Homeಕರ್ನಾಟಕಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

ಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

"ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ" ಎಂದು ರಂಗ ತಂಡಗಳು ಮನವಿ ಮಾಡಿವೆ.

- Advertisement -
- Advertisement -

ಬೆಂಗಳೂರಿನಲ್ಲಿ ಕೊರೊನಾ ಸಾಂಕ್ರಾಮಿಕದ ನಡುವೆಯೇ ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡು ಜನರಿಗೆ ರಂಗಭೂಮಿಯ ಸವಿಯೂಣಿಸಲು 15 ರಂಗತಂಡಗಳು ಸಜ್ಜಾಗಿವೆ. ಬರೋಬ್ಬರಿ 15 ದಿನಗಳು, 15 ನಾಟಕಗಳು, 15 ನಿರ್ದೇಶಕರು ಮತ್ತು ವಿಭಿನ್ನ ಬರಹಗಾರರು ಸೇರಿ ಜ. 3 ರಿಂದ ಜ. 18ರ ವರೆಗೆ ’ಯುವರಂಗ ನಾಟಕೋತ್ಸವ 2021’ ಕಾರ್ಯಕ್ರಮ ಆಯೋಜಿಸಿವೆ.

ಕೊರೊನಾ ಭಯವನ್ನು ಪಕ್ಕಕಿಟ್ಟು, ಜವಾಬ್ದಾರಿಯನ್ನು ಹೆಗಲಿಗೆ ಹೊತ್ತು ಸದ್ದು ಮಾಡಲು ರಂಗಭೂಮಿ ಮತ್ತೆ ಸಜ್ಜಾಗಿದೆ. ’ಯುವರಂಗ ನಾಟಕೋತ್ಸವ 2021’ ವೇದಿಕೆ ಮೂಲಕ ಕೊರೊನಾ ಸಾಂಕ್ರಾಮಿಕದಿಂದ ಹೊಡೆತ ತಿಂದಿರುವ ರಂಗಭೂಮಿಯ ಹಲವು ಬಳಗಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿವೆ.

“ಪ್ರೇಕ್ಷಕರ ಮೇಲೆ ನಂಬಿಕೆ ಇಟ್ಟು, 15 ದಿನಗಳ ಕಾಲ 15  ನಾಟಕಗಳು ಬರೀ ಜನರನ್ನ ಮಾತ್ರ ನಂಬಿ ನಾಟಕಗಳನ್ನು ಪ್ರಸ್ತುತ ಪಡಿಸಲು ನಿರ್ಧರಿಸಿದ್ದೆವೆ. ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಅವಮಾನಿಸಿದವರಿಗೆ ಉತ್ತರಿಸಲೆಂದೋ‌, ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ” ಎಂದು ರಂಗ ತಂಡಗಳು ಮನವಿ ಮಾಡಿವೆ.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

“ನಮ್ಮ ಈ ಪ್ರಯೋಗ ಹುಚ್ಚು ಸಾಹಸ ಎಂದೆನ್ನಿಸಬಹುದು. ಆದರೆ ಬಣ್ಣವನ್ನೇ ಬದುಕಾಗಿಸಿಕೊಂಡವರಿಗೆ  ಸಾಹಸಗಳನ್ನು ಮಾಡಿ ಅಭ್ಯಾಸ ಇರುತ್ತದೆ. ರಂಗಭೂಮಿ ಕಲಿಸೋದು ಹೋರಾಡು ಅಂತ. ಸಮಾಜಕ್ಕೆ ಕನ್ನಡಿ ರಂಗಭೂಮಿ ಎನ್ನುತ್ತಾರೆ. ಅದರಂತೆಯೇ 15 ಬಗೆಯ ವಿಭಿನ್ನ ಪ್ರಯೋಗಗಳನ್ನ ನಿಮ್ಮ ಮುಂದೆ ಇಡೋಕೆ ಯುವರಂಗ ಅನ್ನೋ ವೇದಿಕೆ ಸಿದ್ಧವಾಗಿದೆ. ಹೊಸ ವರ್ಷಕ್ಕೆ ಹೊಸ ಹೊಸ ಕನಸುಗಳನ್ನು ಹೊತ್ತು ಜನವರಿ 03 ರಿಂದ 18 ನೇ ತಾರೀಖಿನ 15ನ ದಿನಗಳು, 15 ತಂಡಗಳು ನಿಮ್ಮ ಮುಂದೆ ಬರುತ್ತಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ದೃಶ್ಯಕಾವ್ಯ, ಖಾಲಿರಂಗ, ಥೇಮಾ, ರಂಗಭಾಸ್ಕರ, ಸವಿರಂಗ, ರಂಗವಿಜಯ, ನೆನಪುತಂಡ, ಅಶ್ವಘೋಷ ಥಿಯೇಟರ್ ಟ್ರಸ್ಟ್, ರಂಗನಿರಂತರ, ಸೈಡ್ ವಿಂಗ್, ವಿಶ್ವಪಥ ಕಲಾ ಸಂಗಮ, ಥಿಯೇಟರ್ ಥೇರಪಿ, ಸ್ಪಷ್ಟ, ಪ್ರವರ ಥಿಯೇಟರ್ ಮತ್ತು ರಂಗಪಯಣ ತಂಡಗಳು ಯುವರಂಗ ನಾಟಕೋತ್ಸವದಲ್ಲಿ ಪಾಲ್ಗೊಳ್ಳಲಿವೆ.

