Homeಅಂಕಣಗಳುಎಲೆಮರೆವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ!

ವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ!

ಭೀಮವ್ವ ಈಗಲೂ ಇನ್ನೂರು ವರ್ಷದ ಹಳೆಯ ತೊಗಲುಗೊಂಬೆಗಳನ್ನು ಸಂರಕ್ಷಿಸಿದ್ದಾರೆ. ರಾಮಾಯಣ, ಮಹಾಭಾರತ ಕುರಿತ ಪ್ರಸಂಗಗಳನ್ನು ಭೀಮವ್ವ ನೆನಪಿನಿಂದ ಈಗಲೂ ಹಾಡುತ್ತಾರೆ. ಗೊಂಬೆಗಳ ಲಯಕ್ಕೆ ತಕ್ಕ ಹಾಗೆ ಹಾಡಿಕೆಯನ್ನು ಹೊಂದಿಸಬೇಕು. ಇದೊಂದು ಸೂಕ್ಷ್ಮವಾಗ ಕಲೆ. ಇಂತಹ ಕಲೆಯ ಎಲ್ಲಾ ವಿಭಾಗಗಳಲ್ಲೂ ಭೀಮವ್ವನಿಗೆ ಪ್ರಾವಿಣ್ಯತೆಯಿದೆ.

- Advertisement -
- Advertisement -

ಎಲೆಮರೆ-42

  • ಅರುಣ್‌ ಜೋಳದ ಕೂಡ್ಲಿಗಿ

ಕೊಪ್ಪಳದ ಮಿತ್ರ ಮಂಜುನಾಥ ಗೊಂಡಬಾಳ ತಮ್ಮ ‘ಬದಲಾವಣೆ’ ಪತ್ರಿಕೆಯಲ್ಲಿ ‘ದೇಶ ವಿದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶಿಸಿದ ಮಹಾನ್ ಕಲಾವಿದೆ’ ಎನ್ನುವ ಶೀರ್ಷಿಕೆಯಲ್ಲಿ 103 ವರ್ಷದ ಹಿರಿಯಜ್ಜಿ ಭೀಮವ್ವನ ಬಗ್ಗೆ ಪರಿಚಯಿಸಿದ್ದರು. ಕುತೂಹಲದಿಂದ ಅಜ್ಜಿಯ ಬಗ್ಗೆ ಮತ್ತಷ್ಟು ತಿಳಿದುಕೊಂಡೆ. ಈಚೆಗೆ ಜಾನಪದ ಅಕಾಡೆಮಿ ಅಧ್ಯಕ್ಷೆಯಾದ ಮಂಜಮ್ಮ ಜೋಗತಿಯವರು 2020 ರ ‘ಜಾನಪದ ಶ್ರೀ’ ಪ್ರಶಸ್ತಿಗೆ ಭೀಮವ್ವನನ್ನು ಆಯ್ಕೆ ಮಾಡಿದ್ದು ಖುಷಿಕೊಟ್ಟಿತು. ಗಂಡುಪಾರಮ್ಯದ ಕಲೆಗಳಲ್ಲಿ ಹೆಣ್ಣುಮಕ್ಕಳು ತಮ್ಮದೇ ಛಾಪು ಮೂಡಿಸುವುದು ಜನಪದ ಕಲೆಗಳಲ್ಲಿ ವಿರಳ. ತೆರೆ ಮರೆಯಲ್ಲಿರುವುದೇ ಹೆಚ್ಚು. ಕಿಳ್ಳೇಕ್ಯಾತ ಸಮುದಾಯದ ತೊಗಲುಗೊಂಬೆ ಕಲೆ ಏಕವ್ಯಕ್ತಿ ಪ್ರದರ್ಶಿಸುವ ಕಲೆಯಲ್ಲ. ಈ ಕಲೆಗೆ ಇಡೀ ಕುಟುಂಬವೇ ಪಾಲ್ಗೊಳ್ಳಬೇಕು. ಹಾಗಾಗಿ ಮಹಿಳೆಯರು ಚಿಕ್ಕ ಮಕ್ಕಳು ಕೂಡ ತೊಗಲುಗೊಂಬೆಯಾಟದಲ್ಲಿ ಪಾಲ್ಗೊಳ್ಳುತ್ತಾರೆ. ಈ ಕಾರಣದಿಂದಾಗಿ ವಿಶೇಷವಾಗಿ ಈ ಕಲೆಯಲ್ಲಿ ಮಹಿಳೆಯರು ಕಾಣಸಿಗುತ್ತಾರೆ.

