Homeಮುಖಪುಟಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ... ಧರ್ಮ, ಕಲೆ, ಧಮಾಂಧತೆಗಳ ಸುತ್ತ...

ಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ… ಧರ್ಮ, ಕಲೆ, ಧಮಾಂಧತೆಗಳ ಸುತ್ತ…

- Advertisement -
- Advertisement -

ಚೆಲುವು ಮತ್ತು ಪ್ರತಿಭೆಗಳ ಕಣಜದಂತಿರುವ 18 ವರ್ಷದ ಪುಟ್ಟ ನಟಿ ಝೈರಾ ವಾಸೀಮ್ ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದಳು. 16 ರ ವಯಸ್ಸಿನಲ್ಲಿ ‘ದಂಗಲ್’ ಸಿನಿಮಾದಲ್ಲಿ ಕುಸ್ತಿಪಟುವಿನ ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿ ಬಾಲಿವುಡ್‍ನಲ್ಲಿ ಹೊಸ ಭರವಸೆ ನೀಡಿದ್ದ ಝೈರಾ ವಾಸೀಮ್ ಬಾಲಿವುಡ್‍ಗೆ, ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದ್ದಾಳೆ. ತನ್ನ ನಂಬಿಕೆ ಮತ್ತು ಅಲ್ಲಾಹುವಿನ ಎಡೆಗಿನ ತನ್ನ ವಿಶ್ವಾಸಕ್ಕೆ ಈ ವೃತ್ತಿ ಹೊಂದುತ್ತಿಲ್ಲ ಎಂದು ಈ ಯುವತಿ ಕಾರಣ ನೀಡಿದ್ದಾಳೆ.

ಅದು ಆಕೆಯ ವೈಕ್ತಿಕ ನಿರ್ಧಾರವಿರಬಹುದು. ಆದರೆ, ಆಕೆ ಇಲ್ಲಿ ಧಾರ್ಮಿಕ ನಂಬಿಕೆಯ ವಿಷಯವನ್ನು ಮುನ್ನೆಲೆಗೆ ತಂದ ಕಾರಣದ ಹಿಂದೆ ಹಲವು ಸೂಕ್ಷ್ಮಗಳಿವೆ, ಹಲವು ತಪ್ಪು ಕಲ್ಪನೆಗಳಿವೆ.. ಇದೆ ಕೇವಲ ಇಸ್ಲಾಂ ಧರ್ಮಕ್ಕೆ ಸಂಬಂಧಿಸಿದ ವಿಷಯವಲ್ಲ, ಹಿಂದೂ ಧರ್ಮಕ್ಕೂ ಸಂಬಂಧಿಸಿದ್ದು. ಧರ್ಮದ ಹೆಸರಲ್ಲಿ ಪುತೃಪ್ರಧಾನ ವ್ಯವಸ್ಥೆ ಈಗಲೂ ಅನುಸರಿಸಿಕೊಂಡಿರುವ ಲಿಂಗ ಅಸಹಿಷ್ಣತೆಯೂ ಇಲ್ಲಿದೆ.

ಕಲೆ, ಧರ್ಮ ಮತ್ತು ಹೆಣ್ಣು
ಯಾವ ಧರ್ಮವೂ ವಿಧಿಸದ ಕಟ್ಟುಪಾಡುಗಳನ್ನು ಆಯಾ ಧರ್ಮದ ಪಿತೃ ವ್ಯವಸ್ಥೆ ಸ್ತ್ರೀಯರ ಮೇಲೆ ವಿಧಿಸುತ್ತಲೇ ಬಂದಿದೆ. ಅದು ಕಾಲಕ್ರಮೇಣ ಕಡಿಮೆಯಾಗುತ್ತ ಬಂದರೂ ಈ ಆಧುನಿಕ ಜಗತ್ತಲ್ಲೂ ಅದು ಹೊಸ ರೂಪಗಳಲ್ಲಿ ವನಿತಾ ಸಮೂಹವನ್ನು ಕಾಡುತ್ತಲೇ ಇದೆ.
ಸದ್ಯ ಝೈರಾ ವಿಷಯದಲ್ಲಿ ಇಲ್ಲಿ ನಿರ್ದಿಷ್ಠ ಕಾರಣಗಳು ಉಲ್ಲೀಖಿಸಲ್ಪಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಮತ್ತೆ ಚರ್ಚೆಗೆ ಬರುವ ಇಸ್ಲಾಂ ಮೂಲಭೂತವಾದದ ವಾದಕ್ಕೆ ಸಂಬಂಧಿಸಿದಂತೆ ಕೆಲವು ಅಪರಿಚಿತ ಸತ್ಯಗಳನ್ನು ನಾವು ಮರೆಯುತ್ತಿದ್ದೇವೆ.

