Homeಮುಖಪುಟಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ... ಧರ್ಮ, ಕಲೆ, ಧಮಾಂಧತೆಗಳ ಸುತ್ತ...

ಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ… ಧರ್ಮ, ಕಲೆ, ಧಮಾಂಧತೆಗಳ ಸುತ್ತ…

- Advertisement -
- Advertisement -

ಚೆಲುವು ಮತ್ತು ಪ್ರತಿಭೆಗಳ ಕಣಜದಂತಿರುವ 18 ವರ್ಷದ ಪುಟ್ಟ ನಟಿ ಝೈರಾ ವಾಸೀಮ್ ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದಳು. 16 ರ ವಯಸ್ಸಿನಲ್ಲಿ ‘ದಂಗಲ್’ ಸಿನಿಮಾದಲ್ಲಿ ಕುಸ್ತಿಪಟುವಿನ ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿ ಬಾಲಿವುಡ್‍ನಲ್ಲಿ ಹೊಸ ಭರವಸೆ ನೀಡಿದ್ದ ಝೈರಾ ವಾಸೀಮ್ ಬಾಲಿವುಡ್‍ಗೆ, ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದ್ದಾಳೆ. ತನ್ನ ನಂಬಿಕೆ ಮತ್ತು ಅಲ್ಲಾಹುವಿನ ಎಡೆಗಿನ ತನ್ನ ವಿಶ್ವಾಸಕ್ಕೆ ಈ ವೃತ್ತಿ ಹೊಂದುತ್ತಿಲ್ಲ ಎಂದು ಈ ಯುವತಿ ಕಾರಣ ನೀಡಿದ್ದಾಳೆ.

ಅದು ಆಕೆಯ ವೈಕ್ತಿಕ ನಿರ್ಧಾರವಿರಬಹುದು. ಆದರೆ, ಆಕೆ ಇಲ್ಲಿ ಧಾರ್ಮಿಕ ನಂಬಿಕೆಯ ವಿಷಯವನ್ನು ಮುನ್ನೆಲೆಗೆ ತಂದ ಕಾರಣದ ಹಿಂದೆ ಹಲವು ಸೂಕ್ಷ್ಮಗಳಿವೆ, ಹಲವು ತಪ್ಪು ಕಲ್ಪನೆಗಳಿವೆ.. ಇದೆ ಕೇವಲ ಇಸ್ಲಾಂ ಧರ್ಮಕ್ಕೆ ಸಂಬಂಧಿಸಿದ ವಿಷಯವಲ್ಲ, ಹಿಂದೂ ಧರ್ಮಕ್ಕೂ ಸಂಬಂಧಿಸಿದ್ದು. ಧರ್ಮದ ಹೆಸರಲ್ಲಿ ಪುತೃಪ್ರಧಾನ ವ್ಯವಸ್ಥೆ ಈಗಲೂ ಅನುಸರಿಸಿಕೊಂಡಿರುವ ಲಿಂಗ ಅಸಹಿಷ್ಣತೆಯೂ ಇಲ್ಲಿದೆ.

ಕಲೆ, ಧರ್ಮ ಮತ್ತು ಹೆಣ್ಣು
ಯಾವ ಧರ್ಮವೂ ವಿಧಿಸದ ಕಟ್ಟುಪಾಡುಗಳನ್ನು ಆಯಾ ಧರ್ಮದ ಪಿತೃ ವ್ಯವಸ್ಥೆ ಸ್ತ್ರೀಯರ ಮೇಲೆ ವಿಧಿಸುತ್ತಲೇ ಬಂದಿದೆ. ಅದು ಕಾಲಕ್ರಮೇಣ ಕಡಿಮೆಯಾಗುತ್ತ ಬಂದರೂ ಈ ಆಧುನಿಕ ಜಗತ್ತಲ್ಲೂ ಅದು ಹೊಸ ರೂಪಗಳಲ್ಲಿ ವನಿತಾ ಸಮೂಹವನ್ನು ಕಾಡುತ್ತಲೇ ಇದೆ.
ಸದ್ಯ ಝೈರಾ ವಿಷಯದಲ್ಲಿ ಇಲ್ಲಿ ನಿರ್ದಿಷ್ಠ ಕಾರಣಗಳು ಉಲ್ಲೀಖಿಸಲ್ಪಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಮತ್ತೆ ಚರ್ಚೆಗೆ ಬರುವ ಇಸ್ಲಾಂ ಮೂಲಭೂತವಾದದ ವಾದಕ್ಕೆ ಸಂಬಂಧಿಸಿದಂತೆ ಕೆಲವು ಅಪರಿಚಿತ ಸತ್ಯಗಳನ್ನು ನಾವು ಮರೆಯುತ್ತಿದ್ದೇವೆ.

