ ಪ್ರೊ.ಹಿ.ಚಿ.ಬೋರಲಿಂಗಯ್ಯ ಮತ್ತು ಮಂಗಳೂರಿನ ಉಪಧ್ಯಾಯ ಅವರು ದೊಡ್ಡಬಾಳಪ್ಪ ಅವರ ತಂಡವನ್ನು ಕರೆದುಕೊಂಡು ಹೋಗುತ್ತಾರೆ. ಯುರೋಪಿನ ಇಟಲಿ, ಪ್ರಾನ್ಸ್, ನೆದರ್ ಲ್ಯಾಂಡ್ಸ್ ಮೂರು ದೇಶಗಳಲ್ಲಿ ಬಾಳಪ್ಪನ ತಂಡ ಪ್ರದರ್ಶನ ಕೊಡುತ್ತದೆ.

ಈ ಯುರೋಪ್‍ನ ಪ್ರವಾಸದ ನಂತರ ಕೇಂದ್ರ ಸಂಸ್ಕೃತಿ ಇಲಾಖೆಯವರು ಇರಾನಿನ ತೆಹ್ರಾನ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಪೊಪೆಟ್ ಥಿಯೇಟರ್ ಫೆಸ್ಟಿವೆಲ್‍ಗೆ ದೊಡ್ಡ ಬಾಳಪ್ಪನವರ ತಂಡವನ್ನೆ ಆಯ್ಕೆ ಮಾಡುತ್ತಾರೆ. ಈ ಎಲ್ಲಾ ಪ್ರವಾಸದಲ್ಲಿ ಭೀಮವ್ವ ಹಾಡುಗಾರ್ತಿಯಾಗಿ ದೊಡ್ಡಬಾಳಪ್ಪನ ಜೊತೆ ಇರುತ್ತಾರೆ. ಪ್ರೊ.ಹಿ.ಚಿ. ಬೋರಲಿಂಗಯ್ಯ ಅವರು `ದೊಡ್ಡಬಾಳಪ್ಪ ಬಹಳ ಪ್ರತಿಭಾವಂತ ಕಲಾವಿದ. ತುಂಬಾ ಪ್ರಾಚೀನವಾದ ತೊಗಲು ಗೊಂಬೆಗಳನ್ನು ಸಂರಕ್ಷಿಸಿದ್ದರು. ಬಾಳಪ್ಪನ ಹೆಂಡತಿ ಭೀಮವ್ವನಿಗೆ ಒಳ್ಳೆಯ ಕಂಠವಿತ್ತು, ಅದ್ಭುತವಾಗಿ ಹಾಡುತ್ತಿದ್ದರು, ಇವರ ತಂಡವನ್ನು ಯೂರೋಪ್ ಮತ್ತು ಇರಾನ್‍ಗೆ ಕರೆದುಕೊಂಡು ಹೋಗಿ ಬಂದದ್ದಕ್ಕೆ ಖುಷಿ ಇದೆ’ ಎನ್ನುತ್ತಾರೆ. ಹೀಗೆ ಕೊಪ್ಪಳ ಸಮೀಪದ ಹಳ್ಳಿಯೊಂದರ ಭೀಮವ್ವ ವಿದೇಶಗಳಲ್ಲಿ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸಿ ಸೈ ಎನಿಸಿಕೊಂಡಿದ್ದಾರೆ.

