Homeಕರ್ನಾಟಕಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

ಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

"ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ" ಎಂದು ರಂಗ ತಂಡಗಳು ಮನವಿ ಮಾಡಿವೆ.

- Advertisement -
- Advertisement -

ಬೆಂಗಳೂರಿನಲ್ಲಿ ಕೊರೊನಾ ಸಾಂಕ್ರಾಮಿಕದ ನಡುವೆಯೇ ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡು ಜನರಿಗೆ ರಂಗಭೂಮಿಯ ಸವಿಯೂಣಿಸಲು 15 ರಂಗತಂಡಗಳು ಸಜ್ಜಾಗಿವೆ. ಬರೋಬ್ಬರಿ 15 ದಿನಗಳು, 15 ನಾಟಕಗಳು, 15 ನಿರ್ದೇಶಕರು ಮತ್ತು ವಿಭಿನ್ನ ಬರಹಗಾರರು ಸೇರಿ ಜ. 3 ರಿಂದ ಜ. 18ರ ವರೆಗೆ ’ಯುವರಂಗ ನಾಟಕೋತ್ಸವ 2021’ ಕಾರ್ಯಕ್ರಮ ಆಯೋಜಿಸಿವೆ.

ಕೊರೊನಾ ಭಯವನ್ನು ಪಕ್ಕಕಿಟ್ಟು, ಜವಾಬ್ದಾರಿಯನ್ನು ಹೆಗಲಿಗೆ ಹೊತ್ತು ಸದ್ದು ಮಾಡಲು ರಂಗಭೂಮಿ ಮತ್ತೆ ಸಜ್ಜಾಗಿದೆ. ’ಯುವರಂಗ ನಾಟಕೋತ್ಸವ 2021’ ವೇದಿಕೆ ಮೂಲಕ ಕೊರೊನಾ ಸಾಂಕ್ರಾಮಿಕದಿಂದ ಹೊಡೆತ ತಿಂದಿರುವ ರಂಗಭೂಮಿಯ ಹಲವು ಬಳಗಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿವೆ.

“ಪ್ರೇಕ್ಷಕರ ಮೇಲೆ ನಂಬಿಕೆ ಇಟ್ಟು, 15 ದಿನಗಳ ಕಾಲ 15  ನಾಟಕಗಳು ಬರೀ ಜನರನ್ನ ಮಾತ್ರ ನಂಬಿ ನಾಟಕಗಳನ್ನು ಪ್ರಸ್ತುತ ಪಡಿಸಲು ನಿರ್ಧರಿಸಿದ್ದೆವೆ. ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಅವಮಾನಿಸಿದವರಿಗೆ ಉತ್ತರಿಸಲೆಂದೋ‌, ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ” ಎಂದು ರಂಗ ತಂಡಗಳು ಮನವಿ ಮಾಡಿವೆ.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

“ನಮ್ಮ ಈ ಪ್ರಯೋಗ ಹುಚ್ಚು ಸಾಹಸ ಎಂದೆನ್ನಿಸಬಹುದು. ಆದರೆ ಬಣ್ಣವನ್ನೇ ಬದುಕಾಗಿಸಿಕೊಂಡವರಿಗೆ  ಸಾಹಸಗಳನ್ನು ಮಾಡಿ ಅಭ್ಯಾಸ ಇರುತ್ತದೆ. ರಂಗಭೂಮಿ ಕಲಿಸೋದು ಹೋರಾಡು ಅಂತ. ಸಮಾಜಕ್ಕೆ ಕನ್ನಡಿ ರಂಗಭೂಮಿ ಎನ್ನುತ್ತಾರೆ. ಅದರಂತೆಯೇ 15 ಬಗೆಯ ವಿಭಿನ್ನ ಪ್ರಯೋಗಗಳನ್ನ ನಿಮ್ಮ ಮುಂದೆ ಇಡೋಕೆ ಯುವರಂಗ ಅನ್ನೋ ವೇದಿಕೆ ಸಿದ್ಧವಾಗಿದೆ. ಹೊಸ ವರ್ಷಕ್ಕೆ ಹೊಸ ಹೊಸ ಕನಸುಗಳನ್ನು ಹೊತ್ತು ಜನವರಿ 03 ರಿಂದ 18 ನೇ ತಾರೀಖಿನ 15ನ ದಿನಗಳು, 15 ತಂಡಗಳು ನಿಮ್ಮ ಮುಂದೆ ಬರುತ್ತಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ದೃಶ್ಯಕಾವ್ಯ, ಖಾಲಿರಂಗ, ಥೇಮಾ, ರಂಗಭಾಸ್ಕರ, ಸವಿರಂಗ, ರಂಗವಿಜಯ, ನೆನಪುತಂಡ, ಅಶ್ವಘೋಷ ಥಿಯೇಟರ್ ಟ್ರಸ್ಟ್, ರಂಗನಿರಂತರ, ಸೈಡ್ ವಿಂಗ್, ವಿಶ್ವಪಥ ಕಲಾ ಸಂಗಮ, ಥಿಯೇಟರ್ ಥೇರಪಿ, ಸ್ಪಷ್ಟ, ಪ್ರವರ ಥಿಯೇಟರ್ ಮತ್ತು ರಂಗಪಯಣ ತಂಡಗಳು ಯುವರಂಗ ನಾಟಕೋತ್ಸವದಲ್ಲಿ ಪಾಲ್ಗೊಳ್ಳಲಿವೆ.

