Homeಮುಖಪುಟತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

ತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

- Advertisement -
- Advertisement -

ಝೀ ಮೀಡಿಯಾವು “ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಟ್ವೀಟ್‌ ಮಾಡಿ ಸುಳ್ಳು ಸುದ್ದಿ” ಹರಡಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಿಜೆಪಿ ಪರವಿರುವ ಝಿ ನ್ಯೂಸ್‌ ಹರಡಿರುವುದು ಸುಳ್ಳು ಸುದ್ದಿ ಎಂದು ಗೊತ್ತಾಗಿ ಅದು ಸಿಕ್ಕಿಬಿದ್ದಿದೆ. ನಂತರ ಉತ್ತರ ಪ್ರದೇಶದ ಫಿರೋಜಾಬಾದ್ ಪೊಲೀಸರು ಎಚ್ಚರಿಕೆ ನೀಡಿದ ನಂತರ ಟ್ವೀಟ್ ಅನ್ನು ಅಳಿಸಲಾಗಿದೆ.

ಈಗ ಅಳಿಸಲಾಗಿರುವ ತನ್ನ ಟ್ವೀಟ್‌ನಲ್ಲಿ, ಉತ್ತರ ಪ್ರದೇಶ ಉತ್ತರಾಖಂಡ್ ಝೀ ನ್ಯೂಸ್‌ ಟ್ವಿಟ್ಟರ್‌ ಅಕೌಂಟ್‌ನಿಂದ “ಫಿರೋಜಾಬಾದ್‌ನಲ್ಲಿ ನಾಲ್ಕು ತಬ್ಲೀಘಿ ಜಮಾತ್‌ ಸದಸ್ಯರ ಕೊರನಾ ಪರೀಕ್ಷೆಯಲ್ಲಿ ಧನಾತ್ಮಕ ಬಂದಿದೆ. ಅದರ ವರದಿ ತೆಗೆದುಕೊಳ್ಳಲು ಬಂದಾಗ ಅವರು ಅಲ್ಲಿರುವ ವೈದ್ಯಕೀಯ ತಂಡದ ಮೇಲೆ ಕಲ್ಲು ತೂರಿದ್ದಾರೆ” ಎಂದು ಟ್ವೀಟ್‌ ಮಾಡಿದೆ.

ಝೀ ನ್ಯೂಸ್‌ನ ನಕಲಿ ಸುದ್ದಿಗೆ ಕೂಡಲೇ ಪ್ರತಿಕ್ರಿಯಿಸಿದ ಫಿರೋಜಾಬಾದ್ ಪೊಲೀಸರು, “ನೀವು ನಕಲಿ ಮತ್ತು ದಾರಿತಪ್ಪಿಸುವ ಸುದ್ದಿಗಳನ್ನು ಹರಡುತ್ತಿದ್ದೀರಿ. ಫಿರೋಜಾಬಾದ್‌ನಲ್ಲಿ ವೈದ್ಯಕೀಯ ತಂಡ ಅಥವಾ ಆಂಬುಲೆನ್ಸ್‌ ಮೇಲೆ ಯಾವುದೇ ಕಲ್ಲು ತೂರಾಟದ ಘಟನೆಗಳು ನಡೆದಿಲ್ಲ. ನೀವು ಪೋಸ್ಟ್ ಮಾಡಿದ ಈ ಟ್ವೀಟ್ ಅನ್ನು ನೀವು ತಕ್ಷಣ ಅಳಿಸಬೇಕು” ಎಂದು ತಾಕೀತು ಮಾಡಿದ್ದಾರೆ.

