Homeಕರ್ನಾಟಕಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

ಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

"ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ" ಎಂದು ರಂಗ ತಂಡಗಳು ಮನವಿ ಮಾಡಿವೆ.

- Advertisement -
- Advertisement -

ಬೆಂಗಳೂರಿನಲ್ಲಿ ಕೊರೊನಾ ಸಾಂಕ್ರಾಮಿಕದ ನಡುವೆಯೇ ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡು ಜನರಿಗೆ ರಂಗಭೂಮಿಯ ಸವಿಯೂಣಿಸಲು 15 ರಂಗತಂಡಗಳು ಸಜ್ಜಾಗಿವೆ. ಬರೋಬ್ಬರಿ 15 ದಿನಗಳು, 15 ನಾಟಕಗಳು, 15 ನಿರ್ದೇಶಕರು ಮತ್ತು ವಿಭಿನ್ನ ಬರಹಗಾರರು ಸೇರಿ ಜ. 3 ರಿಂದ ಜ. 18ರ ವರೆಗೆ ’ಯುವರಂಗ ನಾಟಕೋತ್ಸವ 2021’ ಕಾರ್ಯಕ್ರಮ ಆಯೋಜಿಸಿವೆ.

ಕೊರೊನಾ ಭಯವನ್ನು ಪಕ್ಕಕಿಟ್ಟು, ಜವಾಬ್ದಾರಿಯನ್ನು ಹೆಗಲಿಗೆ ಹೊತ್ತು ಸದ್ದು ಮಾಡಲು ರಂಗಭೂಮಿ ಮತ್ತೆ ಸಜ್ಜಾಗಿದೆ. ’ಯುವರಂಗ ನಾಟಕೋತ್ಸವ 2021’ ವೇದಿಕೆ ಮೂಲಕ ಕೊರೊನಾ ಸಾಂಕ್ರಾಮಿಕದಿಂದ ಹೊಡೆತ ತಿಂದಿರುವ ರಂಗಭೂಮಿಯ ಹಲವು ಬಳಗಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿವೆ.

“ಪ್ರೇಕ್ಷಕರ ಮೇಲೆ ನಂಬಿಕೆ ಇಟ್ಟು, 15 ದಿನಗಳ ಕಾಲ 15  ನಾಟಕಗಳು ಬರೀ ಜನರನ್ನ ಮಾತ್ರ ನಂಬಿ ನಾಟಕಗಳನ್ನು ಪ್ರಸ್ತುತ ಪಡಿಸಲು ನಿರ್ಧರಿಸಿದ್ದೆವೆ. ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಅವಮಾನಿಸಿದವರಿಗೆ ಉತ್ತರಿಸಲೆಂದೋ‌, ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ” ಎಂದು ರಂಗ ತಂಡಗಳು ಮನವಿ ಮಾಡಿವೆ.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

“ನಮ್ಮ ಈ ಪ್ರಯೋಗ ಹುಚ್ಚು ಸಾಹಸ ಎಂದೆನ್ನಿಸಬಹುದು. ಆದರೆ ಬಣ್ಣವನ್ನೇ ಬದುಕಾಗಿಸಿಕೊಂಡವರಿಗೆ  ಸಾಹಸಗಳನ್ನು ಮಾಡಿ ಅಭ್ಯಾಸ ಇರುತ್ತದೆ. ರಂಗಭೂಮಿ ಕಲಿಸೋದು ಹೋರಾಡು ಅಂತ. ಸಮಾಜಕ್ಕೆ ಕನ್ನಡಿ ರಂಗಭೂಮಿ ಎನ್ನುತ್ತಾರೆ. ಅದರಂತೆಯೇ 15 ಬಗೆಯ ವಿಭಿನ್ನ ಪ್ರಯೋಗಗಳನ್ನ ನಿಮ್ಮ ಮುಂದೆ ಇಡೋಕೆ ಯುವರಂಗ ಅನ್ನೋ ವೇದಿಕೆ ಸಿದ್ಧವಾಗಿದೆ. ಹೊಸ ವರ್ಷಕ್ಕೆ ಹೊಸ ಹೊಸ ಕನಸುಗಳನ್ನು ಹೊತ್ತು ಜನವರಿ 03 ರಿಂದ 18 ನೇ ತಾರೀಖಿನ 15ನ ದಿನಗಳು, 15 ತಂಡಗಳು ನಿಮ್ಮ ಮುಂದೆ ಬರುತ್ತಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ದೃಶ್ಯಕಾವ್ಯ, ಖಾಲಿರಂಗ, ಥೇಮಾ, ರಂಗಭಾಸ್ಕರ, ಸವಿರಂಗ, ರಂಗವಿಜಯ, ನೆನಪುತಂಡ, ಅಶ್ವಘೋಷ ಥಿಯೇಟರ್ ಟ್ರಸ್ಟ್, ರಂಗನಿರಂತರ, ಸೈಡ್ ವಿಂಗ್, ವಿಶ್ವಪಥ ಕಲಾ ಸಂಗಮ, ಥಿಯೇಟರ್ ಥೇರಪಿ, ಸ್ಪಷ್ಟ, ಪ್ರವರ ಥಿಯೇಟರ್ ಮತ್ತು ರಂಗಪಯಣ ತಂಡಗಳು ಯುವರಂಗ ನಾಟಕೋತ್ಸವದಲ್ಲಿ ಪಾಲ್ಗೊಳ್ಳಲಿವೆ.