ಕೊಪ್ಪಳದ ಇರಕಲ್ಲಗಡಾದ ಹನುಮಟ್ಟಿಯ ಸಂಜೀವಪ್ಪ ಹೊಳೆಯಮ್ಮರ ಮಗಳಾದ ಭೀಮವ್ವ, ಕೊಪ್ಪಳದಿಂದ 22 ಕಿ.ಮೀ ದೂರದ ಮೊರನಾಳದ ತೊಗಲುಗೊಂಬೆಯಾಟದಲ್ಲಿ ಆಗಲೆ ಪ್ರಸಿದ್ಧಿ ಪಡೆದಿದ್ದ ದೊಡ್ಡಬಾಳಪ್ಪ ಅವರನ್ನು ಮದುವೆಯಾಗುತ್ತಾರೆ. ತವರು ಮನೆಯಲ್ಲಿಯೂ ಭೀಮವ್ವ ತೊಗಲುಗೊಂಬೆ ಕಲೆಯನ್ನು ಬಾಲ್ಯದಿಂದಲೇ ಕಲಿತಿದ್ದರಿಂದ ಬಾಳಪ್ಪನ ಜತೆಗಿನ ಬಾಳುವೆಯಲ್ಲಿ ತೊಗಲುಗೊಂಬೆ ಕಲೆಯನ್ನು ಭೀಮವ್ವ ಮತ್ತಷ್ಟು ತನ್ಮಯತೆಯಿಂದ ಕಲಿಯುತ್ತಾಳೆ. ಇದರಿಂದ ಬಾಳಪ್ಪನ ತೊಗಲುಗೊಂಬೆಯಾಟದಲ್ಲಿ ಭೀಮವ್ವ ತನ್ನದೇ ಪಾತ್ರ ವಹಿಸುತ್ತಾಳೆ. ಹೀಗೆ ನಡೆದ ಜೀವನದಲ್ಲಿ ವಿರೂಪಾಕ್ಷಪ್ಪ, ಯಂಕಪ್ಪ, ಹಾಗೂ ಕೇಶಪ್ಪ ಮೂವರು ಮಕ್ಕಳಾಗುತ್ತಾರೆ. ಈ ಮೂವರೂ ತೊಗಲುಗೊಂಬೆಯಾಟ ಕಲಿಯುತ್ತಾರೆ. ಸೊಸೆಯಂದಿರೂ ತೊಗಲುಗೊಂಬೆಯಾಟದಲ್ಲಿ ತೊಡಗಿಕೊಳ್ಳುತ್ತಾರೆ. ಇದೀಗ ಅಜ್ಜಿಯ ಮೊಮ್ಮಕ್ಕಳಾದ ಶಿವಪ್ಪ, ಶಿವರಾಜ, ವಸಂತಕುಮಾರ್, ಪಾಂಡುರಂಗ, ರಮೇಶ್ ಹಾಗೂ ಪರುಶುರಾಮ ಎಲ್ಲರೂ ಗೊಂಬೆಯಾಟದಲ್ಲಿ ಪ್ರಾವಿಣ್ಯತೆ ಪಡೆದಿದ್ದಾರೆ. ಇದೀಗ ಮರಿ ಮೊಮ್ಮಕ್ಕಳನ್ನು ಪಡೆದ ಭೀಮಜ್ಜಿಯ ಮನೆಯಲ್ಲಿ ನಾಲ್ಕು ತಲೆಮಾರಿನ ಕಲಾವಿದರಿದ್ದಾರೆ.

