Homeಮುಖಪುಟಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ... ಧರ್ಮ, ಕಲೆ, ಧಮಾಂಧತೆಗಳ ಸುತ್ತ...

ಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ… ಧರ್ಮ, ಕಲೆ, ಧಮಾಂಧತೆಗಳ ಸುತ್ತ…

- Advertisement -
- Advertisement -

ಚೆಲುವು ಮತ್ತು ಪ್ರತಿಭೆಗಳ ಕಣಜದಂತಿರುವ 18 ವರ್ಷದ ಪುಟ್ಟ ನಟಿ ಝೈರಾ ವಾಸೀಮ್ ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದಳು. 16 ರ ವಯಸ್ಸಿನಲ್ಲಿ ‘ದಂಗಲ್’ ಸಿನಿಮಾದಲ್ಲಿ ಕುಸ್ತಿಪಟುವಿನ ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿ ಬಾಲಿವುಡ್‍ನಲ್ಲಿ ಹೊಸ ಭರವಸೆ ನೀಡಿದ್ದ ಝೈರಾ ವಾಸೀಮ್ ಬಾಲಿವುಡ್‍ಗೆ, ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದ್ದಾಳೆ. ತನ್ನ ನಂಬಿಕೆ ಮತ್ತು ಅಲ್ಲಾಹುವಿನ ಎಡೆಗಿನ ತನ್ನ ವಿಶ್ವಾಸಕ್ಕೆ ಈ ವೃತ್ತಿ ಹೊಂದುತ್ತಿಲ್ಲ ಎಂದು ಈ ಯುವತಿ ಕಾರಣ ನೀಡಿದ್ದಾಳೆ.

ಅದು ಆಕೆಯ ವೈಕ್ತಿಕ ನಿರ್ಧಾರವಿರಬಹುದು. ಆದರೆ, ಆಕೆ ಇಲ್ಲಿ ಧಾರ್ಮಿಕ ನಂಬಿಕೆಯ ವಿಷಯವನ್ನು ಮುನ್ನೆಲೆಗೆ ತಂದ ಕಾರಣದ ಹಿಂದೆ ಹಲವು ಸೂಕ್ಷ್ಮಗಳಿವೆ, ಹಲವು ತಪ್ಪು ಕಲ್ಪನೆಗಳಿವೆ.. ಇದೆ ಕೇವಲ ಇಸ್ಲಾಂ ಧರ್ಮಕ್ಕೆ ಸಂಬಂಧಿಸಿದ ವಿಷಯವಲ್ಲ, ಹಿಂದೂ ಧರ್ಮಕ್ಕೂ ಸಂಬಂಧಿಸಿದ್ದು. ಧರ್ಮದ ಹೆಸರಲ್ಲಿ ಪುತೃಪ್ರಧಾನ ವ್ಯವಸ್ಥೆ ಈಗಲೂ ಅನುಸರಿಸಿಕೊಂಡಿರುವ ಲಿಂಗ ಅಸಹಿಷ್ಣತೆಯೂ ಇಲ್ಲಿದೆ.

ಕಲೆ, ಧರ್ಮ ಮತ್ತು ಹೆಣ್ಣು
ಯಾವ ಧರ್ಮವೂ ವಿಧಿಸದ ಕಟ್ಟುಪಾಡುಗಳನ್ನು ಆಯಾ ಧರ್ಮದ ಪಿತೃ ವ್ಯವಸ್ಥೆ ಸ್ತ್ರೀಯರ ಮೇಲೆ ವಿಧಿಸುತ್ತಲೇ ಬಂದಿದೆ. ಅದು ಕಾಲಕ್ರಮೇಣ ಕಡಿಮೆಯಾಗುತ್ತ ಬಂದರೂ ಈ ಆಧುನಿಕ ಜಗತ್ತಲ್ಲೂ ಅದು ಹೊಸ ರೂಪಗಳಲ್ಲಿ ವನಿತಾ ಸಮೂಹವನ್ನು ಕಾಡುತ್ತಲೇ ಇದೆ.
ಸದ್ಯ ಝೈರಾ ವಿಷಯದಲ್ಲಿ ಇಲ್ಲಿ ನಿರ್ದಿಷ್ಠ ಕಾರಣಗಳು ಉಲ್ಲೀಖಿಸಲ್ಪಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಮತ್ತೆ ಚರ್ಚೆಗೆ ಬರುವ ಇಸ್ಲಾಂ ಮೂಲಭೂತವಾದದ ವಾದಕ್ಕೆ ಸಂಬಂಧಿಸಿದಂತೆ ಕೆಲವು ಅಪರಿಚಿತ ಸತ್ಯಗಳನ್ನು ನಾವು ಮರೆಯುತ್ತಿದ್ದೇವೆ.

