Homeಕರ್ನಾಟಕಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

ಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

"ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ" ಎಂದು ರಂಗ ತಂಡಗಳು ಮನವಿ ಮಾಡಿವೆ.

- Advertisement -
- Advertisement -

ಬೆಂಗಳೂರಿನಲ್ಲಿ ಕೊರೊನಾ ಸಾಂಕ್ರಾಮಿಕದ ನಡುವೆಯೇ ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡು ಜನರಿಗೆ ರಂಗಭೂಮಿಯ ಸವಿಯೂಣಿಸಲು 15 ರಂಗತಂಡಗಳು ಸಜ್ಜಾಗಿವೆ. ಬರೋಬ್ಬರಿ 15 ದಿನಗಳು, 15 ನಾಟಕಗಳು, 15 ನಿರ್ದೇಶಕರು ಮತ್ತು ವಿಭಿನ್ನ ಬರಹಗಾರರು ಸೇರಿ ಜ. 3 ರಿಂದ ಜ. 18ರ ವರೆಗೆ ’ಯುವರಂಗ ನಾಟಕೋತ್ಸವ 2021’ ಕಾರ್ಯಕ್ರಮ ಆಯೋಜಿಸಿವೆ.

ಕೊರೊನಾ ಭಯವನ್ನು ಪಕ್ಕಕಿಟ್ಟು, ಜವಾಬ್ದಾರಿಯನ್ನು ಹೆಗಲಿಗೆ ಹೊತ್ತು ಸದ್ದು ಮಾಡಲು ರಂಗಭೂಮಿ ಮತ್ತೆ ಸಜ್ಜಾಗಿದೆ. ’ಯುವರಂಗ ನಾಟಕೋತ್ಸವ 2021’ ವೇದಿಕೆ ಮೂಲಕ ಕೊರೊನಾ ಸಾಂಕ್ರಾಮಿಕದಿಂದ ಹೊಡೆತ ತಿಂದಿರುವ ರಂಗಭೂಮಿಯ ಹಲವು ಬಳಗಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿವೆ.

“ಪ್ರೇಕ್ಷಕರ ಮೇಲೆ ನಂಬಿಕೆ ಇಟ್ಟು, 15 ದಿನಗಳ ಕಾಲ 15  ನಾಟಕಗಳು ಬರೀ ಜನರನ್ನ ಮಾತ್ರ ನಂಬಿ ನಾಟಕಗಳನ್ನು ಪ್ರಸ್ತುತ ಪಡಿಸಲು ನಿರ್ಧರಿಸಿದ್ದೆವೆ. ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಅವಮಾನಿಸಿದವರಿಗೆ ಉತ್ತರಿಸಲೆಂದೋ‌, ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ” ಎಂದು ರಂಗ ತಂಡಗಳು ಮನವಿ ಮಾಡಿವೆ.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

“ನಮ್ಮ ಈ ಪ್ರಯೋಗ ಹುಚ್ಚು ಸಾಹಸ ಎಂದೆನ್ನಿಸಬಹುದು. ಆದರೆ ಬಣ್ಣವನ್ನೇ ಬದುಕಾಗಿಸಿಕೊಂಡವರಿಗೆ  ಸಾಹಸಗಳನ್ನು ಮಾಡಿ ಅಭ್ಯಾಸ ಇರುತ್ತದೆ. ರಂಗಭೂಮಿ ಕಲಿಸೋದು ಹೋರಾಡು ಅಂತ. ಸಮಾಜಕ್ಕೆ ಕನ್ನಡಿ ರಂಗಭೂಮಿ ಎನ್ನುತ್ತಾರೆ. ಅದರಂತೆಯೇ 15 ಬಗೆಯ ವಿಭಿನ್ನ ಪ್ರಯೋಗಗಳನ್ನ ನಿಮ್ಮ ಮುಂದೆ ಇಡೋಕೆ ಯುವರಂಗ ಅನ್ನೋ ವೇದಿಕೆ ಸಿದ್ಧವಾಗಿದೆ. ಹೊಸ ವರ್ಷಕ್ಕೆ ಹೊಸ ಹೊಸ ಕನಸುಗಳನ್ನು ಹೊತ್ತು ಜನವರಿ 03 ರಿಂದ 18 ನೇ ತಾರೀಖಿನ 15ನ ದಿನಗಳು, 15 ತಂಡಗಳು ನಿಮ್ಮ ಮುಂದೆ ಬರುತ್ತಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ದೃಶ್ಯಕಾವ್ಯ, ಖಾಲಿರಂಗ, ಥೇಮಾ, ರಂಗಭಾಸ್ಕರ, ಸವಿರಂಗ, ರಂಗವಿಜಯ, ನೆನಪುತಂಡ, ಅಶ್ವಘೋಷ ಥಿಯೇಟರ್ ಟ್ರಸ್ಟ್, ರಂಗನಿರಂತರ, ಸೈಡ್ ವಿಂಗ್, ವಿಶ್ವಪಥ ಕಲಾ ಸಂಗಮ, ಥಿಯೇಟರ್ ಥೇರಪಿ, ಸ್ಪಷ್ಟ, ಪ್ರವರ ಥಿಯೇಟರ್ ಮತ್ತು ರಂಗಪಯಣ ತಂಡಗಳು ಯುವರಂಗ ನಾಟಕೋತ್ಸವದಲ್ಲಿ ಪಾಲ್ಗೊಳ್ಳಲಿವೆ.