ಈ ಅಜ್ಜಿಗೆ ಈಗ ನೂರಮೂರು ವರ್ಷ. ಶತಕ ಪೂರೈಸಿದ ಅಜ್ಜಿ ಈಗಲೂ ಖಡಕ್ ಆಗಿ ಮಾತನಾಡುತ್ತಾರೆ. ತಾನು ಬಾಳಪ್ಪನ ತಂಡದ ಭಾಗವಾಗಿ ವಿದೇಶದಲ್ಲಿ ತೊಗಲುಗೊಂಬೆಯಾಟ ಆಡಿಸಿದ್ದನ್ನು ಬೆರಗಿನಿಂದ ಕಣ್ಮುಂದೆ ಕಟ್ಟುವಂತೆ ವಿವರಿಸುತ್ತಾರೆ. 1992 ರಲ್ಲಿ ದೆಹಲಿಯಲ್ಲಿ ಸಂಗೀತ ಮತ್ತು ನಾಟಕ ಅಕಾಡೆಮಿಯವರಿಂದ ಅಂತರಾಷ್ಟ್ರೀಯ ಪೊಪೆಟ್ರಿ ಫೆಸ್ಟಿವೆಲ್ ನಡೆಯುತ್ತದೆ. ಈ ಸಂದರ್ಭದಲ್ಲಿ ಅತ್ಯುತ್ತಮ ಮತ್ತು ಪ್ರಾಚೀನ ಬೊಂಬೆಗಳಿರುವ ತಂಡಗಳನ್ನು ಕಳಿಸಲು ಜಾನಪದ ಮತ್ತು ಯಕ್ಷಗಾನ ಅಕಾಡೆಮಿಗೆ ಪತ್ರ ಬರುತ್ತದೆ. ಆಗ ರಿಜಿಸ್ಟ್ರಾರ್ ಆಗಿದ್ದ ಹಿ.ಚಿ.ಬೋರಲಿಂಗಯ್ಯ ಅವರು ಮೊರನಾಳದ ದೊಡ್ಡ ಬಾಳಪ್ಪ ಅವರ ತಂಡವನ್ನು ಆಯ್ಕೆ ಮಾಡಿ, ದೆಹಲಿಗೆ ಕರೆದುಕೊಂಡು ಹೋಗುತ್ತಾರೆ. ಈ ಫೆಸ್ಟಿವೆಲ್‍ಗೆ ಬಂದ ಯುರೋಪಿನ ಪ್ರಾನ್ಸ್ ದೇಶದ ಕಲ್ಚರ್ ಡುಮ್ಯಾಂಡೆ ಎನ್ನುವ ಸಂಸ್ಥೆಯವರು ದೊಡ್ಡ ಬಾಳಪ್ಪ ಅವರ ತಂಡವನ್ನು ಆಯ್ಕೆ ಮಾಡುತ್ತಾರೆ. ಆಗ ಪ್ರೊ.ಹಿ.ಚಿ.ಬೋರಲಿಂಗಯ್ಯ ಮತ್ತು ಮಂಗಳೂರಿನ ಉಪಧ್ಯಾಯ ಅವರು ದೊಡ್ಡಬಾಳಪ್ಪ ಅವರ ತಂಡವನ್ನು ಕರೆದುಕೊಂಡು ಹೋಗುತ್ತಾರೆ. ಯುರೋಪಿನ ಇಟಲಿ, ಪ್ರಾನ್ಸ್, ನೆದರ್ ಲ್ಯಾಂಡ್ಸ್ ಮೂರು ದೇಶಗಳಲ್ಲಿ ಬಾಳಪ್ಪನ ತಂಡ ಪ್ರದರ್ಶನ ಕೊಡುತ್ತದೆ.