ಇಸ್ಲಾಂ ಎಂದೂ ಕಲೆ ವಿರುದ್ಧವಾಗಿಲ್ಲ, ಅದರಲ್ಲೂ ಮೂಲಭೂತವಾದಿಗಳೂ ಹಬ್ಬಿಸಿದಂತೆ ಅದು ಸಂಗೀತದ ನಿರಾಕರಣೆಯನ್ನೂ ಎಂದೂ ಮಾಡಿಲ್ಲ. ಈ ದೇಶದ ಇತಿಹಾಸದತ್ತ ಇತಿಹಾಸದತ್ತ ಗಮನ ಹರಿಸದರೆ ಈ ನೆಲಕ್ಕೆ ಇಸ್ಲಾಂ ನೀಡಿರುವ ಸಾಂಸ್ಕೃತಿಕ ಕೊಡುಗೆ ಅನನ್ಯವಾದುದು. ಸೃಷ್ಟಿತ ಕಟ್ಟುಪಾಡುಗಳನ್ನು ಮುರಿದು ಇಸ್ಲಾಂ ಕಲಾವಿದರು ತಮ್ಮ ಪ್ರತಿಭೆಯನ್ನು ಧಾರೆ ಎರಯುತ್ತಲೇ ಬಂದಿದ್ದಾರೆ. ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತದಲ್ಲೂ ಅವರ ಕೊಡುಗೆ ಅಪಾರ.

ಬಾಲಿವುಡ್ ಖಾನ್‍ಗಳ ಪ್ರತಿಭೆಯನ್ನು ಮೆಚ್ಚುವ ಈ ದೇಶದಲ್ಲಿ ಝೈರಾಳಂತಹ ಹೊಸ ಹುಡುಗಿ ನಂಬುಗೆ ಕಾರಣಕ್ಕೆ ತನ್ನ ಮನದಾಳದ ಕಲೆಯನ್ನು ತೊರೆದಿರುವುದು ನೋವಿನ ಸಂಗತಿಯಷ್ಟೇ. ಕೋಮುವಾದ ಮತ್ತು ಮೂಲಭೂತವಾದಿ ಮನಸ್ಸುಗಳ ಆಳದಲ್ಲಿರುವ ಲಿಂಗ ಅಸಹಿಷ್ಣುತೆ ಈಗ ವಿಭಿನ್ನ ರೂಪದಲ್ಲಿ ಆಕ್ರಮಣ ಮಾಡುತ್ತಿರುವ ಹೊತ್ತಿನಲ್ಲಿ ಎಲ್ಲ ಧರ್ಮಗಳ ಪ್ರಾಮಾಣಿಕರು, ಸಮಾನತಾವಾದಿಗಳು ವಾಸ್ತವದ ಅರಿವು ಮೂಡಿಸುವುದು ಈಗಿನ ಅಗತ್ಯವಾಗಿದೆ. ನಮ್ಮ ಶಿಕ್ಷಣದ ಪಠ್ಯಗಳಲ್ಲೇ ಇಂತಹ ಚಿಂತನೆಗಳನ್ನು ಸೇರಿಸಬೇಕಾದ ಜರೈರತ್ತು ಇಂದು ಎಂದಿಗಿಂತ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...