Homeಮುಖಪುಟದೆಹಲಿಯಲ್ಲಿ ಮತ್ತೊಂದು ಶಾಹೀನ್ ಬಾಗ್ ಆಗಲು ಬಿಡುವುದಿಲ್ಲ: ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ದೆಹಲಿಯಲ್ಲಿ ಮತ್ತೊಂದು ಶಾಹೀನ್ ಬಾಗ್ ಆಗಲು ಬಿಡುವುದಿಲ್ಲ: ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

- Advertisement -
- Advertisement -

ಭಾರತೀಯ ಜನತಾ ಪಕ್ಷದ ಮುಖಂಡ ಕಪಿಲ್ ಮಿಶ್ರಾ ಮಂಗಳವಾರ ಪೊಲೀಸರಿಂದ ಸುತ್ತುವರಿದ ಕಿರು ವೀಡಿಯೊವನ್ನು ಟ್ವೀಟ್ ಮಾಡಿದ್ದು, ಜಾಫ್ರಾಬಾದ್‌ ಖಾಲಿಯಾಗಿದೆ ದೆಹಲಿಯಲ್ಲಿ ಮತ್ತೊಂದು ಶಾಹೀನ್ ಬಾಗ್ ಆಗಲು ಬಿಡುವುದಿಲ್ಲ ಬರೆದಿದ್ದಾರೆ.

ಇದು ಹಿಂಸಾಚಾರದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾದ ಈಶಾನ್ಯ ದೆಹಲಿಯ ಜಾಫ್ರಾಬಾದ್‌ನ ಮೆಟ್ರೋ ನಿಲ್ದಾಣದ ಕೆಳಗಿರುವ ಖಾಲಿ ರಸ್ತೆಯಲ್ಲಿ ಪೊಲೀಸರನ್ನು ತೋರಿಸುತ್ತದೆ. ಆ ಮೂಲಕ ಹಿಂಸಾಚಾರಕ್ಕೆ ನಾವೇ ಕಾರಣ ಅಂತಲೂ, ಸಿಎಎ ವಿರೋಧಿ ಪ್ರತಿಭಟನೆ ತಡೆಯಲು ಹೀಗೆ ಮಾಡಲಾಯಿತು ಎಂತಲೂ ಅರ್ಥ ಬರುವ ರೀತಿಯಲ್ಲಿ ಕಪಿಲ್‌ ಮಿಶ್ರಾ ಮಾತಾಡಿರುವುದು ಸ್ಪಷ್ಟವಾಗಿದೆ.

ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಕೆಳಗಿರುವ ಪ್ರತಿಭಟನಾ ಸ್ಥಳವನ್ನು ಪೊಲೀಸರು ಮಂಗಳವಾರ ಸಂಜೆ ತೆರವುಗೊಳಿಸಿದ್ದಾರೆ.

ಜಾಫ್ರಾಬಾದ್, ಮೌಜ್‌ಪುರ ಮತ್ತು ಈಶಾನ್ಯ ದೆಹಲಿಯ ಇತರ ಪ್ರದೇಶಗಳಲ್ಲಿ ಮೂರು ದಿನಗಳ ಹಿಂಸಾಚಾರದಲ್ಲಿ ದೆಹಲಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಸೇರಿದಂತೆ ಹದಿನೆಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

ಆ ಸ್ಥಳದಲ್ಲಿ ಶನಿವಾರದಿಂದ ಪ್ರತಿಭಟನೆ ನಡೆಯುತ್ತಿತ್ತು. ಆದರೆ ಮಿಶ್ರಾ ಈ ಪ್ರದೇಶಕ್ಕೆ ಭೇಟಿ ನೀಡಿ ಮೂರು ದಿನಗಳೊಳಗೆ ಪ್ರತಿಭಟನಾಕಾರರನ್ನು ಪೊಲೀಸರು ಹೊರಕಳಿಸಿದಬೇಕೆಂದು ಒತ್ತಾಯಿಸಿ, ಇಲ್ಲದಿದ್ದಲ್ಲಿ ನಾವು ಬೀದಿಗಿಳಿಯುತ್ತೇವೆ ಎಂದು ಧಮಕಿ ಹಾಕಿದ ನಂತರ ಭಾನುವಾರ ಸಂಜೆ ಹಿಂಸಾಚಾರಗಳು ಭುಗಿಲೆದ್ದಿವೆ.

ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ ಮತ್ತು ಇತರರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಅರ್ಜಿಯಲ್ಲಿ ಮಿಶ್ರಾ ಅವರು ಗಲಭೆಗಳನ್ನು ಆಯೋಜಿಸಿದ್ದಾರೆ ಎಂದು ಆರೋಪಿಸಿಲಾಗಿದೆ.


ಇದನ್ನೂ ಓದಿ: ದೆಹಲಿ ಹಿಂಸಾಚಾರಕ್ಕೆ ಪ್ರಚೋದನೆ: BJPಯ ಕಪಿಲ್‌ ಮಿಶ್ರಾ ವಿರುದ್ಧ ದೂರು ದಾಖಲು 


ಸಿಎಎಗೆ ಬೆಂಬಲ ನೀಡುವ ಮೂಲಕ ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಕಪಿಲ್‌ ಮಿಶ್ರಾ ಸೋಮವಾರ ಸಂಜೆ ಪೋಸ್ಟ್ ಮಾಡಿದ ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ನಾನು ವಿದೇಶದಿಂದ ಮತ್ತು ಭಾರತದಿಂದ ಮಾರಣಾಂತಿಕ ಬೆದರಿಕೆಗಳನ್ನು ಸ್ವೀಕರಿಸುತ್ತಿದ್ದೇನೆ. ನನಗೆ ಬೆದರಿಕೆ ಇದೆ. ಪ್ರತಿಭಟನೆಯಿಂದಾಗಿ ಮುಚ್ಚಿದ ರಸ್ತೆ ತೆರೆಯಲು ಸಹಾಯ ಮಾಡುವುದು ಅಪರಾಧವಲ್ಲ, ಸಿಎಎಗೆ ಬೆಂಬಲ ನೀಡುವುದು ಅಪರಾಧವಲ್ಲ, ಸತ್ಯವನ್ನು ಮಾತನಾಡುವುದು ಅಪರಾಧವಲ್ಲ ”ಎಂದು ಮಿಶ್ರಾ ಹಿಂದಿಯಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಬಿಜೆಪಿಯ ಪೂರ್ವ ದೆಹಲಿ ಸಂಸದ ಗೌತಮ್ ಗಂಭೀರ್ ಅವರು ಮಿಶ್ರಾ ಸೇರಿದಂತೆ ಯಾರಾದರೂ “ಪ್ರಚೋದನಕಾರಿ” ಭಾಷಣಗಳನ್ನು ನೀಡಿದರೆ ಅವರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದರು.

“ಯಾರು, ಅವರು ಯಾವ ಪಕ್ಷಕ್ಕೆ ಸೇರಿದವರಾಗಿರಲಿ, ಅವರು ಕಪಿಲ್ ಮಿಶ್ರಾ ಆಗಿರಲಿ ಅಥವಾ ಜನರನ್ನು ಪ್ರಚೋದಿಸಲು ಭಾಷಣ ಮಾಡಿದವರು ಯಾರೇ ಆಗಿರಲಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಗಂಭೀರ್ ಪಟ್ಪರ್ಗಂಜ್ ಆಸ್ಪತ್ರೆಯಲ್ಲಿ ದಾಖಲಾದ ಗಾಯಗೊಂಡ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಸುದ್ದಿಗಾರರಿಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...