Homeಮುಖಪುಟತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

ತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

- Advertisement -
- Advertisement -

ಝೀ ಮೀಡಿಯಾವು “ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಟ್ವೀಟ್‌ ಮಾಡಿ ಸುಳ್ಳು ಸುದ್ದಿ” ಹರಡಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಿಜೆಪಿ ಪರವಿರುವ ಝಿ ನ್ಯೂಸ್‌ ಹರಡಿರುವುದು ಸುಳ್ಳು ಸುದ್ದಿ ಎಂದು ಗೊತ್ತಾಗಿ ಅದು ಸಿಕ್ಕಿಬಿದ್ದಿದೆ. ನಂತರ ಉತ್ತರ ಪ್ರದೇಶದ ಫಿರೋಜಾಬಾದ್ ಪೊಲೀಸರು ಎಚ್ಚರಿಕೆ ನೀಡಿದ ನಂತರ ಟ್ವೀಟ್ ಅನ್ನು ಅಳಿಸಲಾಗಿದೆ.

ಈಗ ಅಳಿಸಲಾಗಿರುವ ತನ್ನ ಟ್ವೀಟ್‌ನಲ್ಲಿ, ಉತ್ತರ ಪ್ರದೇಶ ಉತ್ತರಾಖಂಡ್ ಝೀ ನ್ಯೂಸ್‌ ಟ್ವಿಟ್ಟರ್‌ ಅಕೌಂಟ್‌ನಿಂದ “ಫಿರೋಜಾಬಾದ್‌ನಲ್ಲಿ ನಾಲ್ಕು ತಬ್ಲೀಘಿ ಜಮಾತ್‌ ಸದಸ್ಯರ ಕೊರನಾ ಪರೀಕ್ಷೆಯಲ್ಲಿ ಧನಾತ್ಮಕ ಬಂದಿದೆ. ಅದರ ವರದಿ ತೆಗೆದುಕೊಳ್ಳಲು ಬಂದಾಗ ಅವರು ಅಲ್ಲಿರುವ ವೈದ್ಯಕೀಯ ತಂಡದ ಮೇಲೆ ಕಲ್ಲು ತೂರಿದ್ದಾರೆ” ಎಂದು ಟ್ವೀಟ್‌ ಮಾಡಿದೆ.

ಝೀ ನ್ಯೂಸ್‌ನ ನಕಲಿ ಸುದ್ದಿಗೆ ಕೂಡಲೇ ಪ್ರತಿಕ್ರಿಯಿಸಿದ ಫಿರೋಜಾಬಾದ್ ಪೊಲೀಸರು, “ನೀವು ನಕಲಿ ಮತ್ತು ದಾರಿತಪ್ಪಿಸುವ ಸುದ್ದಿಗಳನ್ನು ಹರಡುತ್ತಿದ್ದೀರಿ. ಫಿರೋಜಾಬಾದ್‌ನಲ್ಲಿ ವೈದ್ಯಕೀಯ ತಂಡ ಅಥವಾ ಆಂಬುಲೆನ್ಸ್‌ ಮೇಲೆ ಯಾವುದೇ ಕಲ್ಲು ತೂರಾಟದ ಘಟನೆಗಳು ನಡೆದಿಲ್ಲ. ನೀವು ಪೋಸ್ಟ್ ಮಾಡಿದ ಈ ಟ್ವೀಟ್ ಅನ್ನು ನೀವು ತಕ್ಷಣ ಅಳಿಸಬೇಕು” ಎಂದು ತಾಕೀತು ಮಾಡಿದ್ದಾರೆ.

