Homeಕರ್ನಾಟಕಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

ಯುವರಂಗ ನಾಟಕೋತ್ಸವ 2021: 15 ದಿನ, 15 ನಾಟಕಗಳು, 15 ನಿರ್ದೇಶಕರು!

"ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ" ಎಂದು ರಂಗ ತಂಡಗಳು ಮನವಿ ಮಾಡಿವೆ.

- Advertisement -
- Advertisement -

ಬೆಂಗಳೂರಿನಲ್ಲಿ ಕೊರೊನಾ ಸಾಂಕ್ರಾಮಿಕದ ನಡುವೆಯೇ ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡು ಜನರಿಗೆ ರಂಗಭೂಮಿಯ ಸವಿಯೂಣಿಸಲು 15 ರಂಗತಂಡಗಳು ಸಜ್ಜಾಗಿವೆ. ಬರೋಬ್ಬರಿ 15 ದಿನಗಳು, 15 ನಾಟಕಗಳು, 15 ನಿರ್ದೇಶಕರು ಮತ್ತು ವಿಭಿನ್ನ ಬರಹಗಾರರು ಸೇರಿ ಜ. 3 ರಿಂದ ಜ. 18ರ ವರೆಗೆ ’ಯುವರಂಗ ನಾಟಕೋತ್ಸವ 2021’ ಕಾರ್ಯಕ್ರಮ ಆಯೋಜಿಸಿವೆ.

ಕೊರೊನಾ ಭಯವನ್ನು ಪಕ್ಕಕಿಟ್ಟು, ಜವಾಬ್ದಾರಿಯನ್ನು ಹೆಗಲಿಗೆ ಹೊತ್ತು ಸದ್ದು ಮಾಡಲು ರಂಗಭೂಮಿ ಮತ್ತೆ ಸಜ್ಜಾಗಿದೆ. ’ಯುವರಂಗ ನಾಟಕೋತ್ಸವ 2021’ ವೇದಿಕೆ ಮೂಲಕ ಕೊರೊನಾ ಸಾಂಕ್ರಾಮಿಕದಿಂದ ಹೊಡೆತ ತಿಂದಿರುವ ರಂಗಭೂಮಿಯ ಹಲವು ಬಳಗಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿವೆ.

“ಪ್ರೇಕ್ಷಕರ ಮೇಲೆ ನಂಬಿಕೆ ಇಟ್ಟು, 15 ದಿನಗಳ ಕಾಲ 15  ನಾಟಕಗಳು ಬರೀ ಜನರನ್ನ ಮಾತ್ರ ನಂಬಿ ನಾಟಕಗಳನ್ನು ಪ್ರಸ್ತುತ ಪಡಿಸಲು ನಿರ್ಧರಿಸಿದ್ದೆವೆ. ಮುಂದಿನ ಬದುಕಿನ ಯೋಚನೆಗೆ ಬಿದ್ದೋ, ಇಷ್ಟು ದಿನಗಳ ಖಾಲಿ ಕೈ ಬರ್ತಿ ಮಾಡಲಿಕ್ಕೋ,‌ ಅವಮಾನಿಸಿದವರಿಗೆ ಉತ್ತರಿಸಲೆಂದೋ‌, ಹಸಿವನ್ನೋ, ದೇವರನ್ನು ಪ್ರಾರ್ಥಿಸಲೋ ಈ ಕಾಯಕಕ್ಕೆ ಇಳಿದಿದ್ದೇವೆ” ಎಂದು ರಂಗ ತಂಡಗಳು ಮನವಿ ಮಾಡಿವೆ.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

