Homeಅಂಕಣಗಳುಎಲೆಮರೆವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ!

ವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ!

ಭೀಮವ್ವ ಈಗಲೂ ಇನ್ನೂರು ವರ್ಷದ ಹಳೆಯ ತೊಗಲುಗೊಂಬೆಗಳನ್ನು ಸಂರಕ್ಷಿಸಿದ್ದಾರೆ. ರಾಮಾಯಣ, ಮಹಾಭಾರತ ಕುರಿತ ಪ್ರಸಂಗಗಳನ್ನು ಭೀಮವ್ವ ನೆನಪಿನಿಂದ ಈಗಲೂ ಹಾಡುತ್ತಾರೆ. ಗೊಂಬೆಗಳ ಲಯಕ್ಕೆ ತಕ್ಕ ಹಾಗೆ ಹಾಡಿಕೆಯನ್ನು ಹೊಂದಿಸಬೇಕು. ಇದೊಂದು ಸೂಕ್ಷ್ಮವಾಗ ಕಲೆ. ಇಂತಹ ಕಲೆಯ ಎಲ್ಲಾ ವಿಭಾಗಗಳಲ್ಲೂ ಭೀಮವ್ವನಿಗೆ ಪ್ರಾವಿಣ್ಯತೆಯಿದೆ.

- Advertisement -
- Advertisement -

ಎಲೆಮರೆ-42

  • ಅರುಣ್‌ ಜೋಳದ ಕೂಡ್ಲಿಗಿ

ಕೊಪ್ಪಳದ ಮಿತ್ರ ಮಂಜುನಾಥ ಗೊಂಡಬಾಳ ತಮ್ಮ ‘ಬದಲಾವಣೆ’ ಪತ್ರಿಕೆಯಲ್ಲಿ ‘ದೇಶ ವಿದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶಿಸಿದ ಮಹಾನ್ ಕಲಾವಿದೆ’ ಎನ್ನುವ ಶೀರ್ಷಿಕೆಯಲ್ಲಿ 103 ವರ್ಷದ ಹಿರಿಯಜ್ಜಿ ಭೀಮವ್ವನ ಬಗ್ಗೆ ಪರಿಚಯಿಸಿದ್ದರು. ಕುತೂಹಲದಿಂದ ಅಜ್ಜಿಯ ಬಗ್ಗೆ ಮತ್ತಷ್ಟು ತಿಳಿದುಕೊಂಡೆ. ಈಚೆಗೆ ಜಾನಪದ ಅಕಾಡೆಮಿ ಅಧ್ಯಕ್ಷೆಯಾದ ಮಂಜಮ್ಮ ಜೋಗತಿಯವರು 2020 ರ ‘ಜಾನಪದ ಶ್ರೀ’ ಪ್ರಶಸ್ತಿಗೆ ಭೀಮವ್ವನನ್ನು ಆಯ್ಕೆ ಮಾಡಿದ್ದು ಖುಷಿಕೊಟ್ಟಿತು. ಗಂಡುಪಾರಮ್ಯದ ಕಲೆಗಳಲ್ಲಿ ಹೆಣ್ಣುಮಕ್ಕಳು ತಮ್ಮದೇ ಛಾಪು ಮೂಡಿಸುವುದು ಜನಪದ ಕಲೆಗಳಲ್ಲಿ ವಿರಳ. ತೆರೆ ಮರೆಯಲ್ಲಿರುವುದೇ ಹೆಚ್ಚು. ಕಿಳ್ಳೇಕ್ಯಾತ ಸಮುದಾಯದ ತೊಗಲುಗೊಂಬೆ ಕಲೆ ಏಕವ್ಯಕ್ತಿ ಪ್ರದರ್ಶಿಸುವ ಕಲೆಯಲ್ಲ. ಈ ಕಲೆಗೆ ಇಡೀ ಕುಟುಂಬವೇ ಪಾಲ್ಗೊಳ್ಳಬೇಕು. ಹಾಗಾಗಿ ಮಹಿಳೆಯರು ಚಿಕ್ಕ ಮಕ್ಕಳು ಕೂಡ ತೊಗಲುಗೊಂಬೆಯಾಟದಲ್ಲಿ ಪಾಲ್ಗೊಳ್ಳುತ್ತಾರೆ. ಈ ಕಾರಣದಿಂದಾಗಿ ವಿಶೇಷವಾಗಿ ಈ ಕಲೆಯಲ್ಲಿ ಮಹಿಳೆಯರು ಕಾಣಸಿಗುತ್ತಾರೆ.