ಈ ಯುರೋಪ್‍ನ ಪ್ರವಾಸದ ನಂತರ ಕೇಂದ್ರ ಸಂಸ್ಕೃತಿ ಇಲಾಖೆಯವರು ಇರಾನಿನ ತೆಹ್ರಾನ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಪೊಪೆಟ್ ಥಿಯೇಟರ್ ಫೆಸ್ಟಿವೆಲ್‍ಗೆ ದೊಡ್ಡ ಬಾಳಪ್ಪನವರ ತಂಡವನ್ನೆ ಆಯ್ಕೆ ಮಾಡುತ್ತಾರೆ. ಈ ಎಲ್ಲಾ ಪ್ರವಾಸದಲ್ಲಿ ಭೀಮವ್ವ ಹಾಡುಗಾರ್ತಿಯಾಗಿ ದೊಡ್ಡಬಾಳಪ್ಪನ ಜೊತೆ ಇರುತ್ತಾರೆ. ಪ್ರೊ.ಹಿ.ಚಿ. ಬೋರಲಿಂಗಯ್ಯ ಅವರು `ದೊಡ್ಡಬಾಳಪ್ಪ ಬಹಳ ಪ್ರತಿಭಾವಂತ ಕಲಾವಿದ. ತುಂಬಾ ಪ್ರಾಚೀನವಾದ ತೊಗಲು ಗೊಂಬೆಗಳನ್ನು ಸಂರಕ್ಷಿಸಿದ್ದರು. ಬಾಳಪ್ಪನ ಹೆಂಡತಿ ಭೀಮವ್ವನಿಗೆ ಒಳ್ಳೆಯ ಕಂಠವಿತ್ತು, ಅದ್ಭುತವಾಗಿ ಹಾಡುತ್ತಿದ್ದರು, ಇವರ ತಂಡವನ್ನು ಯೂರೋಪ್ ಮತ್ತು ಇರಾನ್‍ಗೆ ಕರೆದುಕೊಂಡು ಹೋಗಿ ಬಂದದ್ದಕ್ಕೆ ಖುಷಿ ಇದೆ’ ಎನ್ನುತ್ತಾರೆ. ಹೀಗೆ ಕೊಪ್ಪಳ ಸಮೀಪದ ಹಳ್ಳಿಯೊಂದರ ಭೀಮವ್ವ ವಿದೇಶಗಳಲ್ಲಿ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸಿ ಸೈ ಎನಿಸಿಕೊಂಡಿದ್ದಾರೆ.

ಭೀಮವ್ವ ಈಗಲೂ ಇನ್ನೂರು ವರ್ಷದ ಹಳೆಯ ತೊಗಲುಗೊಂಬೆಗಳನ್ನು ಸಂರಕ್ಷಿಸಿದ್ದಾರೆ. ರಾಮಾಯಣ, ಮಹಾಭಾರತ ಕುರಿತ ಪ್ರಸಂಗಗಳನ್ನು ಭೀಮವ್ವ ನೆನಪಿನಿಂದ ಈಗಲೂ ಹಾಡುತ್ತಾರೆ. ಗೊಂಬೆಗಳ ಲಯಕ್ಕೆ ತಕ್ಕ ಹಾಗೆ ಹಾಡಿಕೆಯನ್ನು ಹೊಂದಿಸಬೇಕು. ಇದೊಂದು ಸೂಕ್ಷ್ಮವಾಗ ಕಲೆ. ಇಂತಹ ಕಲೆಯ ಎಲ್ಲಾ ವಿಭಾಗಗಳಲ್ಲೂ ಭೀಮವ್ವನಿಗೆ ಪ್ರಾವಿಣ್ಯತೆಯಿದೆ. ತೊಗಲುಗೊಂಬೆ ತಯಾರಿಕೆ, ಅದಕ್ಕೆ ಬೇಕಾದ ಸ್ಥಳೀಯ ಪರಿಕರಗಳನ್ನು ಬಳಸಿ ಬಣ್ಣಗಾರಿಕೆ ಮಾಡುವುದು, ತೊಗಲುಗೊಂಬೆ ಮಾಡಲು ಜಿಂಕೆ ಚರ್ಮವನ್ನು ಹದ ಮಾಡುವುದು, ಹೀಗೆ ತೊಗಲು ಗೊಂಬೆ ತಯಾರಿಕೆಗೆ ಬೇಕಾದ ದೇಸಿ ತಿಳಿವು ಅಜ್ಜಿಗಿದೆ. ಅದನ್ನು ಮಕ್ಕಳು ಮೊಮ್ಮಕ್ಕಳಿಗೂ ಕಲಿಸಿಕೊಟ್ಟಿದ್ದಾರೆ. ಇದೀಗ ಜಿಂಕೆಯ ಚರ್ಮದ ಕೊರತೆಯಿಂದಲೋ, ಅತಿಯಾದ ಶ್ರಮ ಮತ್ತು ಕೌಶಲ್ಯ ಬೇಡುವುದರಿಂದಲೋ ಅಜ್ಜಿಯ ಮೊಮ್ಮಕ್ಕಳು ಹೊಸ ತೊಗಲುಗೊಂಬೆಗಳನ್ನು ಮಾಡುವಲ್ಲಿ ಹಿಂದೆ ಸರಿದಿದ್ದಾರೆ. ತಮಗೆ ಹೊಸ ಗೊಂಬೆಗಳು ಬೇಕಾದರೆ ಆಂದ್ರದ ಅನಂತಪುರ, ಧರ್ಮಾವರಂ, ಹಿಂದೂಪುರ ಮೊದಲಾದ ಕಡೆಗಳಿಗೆ ಹೋಗಿ ದುಬಾರಿ ಬೆಲೆಕೊಟ್ಟು ತರುತ್ತಾರೆ. ಹೀಗಾಗಿ ಈ ಕುಟುಂಬ ತೊಗಲುಗೊಂಬೆಯ ತಯಾರಿಕೆಯ ಸ್ವಾಯತ್ತತೆಯಿಂದ ಇದೀಗ ಪರಾವಲಂಬಿಯಾಗಿದೆ.

