Homeಮುಖಪುಟಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ... ಧರ್ಮ, ಕಲೆ, ಧಮಾಂಧತೆಗಳ ಸುತ್ತ...

ಸಿನಿಮಾಕ್ಕೆ ದಂಗಲ್ ಹುಡುಗಿಯ ವಿದಾಯ… ಧರ್ಮ, ಕಲೆ, ಧಮಾಂಧತೆಗಳ ಸುತ್ತ…

- Advertisement -
- Advertisement -

ಚೆಲುವು ಮತ್ತು ಪ್ರತಿಭೆಗಳ ಕಣಜದಂತಿರುವ 18 ವರ್ಷದ ಪುಟ್ಟ ನಟಿ ಝೈರಾ ವಾಸೀಮ್ ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದಳು. 16 ರ ವಯಸ್ಸಿನಲ್ಲಿ ‘ದಂಗಲ್’ ಸಿನಿಮಾದಲ್ಲಿ ಕುಸ್ತಿಪಟುವಿನ ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿ ಬಾಲಿವುಡ್‍ನಲ್ಲಿ ಹೊಸ ಭರವಸೆ ನೀಡಿದ್ದ ಝೈರಾ ವಾಸೀಮ್ ಬಾಲಿವುಡ್‍ಗೆ, ಸಿನಿಮಾ ಪ್ರಪಂಚಕ್ಕೆ ವಿದಾಯ ಹೇಳಿದ್ದಾಳೆ. ತನ್ನ ನಂಬಿಕೆ ಮತ್ತು ಅಲ್ಲಾಹುವಿನ ಎಡೆಗಿನ ತನ್ನ ವಿಶ್ವಾಸಕ್ಕೆ ಈ ವೃತ್ತಿ ಹೊಂದುತ್ತಿಲ್ಲ ಎಂದು ಈ ಯುವತಿ ಕಾರಣ ನೀಡಿದ್ದಾಳೆ.

ಅದು ಆಕೆಯ ವೈಕ್ತಿಕ ನಿರ್ಧಾರವಿರಬಹುದು. ಆದರೆ, ಆಕೆ ಇಲ್ಲಿ ಧಾರ್ಮಿಕ ನಂಬಿಕೆಯ ವಿಷಯವನ್ನು ಮುನ್ನೆಲೆಗೆ ತಂದ ಕಾರಣದ ಹಿಂದೆ ಹಲವು ಸೂಕ್ಷ್ಮಗಳಿವೆ, ಹಲವು ತಪ್ಪು ಕಲ್ಪನೆಗಳಿವೆ.. ಇದೆ ಕೇವಲ ಇಸ್ಲಾಂ ಧರ್ಮಕ್ಕೆ ಸಂಬಂಧಿಸಿದ ವಿಷಯವಲ್ಲ, ಹಿಂದೂ ಧರ್ಮಕ್ಕೂ ಸಂಬಂಧಿಸಿದ್ದು. ಧರ್ಮದ ಹೆಸರಲ್ಲಿ ಪುತೃಪ್ರಧಾನ ವ್ಯವಸ್ಥೆ ಈಗಲೂ ಅನುಸರಿಸಿಕೊಂಡಿರುವ ಲಿಂಗ ಅಸಹಿಷ್ಣತೆಯೂ ಇಲ್ಲಿದೆ.

