Homeಮುಖಪುಟಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ... ಧರ್ಮ, ಕಲೆ, ಧಮಾಂಧತೆಗಳ ಸುತ್ತ...

ಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ… ಧರ್ಮ, ಕಲೆ, ಧಮಾಂಧತೆಗಳ ಸುತ್ತ…

- Advertisement -
- Advertisement -

ಚೆಲುವು ಮತ್ತು ಪ್ರತಿಭೆಗಳ ಕಣಜದಂತಿರುವ 18 ವರ್ಷದ ಪುಟ್ಟ ನಟಿ ಝೈರಾ ವಾಸೀಮ್ ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದಳು. 16 ರ ವಯಸ್ಸಿನಲ್ಲಿ ‘ದಂಗಲ್’ ಸಿನಿಮಾದಲ್ಲಿ ಕುಸ್ತಿಪಟುವಿನ ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿ ಬಾಲಿವುಡ್‍ನಲ್ಲಿ ಹೊಸ ಭರವಸೆ ನೀಡಿದ್ದ ಝೈರಾ ವಾಸೀಮ್ ಬಾಲಿವುಡ್‍ಗೆ, ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದ್ದಾಳೆ. ತನ್ನ ನಂಬಿಕೆ ಮತ್ತು ಅಲ್ಲಾಹುವಿನ ಎಡೆಗಿನ ತನ್ನ ವಿಶ್ವಾಸಕ್ಕೆ ಈ ವೃತ್ತಿ ಹೊಂದುತ್ತಿಲ್ಲ ಎಂದು ಈ ಯುವತಿ ಕಾರಣ ನೀಡಿದ್ದಾಳೆ.

ಅದು ಆಕೆಯ ವೈಕ್ತಿಕ ನಿರ್ಧಾರವಿರಬಹುದು. ಆದರೆ, ಆಕೆ ಇಲ್ಲಿ ಧಾರ್ಮಿಕ ನಂಬಿಕೆಯ ವಿಷಯವನ್ನು ಮುನ್ನೆಲೆಗೆ ತಂದ ಕಾರಣದ ಹಿಂದೆ ಹಲವು ಸೂಕ್ಷ್ಮಗಳಿವೆ, ಹಲವು ತಪ್ಪು ಕಲ್ಪನೆಗಳಿವೆ.. ಇದೆ ಕೇವಲ ಇಸ್ಲಾಂ ಧರ್ಮಕ್ಕೆ ಸಂಬಂಧಿಸಿದ ವಿಷಯವಲ್ಲ, ಹಿಂದೂ ಧರ್ಮಕ್ಕೂ ಸಂಬಂಧಿಸಿದ್ದು. ಧರ್ಮದ ಹೆಸರಲ್ಲಿ ಪುತೃಪ್ರಧಾನ ವ್ಯವಸ್ಥೆ ಈಗಲೂ ಅನುಸರಿಸಿಕೊಂಡಿರುವ ಲಿಂಗ ಅಸಹಿಷ್ಣತೆಯೂ ಇಲ್ಲಿದೆ.

ಕಲೆ, ಧರ್ಮ ಮತ್ತು ಹೆಣ್ಣು
ಯಾವ ಧರ್ಮವೂ ವಿಧಿಸದ ಕಟ್ಟುಪಾಡುಗಳನ್ನು ಆಯಾ ಧರ್ಮದ ಪಿತೃ ವ್ಯವಸ್ಥೆ ಸ್ತ್ರೀಯರ ಮೇಲೆ ವಿಧಿಸುತ್ತಲೇ ಬಂದಿದೆ. ಅದು ಕಾಲಕ್ರಮೇಣ ಕಡಿಮೆಯಾಗುತ್ತ ಬಂದರೂ ಈ ಆಧುನಿಕ ಜಗತ್ತಲ್ಲೂ ಅದು ಹೊಸ ರೂಪಗಳಲ್ಲಿ ವನಿತಾ ಸಮೂಹವನ್ನು ಕಾಡುತ್ತಲೇ ಇದೆ.
ಸದ್ಯ ಝೈರಾ ವಿಷಯದಲ್ಲಿ ಇಲ್ಲಿ ನಿರ್ದಿಷ್ಠ ಕಾರಣಗಳು ಉಲ್ಲೀಖಿಸಲ್ಪಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಮತ್ತೆ ಚರ್ಚೆಗೆ ಬರುವ ಇಸ್ಲಾಂ ಮೂಲಭೂತವಾದದ ವಾದಕ್ಕೆ ಸಂಬಂಧಿಸಿದಂತೆ ಕೆಲವು ಅಪರಿಚಿತ ಸತ್ಯಗಳನ್ನು ನಾವು ಮರೆಯುತ್ತಿದ್ದೇವೆ.