“ನಮ್ಮ ಈ ಪ್ರಯೋಗ ಹುಚ್ಚು ಸಾಹಸ ಎಂದೆನ್ನಿಸಬಹುದು. ಆದರೆ ಬಣ್ಣವನ್ನೇ ಬದುಕಾಗಿಸಿಕೊಂಡವರಿಗೆ  ಸಾಹಸಗಳನ್ನು ಮಾಡಿ ಅಭ್ಯಾಸ ಇರುತ್ತದೆ. ರಂಗಭೂಮಿ ಕಲಿಸೋದು ಹೋರಾಡು ಅಂತ. ಸಮಾಜಕ್ಕೆ ಕನ್ನಡಿ ರಂಗಭೂಮಿ ಎನ್ನುತ್ತಾರೆ. ಅದರಂತೆಯೇ 15 ಬಗೆಯ ವಿಭಿನ್ನ ಪ್ರಯೋಗಗಳನ್ನ ನಿಮ್ಮ ಮುಂದೆ ಇಡೋಕೆ ಯುವರಂಗ ಅನ್ನೋ ವೇದಿಕೆ ಸಿದ್ಧವಾಗಿದೆ. ಹೊಸ ವರ್ಷಕ್ಕೆ ಹೊಸ ಹೊಸ ಕನಸುಗಳನ್ನು ಹೊತ್ತು ಜನವರಿ 03 ರಿಂದ 18 ನೇ ತಾರೀಖಿನ 15ನ ದಿನಗಳು, 15 ತಂಡಗಳು ನಿಮ್ಮ ಮುಂದೆ ಬರುತ್ತಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ದೃಶ್ಯಕಾವ್ಯ, ಖಾಲಿರಂಗ, ಥೇಮಾ, ರಂಗಭಾಸ್ಕರ, ಸವಿರಂಗ, ರಂಗವಿಜಯ, ನೆನಪುತಂಡ, ಅಶ್ವಘೋಷ ಥಿಯೇಟರ್ ಟ್ರಸ್ಟ್, ರಂಗನಿರಂತರ, ಸೈಡ್ ವಿಂಗ್, ವಿಶ್ವಪಥ ಕಲಾ ಸಂಗಮ, ಥಿಯೇಟರ್ ಥೇರಪಿ, ಸ್ಪಷ್ಟ, ಪ್ರವರ ಥಿಯೇಟರ್ ಮತ್ತು ರಂಗಪಯಣ ತಂಡಗಳು ಯುವರಂಗ ನಾಟಕೋತ್ಸವದಲ್ಲಿ ಪಾಲ್ಗೊಳ್ಳಲಿವೆ.

ಕೆ. ವೈ ನಾರಾಯಣ ಸ್ವಾಮಿ, ಬೇಲೂರು ರಘುನಂದನ್, ರಾಮಕೃಷ್ಣಕಲ್ಚಾರ್, ಲಿಂಗ ದೇವರು ಹಳೆ ಮನೆ, ರಾಜಗುರು, ಶೈಲೇಶ್ ಕುಮಾರ್, ಹನುಮಂತ ಹಾಲಿಗೇರಿ, ಎಂ. ಎಸ್ ನರಸಿಂಹ ಮೂರ್ತಿ, ಕರಣಂ ಪವನ್ ಪ್ರಸಾದ್ ಸೇರಿದಂತೆ ಹಲವು ಬರವಣಿಗೆಗಾರರ ಬರಹ ನಾಟಕಗಳಿಗಿದೆ.

ನಿರ್ದೇಶನ ವಿಭಾಗದಲ್ಲಿ ಕೃಷ್ಣ ಮೂರ್ತಿ ಕವತ್ತಾರ್, ನಂಜುಂಡೇಗೌಡ, ನಿರಂಜನ್ ಖಾಲಿಕೊಡ, ಡಾ. ಎಸ್. ವಿ. ಸುಷ್ಮಾ, ಭಾಸ್ಕರ್ ಗೌಡ, ದಿಲೀಪ್ ಬಿ.ಎಂ, ನಂದೀಶ್ ದೇವ್, ಶೈಲೇಶ್ ಕುಮಾರ್, ಭಾಸ್ಕರ್ ನೀನಾಸಂ, ರಾಮಕೃಷ್ಣ ಬೆಳ್ತೂರ್, ಗಗನ್ ಪ್ರಸಾದ್, ಹನು ರಾಮಸಂಜೀವ, ರಾಜಗುರು ಸೇರಿದ್ದಾರೆ.

ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

ಈ  ಹದಿನೈದು ದಿನಗಳಲ್ಲಿ ನಾಟಕಗಳ ಜೊತೆಗೆ ಸಂವಾದ, ರಂಗಗೀತೆಗಳು, ಯುವರಂಗ 2021 ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೆಲ್ಲದರ ಜೊತೆಗೆ ಜನವರಿ 11 ರಂದು ರಂಗನಿರಂತರ ತಂಡವು ಸಿಜಿಕೆ ಅವರ ಲಕೋಟೆಯನ್ನು ಬಿಡುಗಡೆ ಮಾಡಲಿದೆ ಎಂದು ರಂಗತಂಡಗಳು ಮಾಹಿತಿ ನೀಡಿದ್ದಾರೆ.

ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ನಾಟಕಗಳು ನಡೆಯಲಿವೆ. ಸರ್ಕಾರ ಬಿಡುಗಡೆ ಮಾಡಿರುವ ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸಲಾಗುವುದು, ಮಾಸ್ಕ್, ದೈಹಿಕ ಅಂತರ ಕಾಪಾಡುವುದು ಮುಖ್ಯ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿ ನಾಟಕಕ್ಕೆ 100 ರೂಪಾಯಿ ಟಿಕೆಟ್ ದರ ಇರಲಿದೆ. ಹದಿನೈದು ದಿನಗಳ ಪಾಸ್ ಪಡೆದುಕೊಂಡವರಿಗೆ 1,000 ರೂಪಾಯಿಗೆ ಪಾಸ್ ದೊರೆಯಲಿದೆ.


ಇದನ್ನೂ ಓದಿ: ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...