ಇಸ್ಲಾಂ ಎಂದೂ ಕಲೆ ವಿರುದ್ಧವಾಗಿಲ್ಲ, ಅದರಲ್ಲೂ ಮೂಲಭೂತವಾದಿಗಳೂ ಹಬ್ಬಿಸಿದಂತೆ ಅದು ಸಂಗೀತದ ನಿರಾಕರಣೆಯನ್ನೂ ಎಂದೂ ಮಾಡಿಲ್ಲ. ಈ ದೇಶದ ಇತಿಹಾಸದತ್ತ ಇತಿಹಾಸದತ್ತ ಗಮನ ಹರಿಸದರೆ ಈ ನೆಲಕ್ಕೆ ಇಸ್ಲಾಂ ನೀಡಿರುವ ಸಾಂಸ್ಕೃತಿಕ ಕೊಡುಗೆ ಅನನ್ಯವಾದುದು. ಸೃಷ್ಟಿತ ಕಟ್ಟುಪಾಡುಗಳನ್ನು ಮುರಿದು ಇಸ್ಲಾಂ ಕಲಾವಿದರು ತಮ್ಮ ಪ್ರತಿಭೆಯನ್ನು ಧಾರೆ ಎರಯುತ್ತಲೇ ಬಂದಿದ್ದಾರೆ. ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತದಲ್ಲೂ ಅವರ ಕೊಡುಗೆ ಅಪಾರ.

ಬಾಲಿವುಡ್ ಖಾನ್‍ಗಳ ಪ್ರತಿಭೆಯನ್ನು ಮೆಚ್ಚುವ ಈ ದೇಶದಲ್ಲಿ ಝೈರಾಳಂತಹ ಹೊಸ ಹುಡುಗಿ ನಂಬುಗೆ ಕಾರಣಕ್ಕೆ ತನ್ನ ಮನದಾಳದ ಕಲೆಯನ್ನು ತೊರೆದಿರುವುದು ನೋವಿನ ಸಂಗತಿಯಷ್ಟೇ. ಕೋಮುವಾದ ಮತ್ತು ಮೂಲಭೂತವಾದಿ ಮನಸ್ಸುಗಳ ಆಳದಲ್ಲಿರುವ ಲಿಂಗ ಅಸಹಿಷ್ಣುತೆ ಈಗ ವಿಭಿನ್ನ ರೂಪದಲ್ಲಿ ಆಕ್ರಮಣ ಮಾಡುತ್ತಿರುವ ಹೊತ್ತಿನಲ್ಲಿ ಎಲ್ಲ ಧರ್ಮಗಳ ಪ್ರಾಮಾಣಿಕರು, ಸಮಾನತಾವಾದಿಗಳು ವಾಸ್ತವದ ಅರಿವು ಮೂಡಿಸುವುದು ಈಗಿನ ಅಗತ್ಯವಾಗಿದೆ. ನಮ್ಮ ಶಿಕ್ಷಣದ ಪಠ್ಯಗಳಲ್ಲೇ ಇಂತಹ ಚಿಂತನೆಗಳನ್ನು ಸೇರಿಸಬೇಕಾದ ಜರೈರತ್ತು ಇಂದು ಎಂದಿಗಿಂತ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...