ಕೆ. ವೈ ನಾರಾಯಣ ಸ್ವಾಮಿ, ಬೇಲೂರು ರಘುನಂದನ್, ರಾಮಕೃಷ್ಣಕಲ್ಚಾರ್, ಲಿಂಗ ದೇವರು ಹಳೆ ಮನೆ, ರಾಜಗುರು, ಶೈಲೇಶ್ ಕುಮಾರ್, ಹನುಮಂತ ಹಾಲಿಗೇರಿ, ಎಂ. ಎಸ್ ನರಸಿಂಹ ಮೂರ್ತಿ, ಕರಣಂ ಪವನ್ ಪ್ರಸಾದ್ ಸೇರಿದಂತೆ ಹಲವು ಬರವಣಿಗೆಗಾರರ ಬರಹ ನಾಟಕಗಳಿಗಿದೆ.

ನಿರ್ದೇಶನ ವಿಭಾಗದಲ್ಲಿ ಕೃಷ್ಣ ಮೂರ್ತಿ ಕವತ್ತಾರ್, ನಂಜುಂಡೇಗೌಡ, ನಿರಂಜನ್ ಖಾಲಿಕೊಡ, ಡಾ. ಎಸ್. ವಿ. ಸುಷ್ಮಾ, ಭಾಸ್ಕರ್ ಗೌಡ, ದಿಲೀಪ್ ಬಿ.ಎಂ, ನಂದೀಶ್ ದೇವ್, ಶೈಲೇಶ್ ಕುಮಾರ್, ಭಾಸ್ಕರ್ ನೀನಾಸಂ, ರಾಮಕೃಷ್ಣ ಬೆಳ್ತೂರ್, ಗಗನ್ ಪ್ರಸಾದ್, ಹನು ರಾಮಸಂಜೀವ, ರಾಜಗುರು ಸೇರಿದ್ದಾರೆ.

ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

ಈ  ಹದಿನೈದು ದಿನಗಳಲ್ಲಿ ನಾಟಕಗಳ ಜೊತೆಗೆ ಸಂವಾದ, ರಂಗಗೀತೆಗಳು, ಯುವರಂಗ 2021 ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೆಲ್ಲದರ ಜೊತೆಗೆ ಜನವರಿ 11 ರಂದು ರಂಗನಿರಂತರ ತಂಡವು ಸಿಜಿಕೆ ಅವರ ಲಕೋಟೆಯನ್ನು ಬಿಡುಗಡೆ ಮಾಡಲಿದೆ ಎಂದು ರಂಗತಂಡಗಳು ಮಾಹಿತಿ ನೀಡಿದ್ದಾರೆ.

ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ನಾಟಕಗಳು ನಡೆಯಲಿವೆ. ಸರ್ಕಾರ ಬಿಡುಗಡೆ ಮಾಡಿರುವ ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸಲಾಗುವುದು, ಮಾಸ್ಕ್, ದೈಹಿಕ ಅಂತರ ಕಾಪಾಡುವುದು ಮುಖ್ಯ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿ ನಾಟಕಕ್ಕೆ 100 ರೂಪಾಯಿ ಟಿಕೆಟ್ ದರ ಇರಲಿದೆ. ಹದಿನೈದು ದಿನಗಳ ಪಾಸ್ ಪಡೆದುಕೊಂಡವರಿಗೆ 1,000 ರೂಪಾಯಿಗೆ ಪಾಸ್ ದೊರೆಯಲಿದೆ.


ಇದನ್ನೂ ಓದಿ: ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...