ಕೊಪ್ಪಳದ ಇರಕಲ್ಲಗಡಾದ ಹನುಮಟ್ಟಿಯ ಸಂಜೀವಪ್ಪ ಹೊಳೆಯಮ್ಮರ ಮಗಳಾದ ಭೀಮವ್ವ, ಕೊಪ್ಪಳದಿಂದ 22 ಕಿ.ಮೀ ದೂರದ ಮೊರನಾಳದ ತೊಗಲುಗೊಂಬೆಯಾಟದಲ್ಲಿ ಆಗಲೆ ಪ್ರಸಿದ್ಧಿ ಪಡೆದಿದ್ದ ದೊಡ್ಡಬಾಳಪ್ಪ ಅವರನ್ನು ಮದುವೆಯಾಗುತ್ತಾರೆ. ತವರು ಮನೆಯಲ್ಲಿಯೂ ಭೀಮವ್ವ ತೊಗಲುಗೊಂಬೆ ಕಲೆಯನ್ನು ಬಾಲ್ಯದಿಂದಲೇ ಕಲಿತಿದ್ದರಿಂದ ಬಾಳಪ್ಪನ ಜತೆಗಿನ ಬಾಳುವೆಯಲ್ಲಿ ತೊಗಲುಗೊಂಬೆ ಕಲೆಯನ್ನು ಭೀಮವ್ವ ಮತ್ತಷ್ಟು ತನ್ಮಯತೆಯಿಂದ ಕಲಿಯುತ್ತಾಳೆ. ಇದರಿಂದ ಬಾಳಪ್ಪನ ತೊಗಲುಗೊಂಬೆಯಾಟದಲ್ಲಿ ಭೀಮವ್ವ ತನ್ನದೇ ಪಾತ್ರ ವಹಿಸುತ್ತಾಳೆ. ಹೀಗೆ ನಡೆದ ಜೀವನದಲ್ಲಿ ವಿರೂಪಾಕ್ಷಪ್ಪ, ಯಂಕಪ್ಪ, ಹಾಗೂ ಕೇಶಪ್ಪ ಮೂವರು ಮಕ್ಕಳಾಗುತ್ತಾರೆ. ಈ ಮೂವರೂ ತೊಗಲುಗೊಂಬೆಯಾಟ ಕಲಿಯುತ್ತಾರೆ. ಸೊಸೆಯಂದಿರೂ ತೊಗಲುಗೊಂಬೆಯಾಟದಲ್ಲಿ ತೊಡಗಿಕೊಳ್ಳುತ್ತಾರೆ. ಇದೀಗ ಅಜ್ಜಿಯ ಮೊಮ್ಮಕ್ಕಳಾದ ಶಿವಪ್ಪ, ಶಿವರಾಜ, ವಸಂತಕುಮಾರ್, ಪಾಂಡುರಂಗ, ರಮೇಶ್ ಹಾಗೂ ಪರುಶುರಾಮ ಎಲ್ಲರೂ ಗೊಂಬೆಯಾಟದಲ್ಲಿ ಪ್ರಾವಿಣ್ಯತೆ ಪಡೆದಿದ್ದಾರೆ. ಇದೀಗ ಮರಿ ಮೊಮ್ಮಕ್ಕಳನ್ನು ಪಡೆದ ಭೀಮಜ್ಜಿಯ ಮನೆಯಲ್ಲಿ ನಾಲ್ಕು ತಲೆಮಾರಿನ ಕಲಾವಿದರಿದ್ದಾರೆ.

