Homeಮುಖಪುಟತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

ತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

- Advertisement -
- Advertisement -

ಝೀ ಮೀಡಿಯಾವು “ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಟ್ವೀಟ್‌ ಮಾಡಿ ಸುಳ್ಳು ಸುದ್ದಿ” ಹರಡಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಿಜೆಪಿ ಪರವಿರುವ ಝಿ ನ್ಯೂಸ್‌ ಹರಡಿರುವುದು ಸುಳ್ಳು ಸುದ್ದಿ ಎಂದು ಗೊತ್ತಾಗಿ ಅದು ಸಿಕ್ಕಿಬಿದ್ದಿದೆ. ನಂತರ ಉತ್ತರ ಪ್ರದೇಶದ ಫಿರೋಜಾಬಾದ್ ಪೊಲೀಸರು ಎಚ್ಚರಿಕೆ ನೀಡಿದ ನಂತರ ಟ್ವೀಟ್ ಅನ್ನು ಅಳಿಸಲಾಗಿದೆ.

ಈಗ ಅಳಿಸಲಾಗಿರುವ ತನ್ನ ಟ್ವೀಟ್‌ನಲ್ಲಿ, ಉತ್ತರ ಪ್ರದೇಶ ಉತ್ತರಾಖಂಡ್ ಝೀ ನ್ಯೂಸ್‌ ಟ್ವಿಟ್ಟರ್‌ ಅಕೌಂಟ್‌ನಿಂದ “ಫಿರೋಜಾಬಾದ್‌ನಲ್ಲಿ ನಾಲ್ಕು ತಬ್ಲೀಘಿ ಜಮಾತ್‌ ಸದಸ್ಯರ ಕೊರನಾ ಪರೀಕ್ಷೆಯಲ್ಲಿ ಧನಾತ್ಮಕ ಬಂದಿದೆ. ಅದರ ವರದಿ ತೆಗೆದುಕೊಳ್ಳಲು ಬಂದಾಗ ಅವರು ಅಲ್ಲಿರುವ ವೈದ್ಯಕೀಯ ತಂಡದ ಮೇಲೆ ಕಲ್ಲು ತೂರಿದ್ದಾರೆ” ಎಂದು ಟ್ವೀಟ್‌ ಮಾಡಿದೆ.

ಝೀ ನ್ಯೂಸ್‌ನ ನಕಲಿ ಸುದ್ದಿಗೆ ಕೂಡಲೇ ಪ್ರತಿಕ್ರಿಯಿಸಿದ ಫಿರೋಜಾಬಾದ್ ಪೊಲೀಸರು, “ನೀವು ನಕಲಿ ಮತ್ತು ದಾರಿತಪ್ಪಿಸುವ ಸುದ್ದಿಗಳನ್ನು ಹರಡುತ್ತಿದ್ದೀರಿ. ಫಿರೋಜಾಬಾದ್‌ನಲ್ಲಿ ವೈದ್ಯಕೀಯ ತಂಡ ಅಥವಾ ಆಂಬುಲೆನ್ಸ್‌ ಮೇಲೆ ಯಾವುದೇ ಕಲ್ಲು ತೂರಾಟದ ಘಟನೆಗಳು ನಡೆದಿಲ್ಲ. ನೀವು ಪೋಸ್ಟ್ ಮಾಡಿದ ಈ ಟ್ವೀಟ್ ಅನ್ನು ನೀವು ತಕ್ಷಣ ಅಳಿಸಬೇಕು” ಎಂದು ತಾಕೀತು ಮಾಡಿದ್ದಾರೆ.

