Homeಮುಖಪುಟಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ... ಧರ್ಮ, ಕಲೆ, ಧಮಾಂಧತೆಗಳ ಸುತ್ತ...

ಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ… ಧರ್ಮ, ಕಲೆ, ಧಮಾಂಧತೆಗಳ ಸುತ್ತ…

- Advertisement -
- Advertisement -

ಚೆಲುವು ಮತ್ತು ಪ್ರತಿಭೆಗಳ ಕಣಜದಂತಿರುವ 18 ವರ್ಷದ ಪುಟ್ಟ ನಟಿ ಝೈರಾ ವಾಸೀಮ್ ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದಳು. 16 ರ ವಯಸ್ಸಿನಲ್ಲಿ ‘ದಂಗಲ್’ ಸಿನಿಮಾದಲ್ಲಿ ಕುಸ್ತಿಪಟುವಿನ ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿ ಬಾಲಿವುಡ್‍ನಲ್ಲಿ ಹೊಸ ಭರವಸೆ ನೀಡಿದ್ದ ಝೈರಾ ವಾಸೀಮ್ ಬಾಲಿವುಡ್‍ಗೆ, ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದ್ದಾಳೆ. ತನ್ನ ನಂಬಿಕೆ ಮತ್ತು ಅಲ್ಲಾಹುವಿನ ಎಡೆಗಿನ ತನ್ನ ವಿಶ್ವಾಸಕ್ಕೆ ಈ ವೃತ್ತಿ ಹೊಂದುತ್ತಿಲ್ಲ ಎಂದು ಈ ಯುವತಿ ಕಾರಣ ನೀಡಿದ್ದಾಳೆ.

ಅದು ಆಕೆಯ ವೈಕ್ತಿಕ ನಿರ್ಧಾರವಿರಬಹುದು. ಆದರೆ, ಆಕೆ ಇಲ್ಲಿ ಧಾರ್ಮಿಕ ನಂಬಿಕೆಯ ವಿಷಯವನ್ನು ಮುನ್ನೆಲೆಗೆ ತಂದ ಕಾರಣದ ಹಿಂದೆ ಹಲವು ಸೂಕ್ಷ್ಮಗಳಿವೆ, ಹಲವು ತಪ್ಪು ಕಲ್ಪನೆಗಳಿವೆ.. ಇದೆ ಕೇವಲ ಇಸ್ಲಾಂ ಧರ್ಮಕ್ಕೆ ಸಂಬಂಧಿಸಿದ ವಿಷಯವಲ್ಲ, ಹಿಂದೂ ಧರ್ಮಕ್ಕೂ ಸಂಬಂಧಿಸಿದ್ದು. ಧರ್ಮದ ಹೆಸರಲ್ಲಿ ಪುತೃಪ್ರಧಾನ ವ್ಯವಸ್ಥೆ ಈಗಲೂ ಅನುಸರಿಸಿಕೊಂಡಿರುವ ಲಿಂಗ ಅಸಹಿಷ್ಣತೆಯೂ ಇಲ್ಲಿದೆ.

ಕಲೆ, ಧರ್ಮ ಮತ್ತು ಹೆಣ್ಣು
ಯಾವ ಧರ್ಮವೂ ವಿಧಿಸದ ಕಟ್ಟುಪಾಡುಗಳನ್ನು ಆಯಾ ಧರ್ಮದ ಪಿತೃ ವ್ಯವಸ್ಥೆ ಸ್ತ್ರೀಯರ ಮೇಲೆ ವಿಧಿಸುತ್ತಲೇ ಬಂದಿದೆ. ಅದು ಕಾಲಕ್ರಮೇಣ ಕಡಿಮೆಯಾಗುತ್ತ ಬಂದರೂ ಈ ಆಧುನಿಕ ಜಗತ್ತಲ್ಲೂ ಅದು ಹೊಸ ರೂಪಗಳಲ್ಲಿ ವನಿತಾ ಸಮೂಹವನ್ನು ಕಾಡುತ್ತಲೇ ಇದೆ.
ಸದ್ಯ ಝೈರಾ ವಿಷಯದಲ್ಲಿ ಇಲ್ಲಿ ನಿರ್ದಿಷ್ಠ ಕಾರಣಗಳು ಉಲ್ಲೀಖಿಸಲ್ಪಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಮತ್ತೆ ಚರ್ಚೆಗೆ ಬರುವ ಇಸ್ಲಾಂ ಮೂಲಭೂತವಾದದ ವಾದಕ್ಕೆ ಸಂಬಂಧಿಸಿದಂತೆ ಕೆಲವು ಅಪರಿಚಿತ ಸತ್ಯಗಳನ್ನು ನಾವು ಮರೆಯುತ್ತಿದ್ದೇವೆ.