ಕೆ. ವೈ ನಾರಾಯಣ ಸ್ವಾಮಿ, ಬೇಲೂರು ರಘುನಂದನ್, ರಾಮಕೃಷ್ಣಕಲ್ಚಾರ್, ಲಿಂಗ ದೇವರು ಹಳೆ ಮನೆ, ರಾಜಗುರು, ಶೈಲೇಶ್ ಕುಮಾರ್, ಹನುಮಂತ ಹಾಲಿಗೇರಿ, ಎಂ. ಎಸ್ ನರಸಿಂಹ ಮೂರ್ತಿ, ಕರಣಂ ಪವನ್ ಪ್ರಸಾದ್ ಸೇರಿದಂತೆ ಹಲವು ಬರವಣಿಗೆಗಾರರ ಬರಹ ನಾಟಕಗಳಿಗಿದೆ.

ನಿರ್ದೇಶನ ವಿಭಾಗದಲ್ಲಿ ಕೃಷ್ಣ ಮೂರ್ತಿ ಕವತ್ತಾರ್, ನಂಜುಂಡೇಗೌಡ, ನಿರಂಜನ್ ಖಾಲಿಕೊಡ, ಡಾ. ಎಸ್. ವಿ. ಸುಷ್ಮಾ, ಭಾಸ್ಕರ್ ಗೌಡ, ದಿಲೀಪ್ ಬಿ.ಎಂ, ನಂದೀಶ್ ದೇವ್, ಶೈಲೇಶ್ ಕುಮಾರ್, ಭಾಸ್ಕರ್ ನೀನಾಸಂ, ರಾಮಕೃಷ್ಣ ಬೆಳ್ತೂರ್, ಗಗನ್ ಪ್ರಸಾದ್, ಹನು ರಾಮಸಂಜೀವ, ರಾಜಗುರು ಸೇರಿದ್ದಾರೆ.

ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

ಈ  ಹದಿನೈದು ದಿನಗಳಲ್ಲಿ ನಾಟಕಗಳ ಜೊತೆಗೆ ಸಂವಾದ, ರಂಗಗೀತೆಗಳು, ಯುವರಂಗ 2021 ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೆಲ್ಲದರ ಜೊತೆಗೆ ಜನವರಿ 11 ರಂದು ರಂಗನಿರಂತರ ತಂಡವು ಸಿಜಿಕೆ ಅವರ ಲಕೋಟೆಯನ್ನು ಬಿಡುಗಡೆ ಮಾಡಲಿದೆ ಎಂದು ರಂಗತಂಡಗಳು ಮಾಹಿತಿ ನೀಡಿದ್ದಾರೆ.

ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ನಾಟಕಗಳು ನಡೆಯಲಿವೆ. ಸರ್ಕಾರ ಬಿಡುಗಡೆ ಮಾಡಿರುವ ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸಲಾಗುವುದು, ಮಾಸ್ಕ್, ದೈಹಿಕ ಅಂತರ ಕಾಪಾಡುವುದು ಮುಖ್ಯ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿ ನಾಟಕಕ್ಕೆ 100 ರೂಪಾಯಿ ಟಿಕೆಟ್ ದರ ಇರಲಿದೆ. ಹದಿನೈದು ದಿನಗಳ ಪಾಸ್ ಪಡೆದುಕೊಂಡವರಿಗೆ 1,000 ರೂಪಾಯಿಗೆ ಪಾಸ್ ದೊರೆಯಲಿದೆ.


ಇದನ್ನೂ ಓದಿ: ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...