ದೇಶದ ಹಲವೆಡೆ, ರಾಜ್ಯದ ವಿವಿದ ಜಿಲ್ಲೆಗಳಲ್ಲಿ ಭೀಮವ್ವ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸಿದ್ದಾರೆ. ಇದೀಗ ಮನೆಯಲ್ಲಿ ಮಕ್ಕಳು, ಮೊಮ್ಮಕ್ಕಳು ಕಲಾತಂಡಗಳಾಗಿ ದೇಶ, ರಾಜ್ಯದ ವಿವಿಧ ಭಾಗಗಳಲ್ಲಿ ತೊಗಲುಗೊಂಬೆ ಕಲೆಯನ್ನು ಪ್ರದರ್ಶಿಸುವ ಮೂಲಕ ಕಲೆಯನ್ನು ಜೀವಂತಗೊಳಿಸಿದ್ದಾರೆ. 2004 ರಲ್ಲಿ ಜಾನಪದ ಯಕ್ಷಗಾನ ಅಕಾಡೆಮಿಯು ಭೀಮವ್ವನಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. 2014 ರಲ್ಲಿ ಭೀಮವ್ವನ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿದೆ. 2010 ರಲ್ಲಿ ಡಿಸೆಂಬರ್ 1 ರಿಂದ 5 ರ ತನಕ ರಾಷ್ಟ್ರೀಯ ಸಂಗೀತ ನಾಟಕ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿದ `ತೊಗಲುಗೊಂಬೆ ಪರಂಪರೆ’ ಕಾರ್ಯಕ್ರಮದಲ್ಲಿ ಈ ಕುಟುಂಬದ ನಾಲ್ಕೈದು ಜನ ಪ್ರತ್ಯೇಕ ತೊಗಲುಗೊಂಬೆ ಪ್ರಸಂಗಗಳನ್ನು ಪ್ರದರ್ಶನ ಮಾಡಿ ಗಮನ ಸೆಳೆದಿದ್ದರು. ಭೀಮವ್ವನ ದೇಶಿ ತಿಳಿವನ್ನು ಸಂಗ್ರಹಿಸುವ ಅಗತ್ಯವಿದೆ. ನೂರಾ ಮೂರು ವರ್ಷದ ಅಜ್ಜಿಯ ಆರೋಗ್ಯ ಚೆನ್ನಾಗಿರಲಿ, ಮತ್ತಷ್ಟು ಪ್ರದರ್ಶನ ನೀಡುವ ಚೈತನ್ಯ ಹೆಚ್ಚಲಿ ಎಂದು ಪತ್ರಿಕೆ ಆಶಿಸುತ್ತದೆ.


ಇದನ್ನು ಓದಿ: ಜೇನುಕುರುಬರ ಒಳಿತಾಗಿ ದುಡಿವ ಗಟ್ಟಿಗಿತ್ತಿ ಜಾನಕಮ್ಮ.. ಎಲೆಮರೆ-4

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...