ಝೀ ನ್ಯೂಸ್ ನಿಜಕ್ಕೂ ಮುಸ್ಲಿಂ ಸಮುದಾಯವನ್ನು ಅವಮಾನಿಸಲು ಈ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡಿದೆ. ಕೆಲವು ಟ್ವಿಟ್ಟರ್‌ ಬಳಕೆದಾರರು ಫಿರೋಜಾಬಾದ್ ಪೊಲೀಸರಿಂದ ಈ ದೃಢೀಕರಣವನ್ನು ಕೋರಿದಾಗ, ಆ ಟ್ವೀಟ್ ಅನ್ನು ಈಗ ಅಳಿಸಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ಝೀ ನ್ಯೂಸ್ ಅಂದಿನಿಂದ ತಬ್ಲೀಘಿ ಜಮಾಅತ್ ಬಗ್ಗೆ ನಕಲಿ ಸುದ್ದಿಗಳನ್ನು ಒಳಗೊಂಡಿರುವ ಟ್ವೀಟ್ ಅನ್ನು ಅಳಿಸಿದೆ. ಅದರ ಶೀರ್ಷಿಕೆಯಿಂದ ಕಲ್ಲು ತೂರಿದ್ದಾರೆ ಎಂಬುದನ್ನು ತೆಗೆದುಹಾಕುವ ಮೂಲಕ ಅದು ತನ್ನ ಸುದ್ದಿಯನ್ನು ಎಡಿಟ್‌ ಮಾಡಿದೆ. ಈಗ “ಫಿರೋಜಾಬಾದ್‌ನ ಫಾರ್ಸಿ ಮಸೀದಿಯಲ್ಲಿದ್ದ ತಬ್ಲಿಘಿ ಜಮಾಅತ್‌ನ ನಾಲ್ಕು ಜನರು ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್‌” ಆಗಿದ್ದಾರೆ. ಎಂದು ಬರೆದಿದೆ.

ಈ ಹಿಂದೆ, ಕೆಲವು ಮಾಧ್ಯಮಗಳು “ಕ್ಯಾರೆಂಟೈನ್ ನಲ್ಲಿರುವ ತಬ್ಲೀಘಿ ಜಮಾಅತ್ ಸದಸ್ಯರು ಮಾಂಸಹಾರಿ ಆಹಾರಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಮತ್ತು ಅವರ ಬೇಡಿಕೆಗಳನ್ನು ಈಡೇರಿಸದಿದ್ದಾಗ ಗಲಾಟೆ ಉಂಟುಮಾಡಿದ್ದಾರೆ” ಎಂದು ಆರೋಪಿಸಿದ್ದರು. ಆದರೆ ಈ ಹೇಳಿಕೆಯನ್ನು ಉತ್ತರ ಪ್ರದೇಶದ ಸಹರಾನ್ಪುರ್ ಪೊಲೀಸರು ನಕಲಿ ಸುದ್ದಿ ಎಂದು ಸ್ಪಷ್ಟಪಡಿಸಿ ವಿವರವಾದ ಹೇಳಿಕೆ ನೀಡಿದ್ದರು.

ದೆಹಲಿ ಪೊಲೀಸರು ತಬ್ಲಿಘಿ ಜಮಾಅತ್ ಸದಸ್ಯರನ್ನು ನಿಜಾಮುದ್ದೀನ್ ಮಾರ್ಕಾಜ್‌ನಿಂದ ಸ್ಥಳಾಂತರಿಸಿದಾಗಿನಿಂದಲೂ, ಹಲವಾರು ಮಾಧ್ಯಮಗಳು ಭಾರತದ ಮುಸ್ಲಿಂ ಸಮುದಾಯದ ವಿರುದ್ಧ ನಿರಂತರವಾಗಿ ದುರುದ್ದೇಶಪ್ರೇರಿತ ಅಭಿಯಾನವನ್ನು ನಡೆಸುತ್ತಿದ್ದಾರೆ. ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರು ಮತ್ತು ಪೊಲೀಸರ ಮೇಲೆ ಉಗುಳಿದ್ದಾರೆ ಎಂದು ಕೆಲವರು ಸುದ್ದಿ ಮಾಡಿದರೆ ಮತ್ತೆ ಕೆಲವರು ದಾದಿಯರೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು.

ಆದರೆ, ನಿಜಾಮುದ್ದೀನ್ ಮಾರ್ಕಾಜ್ ಅವರನ್ನು ಸ್ಥಳಾಂತರಿಸಿದ ತಂಡದ ಭಾಗವಾಗಿದ್ದ ವೈದ್ಯಕೀಯ ಅಧಿಕಾರಿ ಎಂದು ಹೇಳಿಕೊಂಡ ಮಹಿಳೆಯೊಬ್ಬರು ಅವರು ಯಾರೊಂದಿಗೆ ಕೆಟ್ಟದಾಗಿ ವರ್ತಿಸಿಲ್ಲ ಎಂದು ಬಹಿರಂಗಪಡಿಸಿದ್ದಾರೆ.

ಕೃಪೆ: ಜನತಾ ಕಾ ರಿಪೋರ್ಟರ್‌


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...