ಇಸ್ಲಾಂ ಎಂದೂ ಕಲೆ ವಿರುದ್ಧವಾಗಿಲ್ಲ, ಅದರಲ್ಲೂ ಮೂಲಭೂತವಾದಿಗಳೂ ಹಬ್ಬಿಸಿದಂತೆ ಅದು ಸಂಗೀತದ ನಿರಾಕರಣೆಯನ್ನೂ ಎಂದೂ ಮಾಡಿಲ್ಲ. ಈ ದೇಶದ ಇತಿಹಾಸದತ್ತ ಇತಿಹಾಸದತ್ತ ಗಮನ ಹರಿಸದರೆ ಈ ನೆಲಕ್ಕೆ ಇಸ್ಲಾಂ ನೀಡಿರುವ ಸಾಂಸ್ಕೃತಿಕ ಕೊಡುಗೆ ಅನನ್ಯವಾದುದು. ಸೃಷ್ಟಿತ ಕಟ್ಟುಪಾಡುಗಳನ್ನು ಮುರಿದು ಇಸ್ಲಾಂ ಕಲಾವಿದರು ತಮ್ಮ ಪ್ರತಿಭೆಯನ್ನು ಧಾರೆ ಎರಯುತ್ತಲೇ ಬಂದಿದ್ದಾರೆ. ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತದಲ್ಲೂ ಅವರ ಕೊಡುಗೆ ಅಪಾರ.

ಬಾಲಿವುಡ್ ಖಾನ್‍ಗಳ ಪ್ರತಿಭೆಯನ್ನು ಮೆಚ್ಚುವ ಈ ದೇಶದಲ್ಲಿ ಝೈರಾಳಂತಹ ಹೊಸ ಹುಡುಗಿ ನಂಬುಗೆ ಕಾರಣಕ್ಕೆ ತನ್ನ ಮನದಾಳದ ಕಲೆಯನ್ನು ತೊರೆದಿರುವುದು ನೋವಿನ ಸಂಗತಿಯಷ್ಟೇ. ಕೋಮುವಾದ ಮತ್ತು ಮೂಲಭೂತವಾದಿ ಮನಸ್ಸುಗಳ ಆಳದಲ್ಲಿರುವ ಲಿಂಗ ಅಸಹಿಷ್ಣುತೆ ಈಗ ವಿಭಿನ್ನ ರೂಪದಲ್ಲಿ ಆಕ್ರಮಣ ಮಾಡುತ್ತಿರುವ ಹೊತ್ತಿನಲ್ಲಿ ಎಲ್ಲ ಧರ್ಮಗಳ ಪ್ರಾಮಾಣಿಕರು, ಸಮಾನತಾವಾದಿಗಳು ವಾಸ್ತವದ ಅರಿವು ಮೂಡಿಸುವುದು ಈಗಿನ ಅಗತ್ಯವಾಗಿದೆ. ನಮ್ಮ ಶಿಕ್ಷಣದ ಪಠ್ಯಗಳಲ್ಲೇ ಇಂತಹ ಚಿಂತನೆಗಳನ್ನು ಸೇರಿಸಬೇಕಾದ ಜರೈರತ್ತು ಇಂದು ಎಂದಿಗಿಂತ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...