Homeಕರ್ನಾಟಕಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

ಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

"ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ" ಎಂದು ರಂಗ ತಂಡಗಳು ಮನವಿ ಮಾಡಿವೆ.

- Advertisement -
- Advertisement -

ಬೆಂಗಳೂರಿನಲ್ಲಿ ಕೊರೊನಾ ಸಾಂಕ್ರಾಮಿಕದ ನಡುವೆಯೇ ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡು ಜನರಿಗೆ ರಂಗಭೂಮಿಯ ಸವಿಯೂಣಿಸಲು 15 ರಂಗತಂಡಗಳು ಸಜ್ಜಾಗಿವೆ. ಬರೋಬ್ಬರಿ 15 ದಿನಗಳು, 15 ನಾಟಕಗಳು, 15 ನಿರ್ದೇಶಕರು ಮತ್ತು ವಿಭಿನ್ನ ಬರಹಗಾರರು ಸೇರಿ ಜ. 3 ರಿಂದ ಜ. 18ರ ವರೆಗೆ ’ಯುವರಂಗ ನಾಟಕೋತ್ಸವ 2021’ ಕಾರ್ಯಕ್ರಮ ಆಯೋಜಿಸಿವೆ.

ಕೊರೊನಾ ಭಯವನ್ನು ಪಕ್ಕಕಿಟ್ಟು, ಜವಾಬ್ದಾರಿಯನ್ನು ಹೆಗಲಿಗೆ ಹೊತ್ತು ಸದ್ದು ಮಾಡಲು ರಂಗಭೂಮಿ ಮತ್ತೆ ಸಜ್ಜಾಗಿದೆ. ’ಯುವರಂಗ ನಾಟಕೋತ್ಸವ 2021’ ವೇದಿಕೆ ಮೂಲಕ ಕೊರೊನಾ ಸಾಂಕ್ರಾಮಿಕದಿಂದ ಹೊಡೆತ ತಿಂದಿರುವ ರಂಗಭೂಮಿಯ ಹಲವು ಬಳಗಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿವೆ.

“ಪ್ರೇಕ್ಷಕರ ಮೇಲೆ ನಂಬಿಕೆ ಇಟ್ಟು, 15 ದಿನಗಳ ಕಾಲ 15  ನಾಟಕಗಳು ಬರೀ ಜನರನ್ನ ಮಾತ್ರ ನಂಬಿ ನಾಟಕಗಳನ್ನು ಪ್ರಸ್ತುತ ಪಡಿಸಲು ನಿರ್ಧರಿಸಿದ್ದೆವೆ. ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಅವಮಾನಿಸಿದವರಿಗೆ ಉತ್ತರಿಸಲೆಂದೋ‌, ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ” ಎಂದು ರಂಗ ತಂಡಗಳು ಮನವಿ ಮಾಡಿವೆ.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

“ನಮ್ಮ ಈ ಪ್ರಯೋಗ ಹುಚ್ಚು ಸಾಹಸ ಎಂದೆನ್ನಿಸಬಹುದು. ಆದರೆ ಬಣ್ಣವನ್ನೇ ಬದುಕಾಗಿಸಿಕೊಂಡವರಿಗೆ  ಸಾಹಸಗಳನ್ನು ಮಾಡಿ ಅಭ್ಯಾಸ ಇರುತ್ತದೆ. ರಂಗಭೂಮಿ ಕಲಿಸೋದು ಹೋರಾಡು ಅಂತ. ಸಮಾಜಕ್ಕೆ ಕನ್ನಡಿ ರಂಗಭೂಮಿ ಎನ್ನುತ್ತಾರೆ. ಅದರಂತೆಯೇ 15 ಬಗೆಯ ವಿಭಿನ್ನ ಪ್ರಯೋಗಗಳನ್ನ ನಿಮ್ಮ ಮುಂದೆ ಇಡೋಕೆ ಯುವರಂಗ ಅನ್ನೋ ವೇದಿಕೆ ಸಿದ್ಧವಾಗಿದೆ. ಹೊಸ ವರ್ಷಕ್ಕೆ ಹೊಸ ಹೊಸ ಕನಸುಗಳನ್ನು ಹೊತ್ತು ಜನವರಿ 03 ರಿಂದ 18 ನೇ ತಾರೀಖಿನ 15ನ ದಿನಗಳು, 15 ತಂಡಗಳು ನಿಮ್ಮ ಮುಂದೆ ಬರುತ್ತಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ದೃಶ್ಯಕಾವ್ಯ, ಖಾಲಿರಂಗ, ಥೇಮಾ, ರಂಗಭಾಸ್ಕರ, ಸವಿರಂಗ, ರಂಗವಿಜಯ, ನೆನಪುತಂಡ, ಅಶ್ವಘೋಷ ಥಿಯೇಟರ್ ಟ್ರಸ್ಟ್, ರಂಗನಿರಂತರ, ಸೈಡ್ ವಿಂಗ್, ವಿಶ್ವಪಥ ಕಲಾ ಸಂಗಮ, ಥಿಯೇಟರ್ ಥೇರಪಿ, ಸ್ಪಷ್ಟ, ಪ್ರವರ ಥಿಯೇಟರ್ ಮತ್ತು ರಂಗಪಯಣ ತಂಡಗಳು ಯುವರಂಗ ನಾಟಕೋತ್ಸವದಲ್ಲಿ ಪಾಲ್ಗೊಳ್ಳಲಿವೆ.