ಈ ಅಜ್ಜಿಗೆ ಈಗ ನೂರಮೂರು ವರ್ಷ. ಶತಕ ಪೂರೈಸಿದ ಅಜ್ಜಿ ಈಗಲೂ ಖಡಕ್ ಆಗಿ ಮಾತನಾಡುತ್ತಾರೆ. ತಾನು ಬಾಳಪ್ಪನ ತಂಡದ ಭಾಗವಾಗಿ ವಿದೇಶದಲ್ಲಿ ತೊಗಲುಗೊಂಬೆಯಾಟ ಆಡಿಸಿದ್ದನ್ನು ಬೆರಗಿನಿಂದ ಕಣ್ಮುಂದೆ ಕಟ್ಟುವಂತೆ ವಿವರಿಸುತ್ತಾರೆ. 1992 ರಲ್ಲಿ ದೆಹಲಿಯಲ್ಲಿ ಸಂಗೀತ ಮತ್ತು ನಾಟಕ ಅಕಾಡೆಮಿಯವರಿಂದ ಅಂತರಾಷ್ಟ್ರೀಯ ಪೊಪೆಟ್ರಿ ಫೆಸ್ಟಿವೆಲ್ ನಡೆಯುತ್ತದೆ. ಈ ಸಂದರ್ಭದಲ್ಲಿ ಅತ್ಯುತ್ತಮ ಮತ್ತು ಪ್ರಾಚೀನ ಬೊಂಬೆಗಳಿರುವ ತಂಡಗಳನ್ನು ಕಳಿಸಲು ಜಾನಪದ ಮತ್ತು ಯಕ್ಷಗಾನ ಅಕಾಡೆಮಿಗೆ ಪತ್ರ ಬರುತ್ತದೆ. ಆಗ ರಿಜಿಸ್ಟ್ರಾರ್ ಆಗಿದ್ದ ಹಿ.ಚಿ.ಬೋರಲಿಂಗಯ್ಯ ಅವರು ಮೊರನಾಳದ ದೊಡ್ಡ ಬಾಳಪ್ಪ ಅವರ ತಂಡವನ್ನು ಆಯ್ಕೆ ಮಾಡಿ, ದೆಹಲಿಗೆ ಕರೆದುಕೊಂಡು ಹೋಗುತ್ತಾರೆ. ಈ ಫೆಸ್ಟಿವೆಲ್‍ಗೆ ಬಂದ ಯುರೋಪಿನ ಪ್ರಾನ್ಸ್ ದೇಶದ ಕಲ್ಚರ್ ಡುಮ್ಯಾಂಡೆ ಎನ್ನುವ ಸಂಸ್ಥೆಯವರು ದೊಡ್ಡ ಬಾಳಪ್ಪ ಅವರ ತಂಡವನ್ನು ಆಯ್ಕೆ ಮಾಡುತ್ತಾರೆ. ಆಗ ಪ್ರೊ.ಹಿ.ಚಿ.ಬೋರಲಿಂಗಯ್ಯ ಮತ್ತು ಮಂಗಳೂರಿನ ಉಪಧ್ಯಾಯ ಅವರು ದೊಡ್ಡಬಾಳಪ್ಪ ಅವರ ತಂಡವನ್ನು ಕರೆದುಕೊಂಡು ಹೋಗುತ್ತಾರೆ. ಯುರೋಪಿನ ಇಟಲಿ, ಪ್ರಾನ್ಸ್, ನೆದರ್ ಲ್ಯಾಂಡ್ಸ್ ಮೂರು ದೇಶಗಳಲ್ಲಿ ಬಾಳಪ್ಪನ ತಂಡ ಪ್ರದರ್ಶನ ಕೊಡುತ್ತದೆ.