ಕಲೆ, ಧರ್ಮ ಮತ್ತು ಹೆಣ್ಣು
ಯಾವ ಧರ್ಮವೂ ವಿಧಿಸದ ಕಟ್ಟುಪಾಡುಗಳನ್ನು ಆಯಾ ಧರ್ಮದ ಪಿತೃ ವ್ಯವಸ್ಥೆ ಸ್ತ್ರೀಯರ ಮೇಲೆ ವಿಧಿಸುತ್ತಲೇ ಬಂದಿದೆ. ಅದು ಕಾಲಕ್ರಮೇಣ ಕಡಿಮೆಯಾಗುತ್ತ ಬಂದರೂ ಈ ಆಧುನಿಕ ಜಗತ್ತಲ್ಲೂ ಅದು ಹೊಸ ರೂಪಗಳಲ್ಲಿ ವನಿತಾ ಸಮೂಹವನ್ನು ಕಾಡುತ್ತಲೇ ಇದೆ.
ಸದ್ಯ ಝೈರಾ ವಿಷಯದಲ್ಲಿ ಇಲ್ಲಿ ನಿರ್ದಿಷ್ಠ ಕಾರಣಗಳು ಉಲ್ಲೀಖಿಸಲ್ಪಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಮತ್ತೆ ಚರ್ಚೆಗೆ ಬರುವ ಇಸ್ಲಾಂ ಮೂಲಭೂತವಾದದ ವಾದಕ್ಕೆ ಸಂಬಂಧಿಸಿದಂತೆ ಕೆಲವು ಅಪರಿಚಿತ ಸತ್ಯಗಳನ್ನು ನಾವು ಮರೆಯುತ್ತಿದ್ದೇವೆ.

ಇಸ್ಲಾಂ ಎಂದೂ ಕಲೆ ವಿರುದ್ಧವಾಗಿಲ್ಲ, ಅದರಲ್ಲೂ ಮೂಲಭೂತವಾದಿಗಳೂ ಹಬ್ಬಿಸಿದಂತೆ ಅದು ಸಂಗೀತದ ನಿರಾಕರಣೆಯನ್ನೂ ಎಂದೂ ಮಾಡಿಲ್ಲ. ಈ ದೇಶದ ಇತಿಹಾಸದತ್ತ ಇತಿಹಾಸದತ್ತ ಗಮನ ಹರಿಸದರೆ ಈ ನೆಲಕ್ಕೆ ಇಸ್ಲಾಂ ನೀಡಿರುವ ಸಾಂಸ್ಕೃತಿಕ ಕೊಡುಗೆ ಅನನ್ಯವಾದುದು. ಸೃಷ್ಟಿತ ಕಟ್ಟುಪಾಡುಗಳನ್ನು ಮುರಿದು ಇಸ್ಲಾಂ ಕಲಾವಿದರು ತಮ್ಮ ಪ್ರತಿಭೆಯನ್ನು ಧಾರೆ ಎರಯುತ್ತಲೇ ಬಂದಿದ್ದಾರೆ. ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತದಲ್ಲೂ ಅವರ ಕೊಡುಗೆ ಅಪಾರ.

ಬಾಲಿವುಡ್ ಖಾನ್‍ಗಳ ಪ್ರತಿಭೆಯನ್ನು ಮೆಚ್ಚುವ ಈ ದೇಶದಲ್ಲಿ ಝೈರಾಳಂತಹ ಹೊಸ ಹುಡುಗಿ ನಂಬುಗೆ ಕಾರಣಕ್ಕೆ ತನ್ನ ಮನದಾಳದ ಕಲೆಯನ್ನು ತೊರೆದಿರುವುದು ನೋವಿನ ಸಂಗತಿಯಷ್ಟೇ. ಕೋಮುವಾದ ಮತ್ತು ಮೂಲಭೂತವಾದಿ ಮನಸ್ಸುಗಳ ಆಳದಲ್ಲಿರುವ ಲಿಂಗ ಅಸಹಿಷ್ಣುತೆ ಈಗ ವಿಭಿನ್ನ ರೂಪದಲ್ಲಿ ಆಕ್ರಮಣ ಮಾಡುತ್ತಿರುವ ಹೊತ್ತಿನಲ್ಲಿ ಎಲ್ಲ ಧರ್ಮಗಳ ಪ್ರಾಮಾಣಿಕರು, ಸಮಾನತಾವಾದಿಗಳು ವಾಸ್ತವದ ಅರಿವು ಮೂಡಿಸುವುದು ಈಗಿನ ಅಗತ್ಯವಾಗಿದೆ. ನಮ್ಮ ಶಿಕ್ಷಣದ ಪಠ್ಯಗಳಲ್ಲೇ ಇಂತಹ ಚಿಂತನೆಗಳನ್ನು ಸೇರಿಸಬೇಕಾದ ಜರೈರತ್ತು ಇಂದು ಎಂದಿಗಿಂತ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....