Homeಕರ್ನಾಟಕಇಂದಿನಿಂದ ‘ಯುವನಿಧಿ’ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ?

ಇಂದಿನಿಂದ ‘ಯುವನಿಧಿ’ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ?

- Advertisement -
- Advertisement -

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಯುವನಿಧಿ’ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಅರ್ಹ ನಿರುದ್ಯೋಗಿ ಯುವಜನರು ಅರ್ಜಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಐದು ಗ್ಯಾರಂಟಿಗಳಲ್ಲಿ ಸರ್ಕಾರ ಈಗಾಗಲೇ ಅನ್ನಭಾಗ್ಯ, ಶಕ್ತಿ (ಉಚಿತ ಪ್ರಯಾಣ), ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಜೋಜನೆಗಳನ್ನು ಜಾರಿ ಮಾಡಿದೆ. ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳ ನಂತರ ಇದೀಗ ಯುವನಿಧಿ ಜಾರಿ ಮೂಲಕ ಪದವಿ ಹಾಗೂ ಡಿಪ್ಲೋಮಾ ಮುಗಿಸಿರುವ ಅರ್ಹ ಯುವಜನರಿಗೆ ನೆರವಾಗಲು ಸರ್ಕಾರ ಮುಂದಾಗಿದೆ.

‘ಪದವೀಧರ ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ನಮ್ಮ ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಯ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ. ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಜನರು ಯೋಜನೆಗೆ ನೊಂದಾಯಿಸಿಕೊಳ್ಳುವ ಮೂಲಕ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

‘ನಿರುದ್ಯೋಗಿ ಪದವೀಧರರ ಶ್ರೇಯೋಭಿವೃದ್ಧಿಗಾಗಿ ನಮ್ಮ ಸರ್ಕಾರ ಘೋಷಿಸಿದ್ದ “ಯುವನಿಧಿ” ಗ್ಯಾರಂಟಿಯ ನೋಂದಣಿ ಪ್ರಕ್ರಿಯೆಗೆ ಇಂದು ಚಾಲನೆ ದೊರೆಯಲಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ’ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಅರ್ಜಿ ಸಲ್ಲಿಸುವುದು ಹೇಗೆ?

ಯುವನಿಧಿ ಫಲಾನುಭವಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಯ್ಕೆಯಾಗುವ ಫಲಾನುಭವಿಗಳ ಬ್ಯಾಂಕ್ ಖಾತೆಗೆ 2024ರ ಜನವರಿ 12ರಂದು ಹಣ ಜಮಾವಣೆ ಆಗಲಿದೆ.
ಯುವನಿಧಿ ಯೋಜನೆಯನ್ನು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಚಾಲನೆ ನೀಡಲಾಗುತ್ತಿದ್ದು, 2022-23ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ತೇರ್ಗಡೆ ಆಗಿ 6 ತಿಂಗಳಿಂದ ಉದ್ಯೋಗ ಸಿಗದೇ ಇರುವವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆ ಪಡೆದುಕೊಂಡಿರುತ್ತಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು https://sevasindhu.karnataka.gov.in ಲಿಂಕ್ ಬಳಸಿ ಸೇವಾಸಿಂಧು ಪೋರ್ಟಲ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಸೇರಿದಂತೆ ಇತರೆ ಅಧಿಕೃತ ಡಿಜಿಟಲ್ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಳ್ಳಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಭರಿಸಬೇಕಾದ ಅಗತ್ಯ ಇಲ್ಲ ಎಂದು ಸರ್ಕಾರ ಹೇಳಿದೆ.

ಯುವನಿಧಿ ಯೋಜನೆ ಮೂಲಕ ಅರ್ಹ ಪಧವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ₹3000 ಹಾಗೂ ಡಿಪ್ಲೊಮ ಉತ್ತೀರ್ಣರಾಗಿರುವ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ₹1500 ಸಿಗಲಿದೆ. ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದ್ದು, ಈ ಯೋಜನೆಯಡಿ ಮುಂದಿನ 2 ವರ್ಷಗಳ ಅವಧಿಗೆ ಮಾತ್ರ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಭತ್ಯೆ ಪಡೆಯುತ್ತಿರುವಗಲೇ ಯುವಜನರು ಉದ್ಯೋಗಕ್ಕೆ ಸೇರಿಕೊಂಡರೆ ತಕ್ಷಣವೇ ಭತ್ಯೆ ನಿಲ್ಲಿಸಲಾಗುತ್ತದೆ.

ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ್ಯ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲರಾದರೆ ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರುಸುವವರಿಗೆ ಯೋಜನೆ ಅನ್ವಯಿಸುವುದಿಲ್ಲ ಹಾಗೂ ವಿದ್ಯಾಭ್ಯಾಸ ಮುಗಿಸಿ ಕಂಪನಿಗಳಲ್ಲಿ ಅಪ್ರೆಂಟಿಸ್ ತರಬೇತಿ ವೇತನ ಪಡೆಯುತ್ತಿರುವವರಿಗೆ ಯುವನಿಧಿ ಅನ್ವಯಿಸುವಿದಿಲ್ಲ. ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರಿಗೂ ಅನ್ವಯ ಆಗುವುದಿಲ್ಲ. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರಿಗೂ ಯೋಜನೆ ಅನ್ವಯ ಆಗುವುದಿಲ್ಲ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ; WFI ಆಡಳಿತ ಮಂಡಳಿ ಅಮಾನತುಗೊಂಡಿಲ್ಲ, ಗೊಂದಲ ಸೃಷ್ಟಿಸಲು ಚಟುವಟಿಕೆ ಸ್ಥಗಿತ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...