Homeಮುಖಪುಟಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ... ಧರ್ಮ, ಕಲೆ, ಧಮಾಂಧತೆಗಳ ಸುತ್ತ...

ಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ… ಧರ್ಮ, ಕಲೆ, ಧಮಾಂಧತೆಗಳ ಸುತ್ತ…

- Advertisement -
- Advertisement -

ಚೆಲುವು ಮತ್ತು ಪ್ರತಿಭೆಗಳ ಕಣಜದಂತಿರುವ 18 ವರ್ಷದ ಪುಟ್ಟ ನಟಿ ಝೈರಾ ವಾಸೀಮ್ ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದಳು. 16 ರ ವಯಸ್ಸಿನಲ್ಲಿ ‘ದಂಗಲ್’ ಸಿನಿಮಾದಲ್ಲಿ ಕುಸ್ತಿಪಟುವಿನ ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿ ಬಾಲಿವುಡ್‍ನಲ್ಲಿ ಹೊಸ ಭರವಸೆ ನೀಡಿದ್ದ ಝೈರಾ ವಾಸೀಮ್ ಬಾಲಿವುಡ್‍ಗೆ, ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದ್ದಾಳೆ. ತನ್ನ ನಂಬಿಕೆ ಮತ್ತು ಅಲ್ಲಾಹುವಿನ ಎಡೆಗಿನ ತನ್ನ ವಿಶ್ವಾಸಕ್ಕೆ ಈ ವೃತ್ತಿ ಹೊಂದುತ್ತಿಲ್ಲ ಎಂದು ಈ ಯುವತಿ ಕಾರಣ ನೀಡಿದ್ದಾಳೆ.

ಅದು ಆಕೆಯ ವೈಕ್ತಿಕ ನಿರ್ಧಾರವಿರಬಹುದು. ಆದರೆ, ಆಕೆ ಇಲ್ಲಿ ಧಾರ್ಮಿಕ ನಂಬಿಕೆಯ ವಿಷಯವನ್ನು ಮುನ್ನೆಲೆಗೆ ತಂದ ಕಾರಣದ ಹಿಂದೆ ಹಲವು ಸೂಕ್ಷ್ಮಗಳಿವೆ, ಹಲವು ತಪ್ಪು ಕಲ್ಪನೆಗಳಿವೆ.. ಇದೆ ಕೇವಲ ಇಸ್ಲಾಂ ಧರ್ಮಕ್ಕೆ ಸಂಬಂಧಿಸಿದ ವಿಷಯವಲ್ಲ, ಹಿಂದೂ ಧರ್ಮಕ್ಕೂ ಸಂಬಂಧಿಸಿದ್ದು. ಧರ್ಮದ ಹೆಸರಲ್ಲಿ ಪುತೃಪ್ರಧಾನ ವ್ಯವಸ್ಥೆ ಈಗಲೂ ಅನುಸರಿಸಿಕೊಂಡಿರುವ ಲಿಂಗ ಅಸಹಿಷ್ಣತೆಯೂ ಇಲ್ಲಿದೆ.

ಕಲೆ, ಧರ್ಮ ಮತ್ತು ಹೆಣ್ಣು
ಯಾವ ಧರ್ಮವೂ ವಿಧಿಸದ ಕಟ್ಟುಪಾಡುಗಳನ್ನು ಆಯಾ ಧರ್ಮದ ಪಿತೃ ವ್ಯವಸ್ಥೆ ಸ್ತ್ರೀಯರ ಮೇಲೆ ವಿಧಿಸುತ್ತಲೇ ಬಂದಿದೆ. ಅದು ಕಾಲಕ್ರಮೇಣ ಕಡಿಮೆಯಾಗುತ್ತ ಬಂದರೂ ಈ ಆಧುನಿಕ ಜಗತ್ತಲ್ಲೂ ಅದು ಹೊಸ ರೂಪಗಳಲ್ಲಿ ವನಿತಾ ಸಮೂಹವನ್ನು ಕಾಡುತ್ತಲೇ ಇದೆ.
ಸದ್ಯ ಝೈರಾ ವಿಷಯದಲ್ಲಿ ಇಲ್ಲಿ ನಿರ್ದಿಷ್ಠ ಕಾರಣಗಳು ಉಲ್ಲೀಖಿಸಲ್ಪಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಮತ್ತೆ ಚರ್ಚೆಗೆ ಬರುವ ಇಸ್ಲಾಂ ಮೂಲಭೂತವಾದದ ವಾದಕ್ಕೆ ಸಂಬಂಧಿಸಿದಂತೆ ಕೆಲವು ಅಪರಿಚಿತ ಸತ್ಯಗಳನ್ನು ನಾವು ಮರೆಯುತ್ತಿದ್ದೇವೆ.