ಝೀ ನ್ಯೂಸ್ ನಿಜಕ್ಕೂ ಮುಸ್ಲಿಂ ಸಮುದಾಯವನ್ನು ಅವಮಾನಿಸಲು ಈ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡಿದೆ. ಕೆಲವು ಟ್ವಿಟ್ಟರ್‌ ಬಳಕೆದಾರರು ಫಿರೋಜಾಬಾದ್ ಪೊಲೀಸರಿಂದ ಈ ದೃಢೀಕರಣವನ್ನು ಕೋರಿದಾಗ, ಆ ಟ್ವೀಟ್ ಅನ್ನು ಈಗ ಅಳಿಸಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ಝೀ ನ್ಯೂಸ್ ಅಂದಿನಿಂದ ತಬ್ಲೀಘಿ ಜಮಾಅತ್ ಬಗ್ಗೆ ನಕಲಿ ಸುದ್ದಿಗಳನ್ನು ಒಳಗೊಂಡಿರುವ ಟ್ವೀಟ್ ಅನ್ನು ಅಳಿಸಿದೆ. ಅದರ ಶೀರ್ಷಿಕೆಯಿಂದ ಕಲ್ಲು ತೂರಿದ್ದಾರೆ ಎಂಬುದನ್ನು ತೆಗೆದುಹಾಕುವ ಮೂಲಕ ಅದು ತನ್ನ ಸುದ್ದಿಯನ್ನು ಎಡಿಟ್‌ ಮಾಡಿದೆ. ಈಗ “ಫಿರೋಜಾಬಾದ್‌ನ ಫಾರ್ಸಿ ಮಸೀದಿಯಲ್ಲಿದ್ದ ತಬ್ಲಿಘಿ ಜಮಾಅತ್‌ನ ನಾಲ್ಕು ಜನರು ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್‌” ಆಗಿದ್ದಾರೆ. ಎಂದು ಬರೆದಿದೆ.

ಈ ಹಿಂದೆ, ಕೆಲವು ಮಾಧ್ಯಮಗಳು “ಕ್ಯಾರೆಂಟೈನ್ ನಲ್ಲಿರುವ ತಬ್ಲೀಘಿ ಜಮಾಅತ್ ಸದಸ್ಯರು ಮಾಂಸಹಾರಿ ಆಹಾರಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಮತ್ತು ಅವರ ಬೇಡಿಕೆಗಳನ್ನು ಈಡೇರಿಸದಿದ್ದಾಗ ಗಲಾಟೆ ಉಂಟುಮಾಡಿದ್ದಾರೆ” ಎಂದು ಆರೋಪಿಸಿದ್ದರು. ಆದರೆ ಈ ಹೇಳಿಕೆಯನ್ನು ಉತ್ತರ ಪ್ರದೇಶದ ಸಹರಾನ್ಪುರ್ ಪೊಲೀಸರು ನಕಲಿ ಸುದ್ದಿ ಎಂದು ಸ್ಪಷ್ಟಪಡಿಸಿ ವಿವರವಾದ ಹೇಳಿಕೆ ನೀಡಿದ್ದರು.

ದೆಹಲಿ ಪೊಲೀಸರು ತಬ್ಲಿಘಿ ಜಮಾಅತ್ ಸದಸ್ಯರನ್ನು ನಿಜಾಮುದ್ದೀನ್ ಮಾರ್ಕಾಜ್‌ನಿಂದ ಸ್ಥಳಾಂತರಿಸಿದಾಗಿನಿಂದಲೂ, ಹಲವಾರು ಮಾಧ್ಯಮಗಳು ಭಾರತದ ಮುಸ್ಲಿಂ ಸಮುದಾಯದ ವಿರುದ್ಧ ನಿರಂತರವಾಗಿ ದುರುದ್ದೇಶಪ್ರೇರಿತ ಅಭಿಯಾನವನ್ನು ನಡೆಸುತ್ತಿದ್ದಾರೆ. ತಬ್ಲಿಘಿ ಜಮಾಅತ್ ಸದಸ್ಯರು ವೈದ್ಯರು ಮತ್ತು ಪೊಲೀಸರ ಮೇಲೆ ಉಗುಳಿದ್ದಾರೆ ಎಂದು ಕೆಲವರು ಸುದ್ದಿ ಮಾಡಿದರೆ ಮತ್ತೆ ಕೆಲವರು ದಾದಿಯರೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು.

ಆದರೆ, ನಿಜಾಮುದ್ದೀನ್ ಮಾರ್ಕಾಜ್ ಅವರನ್ನು ಸ್ಥಳಾಂತರಿಸಿದ ತಂಡದ ಭಾಗವಾಗಿದ್ದ ವೈದ್ಯಕೀಯ ಅಧಿಕಾರಿ ಎಂದು ಹೇಳಿಕೊಂಡ ಮಹಿಳೆಯೊಬ್ಬರು ಅವರು ಯಾರೊಂದಿಗೆ ಕೆಟ್ಟದಾಗಿ ವರ್ತಿಸಿಲ್ಲ ಎಂದು ಬಹಿರಂಗಪಡಿಸಿದ್ದಾರೆ.

ಕೃಪೆ: ಜನತಾ ಕಾ ರಿಪೋರ್ಟರ್‌


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....