Homeಮುಖಪುಟತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

ತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

- Advertisement -
- Advertisement -

ಝೀ ಮೀಡಿಯಾವು “ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಟ್ವೀಟ್‌ ಮಾಡಿ ಸುಳ್ಳು ಸುದ್ದಿ” ಹರಡಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಿಜೆಪಿ ಪರವಿರುವ ಝಿ ನ್ಯೂಸ್‌ ಹರಡಿರುವುದು ಸುಳ್ಳು ಸುದ್ದಿ ಎಂದು ಗೊತ್ತಾಗಿ ಅದು ಸಿಕ್ಕಿಬಿದ್ದಿದೆ. ನಂತರ ಉತ್ತರ ಪ್ರದೇಶದ ಫಿರೋಜಾಬಾದ್ ಪೊಲೀಸರು ಎಚ್ಚರಿಕೆ ನೀಡಿದ ನಂತರ ಟ್ವೀಟ್ ಅನ್ನು ಅಳಿಸಲಾಗಿದೆ.

ಈಗ ಅಳಿಸಲಾಗಿರುವ ತನ್ನ ಟ್ವೀಟ್‌ನಲ್ಲಿ, ಉತ್ತರ ಪ್ರದೇಶ ಉತ್ತರಾಖಂಡ್ ಝೀ ನ್ಯೂಸ್‌ ಟ್ವಿಟ್ಟರ್‌ ಅಕೌಂಟ್‌ನಿಂದ “ಫಿರೋಜಾಬಾದ್‌ನಲ್ಲಿ ನಾಲ್ಕು ತಬ್ಲೀಘಿ ಜಮಾತ್‌ ಸದಸ್ಯರ ಕೊರನಾ ಪರೀಕ್ಷೆಯಲ್ಲಿ ಧನಾತ್ಮಕ ಬಂದಿದೆ. ಅದರ ವರದಿ ತೆಗೆದುಕೊಳ್ಳಲು ಬಂದಾಗ ಅವರು ಅಲ್ಲಿರುವ ವೈದ್ಯಕೀಯ ತಂಡದ ಮೇಲೆ ಕಲ್ಲು ತೂರಿದ್ದಾರೆ” ಎಂದು ಟ್ವೀಟ್‌ ಮಾಡಿದೆ.

ಝೀ ನ್ಯೂಸ್‌ನ ನಕಲಿ ಸುದ್ದಿಗೆ ಕೂಡಲೇ ಪ್ರತಿಕ್ರಿಯಿಸಿದ ಫಿರೋಜಾಬಾದ್ ಪೊಲೀಸರು, “ನೀವು ನಕಲಿ ಮತ್ತು ದಾರಿತಪ್ಪಿಸುವ ಸುದ್ದಿಗಳನ್ನು ಹರಡುತ್ತಿದ್ದೀರಿ. ಫಿರೋಜಾಬಾದ್‌ನಲ್ಲಿ ವೈದ್ಯಕೀಯ ತಂಡ ಅಥವಾ ಆಂಬುಲೆನ್ಸ್‌ ಮೇಲೆ ಯಾವುದೇ ಕಲ್ಲು ತೂರಾಟದ ಘಟನೆಗಳು ನಡೆದಿಲ್ಲ. ನೀವು ಪೋಸ್ಟ್ ಮಾಡಿದ ಈ ಟ್ವೀಟ್ ಅನ್ನು ನೀವು ತಕ್ಷಣ ಅಳಿಸಬೇಕು” ಎಂದು ತಾಕೀತು ಮಾಡಿದ್ದಾರೆ.