ಕೆ. ವೈ ನಾರಾಯಣ ಸ್ವಾಮಿ, ಬೇಲೂರು ರಘುನಂದನ್, ರಾಮಕೃಷ್ಣಕಲ್ಚಾರ್, ಲಿಂಗ ದೇವರು ಹಳೆ ಮನೆ, ರಾಜಗುರು, ಶೈಲೇಶ್ ಕುಮಾರ್, ಹನುಮಂತ ಹಾಲಿಗೇರಿ, ಎಂ. ಎಸ್ ನರಸಿಂಹ ಮೂರ್ತಿ, ಕರಣಂ ಪವನ್ ಪ್ರಸಾದ್ ಸೇರಿದಂತೆ ಹಲವು ಬರವಣಿಗೆಗಾರರ ಬರಹ ನಾಟಕಗಳಿಗಿದೆ.

ನಿರ್ದೇಶನ ವಿಭಾಗದಲ್ಲಿ ಕೃಷ್ಣ ಮೂರ್ತಿ ಕವತ್ತಾರ್, ನಂಜುಂಡೇಗೌಡ, ನಿರಂಜನ್ ಖಾಲಿಕೊಡ, ಡಾ. ಎಸ್. ವಿ. ಸುಷ್ಮಾ, ಭಾಸ್ಕರ್ ಗೌಡ, ದಿಲೀಪ್ ಬಿ.ಎಂ, ನಂದೀಶ್ ದೇವ್, ಶೈಲೇಶ್ ಕುಮಾರ್, ಭಾಸ್ಕರ್ ನೀನಾಸಂ, ರಾಮಕೃಷ್ಣ ಬೆಳ್ತೂರ್, ಗಗನ್ ಪ್ರಸಾದ್, ಹನು ರಾಮಸಂಜೀವ, ರಾಜಗುರು ಸೇರಿದ್ದಾರೆ.

ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

ಈ  ಹದಿನೈದು ದಿನಗಳಲ್ಲಿ ನಾಟಕಗಳ ಜೊತೆಗೆ ಸಂವಾದ, ರಂಗಗೀತೆಗಳು, ಯುವರಂಗ 2021 ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೆಲ್ಲದರ ಜೊತೆಗೆ ಜನವರಿ 11 ರಂದು ರಂಗನಿರಂತರ ತಂಡವು ಸಿಜಿಕೆ ಅವರ ಲಕೋಟೆಯನ್ನು ಬಿಡುಗಡೆ ಮಾಡಲಿದೆ ಎಂದು ರಂಗತಂಡಗಳು ಮಾಹಿತಿ ನೀಡಿದ್ದಾರೆ.

ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ನಾಟಕಗಳು ನಡೆಯಲಿವೆ. ಸರ್ಕಾರ ಬಿಡುಗಡೆ ಮಾಡಿರುವ ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸಲಾಗುವುದು, ಮಾಸ್ಕ್, ದೈಹಿಕ ಅಂತರ ಕಾಪಾಡುವುದು ಮುಖ್ಯ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿ ನಾಟಕಕ್ಕೆ 100 ರೂಪಾಯಿ ಟಿಕೆಟ್ ದರ ಇರಲಿದೆ. ಹದಿನೈದು ದಿನಗಳ ಪಾಸ್ ಪಡೆದುಕೊಂಡವರಿಗೆ 1,000 ರೂಪಾಯಿಗೆ ಪಾಸ್ ದೊರೆಯಲಿದೆ.


ಇದನ್ನೂ ಓದಿ: ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಪ್ರಾಧಿಕಾರ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...