ಈ ಯುರೋಪ್‍ನ ಪ್ರವಾಸದ ನಂತರ ಕೇಂದ್ರ ಸಂಸ್ಕೃತಿ ಇಲಾಖೆಯವರು ಇರಾನಿನ ತೆಹ್ರಾನ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಪೊಪೆಟ್ ಥಿಯೇಟರ್ ಫೆಸ್ಟಿವೆಲ್‍ಗೆ ದೊಡ್ಡ ಬಾಳಪ್ಪನವರ ತಂಡವನ್ನೆ ಆಯ್ಕೆ ಮಾಡುತ್ತಾರೆ. ಈ ಎಲ್ಲಾ ಪ್ರವಾಸದಲ್ಲಿ ಭೀಮವ್ವ ಹಾಡುಗಾರ್ತಿಯಾಗಿ ದೊಡ್ಡಬಾಳಪ್ಪನ ಜೊತೆ ಇರುತ್ತಾರೆ. ಪ್ರೊ.ಹಿ.ಚಿ. ಬೋರಲಿಂಗಯ್ಯ ಅವರು `ದೊಡ್ಡಬಾಳಪ್ಪ ಬಹಳ ಪ್ರತಿಭಾವಂತ ಕಲಾವಿದ. ತುಂಬಾ ಪ್ರಾಚೀನವಾದ ತೊಗಲು ಗೊಂಬೆಗಳನ್ನು ಸಂರಕ್ಷಿಸಿದ್ದರು. ಬಾಳಪ್ಪನ ಹೆಂಡತಿ ಭೀಮವ್ವನಿಗೆ ಒಳ್ಳೆಯ ಕಂಠವಿತ್ತು, ಅದ್ಭುತವಾಗಿ ಹಾಡುತ್ತಿದ್ದರು, ಇವರ ತಂಡವನ್ನು ಯೂರೋಪ್ ಮತ್ತು ಇರಾನ್‍ಗೆ ಕರೆದುಕೊಂಡು ಹೋಗಿ ಬಂದದ್ದಕ್ಕೆ ಖುಷಿ ಇದೆ’ ಎನ್ನುತ್ತಾರೆ. ಹೀಗೆ ಕೊಪ್ಪಳ ಸಮೀಪದ ಹಳ್ಳಿಯೊಂದರ ಭೀಮವ್ವ ವಿದೇಶಗಳಲ್ಲಿ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸಿ ಸೈ ಎನಿಸಿಕೊಂಡಿದ್ದಾರೆ.

ಭೀಮವ್ವ ಈಗಲೂ ಇನ್ನೂರು ವರ್ಷದ ಹಳೆಯ ತೊಗಲುಗೊಂಬೆಗಳನ್ನು ಸಂರಕ್ಷಿಸಿದ್ದಾರೆ. ರಾಮಾಯಣ, ಮಹಾಭಾರತ ಕುರಿತ ಪ್ರಸಂಗಗಳನ್ನು ಭೀಮವ್ವ ನೆನಪಿನಿಂದ ಈಗಲೂ ಹಾಡುತ್ತಾರೆ. ಗೊಂಬೆಗಳ ಲಯಕ್ಕೆ ತಕ್ಕ ಹಾಗೆ ಹಾಡಿಕೆಯನ್ನು ಹೊಂದಿಸಬೇಕು. ಇದೊಂದು ಸೂಕ್ಷ್ಮವಾಗ ಕಲೆ. ಇಂತಹ ಕಲೆಯ ಎಲ್ಲಾ ವಿಭಾಗಗಳಲ್ಲೂ ಭೀಮವ್ವನಿಗೆ ಪ್ರಾವಿಣ್ಯತೆಯಿದೆ. ತೊಗಲುಗೊಂಬೆ ತಯಾರಿಕೆ, ಅದಕ್ಕೆ ಬೇಕಾದ ಸ್ಥಳೀಯ ಪರಿಕರಗಳನ್ನು ಬಳಸಿ ಬಣ್ಣಗಾರಿಕೆ ಮಾಡುವುದು, ತೊಗಲುಗೊಂಬೆ ಮಾಡಲು ಜಿಂಕೆ ಚರ್ಮವನ್ನು ಹದ ಮಾಡುವುದು, ಹೀಗೆ ತೊಗಲು ಗೊಂಬೆ ತಯಾರಿಕೆಗೆ ಬೇಕಾದ ದೇಸಿ ತಿಳಿವು ಅಜ್ಜಿಗಿದೆ. ಅದನ್ನು ಮಕ್ಕಳು ಮೊಮ್ಮಕ್ಕಳಿಗೂ ಕಲಿಸಿಕೊಟ್ಟಿದ್ದಾರೆ. ಇದೀಗ ಜಿಂಕೆಯ ಚರ್ಮದ ಕೊರತೆಯಿಂದಲೋ, ಅತಿಯಾದ ಶ್ರಮ ಮತ್ತು ಕೌಶಲ್ಯ ಬೇಡುವುದರಿಂದಲೋ ಅಜ್ಜಿಯ ಮೊಮ್ಮಕ್ಕಳು ಹೊಸ ತೊಗಲುಗೊಂಬೆಗಳನ್ನು ಮಾಡುವಲ್ಲಿ ಹಿಂದೆ ಸರಿದಿದ್ದಾರೆ. ತಮಗೆ ಹೊಸ ಗೊಂಬೆಗಳು ಬೇಕಾದರೆ ಆಂದ್ರದ ಅನಂತಪುರ, ಧರ್ಮಾವರಂ, ಹಿಂದೂಪುರ ಮೊದಲಾದ ಕಡೆಗಳಿಗೆ ಹೋಗಿ ದುಬಾರಿ ಬೆಲೆಕೊಟ್ಟು ತರುತ್ತಾರೆ. ಹೀಗಾಗಿ ಈ ಕುಟುಂಬ ತೊಗಲುಗೊಂಬೆಯ ತಯಾರಿಕೆಯ ಸ್ವಾಯತ್ತತೆಯಿಂದ ಇದೀಗ ಪರಾವಲಂಬಿಯಾಗಿದೆ.