ಝೀ ನ್ಯೂಸ್ ನಿಜಕ್ಕೂ ಮುಸ್ಲಿಂ ಸಮುದಾಯವನ್ನು ಅವಮಾನಿಸಲು ಈ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡಿದೆ. ಕೆಲವು ಟ್ವಿಟ್ಟರ್‌ ಬಳಕೆದಾರರು ಫಿರೋಜಾಬಾದ್ ಪೊಲೀಸರಿಂದ ಈ ದೃಢೀಕರಣವನ್ನು ಕೋರಿದಾಗ, ಆ ಟ್ವೀಟ್ ಅನ್ನು ಈಗ ಅಳಿಸಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ಝೀ ನ್ಯೂಸ್ ಅಂದಿನಿಂದ ತಬ್ಲೀಘಿ ಜಮಾಅತ್ ಬಗ್ಗೆ ನಕಲಿ ಸುದ್ದಿಗಳನ್ನು ಒಳಗೊಂಡಿರುವ ಟ್ವೀಟ್ ಅನ್ನು ಅಳಿಸಿದೆ. ಅದರ ಶೀರ್ಷಿಕೆಯಿಂದ ಕಲ್ಲು ತೂರಿದ್ದಾರೆ ಎಂಬುದನ್ನು ತೆಗೆದುಹಾಕುವ ಮೂಲಕ ಅದು ತನ್ನ ಸುದ್ದಿಯನ್ನು ಎಡಿಟ್‌ ಮಾಡಿದೆ. ಈಗ “ಫಿರೋಜಾಬಾದ್‌ನ ಫಾರ್ಸಿ ಮಸೀದಿಯಲ್ಲಿದ್ದ ತಬ್ಲಿಘಿ ಜಮಾಅತ್‌ನ ನಾಲ್ಕು ಜನರು ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್‌” ಆಗಿದ್ದಾರೆ. ಎಂದು ಬರೆದಿದೆ.

ಈ ಹಿಂದೆ, ಕೆಲವು ಮಾಧ್ಯಮಗಳು “ಕ್ಯಾರೆಂಟೈನ್ ನಲ್ಲಿರುವ ತಬ್ಲೀಘಿ ಜಮಾಅತ್ ಸದಸ್ಯರು ಮಾಂಸಹಾರಿ ಆಹಾರಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಮತ್ತು ಅವರ ಬೇಡಿಕೆಗಳನ್ನು ಈಡೇರಿಸದಿದ್ದಾಗ ಗಲಾಟೆ ಉಂಟುಮಾಡಿದ್ದಾರೆ” ಎಂದು ಆರೋಪಿಸಿದ್ದರು. ಆದರೆ ಈ ಹೇಳಿಕೆಯನ್ನು ಉತ್ತರ ಪ್ರದೇಶದ ಸಹರಾನ್ಪುರ್ ಪೊಲೀಸರು ನಕಲಿ ಸುದ್ದಿ ಎಂದು ಸ್ಪಷ್ಟಪಡಿಸಿ ವಿವರವಾದ ಹೇಳಿಕೆ ನೀಡಿದ್ದರು.

ದೆಹಲಿ ಪೊಲೀಸರು ತಬ್ಲಿಘಿ ಜಮಾಅತ್ ಸದಸ್ಯರನ್ನು ನಿಜಾಮುದ್ದೀನ್ ಮಾರ್ಕಾಜ್‌ನಿಂದ ಸ್ಥಳಾಂತರಿಸಿದಾಗಿನಿಂದಲೂ, ಹಲವಾರು ಮಾಧ್ಯಮಗಳು ಭಾರತದ ಮುಸ್ಲಿಂ ಸಮುದಾಯದ ವಿರುದ್ಧ ನಿರಂತರವಾಗಿ ದುರುದ್ದೇಶಪ್ರೇರಿತ ಅಭಿಯಾನವನ್ನು ನಡೆಸುತ್ತಿದ್ದಾರೆ. ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರು ಮತ್ತು ಪೊಲೀಸರ ಮೇಲೆ ಉಗುಳಿದ್ದಾರೆ ಎಂದು ಕೆಲವರು ಸುದ್ದಿ ಮಾಡಿದರೆ ಮತ್ತೆ ಕೆಲವರು ದಾದಿಯರೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು.

ಆದರೆ, ನಿಜಾಮುದ್ದೀನ್ ಮಾರ್ಕಾಜ್ ಅವರನ್ನು ಸ್ಥಳಾಂತರಿಸಿದ ತಂಡದ ಭಾಗವಾಗಿದ್ದ ವೈದ್ಯಕೀಯ ಅಧಿಕಾರಿ ಎಂದು ಹೇಳಿಕೊಂಡ ಮಹಿಳೆಯೊಬ್ಬರು ಅವರು ಯಾರೊಂದಿಗೆ ಕೆಟ್ಟದಾಗಿ ವರ್ತಿಸಿಲ್ಲ ಎಂದು ಬಹಿರಂಗಪಡಿಸಿದ್ದಾರೆ.

ಕೃಪೆ: ಜನತಾ ಕಾ ರಿಪೋರ್ಟರ್‌


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...