ಭೀಮವ್ವ ಈಗಲೂ ಇನ್ನೂರು ವರ್ಷದ ಹಳೆಯ ತೊಗಲುಗೊಂಬೆಗಳನ್ನು ಸಂರಕ್ಷಿಸಿದ್ದಾರೆ. ರಾಮಾಯಣ, ಮಹಾಭಾರತ ಕುರಿತ ಪ್ರಸಂಗಗಳನ್ನು ಭೀಮವ್ವ ನೆನಪಿನಿಂದ ಈಗಲೂ ಹಾಡುತ್ತಾರೆ. ಗೊಂಬೆಗಳ ಲಯಕ್ಕೆ ತಕ್ಕ ಹಾಗೆ ಹಾಡಿಕೆಯನ್ನು ಹೊಂದಿಸಬೇಕು. ಇದೊಂದು ಸೂಕ್ಷ್ಮವಾಗ ಕಲೆ. ಇಂತಹ ಕಲೆಯ ಎಲ್ಲಾ ವಿಭಾಗಗಳಲ್ಲೂ ಭೀಮವ್ವನಿಗೆ ಪ್ರಾವಿಣ್ಯತೆಯಿದೆ. ತೊಗಲುಗೊಂಬೆ ತಯಾರಿಕೆ, ಅದಕ್ಕೆ ಬೇಕಾದ ಸ್ಥಳೀಯ ಪರಿಕರಗಳನ್ನು ಬಳಸಿ ಬಣ್ಣಗಾರಿಕೆ ಮಾಡುವುದು, ತೊಗಲುಗೊಂಬೆ ಮಾಡಲು ಜಿಂಕೆ ಚರ್ಮವನ್ನು ಹದ ಮಾಡುವುದು, ಹೀಗೆ ತೊಗಲು ಗೊಂಬೆ ತಯಾರಿಕೆಗೆ ಬೇಕಾದ ದೇಸಿ ತಿಳಿವು ಅಜ್ಜಿಗಿದೆ. ಅದನ್ನು ಮಕ್ಕಳು ಮೊಮ್ಮಕ್ಕಳಿಗೂ ಕಲಿಸಿಕೊಟ್ಟಿದ್ದಾರೆ. ಇದೀಗ ಜಿಂಕೆಯ ಚರ್ಮದ ಕೊರತೆಯಿಂದಲೋ, ಅತಿಯಾದ ಶ್ರಮ ಮತ್ತು ಕೌಶಲ್ಯ ಬೇಡುವುದರಿಂದಲೋ ಅಜ್ಜಿಯ ಮೊಮ್ಮಕ್ಕಳು ಹೊಸ ತೊಗಲುಗೊಂಬೆಗಳನ್ನು ಮಾಡುವಲ್ಲಿ ಹಿಂದೆ ಸರಿದಿದ್ದಾರೆ. ತಮಗೆ ಹೊಸ ಗೊಂಬೆಗಳು ಬೇಕಾದರೆ ಆಂದ್ರದ ಅನಂತಪುರ, ಧರ್ಮಾವರಂ, ಹಿಂದೂಪುರ ಮೊದಲಾದ ಕಡೆಗಳಿಗೆ ಹೋಗಿ ದುಬಾರಿ ಬೆಲೆಕೊಟ್ಟು ತರುತ್ತಾರೆ. ಹೀಗಾಗಿ ಈ ಕುಟುಂಬ ತೊಗಲುಗೊಂಬೆಯ ತಯಾರಿಕೆಯ ಸ್ವಾಯತ್ತತೆಯಿಂದ ಇದೀಗ ಪರಾವಲಂಬಿಯಾಗಿದೆ.

ದೇಶದ ಹಲವೆಡೆ, ರಾಜ್ಯದ ವಿವಿದ ಜಿಲ್ಲೆಗಳಲ್ಲಿ ಭೀಮವ್ವ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸಿದ್ದಾರೆ. ಇದೀಗ ಮನೆಯಲ್ಲಿ ಮಕ್ಕಳು, ಮೊಮ್ಮಕ್ಕಳು ಕಲಾತಂಡಗಳಾಗಿ ದೇಶ, ರಾಜ್ಯದ ವಿವಿಧ ಭಾಗಗಳಲ್ಲಿ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸುವ ಮೂಲಕ ಕಲೆಯನ್ನು ಜೀವಂತಗೊಳಿಸಿದ್ದಾರೆ. 2004 ರಲ್ಲಿ ಜಾನಪದ ಯಕ್ಷಗಾನ ಅಕಾಡೆಮಿಯು ಭೀಮವ್ವನಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. 2014 ರಲ್ಲಿ ಭೀಮವ್ವನ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿದೆ. 2010 ರಲ್ಲಿ ಡಿಸೆಂಬರ್ 1 ರಿಂದ 5 ರ ತನಕ ರಾಷ್ಟ್ರೀಯ ಸಂಗೀತ ನಾಟಕ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿದ `ತೊಗಲುಗೊಂಬೆ ಪರಂಪರೆ’ ಕಾರ್ಯಕ್ರಮದಲ್ಲಿ ಈ ಕುಟುಂಬದ ನಾಲ್ಕೈದು ಜನ ಪ್ರತ್ಯೇಕ ತೊಗಲುಗೊಂಬೆ ಪ್ರಸಂಗಗಳನ್ನು ಪ್ರದರ್ಶನ ಮಾಡಿ ಗಮನ ಸೆಳೆದಿದ್ದರು. ಭೀಮವ್ವನ ದೇಶಿ ತಿಳಿವನ್ನು ಸಂಗ್ರಹಿಸುವ ಅಗತ್ಯವಿದೆ. ನೂರಾ ಮೂರು ವರ್ಷದ ಅಜ್ಜಿಯ ಆರೋಗ್ಯ ಚೆನ್ನಾಗಿರಲಿ, ಮತ್ತಷ್ಟು ಪ್ರದರ್ಶನ ನೀಡುವ ಚೈತನ್ಯ ಹೆಚ್ಚಲಿ ಎಂದು ಪತ್ರಿಕೆ ಆಶಿಸುತ್ತದೆ.


ಇದನ್ನು ಓದಿ: ಜೇನುಕುರುಬರ ಒಳಿತಾಗಿ ದುಡಿವ ಗಟ್ಟಿಗಿತ್ತಿ ಜಾನಕಮ್ಮ.. ಎಲೆಮರೆ-4

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...