ದೇಶದ ಹಲವೆಡೆ, ರಾಜ್ಯದ ವಿವಿದ ಜಿಲ್ಲೆಗಳಲ್ಲಿ ಭೀಮವ್ವ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸಿದ್ದಾರೆ. ಇದೀಗ ಮನೆಯಲ್ಲಿ ಮಕ್ಕಳು, ಮೊಮ್ಮಕ್ಕಳು ಕಲಾತಂಡಗಳಾಗಿ ದೇಶ, ರಾಜ್ಯದ ವಿವಿಧ ಭಾಗಗಳಲ್ಲಿ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸುವ ಮೂಲಕ ಕಲೆಯನ್ನು ಜೀವಂತಗೊಳಿಸಿದ್ದಾರೆ. 2004 ರಲ್ಲಿ ಜಾನಪದ ಯಕ್ಷಗಾನ ಅಕಾಡೆಮಿಯು ಭೀಮವ್ವನಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. 2014 ರಲ್ಲಿ ಭೀಮವ್ವನ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿದೆ. 2010 ರಲ್ಲಿ ಡಿಸೆಂಬರ್ 1 ರಿಂದ 5 ರ ತನಕ ರಾಷ್ಟ್ರೀಯ ಸಂಗೀತ ನಾಟಕ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿದ `ತೊಗಲುಗೊಂಬೆ ಪರಂಪರೆ’ ಕಾರ್ಯಕ್ರಮದಲ್ಲಿ ಈ ಕುಟುಂಬದ ನಾಲ್ಕೈದು ಜನ ಪ್ರತ್ಯೇಕ ತೊಗಲುಗೊಂಬೆ ಪ್ರಸಂಗಗಳನ್ನು ಪ್ರದರ್ಶನ ಮಾಡಿ ಗಮನ ಸೆಳೆದಿದ್ದರು. ಭೀಮವ್ವನ ದೇಶಿ ತಿಳಿವನ್ನು ಸಂಗ್ರಹಿಸುವ ಅಗತ್ಯವಿದೆ. ನೂರಾ ಮೂರು ವರ್ಷದ ಅಜ್ಜಿಯ ಆರೋಗ್ಯ ಚೆನ್ನಾಗಿರಲಿ, ಮತ್ತಷ್ಟು ಪ್ರದರ್ಶನ ನೀಡುವ ಚೈತನ್ಯ ಹೆಚ್ಚಲಿ ಎಂದು ಪತ್ರಿಕೆ ಆಶಿಸುತ್ತದೆ.


ಇದನ್ನು ಓದಿ: ಜೇನುಕುರುಬರ ಒಳಿತಾಗಿ ದುಡಿವ ಗಟ್ಟಿಗಿತ್ತಿ ಜಾನಕಮ್ಮ.. ಎಲೆಮರೆ-4

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...