ಇಸ್ಲಾಂ ಎಂದೂ ಕಲೆ ವಿರುದ್ಧವಾಗಿಲ್ಲ, ಅದರಲ್ಲೂ ಮೂಲಭೂತವಾದಿಗಳೂ ಹಬ್ಬಿಸಿದಂತೆ ಅದು ಸಂಗೀತದ ನಿರಾಕರಣೆಯನ್ನೂ ಎಂದೂ ಮಾಡಿಲ್ಲ. ಈ ದೇಶದ ಇತಿಹಾಸದತ್ತ ಇತಿಹಾಸದತ್ತ ಗಮನ ಹರಿಸದರೆ ಈ ನೆಲಕ್ಕೆ ಇಸ್ಲಾಂ ನೀಡಿರುವ ಸಾಂಸ್ಕೃತಿಕ ಕೊಡುಗೆ ಅನನ್ಯವಾದುದು. ಸೃಷ್ಟಿತ ಕಟ್ಟುಪಾಡುಗಳನ್ನು ಮುರಿದು ಇಸ್ಲಾಂ ಕಲಾವಿದರು ತಮ್ಮ ಪ್ರತಿಭೆಯನ್ನು ಧಾರೆ ಎರಯುತ್ತಲೇ ಬಂದಿದ್ದಾರೆ. ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತದಲ್ಲೂ ಅವರ ಕೊಡುಗೆ ಅಪಾರ.

ಬಾಲಿವುಡ್ ಖಾನ್‍ಗಳ ಪ್ರತಿಭೆಯನ್ನು ಮೆಚ್ಚುವ ಈ ದೇಶದಲ್ಲಿ ಝೈರಾಳಂತಹ ಹೊಸ ಹುಡುಗಿ ನಂಬುಗೆ ಕಾರಣಕ್ಕೆ ತನ್ನ ಮನದಾಳದ ಕಲೆಯನ್ನು ತೊರೆದಿರುವುದು ನೋವಿನ ಸಂಗತಿಯಷ್ಟೇ. ಕೋಮುವಾದ ಮತ್ತು ಮೂಲಭೂತವಾದಿ ಮನಸ್ಸುಗಳ ಆಳದಲ್ಲಿರುವ ಲಿಂಗ ಅಸಹಿಷ್ಣುತೆ ಈಗ ವಿಭಿನ್ನ ರೂಪದಲ್ಲಿ ಆಕ್ರಮಣ ಮಾಡುತ್ತಿರುವ ಹೊತ್ತಿನಲ್ಲಿ ಎಲ್ಲ ಧರ್ಮಗಳ ಪ್ರಾಮಾಣಿಕರು, ಸಮಾನತಾವಾದಿಗಳು ವಾಸ್ತವದ ಅರಿವು ಮೂಡಿಸುವುದು ಈಗಿನ ಅಗತ್ಯವಾಗಿದೆ. ನಮ್ಮ ಶಿಕ್ಷಣದ ಪಠ್ಯಗಳಲ್ಲೇ ಇಂತಹ ಚಿಂತನೆಗಳನ್ನು ಸೇರಿಸಬೇಕಾದ ಜರೈರತ್ತು ಇಂದು ಎಂದಿಗಿಂತ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...