ಇಸ್ಲಾಂ ಎಂದೂ ಕಲೆ ವಿರುದ್ಧವಾಗಿಲ್ಲ, ಅದರಲ್ಲೂ ಮೂಲಭೂತವಾದಿಗಳೂ ಹಬ್ಬಿಸಿದಂತೆ ಅದು ಸಂಗೀತದ ನಿರಾಕರಣೆಯನ್ನೂ ಎಂದೂ ಮಾಡಿಲ್ಲ. ಈ ದೇಶದ ಇತಿಹಾಸದತ್ತ ಇತಿಹಾಸದತ್ತ ಗಮನ ಹರಿಸದರೆ ಈ ನೆಲಕ್ಕೆ ಇಸ್ಲಾಂ ನೀಡಿರುವ ಸಾಂಸ್ಕೃತಿಕ ಕೊಡುಗೆ ಅನನ್ಯವಾದುದು. ಸೃಷ್ಟಿತ ಕಟ್ಟುಪಾಡುಗಳನ್ನು ಮುರಿದು ಇಸ್ಲಾಂ ಕಲಾವಿದರು ತಮ್ಮ ಪ್ರತಿಭೆಯನ್ನು ಧಾರೆ ಎರಯುತ್ತಲೇ ಬಂದಿದ್ದಾರೆ. ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತದಲ್ಲೂ ಅವರ ಕೊಡುಗೆ ಅಪಾರ.

ಬಾಲಿವುಡ್ ಖಾನ್‍ಗಳ ಪ್ರತಿಭೆಯನ್ನು ಮೆಚ್ಚುವ ಈ ದೇಶದಲ್ಲಿ ಝೈರಾಳಂತಹ ಹೊಸ ಹುಡುಗಿ ನಂಬುಗೆ ಕಾರಣಕ್ಕೆ ತನ್ನ ಮನದಾಳದ ಕಲೆಯನ್ನು ತೊರೆದಿರುವುದು ನೋವಿನ ಸಂಗತಿಯಷ್ಟೇ. ಕೋಮುವಾದ ಮತ್ತು ಮೂಲಭೂತವಾದಿ ಮನಸ್ಸುಗಳ ಆಳದಲ್ಲಿರುವ ಲಿಂಗ ಅಸಹಿಷ್ಣುತೆ ಈಗ ವಿಭಿನ್ನ ರೂಪದಲ್ಲಿ ಆಕ್ರಮಣ ಮಾಡುತ್ತಿರುವ ಹೊತ್ತಿನಲ್ಲಿ ಎಲ್ಲ ಧರ್ಮಗಳ ಪ್ರಾಮಾಣಿಕರು, ಸಮಾನತಾವಾದಿಗಳು ವಾಸ್ತವದ ಅರಿವು ಮೂಡಿಸುವುದು ಈಗಿನ ಅಗತ್ಯವಾಗಿದೆ. ನಮ್ಮ ಶಿಕ್ಷಣದ ಪಠ್ಯಗಳಲ್ಲೇ ಇಂತಹ ಚಿಂತನೆಗಳನ್ನು ಸೇರಿಸಬೇಕಾದ ಜರೈರತ್ತು ಇಂದು ಎಂದಿಗಿಂತ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ...

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...