ಕೆ. ವೈ ನಾರಾಯಣ ಸ್ವಾಮಿ, ಬೇಲೂರು ರಘುನಂದನ್, ರಾಮಕೃಷ್ಣಕಲ್ಚಾರ್, ಲಿಂಗ ದೇವರು ಹಳೆ ಮನೆ, ರಾಜಗುರು, ಶೈಲೇಶ್ ಕುಮಾರ್, ಹನುಮಂತ ಹಾಲಿಗೇರಿ, ಎಂ. ಎಸ್ ನರಸಿಂಹ ಮೂರ್ತಿ, ಕರಣಂ ಪವನ್ ಪ್ರಸಾದ್ ಸೇರಿದಂತೆ ಹಲವು ಬರವಣಿಗೆಗಾರರ ಬರಹ ನಾಟಕಗಳಿಗಿದೆ.

ನಿರ್ದೇಶನ ವಿಭಾಗದಲ್ಲಿ ಕೃಷ್ಣ ಮೂರ್ತಿ ಕವತ್ತಾರ್, ನಂಜುಂಡೇಗೌಡ, ನಿರಂಜನ್ ಖಾಲಿಕೊಡ, ಡಾ. ಎಸ್. ವಿ. ಸುಷ್ಮಾ, ಭಾಸ್ಕರ್ ಗೌಡ, ದಿಲೀಪ್ ಬಿ.ಎಂ, ನಂದೀಶ್ ದೇವ್, ಶೈಲೇಶ್ ಕುಮಾರ್, ಭಾಸ್ಕರ್ ನೀನಾಸಂ, ರಾಮಕೃಷ್ಣ ಬೆಳ್ತೂರ್, ಗಗನ್ ಪ್ರಸಾದ್, ಹನು ರಾಮಸಂಜೀವ, ರಾಜಗುರು ಸೇರಿದ್ದಾರೆ.

ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

ಈ  ಹದಿನೈದು ದಿನಗಳಲ್ಲಿ ನಾಟಕಗಳ ಜೊತೆಗೆ ಸಂವಾದ, ರಂಗಗೀತೆಗಳು, ಯುವರಂಗ 2021 ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೆಲ್ಲದರ ಜೊತೆಗೆ ಜನವರಿ 11 ರಂದು ರಂಗನಿರಂತರ ತಂಡವು ಸಿಜಿಕೆ ಅವರ ಲಕೋಟೆಯನ್ನು ಬಿಡುಗಡೆ ಮಾಡಲಿದೆ ಎಂದು ರಂಗತಂಡಗಳು ಮಾಹಿತಿ ನೀಡಿದ್ದಾರೆ.

ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ನಾಟಕಗಳು ನಡೆಯಲಿವೆ. ಸರ್ಕಾರ ಬಿಡುಗಡೆ ಮಾಡಿರುವ ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸಲಾಗುವುದು, ಮಾಸ್ಕ್, ದೈಹಿಕ ಅಂತರ ಕಾಪಾಡುವುದು ಮುಖ್ಯ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿ ನಾಟಕಕ್ಕೆ 100 ರೂಪಾಯಿ ಟಿಕೆಟ್ ದರ ಇರಲಿದೆ. ಹದಿನೈದು ದಿನಗಳ ಪಾಸ್ ಪಡೆದುಕೊಂಡವರಿಗೆ 1,000 ರೂಪಾಯಿಗೆ ಪಾಸ್ ದೊರೆಯಲಿದೆ.


ಇದನ್ನೂ ಓದಿ: ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...