ಝೀ ನ್ಯೂಸ್ ನಿಜಕ್ಕೂ ಮುಸ್ಲಿಂ ಸಮುದಾಯವನ್ನು ಅವಮಾನಿಸಲು ಈ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡಿದೆ. ಕೆಲವು ಟ್ವಿಟ್ಟರ್‌ ಬಳಕೆದಾರರು ಫಿರೋಜಾಬಾದ್ ಪೊಲೀಸರಿಂದ ಈ ದೃಢೀಕರಣವನ್ನು ಕೋರಿದಾಗ, ಆ ಟ್ವೀಟ್ ಅನ್ನು ಈಗ ಅಳಿಸಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ಝೀ ನ್ಯೂಸ್ ಅಂದಿನಿಂದ ತಬ್ಲೀಘಿ ಜಮಾಅತ್ ಬಗ್ಗೆ ನಕಲಿ ಸುದ್ದಿಗಳನ್ನು ಒಳಗೊಂಡಿರುವ ಟ್ವೀಟ್ ಅನ್ನು ಅಳಿಸಿದೆ. ಅದರ ಶೀರ್ಷಿಕೆಯಿಂದ ಕಲ್ಲು ತೂರಿದ್ದಾರೆ ಎಂಬುದನ್ನು ತೆಗೆದುಹಾಕುವ ಮೂಲಕ ಅದು ತನ್ನ ಸುದ್ದಿಯನ್ನು ಎಡಿಟ್‌ ಮಾಡಿದೆ. ಈಗ “ಫಿರೋಜಾಬಾದ್‌ನ ಫಾರ್ಸಿ ಮಸೀದಿಯಲ್ಲಿದ್ದ ತಬ್ಲಿಘಿ ಜಮಾಅತ್‌ನ ನಾಲ್ಕು ಜನರು ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್‌” ಆಗಿದ್ದಾರೆ. ಎಂದು ಬರೆದಿದೆ.

ಈ ಹಿಂದೆ, ಕೆಲವು ಮಾಧ್ಯಮಗಳು “ಕ್ಯಾರೆಂಟೈನ್ ನಲ್ಲಿರುವ ತಬ್ಲೀಘಿ ಜಮಾಅತ್ ಸದಸ್ಯರು ಮಾಂಸಹಾರಿ ಆಹಾರಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಮತ್ತು ಅವರ ಬೇಡಿಕೆಗಳನ್ನು ಈಡೇರಿಸದಿದ್ದಾಗ ಗಲಾಟೆ ಉಂಟುಮಾಡಿದ್ದಾರೆ” ಎಂದು ಆರೋಪಿಸಿದ್ದರು. ಆದರೆ ಈ ಹೇಳಿಕೆಯನ್ನು ಉತ್ತರ ಪ್ರದೇಶದ ಸಹರಾನ್ಪುರ್ ಪೊಲೀಸರು ನಕಲಿ ಸುದ್ದಿ ಎಂದು ಸ್ಪಷ್ಟಪಡಿಸಿ ವಿವರವಾದ ಹೇಳಿಕೆ ನೀಡಿದ್ದರು.

ದೆಹಲಿ ಪೊಲೀಸರು ತಬ್ಲಿಘಿ ಜಮಾಅತ್ ಸದಸ್ಯರನ್ನು ನಿಜಾಮುದ್ದೀನ್ ಮಾರ್ಕಾಜ್‌ನಿಂದ ಸ್ಥಳಾಂತರಿಸಿದಾಗಿನಿಂದಲೂ, ಹಲವಾರು ಮಾಧ್ಯಮಗಳು ಭಾರತದ ಮುಸ್ಲಿಂ ಸಮುದಾಯದ ವಿರುದ್ಧ ನಿರಂತರವಾಗಿ ದುರುದ್ದೇಶಪ್ರೇರಿತ ಅಭಿಯಾನವನ್ನು ನಡೆಸುತ್ತಿದ್ದಾರೆ. ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರು ಮತ್ತು ಪೊಲೀಸರ ಮೇಲೆ ಉಗುಳಿದ್ದಾರೆ ಎಂದು ಕೆಲವರು ಸುದ್ದಿ ಮಾಡಿದರೆ ಮತ್ತೆ ಕೆಲವರು ದಾದಿಯರೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು.

ಆದರೆ, ನಿಜಾಮುದ್ದೀನ್ ಮಾರ್ಕಾಜ್ ಅವರನ್ನು ಸ್ಥಳಾಂತರಿಸಿದ ತಂಡದ ಭಾಗವಾಗಿದ್ದ ವೈದ್ಯಕೀಯ ಅಧಿಕಾರಿ ಎಂದು ಹೇಳಿಕೊಂಡ ಮಹಿಳೆಯೊಬ್ಬರು ಅವರು ಯಾರೊಂದಿಗೆ ಕೆಟ್ಟದಾಗಿ ವರ್ತಿಸಿಲ್ಲ ಎಂದು ಬಹಿರಂಗಪಡಿಸಿದ್ದಾರೆ.

ಕೃಪೆ: ಜನತಾ ಕಾ ರಿಪೋರ್ಟರ್‌


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...