ಕೆ. ವೈ ನಾರಾಯಣ ಸ್ವಾಮಿ, ಬೇಲೂರು ರಘುನಂದನ್, ರಾಮಕೃಷ್ಣಕಲ್ಚಾರ್, ಲಿಂಗ ದೇವರು ಹಳೆ ಮನೆ, ರಾಜಗುರು, ಶೈಲೇಶ್ ಕುಮಾರ್, ಹನುಮಂತ ಹಾಲಿಗೇರಿ, ಎಂ. ಎಸ್ ನರಸಿಂಹ ಮೂರ್ತಿ, ಕರಣಂ ಪವನ್ ಪ್ರಸಾದ್ ಸೇರಿದಂತೆ ಹಲವು ಬರವಣಿಗೆಗಾರರ ಬರಹ ನಾಟಕಗಳಿಗಿದೆ.

ನಿರ್ದೇಶನ ವಿಭಾಗದಲ್ಲಿ ಕೃಷ್ಣ ಮೂರ್ತಿ ಕವತ್ತಾರ್, ನಂಜುಂಡೇಗೌಡ, ನಿರಂಜನ್ ಖಾಲಿಕೊಡ, ಡಾ. ಎಸ್. ವಿ. ಸುಷ್ಮಾ, ಭಾಸ್ಕರ್ ಗೌಡ, ದಿಲೀಪ್ ಬಿ.ಎಂ, ನಂದೀಶ್ ದೇವ್, ಶೈಲೇಶ್ ಕುಮಾರ್, ಭಾಸ್ಕರ್ ನೀನಾಸಂ, ರಾಮಕೃಷ್ಣ ಬೆಳ್ತೂರ್, ಗಗನ್ ಪ್ರಸಾದ್, ಹನು ರಾಮಸಂಜೀವ, ರಾಜಗುರು ಸೇರಿದ್ದಾರೆ.

ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

ಈ  ಹದಿನೈದು ದಿನಗಳಲ್ಲಿ ನಾಟಕಗಳ ಜೊತೆಗೆ ಸಂವಾದ, ರಂಗಗೀತೆಗಳು, ಯುವರಂಗ 2021 ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೆಲ್ಲದರ ಜೊತೆಗೆ ಜನವರಿ 11 ರಂದು ರಂಗನಿರಂತರ ತಂಡವು ಸಿಜಿಕೆ ಅವರ ಲಕೋಟೆಯನ್ನು ಬಿಡುಗಡೆ ಮಾಡಲಿದೆ ಎಂದು ರಂಗತಂಡಗಳು ಮಾಹಿತಿ ನೀಡಿದ್ದಾರೆ.

ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ನಾಟಕಗಳು ನಡೆಯಲಿವೆ. ಸರ್ಕಾರ ಬಿಡುಗಡೆ ಮಾಡಿರುವ ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸಲಾಗುವುದು, ಮಾಸ್ಕ್, ದೈಹಿಕ ಅಂತರ ಕಾಪಾಡುವುದು ಮುಖ್ಯ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿ ನಾಟಕಕ್ಕೆ 100 ರೂಪಾಯಿ ಟಿಕೆಟ್ ದರ ಇರಲಿದೆ. ಹದಿನೈದು ದಿನಗಳ ಪಾಸ್ ಪಡೆದುಕೊಂಡವರಿಗೆ 1,000 ರೂಪಾಯಿಗೆ ಪಾಸ್ ದೊರೆಯಲಿದೆ.


ಇದನ್ನೂ ಓದಿ: ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...