ಇಸ್ಲಾಂ ಎಂದೂ ಕಲೆ ವಿರುದ್ಧವಾಗಿಲ್ಲ, ಅದರಲ್ಲೂ ಮೂಲಭೂತವಾದಿಗಳೂ ಹಬ್ಬಿಸಿದಂತೆ ಅದು ಸಂಗೀತದ ನಿರಾಕರಣೆಯನ್ನೂ ಎಂದೂ ಮಾಡಿಲ್ಲ. ಈ ದೇಶದ ಇತಿಹಾಸದತ್ತ ಇತಿಹಾಸದತ್ತ ಗಮನ ಹರಿಸದರೆ ಈ ನೆಲಕ್ಕೆ ಇಸ್ಲಾಂ ನೀಡಿರುವ ಸಾಂಸ್ಕೃತಿಕ ಕೊಡುಗೆ ಅನನ್ಯವಾದುದು. ಸೃಷ್ಟಿತ ಕಟ್ಟುಪಾಡುಗಳನ್ನು ಮುರಿದು ಇಸ್ಲಾಂ ಕಲಾವಿದರು ತಮ್ಮ ಪ್ರತಿಭೆಯನ್ನು ಧಾರೆ ಎರಯುತ್ತಲೇ ಬಂದಿದ್ದಾರೆ. ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತದಲ್ಲೂ ಅವರ ಕೊಡುಗೆ ಅಪಾರ.

ಬಾಲಿವುಡ್ ಖಾನ್‍ಗಳ ಪ್ರತಿಭೆಯನ್ನು ಮೆಚ್ಚುವ ಈ ದೇಶದಲ್ಲಿ ಝೈರಾಳಂತಹ ಹೊಸ ಹುಡುಗಿ ನಂಬುಗೆ ಕಾರಣಕ್ಕೆ ತನ್ನ ಮನದಾಳದ ಕಲೆಯನ್ನು ತೊರೆದಿರುವುದು ನೋವಿನ ಸಂಗತಿಯಷ್ಟೇ. ಕೋಮುವಾದ ಮತ್ತು ಮೂಲಭೂತವಾದಿ ಮನಸ್ಸುಗಳ ಆಳದಲ್ಲಿರುವ ಲಿಂಗ ಅಸಹಿಷ್ಣುತೆ ಈಗ ವಿಭಿನ್ನ ರೂಪದಲ್ಲಿ ಆಕ್ರಮಣ ಮಾಡುತ್ತಿರುವ ಹೊತ್ತಿನಲ್ಲಿ ಎಲ್ಲ ಧರ್ಮಗಳ ಪ್ರಾಮಾಣಿಕರು, ಸಮಾನತಾವಾದಿಗಳು ವಾಸ್ತವದ ಅರಿವು ಮೂಡಿಸುವುದು ಈಗಿನ ಅಗತ್ಯವಾಗಿದೆ. ನಮ್ಮ ಶಿಕ್ಷಣದ ಪಠ್ಯಗಳಲ್ಲೇ ಇಂತಹ ಚಿಂತನೆಗಳನ್ನು ಸೇರಿಸಬೇಕಾದ ಜರೈರತ್ತು ಇಂದು ಎಂದಿಗಿಂತ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...